Homeಅಂತರಾಷ್ಟ್ರೀಯ'ನಸ್ರಲ್ಲಾ, ನೆತನ್ಯಾಹು ಇಬ್ಬರೂ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದರು..'; ಲೆಬನಾನ್ ಮಂತ್ರಿ ಹೇಳಿಕೆ

‘ನಸ್ರಲ್ಲಾ, ನೆತನ್ಯಾಹು ಇಬ್ಬರೂ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದರು..’; ಲೆಬನಾನ್ ಮಂತ್ರಿ ಹೇಳಿಕೆ

- Advertisement -
- Advertisement -

“ಕಳೆದ ವಾರ ಬೈರುತ್‌ನಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಅವರು ಹತರಾಗುವ ಸ್ವಲ್ಪ ಸಮಯದ ಮೊದಲು ಹಿಜ್ಬುಲ್ಲಾದ ಮಾಜಿ ಮುಖ್ಯಸ್ಥ ಹಸನ್ ನಸ್ರಲ್ಲಾ ಮತ್ತು ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದರು ಎಂದು ಲೆಬನಾನ್ ವಿದೇಶಾಂಗ ಸಚಿವ ಅಬ್ದುಲ್ಲಾ ಬೌ ಹಬೀಬ್ ಇಂದು ಹೇಳಿದ್ದಾರೆ.

ಅಮೆರಿಕನ್ ಪತ್ರಕರ್ತರೊಂದಿಗೆ ಮಾತನಾಡಿದ ಬೌ ಹಬೀಬ್, ಕದನ ವಿರಾಮ ನಿರ್ಧಾರದ ಬಗ್ಗೆ ಯುಎಸ್ ಮತ್ತು ಫ್ರೆಂಚ್ ಪ್ರತಿನಿಧಿಗಳಿಗೂ ತಿಳಿಸಿದ್ದೇವೆ ಎಂದು ಹೇಳಿದರು.

ಸೆಪ್ಟೆಂಬರ್ 27 ರಂದು ಇಸ್ರೇಲ್ ಬಾಂಬ್‌ ದಾಳಿ ನಡೆಸಿದಾಗ ಹಸನ್ ನಸ್ರಲ್ಲಾ ದಕ್ಷಿಣದ ಉಪನಗರ ದಹಿಯೆಹ್‌ನ ಬಂಕರ್‌ನಲ್ಲಿದ್ದರು. ನಸ್ರಲ್ಲಾ ಅವರ ಸಾವನ್ನು ದೃಢೀಕರಿಸುವ ಹಿಜ್ಬುಲ್ಲಾ ಅವರ ಹೇಳಿಕೆಯು ಅವರು ಹೇಗೆ ಕೊಲ್ಲಲ್ಪಟ್ಟರು ಎಂಬುದನ್ನು ನಿಖರವಾಗಿ ಹೇಳಿಲ್ಲ. ಅವರ ದೇಹಕ್ಕೆ ಯಾವುದೇ ನೇರವಾದ ಗಾಯಗಳಿಲ್ಲ ಎಂದು ರಾಯಿಟರ್ಸ್ ಹೇಳಿದೆ. ಸಾವಿಗೆ ಕಾರಣವೆಂದರೆ ಸ್ಫೋಟದ ಬಲದಿಂದ ಉಂಟಾದ ಆಘಾತ ಎನ್ನಲಾಗಿದೆ.

“ಕದನ ವಿರಾಮಕ್ಕೆ ನಸ್ರಲ್ಲಾ ಒಪ್ಪಿದರು, ನೆತನ್ಯಾಹು ಸಹ ಒಪ್ಪಿದರು. ಹೆಜ್ಬೊಲ್ಲಾ ಇಸ್ರೇಲ್ ಜೊತೆಗೆ ಸಮಾಲೋಚಿಸಿದ ನಂತರ ಕದನ ವಿರಾಮಕ್ಕೆ ಲೆಬನಾನ್ ಸಂಪೂರ್ಣವಾಗಿ ಒಪ್ಪಿಗೆ ನೀಡಿದೆ. ಇದನ್ನು ಯುಎಸ್‌ ಮತ್ತು ಫ್ರಾನ್ಸ್‌ಗೆ ತಿಳಿಸಲಾಗಿತ್ತು” ಎಂದರು.

