Homeಸಿನಿಮಾಕ್ರೀಡೆಹ್ಯಾಟ್ರಿಕ್ ಗಳಿಸಿದ ಬೌಲರ್ ಅಕಿಲಾ ಧನಂಜಯ: ಮರು ಓವರ್‌ನಲ್ಲೆ 6 ಬಾಲ್‌ಗೆ 6 ಸಿಕ್ಸರ್‌ ಬಾರಿಸಿದ...

ಹ್ಯಾಟ್ರಿಕ್ ಗಳಿಸಿದ ಬೌಲರ್ ಅಕಿಲಾ ಧನಂಜಯ: ಮರು ಓವರ್‌ನಲ್ಲೆ 6 ಬಾಲ್‌ಗೆ 6 ಸಿಕ್ಸರ್‌ ಬಾರಿಸಿದ ಪೊಲಾರ್ಡ್!

ಕೇವಲ 10 ನಿಮಿಷಗಳ ಅಂತರದಲ್ಲಿ ಒಂದು ಹ್ಯಾಟ್ರಿಕ್ ಸಾಧನೆ ಬೌಲರ್ ತಲೆಗೇರಿದರೆ, ಅದೇ ಬೌಲರ್‌ನ ಮರು ಓವರಿನಲ್ಲಿ ಎದುರಾಳಿ ಬ್ಯಾಟ್ಸ್‌ಮನ್ ಓವರ್‌ನಲ್ಲಿ 6 ಸಿಕ್ಸರ್ ಎತ್ತಿ ಸಾಧನೆ ಮಾಡಿದ ಅಪರೂಪದ ಆಟ ದಾಖಲಾಗಿದೆ!

- Advertisement -
- Advertisement -

ಆಂಟಿಗುವಾದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಇಂಟರ್ನ್ಯಾಷನಲ್ (ಟಿ20ಐ) ಪಂದ್ಯದಲ್ಲಿ ಶ್ರೀಲಂಕಾ ಸ್ಪಿನ್ನರ್ ಅಕಿಲಾ ಧನಂಜಯ ಅದ್ಭುತ ಹ್ಯಾಟ್ರಿಕ್ ಸಾಧನೆ ಮಾಡಿದರು. ಆದರೆ ಸ್ವಲ್ಪ ಸಮಯದಲ್ಲಿಯೇ ಅವರ ಅದೃಷ್ಟ ಉಲ್ಟಾ ಹೊಡೆಯಿತು! ಏಕೆಂದರೆ ಆತಿಥೇಯ ತಂಡದ ನಾಯಕ ಕೀರನ್ ಪೊಲಾರ್ಡ್ ಮುಂದಿನ ಅಕಿಲಾ ದನಂಜಯ ಓವರಿನಲ್ಲಿ ಆರು ಬಾಲ್‌ಗೆ ಆರು ಸಿಕ್ಸರ್‌ಗಳನ್ನು ಬಾರಿಸಿದರು!

ಕೇವಲ 10 ನಿಮಿಷಗಳ ಅಂತರದಲ್ಲಿ ಒಂದು ಹ್ಯಾಟ್ರಿಕ್ ಸಾಧನೆ ಬೌಲರ್ ತಲೆಗೇರಿದರೆ, ಅದೇ ಬೌಲರ್‌ನ ಮರು ಓವರಿನಲ್ಲಿ ಎದುರಾಳಿ ಬ್ಯಾಟ್ಸ್‌ಮನ್ ಓವರ್‌ನಲ್ಲಿ 6 ಸಿಕ್ಸರ್ ಎತ್ತಿ ಸಾಧನೆ ಮಾಡಿದ ಅಪರೂಪದ ಆಟ ದಾಖಲಾಗಿದೆ!

ಟಿ 20 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ಎರಡನೇ ಬ್ಯಾಟ್ಸ್‌ಮನ್ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೂರನೆಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪೊಲಾರ್ಡ್ ಪಾತ್ರರಾಗಿದ್ದಾರೆ.

ನೆದರ್ಲ್ಯಾಂಡ್ಸ್ ವಿರುದ್ಧದ ಏಕದಿನ ಪಂದ್ಯದಲ್ಲಿ ಹರ್ಷಲ್ ಗಿಬ್ಸ್ ಮೊದಲು ಆರು ಬಾಲ್‌ಗೆ ಆರು ಸಿಕ್ಸರ್‌ ಸಿಡಿಸಿದ್ದರು. ಯುವರಾಜ್ ಸಿಂಗ್ 2007 ರ ಟಿ 20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್‌ನ ಸ್ಟುವರ್ಟ್ ಬ್ರಾಡ್‌ರ ಒಂದು ಓವರಿನಲ್ಲಿ ಆರು ಸಲ ಸಿಕ್ಸ್‌ರ್ ಗಳಿಸಿದ್ದರು.

