Homeಮುಖಪುಟಸಂಸತ್ತಿನಲ್ಲಿ ಕ್ಷೇತ್ರ ಪುನರ್‌ವಿಂಗಡನೆ ಗದ್ದಲ: ಉಭಯ ಸದನಗಳ ಕಲಾಪ ಮುಂದೂಡಿಕೆ

ಸಂಸತ್ತಿನಲ್ಲಿ ಕ್ಷೇತ್ರ ಪುನರ್‌ವಿಂಗಡನೆ ಗದ್ದಲ: ಉಭಯ ಸದನಗಳ ಕಲಾಪ ಮುಂದೂಡಿಕೆ

- Advertisement -
- Advertisement -

ವಿರೋಧ ಪಕ್ಷದ ಸದಸ್ಯರು ಘೋಷಣೆಗಳನ್ನು ಹೊಂದಿರುವ ಟಿ-ಶರ್ಟ್‌ಗಳನ್ನು ಧರಿಸಿ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ಪ್ರತಿಭಟನೆ ನಡೆಸಿದ ನಂತರ ಸಂಸತ್ತಿನ ಉಭಯ ಸದನಗಳ ಕಲಾಪಗಳನ್ನು ಗುರುವಾರ (ಮಾ.20) ಒಂದು ಮಟ್ಟಿಗೆ ಮುಂದೂಡಲಾಯಿತು.

ಲೋಕಸಭೆಯಲ್ಲಿ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆ ವಿರುದ್ದ ವಿಪಕ್ಷಗಳ ಸದಸ್ಯರು ಪ್ರತಿಭಟನೆ ಆರಂಭಿಸಿದಾಗ ಸ್ಪೀಕರ್‌ ಪೀಠದಲ್ಲಿದ್ದ ಕೃಷ್ಣ ಪ್ರಸಾದ್ ಟೆನ್ನೇಟಿ, ಸದಸ್ಯರು ತಮ್ಮ ಆಸನಗಳಲ್ಲಿ ಹೋಗಿ ಕೂರುವಂತೆ ವಿನಂತಿಸಿದರು.

“ಕೃಷಿಯ ಬಗ್ಗೆ ನಾವು ಚರ್ಚೆ ಮಾಡಬೇಕಿದೆ. ದೇಶದ ಇಂತಹ ಪ್ರಮುಖ ವಿಷಯ ಕುರಿತು ನೀವು ಚರ್ಚೆ ನಡೆಯಲು ಬಿಡುತ್ತಿಲ್ಲ. ನೀವು ಸಹಕರಿಸಿ ಕಲಾಪ ಮುಂದುವರಿಸಲು ಬಿಡಿ ಎಂದು ನಾನು ವಿನಂತಿಸುತ್ತೇನೆ” ಎಂದು ಸ್ಪೀಕರ್ ಪ್ರತಿಪಕ್ಷ ಸದಸ್ಯರಿಗೆ ಮನವಿ ಮಾಡಿದರು.

ಇದಕ್ಕೆ ಒಪ್ಪದೆ ಪ್ರತಿಪಕ್ಷ ಸದಸ್ಯರು ಪ್ರತಿಭಟನೆ ಮುಂದುವರಿಸಿದಾಗ ಕಲಾಪವನ್ನು ಒಂದು ದಿನದ ಮಟ್ಟಿಗೆ ಮುಂದೂಡಿದರು. ಪ್ರತಿಪಕ್ಷ ಸದಸ್ಯರ ಪ್ರತಿಭಟನೆ ಹಿನ್ನೆಲೆ, ಗುರುವಾರ ಲೋಕಸಭಾ ಕಲಾಪ ಪದೇ ಪದೇ ಮುಂದೂಡಿಕೆಯಾಯಿತು.

ಕಲಾಪವನ್ನು ಒಂದು ದಿನದ ಮಟ್ಟಿಗೆ ಮುಂದೂಡುವ ಮುನ್ನ, ಡಿಎಂಕೆ ಸದಸ್ಯರು ಘೋಷಣೆಗಳನ್ನು ಬರೆದ ಟಿ-ಶರ್ಟ್‌ಗಳನ್ನು ಧರಿಸಿದ್ದಕ್ಕೆ ಸ್ಪೀಕರ್ ಓಂ ಬಿರ್ಲಾ ಆಕ್ಷೇಪಿಸಿದರು. ಇಂತಹ ನಡವಳಿಕೆಗಳು ಸದನದ ಕಾರ್ಯವಿಧಾನದ ನಿಯಮಗಳಿಗೆ ವಿರುದ್ಧವಾಗಿವೆ ಎಂದು ಹೇಳಿದರು. ಬಿರ್ಲಾ ಅವರು ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಿದ್ದರು.

