Homeಮುಖಪುಟಸಂಸತ್ತಿನಲ್ಲಿ ಕ್ಷೇತ್ರ ಪುನರ್‌ವಿಂಗಡನೆ ಗದ್ದಲ: ಉಭಯ ಸದನಗಳ ಕಲಾಪ ಮುಂದೂಡಿಕೆ

ಸಂಸತ್ತಿನಲ್ಲಿ ಕ್ಷೇತ್ರ ಪುನರ್‌ವಿಂಗಡನೆ ಗದ್ದಲ: ಉಭಯ ಸದನಗಳ ಕಲಾಪ ಮುಂದೂಡಿಕೆ

- Advertisement -
- Advertisement -

ವಿರೋಧ ಪಕ್ಷದ ಸದಸ್ಯರು ಘೋಷಣೆಗಳನ್ನು ಹೊಂದಿರುವ ಟಿ-ಶರ್ಟ್‌ಗಳನ್ನು ಧರಿಸಿ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ಪ್ರತಿಭಟನೆ ನಡೆಸಿದ ನಂತರ ಸಂಸತ್ತಿನ ಉಭಯ ಸದನಗಳ ಕಲಾಪಗಳನ್ನು ಗುರುವಾರ (ಮಾ.20) ಒಂದು ಮಟ್ಟಿಗೆ ಮುಂದೂಡಲಾಯಿತು.

ಲೋಕಸಭೆಯಲ್ಲಿ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆ ವಿರುದ್ದ ವಿಪಕ್ಷಗಳ ಸದಸ್ಯರು ಪ್ರತಿಭಟನೆ ಆರಂಭಿಸಿದಾಗ ಸ್ಪೀಕರ್‌ ಪೀಠದಲ್ಲಿದ್ದ ಕೃಷ್ಣ ಪ್ರಸಾದ್ ಟೆನ್ನೇಟಿ, ಸದಸ್ಯರು ತಮ್ಮ ಆಸನಗಳಲ್ಲಿ ಹೋಗಿ ಕೂರುವಂತೆ ವಿನಂತಿಸಿದರು.

“ಕೃಷಿಯ ಬಗ್ಗೆ ನಾವು ಚರ್ಚೆ ಮಾಡಬೇಕಿದೆ. ದೇಶದ ಇಂತಹ ಪ್ರಮುಖ ವಿಷಯ ಕುರಿತು ನೀವು ಚರ್ಚೆ ನಡೆಯಲು ಬಿಡುತ್ತಿಲ್ಲ. ನೀವು ಸಹಕರಿಸಿ ಕಲಾಪ ಮುಂದುವರಿಸಲು ಬಿಡಿ ಎಂದು ನಾನು ವಿನಂತಿಸುತ್ತೇನೆ” ಎಂದು ಸ್ಪೀಕರ್ ಪ್ರತಿಪಕ್ಷ ಸದಸ್ಯರಿಗೆ ಮನವಿ ಮಾಡಿದರು.

ಇದಕ್ಕೆ ಒಪ್ಪದೆ ಪ್ರತಿಪಕ್ಷ ಸದಸ್ಯರು ಪ್ರತಿಭಟನೆ ಮುಂದುವರಿಸಿದಾಗ ಕಲಾಪವನ್ನು ಒಂದು ದಿನದ ಮಟ್ಟಿಗೆ ಮುಂದೂಡಿದರು. ಪ್ರತಿಪಕ್ಷ ಸದಸ್ಯರ ಪ್ರತಿಭಟನೆ ಹಿನ್ನೆಲೆ, ಗುರುವಾರ ಲೋಕಸಭಾ ಕಲಾಪ ಪದೇ ಪದೇ ಮುಂದೂಡಿಕೆಯಾಯಿತು.

ಕಲಾಪವನ್ನು ಒಂದು ದಿನದ ಮಟ್ಟಿಗೆ ಮುಂದೂಡುವ ಮುನ್ನ, ಡಿಎಂಕೆ ಸದಸ್ಯರು ಘೋಷಣೆಗಳನ್ನು ಬರೆದ ಟಿ-ಶರ್ಟ್‌ಗಳನ್ನು ಧರಿಸಿದ್ದಕ್ಕೆ ಸ್ಪೀಕರ್ ಓಂ ಬಿರ್ಲಾ ಆಕ್ಷೇಪಿಸಿದರು. ಇಂತಹ ನಡವಳಿಕೆಗಳು ಸದನದ ಕಾರ್ಯವಿಧಾನದ ನಿಯಮಗಳಿಗೆ ವಿರುದ್ಧವಾಗಿವೆ ಎಂದು ಹೇಳಿದರು. ಬಿರ್ಲಾ ಅವರು ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಿದ್ದರು.