ವೆಸ್ಟ್ ಇಂಡೀಸ್ ತಂಡವು ಇಂದಿನ ಪಂದ್ಯದಲ್ಲಿ 3.1 ಓವರ್‌ಗಳಲ್ಲಿ 52/0 ರನ್‌ಗಳ ವೇಗದ ಆರಂಭ ಮಾಡಿತ್ತು. ಧನಂಜಯ ಅವರು ಎವಿನ್ ಲೂಯಿಸ್, ಕ್ರಿಸ್ ಗೇಲ್ ಮತ್ತು ನಿಕೋಲಸ್ ಪೂರನ್‌ರನ್ನು ಸತತ ಎಸೆತಗಳಲ್ಲಿ ಔಟ್ ಮಾಡಿ ಹ್ಯಾಟ್ರಿಕ್ ಸಾಧನೆ ಮೂಲಕ, ವೆಸ್ಟ್ ಇಂಡೀಸ್‌ನ ಆವೇಗವನ್ನು ನಿಲ್ಲಿಸಿದ್ದರು.

ಅವರು ಆರನೇ ಓವರ್ ಬೌಲಿಂಗ್ ಮಾಡಲು ಹಿಂತಿರುಗುತ್ತಿದ್ದಂತೆ, ವೆಸ್ಟ್ ಇಂಡೀಸ್ ನಾಯಕ ಕೀರನ್ ಪೊಲಾರ್ಡ್ ಓವರ್‌ನ ಪ್ರತಿ ಚೆಂಡನ್ನು ಸಿಕ್ಸರ್‌ ಎತ್ತಿದರು.

ಓವರ್‌ನ ಮೊದಲ ಚೆಂಡು ಕೌ ಕಾರ್ನರ್‌ನಲ್ಲಿ ಕಣ್ಮರೆಯಾಯಿತು. ಎರಡನೆಯ ಸಿಕ್ಸರ್ ನೇರವಾಗಿ ಸೈಟ್ ಸ್ಕ್ರೀ ನ್‌ಗೆ ಅಪ್ಪಳಿಸಿತು. ಮೂರನೇ ಎಸೆತದಲ್ಲಿ ಲಾಂಗ್-ಆಫ್ ಮತ್ತು ನಾಲ್ಕನೆಯದಕ್ಕೆ ಡಿಪ್ ಮಿಡ್‌ವಿಕೆಟ್‌ನಲ್ಲಿ ಸಿಕ್ಸರ್‌ ಬಾರಿಸಿದರು. ಐದನೇ ಎಸೆತದಲ್ಲಿ ಲಾಂಗ್-ಆನ್ ಮೇಲೆ ಮತ್ತು ಕೊನೆಯ ಎಸೆತದಲ್ಲಿ ಮತ್ತೆ ಡೀಪ್ ಮಿಡ್ ವಿಕೆಟ್ ಮೇಲೆ ಸಿಕ್ಸರ್ ಬಾರಿಸಿದರು.

ಮುಂದಿನ ಓವರ್‌ನಲ್ಲಿ ಪೊಲಾರ್ಡ್ ಎಲ್‌ಬಿಡಬ್ಲೂ ಬಲೆಗೆ ಬಿದ್ದರು. ಆದರೆ ಅಷ್ಟರಲ್ಲಿ ಅವರು ಶ್ರೀಲಂಕಾಕ್ಕೆ ಅಪಾರ ಹಾನಿ ಮಾಡಿದ್ದರು. ಪಂದ್ಯದಲ್ಲಿ ವೆಸ್ಟ್ ಇಂಡೀಸ್ 132 ರನ್‌ಗಳ ಗುರಿಯನ್ನು ಆರು ಓವರ್ ಬಾಕಿ ಇರುವಾಗಲೇ ಮುಟ್ಟಿ ವಿಜಯಿಯಾಯಿತು.


ಇದನ್ನೂ ಓದಿ: ಮೊಹಮ್ಮದ್ ಸಿರಾಜ್: ಭಾರತೀಯ ಕ್ರಿಕೆಟ್‌ನಲ್ಲಿ ಹೊಸ ಛಾಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...