Homeಅಂತರಾಷ್ಟ್ರೀಯ'ನಸ್ರಲ್ಲಾ, ನೆತನ್ಯಾಹು ಇಬ್ಬರೂ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದರು..'; ಲೆಬನಾನ್ ಮಂತ್ರಿ ಹೇಳಿಕೆ

‘ನಸ್ರಲ್ಲಾ, ನೆತನ್ಯಾಹು ಇಬ್ಬರೂ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದರು..’; ಲೆಬನಾನ್ ಮಂತ್ರಿ ಹೇಳಿಕೆ

- Advertisement -
- Advertisement -

“ಕಳೆದ ವಾರ ಬೈರುತ್‌ನಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಅವರು ಹತರಾಗುವ ಸ್ವಲ್ಪ ಸಮಯದ ಮೊದಲು ಹಿಜ್ಬುಲ್ಲಾದ ಮಾಜಿ ಮುಖ್ಯಸ್ಥ ಹಸನ್ ನಸ್ರಲ್ಲಾ ಮತ್ತು ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದರು ಎಂದು ಲೆಬನಾನ್ ವಿದೇಶಾಂಗ ಸಚಿವ ಅಬ್ದುಲ್ಲಾ ಬೌ ಹಬೀಬ್ ಇಂದು ಹೇಳಿದ್ದಾರೆ.

ಅಮೆರಿಕನ್ ಪತ್ರಕರ್ತರೊಂದಿಗೆ ಮಾತನಾಡಿದ ಬೌ ಹಬೀಬ್, ಕದನ ವಿರಾಮ ನಿರ್ಧಾರದ ಬಗ್ಗೆ ಯುಎಸ್ ಮತ್ತು ಫ್ರೆಂಚ್ ಪ್ರತಿನಿಧಿಗಳಿಗೂ ತಿಳಿಸಿದ್ದೇವೆ ಎಂದು ಹೇಳಿದರು.

ಸೆಪ್ಟೆಂಬರ್ 27 ರಂದು ಇಸ್ರೇಲ್ ಬಾಂಬ್‌ ದಾಳಿ ನಡೆಸಿದಾಗ ಹಸನ್ ನಸ್ರಲ್ಲಾ ದಕ್ಷಿಣದ ಉಪನಗರ ದಹಿಯೆಹ್‌ನ ಬಂಕರ್‌ನಲ್ಲಿದ್ದರು. ನಸ್ರಲ್ಲಾ ಅವರ ಸಾವನ್ನು ದೃಢೀಕರಿಸುವ ಹಿಜ್ಬುಲ್ಲಾ ಅವರ ಹೇಳಿಕೆಯು ಅವರು ಹೇಗೆ ಕೊಲ್ಲಲ್ಪಟ್ಟರು ಎಂಬುದನ್ನು ನಿಖರವಾಗಿ ಹೇಳಿಲ್ಲ. ಅವರ ದೇಹಕ್ಕೆ ಯಾವುದೇ ನೇರವಾದ ಗಾಯಗಳಿಲ್ಲ ಎಂದು ರಾಯಿಟರ್ಸ್ ಹೇಳಿದೆ. ಸಾವಿಗೆ ಕಾರಣವೆಂದರೆ ಸ್ಫೋಟದ ಬಲದಿಂದ ಉಂಟಾದ ಆಘಾತ ಎನ್ನಲಾಗಿದೆ.

“ಕದನ ವಿರಾಮಕ್ಕೆ ನಸ್ರಲ್ಲಾ ಒಪ್ಪಿದರು, ನೆತನ್ಯಾಹು ಸಹ ಒಪ್ಪಿದರು. ಹೆಜ್ಬೊಲ್ಲಾ ಇಸ್ರೇಲ್ ಜೊತೆಗೆ ಸಮಾಲೋಚಿಸಿದ ನಂತರ ಕದನ ವಿರಾಮಕ್ಕೆ ಲೆಬನಾನ್ ಸಂಪೂರ್ಣವಾಗಿ ಒಪ್ಪಿಗೆ ನೀಡಿದೆ. ಇದನ್ನು ಯುಎಸ್‌ ಮತ್ತು ಫ್ರಾನ್ಸ್‌ಗೆ ತಿಳಿಸಲಾಗಿತ್ತು” ಎಂದರು.

