Homeಸಿನಿಮಾಕ್ರೀಡೆಹ್ಯಾಟ್ರಿಕ್ ಗಳಿಸಿದ ಬೌಲರ್ ಅಕಿಲಾ ಧನಂಜಯ: ಮರು ಓವರ್‌ನಲ್ಲೆ 6 ಬಾಲ್‌ಗೆ 6 ಸಿಕ್ಸರ್‌ ಬಾರಿಸಿದ...

ಹ್ಯಾಟ್ರಿಕ್ ಗಳಿಸಿದ ಬೌಲರ್ ಅಕಿಲಾ ಧನಂಜಯ: ಮರು ಓವರ್‌ನಲ್ಲೆ 6 ಬಾಲ್‌ಗೆ 6 ಸಿಕ್ಸರ್‌ ಬಾರಿಸಿದ ಪೊಲಾರ್ಡ್!

ಕೇವಲ 10 ನಿಮಿಷಗಳ ಅಂತರದಲ್ಲಿ ಒಂದು ಹ್ಯಾಟ್ರಿಕ್ ಸಾಧನೆ ಬೌಲರ್ ತಲೆಗೇರಿದರೆ, ಅದೇ ಬೌಲರ್‌ನ ಮರು ಓವರಿನಲ್ಲಿ ಎದುರಾಳಿ ಬ್ಯಾಟ್ಸ್‌ಮನ್ ಓವರ್‌ನಲ್ಲಿ 6 ಸಿಕ್ಸರ್ ಎತ್ತಿ ಸಾಧನೆ ಮಾಡಿದ ಅಪರೂಪದ ಆಟ ದಾಖಲಾಗಿದೆ!

- Advertisement -
- Advertisement -

ಆಂಟಿಗುವಾದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಇಂಟರ್ನ್ಯಾಷನಲ್ (ಟಿ20ಐ) ಪಂದ್ಯದಲ್ಲಿ ಶ್ರೀಲಂಕಾ ಸ್ಪಿನ್ನರ್ ಅಕಿಲಾ ಧನಂಜಯ ಅದ್ಭುತ ಹ್ಯಾಟ್ರಿಕ್ ಸಾಧನೆ ಮಾಡಿದರು. ಆದರೆ ಸ್ವಲ್ಪ ಸಮಯದಲ್ಲಿಯೇ ಅವರ ಅದೃಷ್ಟ ಉಲ್ಟಾ ಹೊಡೆಯಿತು! ಏಕೆಂದರೆ ಆತಿಥೇಯ ತಂಡದ ನಾಯಕ ಕೀರನ್ ಪೊಲಾರ್ಡ್ ಮುಂದಿನ ಅಕಿಲಾ ದನಂಜಯ ಓವರಿನಲ್ಲಿ ಆರು ಬಾಲ್‌ಗೆ ಆರು ಸಿಕ್ಸರ್‌ಗಳನ್ನು ಬಾರಿಸಿದರು!

ಕೇವಲ 10 ನಿಮಿಷಗಳ ಅಂತರದಲ್ಲಿ ಒಂದು ಹ್ಯಾಟ್ರಿಕ್ ಸಾಧನೆ ಬೌಲರ್ ತಲೆಗೇರಿದರೆ, ಅದೇ ಬೌಲರ್‌ನ ಮರು ಓವರಿನಲ್ಲಿ ಎದುರಾಳಿ ಬ್ಯಾಟ್ಸ್‌ಮನ್ ಓವರ್‌ನಲ್ಲಿ 6 ಸಿಕ್ಸರ್ ಎತ್ತಿ ಸಾಧನೆ ಮಾಡಿದ ಅಪರೂಪದ ಆಟ ದಾಖಲಾಗಿದೆ!

ಟಿ 20 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ಎರಡನೇ ಬ್ಯಾಟ್ಸ್‌ಮನ್ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೂರನೆಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪೊಲಾರ್ಡ್ ಪಾತ್ರರಾಗಿದ್ದಾರೆ.

ನೆದರ್ಲ್ಯಾಂಡ್ಸ್ ವಿರುದ್ಧದ ಏಕದಿನ ಪಂದ್ಯದಲ್ಲಿ ಹರ್ಷಲ್ ಗಿಬ್ಸ್ ಮೊದಲು ಆರು ಬಾಲ್‌ಗೆ ಆರು ಸಿಕ್ಸರ್‌ ಸಿಡಿಸಿದ್ದರು. ಯುವರಾಜ್ ಸಿಂಗ್ 2007 ರ ಟಿ 20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್‌ನ ಸ್ಟುವರ್ಟ್ ಬ್ರಾಡ್‌ರ ಒಂದು ಓವರಿನಲ್ಲಿ ಆರು ಸಲ ಸಿಕ್ಸ್‌ರ್ ಗಳಿಸಿದ್ದರು.

