Homeಅಂತರಾಷ್ಟ್ರೀಯ'ನಸ್ರಲ್ಲಾ, ನೆತನ್ಯಾಹು ಇಬ್ಬರೂ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದರು..'; ಲೆಬನಾನ್ ಮಂತ್ರಿ ಹೇಳಿಕೆ

‘ನಸ್ರಲ್ಲಾ, ನೆತನ್ಯಾಹು ಇಬ್ಬರೂ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದರು..’; ಲೆಬನಾನ್ ಮಂತ್ರಿ ಹೇಳಿಕೆ

- Advertisement -
- Advertisement -

“ಕಳೆದ ವಾರ ಬೈರುತ್‌ನಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಅವರು ಹತರಾಗುವ ಸ್ವಲ್ಪ ಸಮಯದ ಮೊದಲು ಹಿಜ್ಬುಲ್ಲಾದ ಮಾಜಿ ಮುಖ್ಯಸ್ಥ ಹಸನ್ ನಸ್ರಲ್ಲಾ ಮತ್ತು ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದರು ಎಂದು ಲೆಬನಾನ್ ವಿದೇಶಾಂಗ ಸಚಿವ ಅಬ್ದುಲ್ಲಾ ಬೌ ಹಬೀಬ್ ಇಂದು ಹೇಳಿದ್ದಾರೆ.

ಅಮೆರಿಕನ್ ಪತ್ರಕರ್ತರೊಂದಿಗೆ ಮಾತನಾಡಿದ ಬೌ ಹಬೀಬ್, ಕದನ ವಿರಾಮ ನಿರ್ಧಾರದ ಬಗ್ಗೆ ಯುಎಸ್ ಮತ್ತು ಫ್ರೆಂಚ್ ಪ್ರತಿನಿಧಿಗಳಿಗೂ ತಿಳಿಸಿದ್ದೇವೆ ಎಂದು ಹೇಳಿದರು.

ಸೆಪ್ಟೆಂಬರ್ 27 ರಂದು ಇಸ್ರೇಲ್ ಬಾಂಬ್‌ ದಾಳಿ ನಡೆಸಿದಾಗ ಹಸನ್ ನಸ್ರಲ್ಲಾ ದಕ್ಷಿಣದ ಉಪನಗರ ದಹಿಯೆಹ್‌ನ ಬಂಕರ್‌ನಲ್ಲಿದ್ದರು. ನಸ್ರಲ್ಲಾ ಅವರ ಸಾವನ್ನು ದೃಢೀಕರಿಸುವ ಹಿಜ್ಬುಲ್ಲಾ ಅವರ ಹೇಳಿಕೆಯು ಅವರು ಹೇಗೆ ಕೊಲ್ಲಲ್ಪಟ್ಟರು ಎಂಬುದನ್ನು ನಿಖರವಾಗಿ ಹೇಳಿಲ್ಲ. ಅವರ ದೇಹಕ್ಕೆ ಯಾವುದೇ ನೇರವಾದ ಗಾಯಗಳಿಲ್ಲ ಎಂದು ರಾಯಿಟರ್ಸ್ ಹೇಳಿದೆ. ಸಾವಿಗೆ ಕಾರಣವೆಂದರೆ ಸ್ಫೋಟದ ಬಲದಿಂದ ಉಂಟಾದ ಆಘಾತ ಎನ್ನಲಾಗಿದೆ.

“ಕದನ ವಿರಾಮಕ್ಕೆ ನಸ್ರಲ್ಲಾ ಒಪ್ಪಿದರು, ನೆತನ್ಯಾಹು ಸಹ ಒಪ್ಪಿದರು. ಹೆಜ್ಬೊಲ್ಲಾ ಇಸ್ರೇಲ್ ಜೊತೆಗೆ ಸಮಾಲೋಚಿಸಿದ ನಂತರ ಕದನ ವಿರಾಮಕ್ಕೆ ಲೆಬನಾನ್ ಸಂಪೂರ್ಣವಾಗಿ ಒಪ್ಪಿಗೆ ನೀಡಿದೆ. ಇದನ್ನು ಯುಎಸ್‌ ಮತ್ತು ಫ್ರಾನ್ಸ್‌ಗೆ ತಿಳಿಸಲಾಗಿತ್ತು” ಎಂದರು.

