Homeಅಂತರಾಷ್ಟ್ರೀಯ'ನಸ್ರಲ್ಲಾ, ನೆತನ್ಯಾಹು ಇಬ್ಬರೂ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದರು..'; ಲೆಬನಾನ್ ಮಂತ್ರಿ ಹೇಳಿಕೆ

‘ನಸ್ರಲ್ಲಾ, ನೆತನ್ಯಾಹು ಇಬ್ಬರೂ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದರು..’; ಲೆಬನಾನ್ ಮಂತ್ರಿ ಹೇಳಿಕೆ

- Advertisement -
- Advertisement -

“ಕಳೆದ ವಾರ ಬೈರುತ್‌ನಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಅವರು ಹತರಾಗುವ ಸ್ವಲ್ಪ ಸಮಯದ ಮೊದಲು ಹಿಜ್ಬುಲ್ಲಾದ ಮಾಜಿ ಮುಖ್ಯಸ್ಥ ಹಸನ್ ನಸ್ರಲ್ಲಾ ಮತ್ತು ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದರು ಎಂದು ಲೆಬನಾನ್ ವಿದೇಶಾಂಗ ಸಚಿವ ಅಬ್ದುಲ್ಲಾ ಬೌ ಹಬೀಬ್ ಇಂದು ಹೇಳಿದ್ದಾರೆ.

ಅಮೆರಿಕನ್ ಪತ್ರಕರ್ತರೊಂದಿಗೆ ಮಾತನಾಡಿದ ಬೌ ಹಬೀಬ್, ಕದನ ವಿರಾಮ ನಿರ್ಧಾರದ ಬಗ್ಗೆ ಯುಎಸ್ ಮತ್ತು ಫ್ರೆಂಚ್ ಪ್ರತಿನಿಧಿಗಳಿಗೂ ತಿಳಿಸಿದ್ದೇವೆ ಎಂದು ಹೇಳಿದರು.

ಸೆಪ್ಟೆಂಬರ್ 27 ರಂದು ಇಸ್ರೇಲ್ ಬಾಂಬ್‌ ದಾಳಿ ನಡೆಸಿದಾಗ ಹಸನ್ ನಸ್ರಲ್ಲಾ ದಕ್ಷಿಣದ ಉಪನಗರ ದಹಿಯೆಹ್‌ನ ಬಂಕರ್‌ನಲ್ಲಿದ್ದರು. ನಸ್ರಲ್ಲಾ ಅವರ ಸಾವನ್ನು ದೃಢೀಕರಿಸುವ ಹಿಜ್ಬುಲ್ಲಾ ಅವರ ಹೇಳಿಕೆಯು ಅವರು ಹೇಗೆ ಕೊಲ್ಲಲ್ಪಟ್ಟರು ಎಂಬುದನ್ನು ನಿಖರವಾಗಿ ಹೇಳಿಲ್ಲ. ಅವರ ದೇಹಕ್ಕೆ ಯಾವುದೇ ನೇರವಾದ ಗಾಯಗಳಿಲ್ಲ ಎಂದು ರಾಯಿಟರ್ಸ್ ಹೇಳಿದೆ. ಸಾವಿಗೆ ಕಾರಣವೆಂದರೆ ಸ್ಫೋಟದ ಬಲದಿಂದ ಉಂಟಾದ ಆಘಾತ ಎನ್ನಲಾಗಿದೆ.

“ಕದನ ವಿರಾಮಕ್ಕೆ ನಸ್ರಲ್ಲಾ ಒಪ್ಪಿದರು, ನೆತನ್ಯಾಹು ಸಹ ಒಪ್ಪಿದರು. ಹೆಜ್ಬೊಲ್ಲಾ ಇಸ್ರೇಲ್ ಜೊತೆಗೆ ಸಮಾಲೋಚಿಸಿದ ನಂತರ ಕದನ ವಿರಾಮಕ್ಕೆ ಲೆಬನಾನ್ ಸಂಪೂರ್ಣವಾಗಿ ಒಪ್ಪಿಗೆ ನೀಡಿದೆ. ಇದನ್ನು ಯುಎಸ್‌ ಮತ್ತು ಫ್ರಾನ್ಸ್‌ಗೆ ತಿಳಿಸಲಾಗಿತ್ತು” ಎಂದರು.