ವೆಸ್ಟ್ ಇಂಡೀಸ್ ತಂಡವು ಇಂದಿನ ಪಂದ್ಯದಲ್ಲಿ 3.1 ಓವರ್‌ಗಳಲ್ಲಿ 52/0 ರನ್‌ಗಳ ವೇಗದ ಆರಂಭ ಮಾಡಿತ್ತು. ಧನಂಜಯ ಅವರು ಎವಿನ್ ಲೂಯಿಸ್, ಕ್ರಿಸ್ ಗೇಲ್ ಮತ್ತು ನಿಕೋಲಸ್ ಪೂರನ್‌ರನ್ನು ಸತತ ಎಸೆತಗಳಲ್ಲಿ ಔಟ್ ಮಾಡಿ ಹ್ಯಾಟ್ರಿಕ್ ಸಾಧನೆ ಮೂಲಕ, ವೆಸ್ಟ್ ಇಂಡೀಸ್‌ನ ಆವೇಗವನ್ನು ನಿಲ್ಲಿಸಿದ್ದರು.

ಅವರು ಆರನೇ ಓವರ್ ಬೌಲಿಂಗ್ ಮಾಡಲು ಹಿಂತಿರುಗುತ್ತಿದ್ದಂತೆ, ವೆಸ್ಟ್ ಇಂಡೀಸ್ ನಾಯಕ ಕೀರನ್ ಪೊಲಾರ್ಡ್ ಓವರ್‌ನ ಪ್ರತಿ ಚೆಂಡನ್ನು ಸಿಕ್ಸರ್‌ ಎತ್ತಿದರು.

ಓವರ್‌ನ ಮೊದಲ ಚೆಂಡು ಕೌ ಕಾರ್ನರ್‌ನಲ್ಲಿ ಕಣ್ಮರೆಯಾಯಿತು. ಎರಡನೆಯ ಸಿಕ್ಸರ್ ನೇರವಾಗಿ ಸೈಟ್ ಸ್ಕ್ರೀ ನ್‌ಗೆ ಅಪ್ಪಳಿಸಿತು. ಮೂರನೇ ಎಸೆತದಲ್ಲಿ ಲಾಂಗ್-ಆಫ್ ಮತ್ತು ನಾಲ್ಕನೆಯದಕ್ಕೆ ಡಿಪ್ ಮಿಡ್‌ವಿಕೆಟ್‌ನಲ್ಲಿ ಸಿಕ್ಸರ್‌ ಬಾರಿಸಿದರು. ಐದನೇ ಎಸೆತದಲ್ಲಿ ಲಾಂಗ್-ಆನ್ ಮೇಲೆ ಮತ್ತು ಕೊನೆಯ ಎಸೆತದಲ್ಲಿ ಮತ್ತೆ ಡೀಪ್ ಮಿಡ್ ವಿಕೆಟ್ ಮೇಲೆ ಸಿಕ್ಸರ್ ಬಾರಿಸಿದರು.

ಮುಂದಿನ ಓವರ್‌ನಲ್ಲಿ ಪೊಲಾರ್ಡ್ ಎಲ್‌ಬಿಡಬ್ಲೂ ಬಲೆಗೆ ಬಿದ್ದರು. ಆದರೆ ಅಷ್ಟರಲ್ಲಿ ಅವರು ಶ್ರೀಲಂಕಾಕ್ಕೆ ಅಪಾರ ಹಾನಿ ಮಾಡಿದ್ದರು. ಪಂದ್ಯದಲ್ಲಿ ವೆಸ್ಟ್ ಇಂಡೀಸ್ 132 ರನ್‌ಗಳ ಗುರಿಯನ್ನು ಆರು ಓವರ್ ಬಾಕಿ ಇರುವಾಗಲೇ ಮುಟ್ಟಿ ವಿಜಯಿಯಾಯಿತು.


ಇದನ್ನೂ ಓದಿ: ಮೊಹಮ್ಮದ್ ಸಿರಾಜ್: ಭಾರತೀಯ ಕ್ರಿಕೆಟ್‌ನಲ್ಲಿ ಹೊಸ ಛಾಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...