“ಲೆಬನಾನಿನ ಹೌಸ್ ಸ್ಪೀಕರ್, ನಬಿಹ್ ಬೆರ್ರಿ, ಹೆಜ್ಬೊಲ್ಲಾ ಅವರೊಂದಿಗೆ ಸಮಾಲೋಚಿಸಿದರು. ನಾವು ಒಪ್ಪಂದದ ಬಗ್ಗೆ ಅಮೆರಿಕನ್ನರು ಮತ್ತು ಫ್ರೆಂಚ್‌ಗೆ ತಿಳಿಸಿದ್ದೇವೆ. ಇಸ್ರೇಲಿ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಕೂಡ ಇಬ್ಬರೂ ಅಧ್ಯಕ್ಷರು ನೀಡಿದ ಹೇಳಿಕೆಯನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ನಮಗೆ ತಿಳಿಸಿದ್ದರು” ಎಂದು ಅವರು ಹೇಳಿದರು.

ಯುನೈಟೆಡ್ ಸ್ಟೇಟ್ಸ್, ಫ್ರಾನ್ಸ್ ಮತ್ತು ಇತರ ಮಿತ್ರರಾಷ್ಟ್ರಗಳು ಸೆಪ್ಟೆಂಬರ್ 25 ರಂದು 21 ದಿನಗಳ ಕದನ ವಿರಾಮ ಪ್ರಸ್ತಾಪಿಸಿದವು. ಯುಎಸ್ ಅಧ್ಯಕ್ಷ ಜೋ ಬಿಡನ್ ಮತ್ತು ಅವರ ಫ್ರೆಂಚ್‌ನ ಇಮ್ಯಾನುಯೆಲ್ ಮ್ಯಾಕ್ರನ್, ನ್ಯೂಯಾರ್ಕ್‌ನಲ್ಲಿ ಯುಎನ್‌ ಜನರಲ್ ಅಸೆಂಬ್ಲಿಯ ಭೇಟಿಯಾದ ನಂತರ ಈ ಕದನ ವಿರಾಮ ಪ್ರಸ್ತಾಪವಾಗಿದೆ. ಆದರೆ, ನೆತನ್ಯಾಹು ಅವರು ಒಂದು ದಿನದ ನಂತರ ಕದನ ವಿರಾಮದ ಪ್ರಸ್ತಾಪವನ್ನು ತಿರಸ್ಕರಿಸಿದರು ಎನ್ನಲಾಗಿದೆ. “ಪೂರ್ಣ ಬಲದೊಂದಿಗೆ ಹೋರಾಡುವುದಕ್ಕೆ” ಮಿಲಿಟರಿಗೆ ಆದೇಶಿಸಿದರು ಎನ್ನಲಾಗಿದೆ.

ಇಸ್ರೇಲ್ ದಾಳಿಯಲ್ಲಿ ಸಾಯುವ ಕೆಲವು ದಿನಗಳ ಮೊದಲು ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರು ನಸ್ರಲ್ಲಾ ಅವರನ್ನು ಲೆಬನಾನ್‌ನಿಂದ ಪಲಾಯನ ಮಾಡುವಂತೆ ಎಚ್ಚರಿಸಿದ್ದರು ಎಂದು ರಾಯಿಟರ್ಸ್ ಬುಧವಾರ ವರದಿ ಮಾಡಿದೆ.

ಇದನ್ನೂ ಓದಿ; ಹೆಚ್ಚಿದ ಯುದ್ಧ ಭೀತಿ: ಬೈರುತ್‌ನ ಹೃದಯಭಾಗದಲ್ಲಿ ಇಸ್ರೇಲ್‌ ವಾಯು ದಾಳಿ, 6 ಜನ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...