“ಲೆಬನಾನಿನ ಹೌಸ್ ಸ್ಪೀಕರ್, ನಬಿಹ್ ಬೆರ್ರಿ, ಹೆಜ್ಬೊಲ್ಲಾ ಅವರೊಂದಿಗೆ ಸಮಾಲೋಚಿಸಿದರು. ನಾವು ಒಪ್ಪಂದದ ಬಗ್ಗೆ ಅಮೆರಿಕನ್ನರು ಮತ್ತು ಫ್ರೆಂಚ್‌ಗೆ ತಿಳಿಸಿದ್ದೇವೆ. ಇಸ್ರೇಲಿ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಕೂಡ ಇಬ್ಬರೂ ಅಧ್ಯಕ್ಷರು ನೀಡಿದ ಹೇಳಿಕೆಯನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ನಮಗೆ ತಿಳಿಸಿದ್ದರು” ಎಂದು ಅವರು ಹೇಳಿದರು.

ಯುನೈಟೆಡ್ ಸ್ಟೇಟ್ಸ್, ಫ್ರಾನ್ಸ್ ಮತ್ತು ಇತರ ಮಿತ್ರರಾಷ್ಟ್ರಗಳು ಸೆಪ್ಟೆಂಬರ್ 25 ರಂದು 21 ದಿನಗಳ ಕದನ ವಿರಾಮ ಪ್ರಸ್ತಾಪಿಸಿದವು. ಯುಎಸ್ ಅಧ್ಯಕ್ಷ ಜೋ ಬಿಡನ್ ಮತ್ತು ಅವರ ಫ್ರೆಂಚ್‌ನ ಇಮ್ಯಾನುಯೆಲ್ ಮ್ಯಾಕ್ರನ್, ನ್ಯೂಯಾರ್ಕ್‌ನಲ್ಲಿ ಯುಎನ್‌ ಜನರಲ್ ಅಸೆಂಬ್ಲಿಯ ಭೇಟಿಯಾದ ನಂತರ ಈ ಕದನ ವಿರಾಮ ಪ್ರಸ್ತಾಪವಾಗಿದೆ. ಆದರೆ, ನೆತನ್ಯಾಹು ಅವರು ಒಂದು ದಿನದ ನಂತರ ಕದನ ವಿರಾಮದ ಪ್ರಸ್ತಾಪವನ್ನು ತಿರಸ್ಕರಿಸಿದರು ಎನ್ನಲಾಗಿದೆ. “ಪೂರ್ಣ ಬಲದೊಂದಿಗೆ ಹೋರಾಡುವುದಕ್ಕೆ” ಮಿಲಿಟರಿಗೆ ಆದೇಶಿಸಿದರು ಎನ್ನಲಾಗಿದೆ.

ಇಸ್ರೇಲ್ ದಾಳಿಯಲ್ಲಿ ಸಾಯುವ ಕೆಲವು ದಿನಗಳ ಮೊದಲು ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರು ನಸ್ರಲ್ಲಾ ಅವರನ್ನು ಲೆಬನಾನ್‌ನಿಂದ ಪಲಾಯನ ಮಾಡುವಂತೆ ಎಚ್ಚರಿಸಿದ್ದರು ಎಂದು ರಾಯಿಟರ್ಸ್ ಬುಧವಾರ ವರದಿ ಮಾಡಿದೆ.

ಇದನ್ನೂ ಓದಿ; ಹೆಚ್ಚಿದ ಯುದ್ಧ ಭೀತಿ: ಬೈರುತ್‌ನ ಹೃದಯಭಾಗದಲ್ಲಿ ಇಸ್ರೇಲ್‌ ವಾಯು ದಾಳಿ, 6 ಜನ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...