ಮಧ್ಯಾಹ್ನ 12 ಗಂಟೆಗೆ ಸದನ ಮತ್ತೆ ಸೇರಿದಾಗಲೂ ವಿಪಕ್ಷ ಸದಸ್ಯರ ಪ್ರತಿಭಟನೆ ಮುಂದುವರಿಯಿತು. ಈ ವೇಳೆ ಸ್ಪೀಕರ್‌ ಪೀಠದಲ್ಲಿದ್ದ ಟಿಡಿಪಿ ಸಂಸದ ಟೆನ್ನೇಟಿ ಅವರು ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿದರು.

ಡಿಎಂಕೆ ಸದಸ್ಯರು ಪ್ರತಿಭಟನೆಯ ಭಾಗವಾಗಿ ಲೋಕಸಭೆಯಲ್ಲಿ ಬಿಳಿ ಟಿ-ಶರ್ಟ್‌ಗಳನ್ನು ಧರಿಸಿದ್ದರು, ಅವುಗಳ ಮೇಲೆ ‘#fairdelimitation ತಮಿಳುನಾಡು ಹೋರಾಡುತ್ತದೆ, ತಮಿಳುನಾಡು ಗೆಲ್ಲುತ್ತದೆ’ ಎಂಬ ಘೋಷಣೆಗಳನ್ನು ಬರೆಯಲಾಗಿತ್ತು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸ್ಪೀಕರ್ ಓಂ ಬಿರ್ಲಾ ಅವರು “ಸದನವು ನಿಯಮಗಳು ಮತ್ತು ಕಾರ್ಯವಿಧಾನಗಳೊಂದಿಗೆ ಕಾರ್ಯನಿರ್ವಹಿಸುತ್ತದೆ. ಸದಸ್ಯರು ಸದನದ ಘನತೆ ಮತ್ತು ಗೌರವವನ್ನು ಕಾಪಾಡಿಕೊಳ್ಳಬೇಕು. ಆದರೆ ಕೆಲವು ಸಂಸದರು ನಿಯಮಗಳನ್ನು ಪಾಲಿಸುತ್ತಿಲ್ಲ ಮತ್ತು ಘನತೆಯನ್ನು ಉಲ್ಲಂಘಿಸುತ್ತಿದ್ದಾರೆ. ಇದು ಸ್ವೀಕಾರಾರ್ಹವಲ್ಲ ಎಂದು ಬೆಳಿಗ್ಗೆ 11 ಗಂಟೆಗೆ ಹೇಳಿದ್ದರು.

ಘೋಷಣೆಗಳನ್ನು ಬರೆದ ಟಿ-ಶರ್ಟ್‌ಗಳನ್ನು ಧರಿಸಿ ಬಂದಿದ್ದ ಸದಸ್ಯರಿಗೆ ಸ್ಪೀಕರ್ ಸದನದಿಂದ ಹೊರಗೆ ಹೋಗಿ ಘನತೆಯನ್ನು ಕಾಪಾಡಿಕೊಳ್ಳುವ ಸರಿಯಾದ ಉಡುಪಿನೊಂದಿಗೆ ಹಿಂತಿರುಗಲು ನಿರ್ದೇಶಿಸಿದ್ದರು.

“ಒಬ್ಬ ನಾಯಕ ಎಷ್ಟೇ ದೊಡ್ಡವನಾಗಿದ್ದರೂ, ಸದನದೊಳಗೆ ಇಂತಹ ಅಗೌರವದ ಉಡುಪು ಸ್ವೀಕಾರಾರ್ಹವಲ್ಲ” ಎಂದಿದ್ದರು.

“ಹೊರಗೆ ಹೋಗಿ, ಬಟ್ಟೆ ಬದಲಾಯಿಸಿ ಸರಿಯಾದ ಉಡುಪಿನೊಂದಿಗೆ ಬನ್ನಿ” ಎಂದು ಸಂಸದೀಯ ನಿಯಮಗಳನ್ನು ಉಲ್ಲೇಖಿಸಿ ಸದಸ್ಯರಿಗೆ ಹೇಳಿ ಸದನವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಿದ್ದರು.

ಡಿಎಂಕೆ ಸದಸ್ಯರು ಲೋಕಸಭೆಯಲ್ಲಿ ಕ್ಷೇತ್ರ ಪುನರ್ವಿಂಗಡಣೆಯ ವಿಷಯವನ್ನು ಎತ್ತಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಜನಗಣತಿ ಇನ್ನೂ ನಡೆಯದ ಕಾರಣ ಈ ವಿಷಯವು ಸರ್ಕಾರದ ಗಮನದಲ್ಲಿಲ್ಲ ಎಂದು ಹೇಳಿ ಸ್ಪೀಕರ್ ಅವರ ಡಿಎಂಕೆ ಸಂಸದರ ಮನವಿಯನ್ನು ತಿರಸ್ಕರಿಸಿದ್ದಾರೆ.

