Homeಮುಖಪುಟಬಾಟಲ್ ನೀರು ʼಅಧಿಕ ಅಪಾಯಕಾರಿ ಆಹಾರ' - FSSAI ಘೋಷಣೆ

ಬಾಟಲ್ ನೀರು ʼಅಧಿಕ ಅಪಾಯಕಾರಿ ಆಹಾರ’ – FSSAI ಘೋಷಣೆ

- Advertisement -
- Advertisement -

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಪ್ಯಾಕೇಜ್ ಮಾಡಲಾದ ಕುಡಿಯುವ ಮಿನರಲ್ ವಾಟರ್ ಮತ್ತು ಖನಿಜಯುಕ್ತ ನೀರನ್ನು ʼಹೆಚ್ಚಿನ ಅಪಾಯದ ಆಹಾರ ವರ್ಗʼ ಎಂದು ಪರಿಗಣಿಸಿದ್ದು, ವಾರ್ಷಿಕ ತಪಾಸಣೆಗಳನ್ನು ಕಡ್ಡಾಯಗೊಳಿಸಿದೆ ಎಂದು ವರದಿಯಾಗಿದೆ. ಈ ಬಗ್ಗೆ ನವೆಂಬರ್ 29 ರಂದು ಹೊರಡಿಸಿದ ಆದೇಶದಲ್ಲಿ, ಬಾಟಲ್ ಕುಡಿಯುವ ಮತ್ತು ಖನಿಜಯುಕ್ತ ನೀರನ್ನು ಹೆಚ್ಚಿನ ಅಪಾಯಕಾರಿ ಆಹಾರ ವಿಭಾಗದಲ್ಲಿ ಸೇರಿಸಲು ತಿದ್ದುಪಡಿ ಮಾಡುತ್ತಿದೆ ಎಂದು ಹೇಳಿತ್ತು. ಬಾಟಲ್ ನೀರು

ಪ್ಯಾಕ್ ಮಾಡಲಾದ ಕುಡಿಯುವ ಮತ್ತು ಖನಿಜಯುಕ್ತ ನೀರಿನ ಉದ್ಯಮಕ್ಕಾಗಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್‌ನಿಂದ ಪ್ರಮಾಣೀಕರಣ ಪಡೆಯಬೇಕಾದ ಕಡ್ಡಾಯ ಷರತ್ತನ್ನು ತೆಗೆದು ಹಾಕಲು ಸರ್ಕಾರ ತೀರ್ಮಾನ ಮಾಡಿತ್ತು. ಇದರಿಂದ ಕೆಲವು ಉತ್ಪನ್ನಗಳಿಗೆ ಕಡ್ಡಾಯ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ಪ್ರಮಾಣೀಕರಣ ಅಗತ್ಯವಾಗಿಲ್ಲದ ಕಾರಣ, ‘ಪ್ಯಾಕೇಜ್ಡ್ ಡ್ರಿಂಕಿಂಗ್ ವಾಟರ್ ಮತ್ತು ಮಿನರಲ್ ವಾಟರ್’ ಅನ್ನು ‘ಅಧಿಕ ಅಪಾಯದ ಆಹಾರ ವರ್ಗಗಳ’ ಅಡಿಯಲ್ಲಿ ಪರಿಗಣಿಸಲಾಗುತ್ತದೆ’ ಎಂದು FSSAI ಆದೇಶದಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ಯಾಕೇಜ್ ಮಾಡಲಾದ ಕುಡಿಯುವ ನೀರನ್ನು ʼಹೆಚ್ಚಿನ ಅಪಾಯದ ಆಹಾರ ವರ್ಗʼ ಎಂದು ಘೋಷಿಸಿದ FSSAI ಗ್ರಾಹಕರ ರಕ್ಷಣೆ ಮತ್ತು ಪ್ಯಾಕೇಜ್ ಮಾಡಿದ ನೀರಿನ ಉದ್ಯಮದಲ್ಲಿ ಗುಣಮಟ್ಟ ಕಾಪಾಡಲು ಈ ಆದೇಶ ನೀಡಲಾಗಿದೆ ಎನ್ನಲಾಗಿದೆ. ಬಾಟಲ್ ನೀರು

ʼʼಹೆಚ್ಚಿನ ಅಪಾಯದ ಆಹಾರ ವರ್ಗʼದ ಅಡಿಯಲ್ಲಿ ಬರುವ ಆಹಾರ ಉತ್ಪನ್ನಗಳನ್ನು ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸಲಾಗುತ್ತದೆ. ಪ್ಯಾಕೇಜ್ಡ್ ಕುಡಿಯುವ ನೀರು ಮತ್ತು ಖನಿಜಯುಕ್ತ ನೀರಿನ ತಯಾರಕರು ಪ್ರತಿ ವರ್ಷಕ್ಕೊಮ್ಮೆ ಅಪಾಯ ಆಧಾರಿತ ತಪಾಸಣೆಗೆ ಒಳಗಾಗುತ್ತಾರೆ. ಪರವಾನಗಿ ಅಥವಾ ನೋಂದಣಿಯನ್ನು ನೀಡುವ ಮೊದಲು ಕೂಡ ತಪಾಸಣೆ ನಡೆಸಲಾಗುತ್ತದೆ”

ಅಕ್ಟೋಬರ್‌ನಲ್ಲಿ ಪ್ಯಾಕೇಜ್ಡ್ ಕುಡಿಯುವ ನೀರು ಸೇರಿದಂತೆ ಕೆಲವು ಉತ್ಪನ್ನಗಳಿಗೆ ಕಡ್ಡಾಯವಾದ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಪ್ರಮಾಣೀಕರಣವನ್ನು ತೆಗೆದುಹಾಕಲಾಗಿತ್ತು. 2023 ರಲ್ಲಿ ಸುಮಾರು $3,790 ಮಿಲಿಯನ್ ಮೌಲ್ಯದ ಮಾರುಕಟ್ಟೆಯಿದ್ದ ಭಾರತೀಯ ಬಾಟಲ್ ನೀರಿನ ವ್ಯವಹಾರವು 2030 ರ ವೇಳೆಗೆ $8,922 ಮಿಲಿಯನ್ ತಲುಪುತ್ತದೆ ಎಂದು ಟ್ರೇಡ್ ಪ್ರಮೋಷನ್ ಕೌನ್ಸಿಲ್ ಆಫ್ ಇಂಡಿಯಾ ಅಂದಾಜಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...