ಮಧ್ಯಾಹ್ನ 12 ಗಂಟೆಗೆ ಸದನ ಮತ್ತೆ ಸೇರಿದಾಗಲೂ ವಿಪಕ್ಷ ಸದಸ್ಯರ ಪ್ರತಿಭಟನೆ ಮುಂದುವರಿಯಿತು. ಈ ವೇಳೆ ಸ್ಪೀಕರ್‌ ಪೀಠದಲ್ಲಿದ್ದ ಟಿಡಿಪಿ ಸಂಸದ ಟೆನ್ನೇಟಿ ಅವರು ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿದರು.

ಡಿಎಂಕೆ ಸದಸ್ಯರು ಪ್ರತಿಭಟನೆಯ ಭಾಗವಾಗಿ ಲೋಕಸಭೆಯಲ್ಲಿ ಬಿಳಿ ಟಿ-ಶರ್ಟ್‌ಗಳನ್ನು ಧರಿಸಿದ್ದರು, ಅವುಗಳ ಮೇಲೆ ‘#fairdelimitation ತಮಿಳುನಾಡು ಹೋರಾಡುತ್ತದೆ, ತಮಿಳುನಾಡು ಗೆಲ್ಲುತ್ತದೆ’ ಎಂಬ ಘೋಷಣೆಗಳನ್ನು ಬರೆಯಲಾಗಿತ್ತು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸ್ಪೀಕರ್ ಓಂ ಬಿರ್ಲಾ ಅವರು “ಸದನವು ನಿಯಮಗಳು ಮತ್ತು ಕಾರ್ಯವಿಧಾನಗಳೊಂದಿಗೆ ಕಾರ್ಯನಿರ್ವಹಿಸುತ್ತದೆ. ಸದಸ್ಯರು ಸದನದ ಘನತೆ ಮತ್ತು ಗೌರವವನ್ನು ಕಾಪಾಡಿಕೊಳ್ಳಬೇಕು. ಆದರೆ ಕೆಲವು ಸಂಸದರು ನಿಯಮಗಳನ್ನು ಪಾಲಿಸುತ್ತಿಲ್ಲ ಮತ್ತು ಘನತೆಯನ್ನು ಉಲ್ಲಂಘಿಸುತ್ತಿದ್ದಾರೆ. ಇದು ಸ್ವೀಕಾರಾರ್ಹವಲ್ಲ ಎಂದು ಬೆಳಿಗ್ಗೆ 11 ಗಂಟೆಗೆ ಹೇಳಿದ್ದರು.

ಘೋಷಣೆಗಳನ್ನು ಬರೆದ ಟಿ-ಶರ್ಟ್‌ಗಳನ್ನು ಧರಿಸಿ ಬಂದಿದ್ದ ಸದಸ್ಯರಿಗೆ ಸ್ಪೀಕರ್ ಸದನದಿಂದ ಹೊರಗೆ ಹೋಗಿ ಘನತೆಯನ್ನು ಕಾಪಾಡಿಕೊಳ್ಳುವ ಸರಿಯಾದ ಉಡುಪಿನೊಂದಿಗೆ ಹಿಂತಿರುಗಲು ನಿರ್ದೇಶಿಸಿದ್ದರು.

“ಒಬ್ಬ ನಾಯಕ ಎಷ್ಟೇ ದೊಡ್ಡವನಾಗಿದ್ದರೂ, ಸದನದೊಳಗೆ ಇಂತಹ ಅಗೌರವದ ಉಡುಪು ಸ್ವೀಕಾರಾರ್ಹವಲ್ಲ” ಎಂದಿದ್ದರು.

“ಹೊರಗೆ ಹೋಗಿ, ಬಟ್ಟೆ ಬದಲಾಯಿಸಿ ಸರಿಯಾದ ಉಡುಪಿನೊಂದಿಗೆ ಬನ್ನಿ” ಎಂದು ಸಂಸದೀಯ ನಿಯಮಗಳನ್ನು ಉಲ್ಲೇಖಿಸಿ ಸದಸ್ಯರಿಗೆ ಹೇಳಿ ಸದನವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಿದ್ದರು.

ಡಿಎಂಕೆ ಸದಸ್ಯರು ಲೋಕಸಭೆಯಲ್ಲಿ ಕ್ಷೇತ್ರ ಪುನರ್ವಿಂಗಡಣೆಯ ವಿಷಯವನ್ನು ಎತ್ತಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಜನಗಣತಿ ಇನ್ನೂ ನಡೆಯದ ಕಾರಣ ಈ ವಿಷಯವು ಸರ್ಕಾರದ ಗಮನದಲ್ಲಿಲ್ಲ ಎಂದು ಹೇಳಿ ಸ್ಪೀಕರ್ ಅವರ ಡಿಎಂಕೆ ಸಂಸದರ ಮನವಿಯನ್ನು ತಿರಸ್ಕರಿಸಿದ್ದಾರೆ.

