Homeಮುಖಪುಟಬಾಟಲ್ ನೀರು ʼಅಧಿಕ ಅಪಾಯಕಾರಿ ಆಹಾರ' - FSSAI ಘೋಷಣೆ

ಬಾಟಲ್ ನೀರು ʼಅಧಿಕ ಅಪಾಯಕಾರಿ ಆಹಾರ’ – FSSAI ಘೋಷಣೆ

- Advertisement -
- Advertisement -

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಪ್ಯಾಕೇಜ್ ಮಾಡಲಾದ ಕುಡಿಯುವ ಮಿನರಲ್ ವಾಟರ್ ಮತ್ತು ಖನಿಜಯುಕ್ತ ನೀರನ್ನು ʼಹೆಚ್ಚಿನ ಅಪಾಯದ ಆಹಾರ ವರ್ಗʼ ಎಂದು ಪರಿಗಣಿಸಿದ್ದು, ವಾರ್ಷಿಕ ತಪಾಸಣೆಗಳನ್ನು ಕಡ್ಡಾಯಗೊಳಿಸಿದೆ ಎಂದು ವರದಿಯಾಗಿದೆ. ಈ ಬಗ್ಗೆ ನವೆಂಬರ್ 29 ರಂದು ಹೊರಡಿಸಿದ ಆದೇಶದಲ್ಲಿ, ಬಾಟಲ್ ಕುಡಿಯುವ ಮತ್ತು ಖನಿಜಯುಕ್ತ ನೀರನ್ನು ಹೆಚ್ಚಿನ ಅಪಾಯಕಾರಿ ಆಹಾರ ವಿಭಾಗದಲ್ಲಿ ಸೇರಿಸಲು ತಿದ್ದುಪಡಿ ಮಾಡುತ್ತಿದೆ ಎಂದು ಹೇಳಿತ್ತು. ಬಾಟಲ್ ನೀರು

ಪ್ಯಾಕ್ ಮಾಡಲಾದ ಕುಡಿಯುವ ಮತ್ತು ಖನಿಜಯುಕ್ತ ನೀರಿನ ಉದ್ಯಮಕ್ಕಾಗಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್‌ನಿಂದ ಪ್ರಮಾಣೀಕರಣ ಪಡೆಯಬೇಕಾದ ಕಡ್ಡಾಯ ಷರತ್ತನ್ನು ತೆಗೆದು ಹಾಕಲು ಸರ್ಕಾರ ತೀರ್ಮಾನ ಮಾಡಿತ್ತು. ಇದರಿಂದ ಕೆಲವು ಉತ್ಪನ್ನಗಳಿಗೆ ಕಡ್ಡಾಯ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ಪ್ರಮಾಣೀಕರಣ ಅಗತ್ಯವಾಗಿಲ್ಲದ ಕಾರಣ, ‘ಪ್ಯಾಕೇಜ್ಡ್ ಡ್ರಿಂಕಿಂಗ್ ವಾಟರ್ ಮತ್ತು ಮಿನರಲ್ ವಾಟರ್’ ಅನ್ನು ‘ಅಧಿಕ ಅಪಾಯದ ಆಹಾರ ವರ್ಗಗಳ’ ಅಡಿಯಲ್ಲಿ ಪರಿಗಣಿಸಲಾಗುತ್ತದೆ’ ಎಂದು FSSAI ಆದೇಶದಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ಯಾಕೇಜ್ ಮಾಡಲಾದ ಕುಡಿಯುವ ನೀರನ್ನು ʼಹೆಚ್ಚಿನ ಅಪಾಯದ ಆಹಾರ ವರ್ಗʼ ಎಂದು ಘೋಷಿಸಿದ FSSAI ಗ್ರಾಹಕರ ರಕ್ಷಣೆ ಮತ್ತು ಪ್ಯಾಕೇಜ್ ಮಾಡಿದ ನೀರಿನ ಉದ್ಯಮದಲ್ಲಿ ಗುಣಮಟ್ಟ ಕಾಪಾಡಲು ಈ ಆದೇಶ ನೀಡಲಾಗಿದೆ ಎನ್ನಲಾಗಿದೆ. ಬಾಟಲ್ ನೀರು

ʼʼಹೆಚ್ಚಿನ ಅಪಾಯದ ಆಹಾರ ವರ್ಗʼದ ಅಡಿಯಲ್ಲಿ ಬರುವ ಆಹಾರ ಉತ್ಪನ್ನಗಳನ್ನು ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸಲಾಗುತ್ತದೆ. ಪ್ಯಾಕೇಜ್ಡ್ ಕುಡಿಯುವ ನೀರು ಮತ್ತು ಖನಿಜಯುಕ್ತ ನೀರಿನ ತಯಾರಕರು ಪ್ರತಿ ವರ್ಷಕ್ಕೊಮ್ಮೆ ಅಪಾಯ ಆಧಾರಿತ ತಪಾಸಣೆಗೆ ಒಳಗಾಗುತ್ತಾರೆ. ಪರವಾನಗಿ ಅಥವಾ ನೋಂದಣಿಯನ್ನು ನೀಡುವ ಮೊದಲು ಕೂಡ ತಪಾಸಣೆ ನಡೆಸಲಾಗುತ್ತದೆ”

ಅಕ್ಟೋಬರ್‌ನಲ್ಲಿ ಪ್ಯಾಕೇಜ್ಡ್ ಕುಡಿಯುವ ನೀರು ಸೇರಿದಂತೆ ಕೆಲವು ಉತ್ಪನ್ನಗಳಿಗೆ ಕಡ್ಡಾಯವಾದ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಪ್ರಮಾಣೀಕರಣವನ್ನು ತೆಗೆದುಹಾಕಲಾಗಿತ್ತು. 2023 ರಲ್ಲಿ ಸುಮಾರು $3,790 ಮಿಲಿಯನ್ ಮೌಲ್ಯದ ಮಾರುಕಟ್ಟೆಯಿದ್ದ ಭಾರತೀಯ ಬಾಟಲ್ ನೀರಿನ ವ್ಯವಹಾರವು 2030 ರ ವೇಳೆಗೆ $8,922 ಮಿಲಿಯನ್ ತಲುಪುತ್ತದೆ ಎಂದು ಟ್ರೇಡ್ ಪ್ರಮೋಷನ್ ಕೌನ್ಸಿಲ್ ಆಫ್ ಇಂಡಿಯಾ ಅಂದಾಜಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...