“ಲೆಬನಾನಿನ ಹೌಸ್ ಸ್ಪೀಕರ್, ನಬಿಹ್ ಬೆರ್ರಿ, ಹೆಜ್ಬೊಲ್ಲಾ ಅವರೊಂದಿಗೆ ಸಮಾಲೋಚಿಸಿದರು. ನಾವು ಒಪ್ಪಂದದ ಬಗ್ಗೆ ಅಮೆರಿಕನ್ನರು ಮತ್ತು ಫ್ರೆಂಚ್‌ಗೆ ತಿಳಿಸಿದ್ದೇವೆ. ಇಸ್ರೇಲಿ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಕೂಡ ಇಬ್ಬರೂ ಅಧ್ಯಕ್ಷರು ನೀಡಿದ ಹೇಳಿಕೆಯನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ನಮಗೆ ತಿಳಿಸಿದ್ದರು” ಎಂದು ಅವರು ಹೇಳಿದರು.

ಯುನೈಟೆಡ್ ಸ್ಟೇಟ್ಸ್, ಫ್ರಾನ್ಸ್ ಮತ್ತು ಇತರ ಮಿತ್ರರಾಷ್ಟ್ರಗಳು ಸೆಪ್ಟೆಂಬರ್ 25 ರಂದು 21 ದಿನಗಳ ಕದನ ವಿರಾಮ ಪ್ರಸ್ತಾಪಿಸಿದವು. ಯುಎಸ್ ಅಧ್ಯಕ್ಷ ಜೋ ಬಿಡನ್ ಮತ್ತು ಅವರ ಫ್ರೆಂಚ್‌ನ ಇಮ್ಯಾನುಯೆಲ್ ಮ್ಯಾಕ್ರನ್, ನ್ಯೂಯಾರ್ಕ್‌ನಲ್ಲಿ ಯುಎನ್‌ ಜನರಲ್ ಅಸೆಂಬ್ಲಿಯ ಭೇಟಿಯಾದ ನಂತರ ಈ ಕದನ ವಿರಾಮ ಪ್ರಸ್ತಾಪವಾಗಿದೆ. ಆದರೆ, ನೆತನ್ಯಾಹು ಅವರು ಒಂದು ದಿನದ ನಂತರ ಕದನ ವಿರಾಮದ ಪ್ರಸ್ತಾಪವನ್ನು ತಿರಸ್ಕರಿಸಿದರು ಎನ್ನಲಾಗಿದೆ. “ಪೂರ್ಣ ಬಲದೊಂದಿಗೆ ಹೋರಾಡುವುದಕ್ಕೆ” ಮಿಲಿಟರಿಗೆ ಆದೇಶಿಸಿದರು ಎನ್ನಲಾಗಿದೆ.

ಇಸ್ರೇಲ್ ದಾಳಿಯಲ್ಲಿ ಸಾಯುವ ಕೆಲವು ದಿನಗಳ ಮೊದಲು ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರು ನಸ್ರಲ್ಲಾ ಅವರನ್ನು ಲೆಬನಾನ್‌ನಿಂದ ಪಲಾಯನ ಮಾಡುವಂತೆ ಎಚ್ಚರಿಸಿದ್ದರು ಎಂದು ರಾಯಿಟರ್ಸ್ ಬುಧವಾರ ವರದಿ ಮಾಡಿದೆ.

ಇದನ್ನೂ ಓದಿ; ಹೆಚ್ಚಿದ ಯುದ್ಧ ಭೀತಿ: ಬೈರುತ್‌ನ ಹೃದಯಭಾಗದಲ್ಲಿ ಇಸ್ರೇಲ್‌ ವಾಯು ದಾಳಿ, 6 ಜನ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...