ರಾಜ್ಯಸಭೆ ಕಲಾಪ ಮುಂದೂಡಿಕೆ

ಗುರುವಾರ ಮಧ್ಯಾಹ್ನ 2 ಗಂಟೆಗೆ ರಾಜ್ಯಸಭೆ ಮತ್ತೆ ಸೇರಿದ ತಕ್ಷಣ, ಡಿಎಂಕೆ ಸದಸ್ಯರು ಘೋಷಣೆಗಳನ್ನು ಬರೆದ ಟಿ-ಶರ್ಟ್‌ಗಳನ್ನು ಧರಿಸಿದ್ದರ ಬಗ್ಗೆ ಗದ್ದಲ ಉಂಟಾದ ಕಾರಣ, ಕಲಾಪವನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಯಿತು.

ಡಿಎಂಕೆ ಸಂಸದರ ಪ್ರತಿಭಟನೆಯ ಕಾರಣಕ್ಕೆ ಊಟದ ವಿರಾಮದ ಮೊದಲ ಅವಧಿಯಲ್ಲಿ ಮೇಲ್ಮನೆಯ ಕಲಾಪವನ್ನು ಮೂರು ಬಾರಿ ಮುಂದೂಡಲ್ಪಟ್ಟವು.

“ಮಾರ್ಚ್ 21 ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಸದನವನ್ನು ಮುಂದೂಡಲಾಗಿದೆ” ಎಂದು ರಾಜ್ಯಸಭೆಯ ಉಪಾಧ್ಯಕ್ಷ ಹರಿವಂಶ್ ತಿಳಿಸಿದ್ದಾರೆ.

ಇದಕ್ಕೂ ಮುನ್ನ, ದಾಖಲೆಗಳನ್ನು ಮಂಡಿಸಿದ ಕೂಡಲೇ, ಅಧ್ಯಕ್ಷ ಜಗದೀಪ್ ಧನ್ಕರ್‌ ಅವರು ಮಧ್ಯಾಹ್ನ 12 ಗಂಟೆಯವರೆಗೆ ಕಲಾಪವನ್ನು ಒಂದು ಗಂಟೆ ಮುಂದೂಡಿದ್ದರು ಮತ್ತು ವಿವಿಧ ಪಕ್ಷಗಳ ಸದನ ನಾಯಕರ ಸಭೆ ಕರೆದಿದ್ದರು.

ಆದಾಗ್ಯೂ, ಈ ವಿಷಯದ ಬಗ್ಗೆ ಬಿಕ್ಕಟ್ಟು ಮುಂದುವರೆಯಿತು ಮತ್ತು ಮಧ್ಯಾಹ್ನ 12 ಗಂಟೆಗೆ ಸದನ ಮತ್ತೆ ಸೇರಿದಾಗ, ಉಪಾಧ್ಯಕ್ಷ ಹರಿವಂಶ್ ಅವರು ಕಲಾಪವನ್ನು ಮತ್ತೆ 15 ನಿಮಿಷಗಳ ಕಾಲ ಮುಂದೂಡಲಾಗಿದೆ ಎಂದು ಘೋಷಿಸಿದರು.

12.15 ಕ್ಕೆ, ಅವರು ಮತ್ತೆ ಬಂದು, ಸದನವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಗಿದೆ ಎಂದು ಘೋಷಿಸಿದರು, ಆದರೆ ಬಿಕ್ಕಟ್ಟು ಇನ್ನೂ ಮುಂದುವರೆದಿತ್ತು.

ಕಲಾಪ ಮುಂದೂಡಿಕೆಗೆ ಸಭಾಧ್ಯಕ್ಷರು ಯಾವುದೇ ಕಾರಣವನ್ನು ಉಲ್ಲೇಖಿಸದಿದ್ದರೂ, ಡಿಎಂಕೆ ಸದಸ್ಯರು ಘೋಷಣೆಗಳನ್ನು ಬರೆದ ಟಿ-ಶರ್ಟ್‌ಗಳನ್ನು ಧರಿಸಿದ್ದಕ್ಕೆ ಸಭಾಧ್ಯಕ್ಷರು ಆಕ್ಷೇಪ ವ್ಯಕ್ತಪಡಿಸಿದರು.

40 ವರ್ಷದ ಬಳಿಕ ಸುಪ್ರೀಂಕೋರ್ಟ್‌ನಿಂದ ನ್ಯಾಯ ಪಡೆದ ಅತ್ಯಾಚಾರ ಸಂತ್ರಸ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...