ರಾಜ್ಯಸಭೆ ಕಲಾಪ ಮುಂದೂಡಿಕೆ

ಗುರುವಾರ ಮಧ್ಯಾಹ್ನ 2 ಗಂಟೆಗೆ ರಾಜ್ಯಸಭೆ ಮತ್ತೆ ಸೇರಿದ ತಕ್ಷಣ, ಡಿಎಂಕೆ ಸದಸ್ಯರು ಘೋಷಣೆಗಳನ್ನು ಬರೆದ ಟಿ-ಶರ್ಟ್‌ಗಳನ್ನು ಧರಿಸಿದ್ದರ ಬಗ್ಗೆ ಗದ್ದಲ ಉಂಟಾದ ಕಾರಣ, ಕಲಾಪವನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಯಿತು.

ಡಿಎಂಕೆ ಸಂಸದರ ಪ್ರತಿಭಟನೆಯ ಕಾರಣಕ್ಕೆ ಊಟದ ವಿರಾಮದ ಮೊದಲ ಅವಧಿಯಲ್ಲಿ ಮೇಲ್ಮನೆಯ ಕಲಾಪವನ್ನು ಮೂರು ಬಾರಿ ಮುಂದೂಡಲ್ಪಟ್ಟವು.

“ಮಾರ್ಚ್ 21 ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಸದನವನ್ನು ಮುಂದೂಡಲಾಗಿದೆ” ಎಂದು ರಾಜ್ಯಸಭೆಯ ಉಪಾಧ್ಯಕ್ಷ ಹರಿವಂಶ್ ತಿಳಿಸಿದ್ದಾರೆ.

ಇದಕ್ಕೂ ಮುನ್ನ, ದಾಖಲೆಗಳನ್ನು ಮಂಡಿಸಿದ ಕೂಡಲೇ, ಅಧ್ಯಕ್ಷ ಜಗದೀಪ್ ಧನ್ಕರ್‌ ಅವರು ಮಧ್ಯಾಹ್ನ 12 ಗಂಟೆಯವರೆಗೆ ಕಲಾಪವನ್ನು ಒಂದು ಗಂಟೆ ಮುಂದೂಡಿದ್ದರು ಮತ್ತು ವಿವಿಧ ಪಕ್ಷಗಳ ಸದನ ನಾಯಕರ ಸಭೆ ಕರೆದಿದ್ದರು.

ಆದಾಗ್ಯೂ, ಈ ವಿಷಯದ ಬಗ್ಗೆ ಬಿಕ್ಕಟ್ಟು ಮುಂದುವರೆಯಿತು ಮತ್ತು ಮಧ್ಯಾಹ್ನ 12 ಗಂಟೆಗೆ ಸದನ ಮತ್ತೆ ಸೇರಿದಾಗ, ಉಪಾಧ್ಯಕ್ಷ ಹರಿವಂಶ್ ಅವರು ಕಲಾಪವನ್ನು ಮತ್ತೆ 15 ನಿಮಿಷಗಳ ಕಾಲ ಮುಂದೂಡಲಾಗಿದೆ ಎಂದು ಘೋಷಿಸಿದರು.

12.15 ಕ್ಕೆ, ಅವರು ಮತ್ತೆ ಬಂದು, ಸದನವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಗಿದೆ ಎಂದು ಘೋಷಿಸಿದರು, ಆದರೆ ಬಿಕ್ಕಟ್ಟು ಇನ್ನೂ ಮುಂದುವರೆದಿತ್ತು.

ಕಲಾಪ ಮುಂದೂಡಿಕೆಗೆ ಸಭಾಧ್ಯಕ್ಷರು ಯಾವುದೇ ಕಾರಣವನ್ನು ಉಲ್ಲೇಖಿಸದಿದ್ದರೂ, ಡಿಎಂಕೆ ಸದಸ್ಯರು ಘೋಷಣೆಗಳನ್ನು ಬರೆದ ಟಿ-ಶರ್ಟ್‌ಗಳನ್ನು ಧರಿಸಿದ್ದಕ್ಕೆ ಸಭಾಧ್ಯಕ್ಷರು ಆಕ್ಷೇಪ ವ್ಯಕ್ತಪಡಿಸಿದರು.

40 ವರ್ಷದ ಬಳಿಕ ಸುಪ್ರೀಂಕೋರ್ಟ್‌ನಿಂದ ನ್ಯಾಯ ಪಡೆದ ಅತ್ಯಾಚಾರ ಸಂತ್ರಸ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...