“ಲೆಬನಾನಿನ ಹೌಸ್ ಸ್ಪೀಕರ್, ನಬಿಹ್ ಬೆರ್ರಿ, ಹೆಜ್ಬೊಲ್ಲಾ ಅವರೊಂದಿಗೆ ಸಮಾಲೋಚಿಸಿದರು. ನಾವು ಒಪ್ಪಂದದ ಬಗ್ಗೆ ಅಮೆರಿಕನ್ನರು ಮತ್ತು ಫ್ರೆಂಚ್‌ಗೆ ತಿಳಿಸಿದ್ದೇವೆ. ಇಸ್ರೇಲಿ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಕೂಡ ಇಬ್ಬರೂ ಅಧ್ಯಕ್ಷರು ನೀಡಿದ ಹೇಳಿಕೆಯನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ನಮಗೆ ತಿಳಿಸಿದ್ದರು” ಎಂದು ಅವರು ಹೇಳಿದರು.

ಯುನೈಟೆಡ್ ಸ್ಟೇಟ್ಸ್, ಫ್ರಾನ್ಸ್ ಮತ್ತು ಇತರ ಮಿತ್ರರಾಷ್ಟ್ರಗಳು ಸೆಪ್ಟೆಂಬರ್ 25 ರಂದು 21 ದಿನಗಳ ಕದನ ವಿರಾಮ ಪ್ರಸ್ತಾಪಿಸಿದವು. ಯುಎಸ್ ಅಧ್ಯಕ್ಷ ಜೋ ಬಿಡನ್ ಮತ್ತು ಅವರ ಫ್ರೆಂಚ್‌ನ ಇಮ್ಯಾನುಯೆಲ್ ಮ್ಯಾಕ್ರನ್, ನ್ಯೂಯಾರ್ಕ್‌ನಲ್ಲಿ ಯುಎನ್‌ ಜನರಲ್ ಅಸೆಂಬ್ಲಿಯ ಭೇಟಿಯಾದ ನಂತರ ಈ ಕದನ ವಿರಾಮ ಪ್ರಸ್ತಾಪವಾಗಿದೆ. ಆದರೆ, ನೆತನ್ಯಾಹು ಅವರು ಒಂದು ದಿನದ ನಂತರ ಕದನ ವಿರಾಮದ ಪ್ರಸ್ತಾಪವನ್ನು ತಿರಸ್ಕರಿಸಿದರು ಎನ್ನಲಾಗಿದೆ. “ಪೂರ್ಣ ಬಲದೊಂದಿಗೆ ಹೋರಾಡುವುದಕ್ಕೆ” ಮಿಲಿಟರಿಗೆ ಆದೇಶಿಸಿದರು ಎನ್ನಲಾಗಿದೆ.

ಇಸ್ರೇಲ್ ದಾಳಿಯಲ್ಲಿ ಸಾಯುವ ಕೆಲವು ದಿನಗಳ ಮೊದಲು ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರು ನಸ್ರಲ್ಲಾ ಅವರನ್ನು ಲೆಬನಾನ್‌ನಿಂದ ಪಲಾಯನ ಮಾಡುವಂತೆ ಎಚ್ಚರಿಸಿದ್ದರು ಎಂದು ರಾಯಿಟರ್ಸ್ ಬುಧವಾರ ವರದಿ ಮಾಡಿದೆ.

ಇದನ್ನೂ ಓದಿ; ಹೆಚ್ಚಿದ ಯುದ್ಧ ಭೀತಿ: ಬೈರುತ್‌ನ ಹೃದಯಭಾಗದಲ್ಲಿ ಇಸ್ರೇಲ್‌ ವಾಯು ದಾಳಿ, 6 ಜನ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...