Homeಸಿನಿಮಾಕ್ರೀಡೆಹ್ಯಾಟ್ರಿಕ್ ಗಳಿಸಿದ ಬೌಲರ್ ಅಕಿಲಾ ಧನಂಜಯ: ಮರು ಓವರ್‌ನಲ್ಲೆ 6 ಬಾಲ್‌ಗೆ 6 ಸಿಕ್ಸರ್‌ ಬಾರಿಸಿದ...

ಹ್ಯಾಟ್ರಿಕ್ ಗಳಿಸಿದ ಬೌಲರ್ ಅಕಿಲಾ ಧನಂಜಯ: ಮರು ಓವರ್‌ನಲ್ಲೆ 6 ಬಾಲ್‌ಗೆ 6 ಸಿಕ್ಸರ್‌ ಬಾರಿಸಿದ ಪೊಲಾರ್ಡ್!

ಕೇವಲ 10 ನಿಮಿಷಗಳ ಅಂತರದಲ್ಲಿ ಒಂದು ಹ್ಯಾಟ್ರಿಕ್ ಸಾಧನೆ ಬೌಲರ್ ತಲೆಗೇರಿದರೆ, ಅದೇ ಬೌಲರ್‌ನ ಮರು ಓವರಿನಲ್ಲಿ ಎದುರಾಳಿ ಬ್ಯಾಟ್ಸ್‌ಮನ್ ಓವರ್‌ನಲ್ಲಿ 6 ಸಿಕ್ಸರ್ ಎತ್ತಿ ಸಾಧನೆ ಮಾಡಿದ ಅಪರೂಪದ ಆಟ ದಾಖಲಾಗಿದೆ!

- Advertisement -
- Advertisement -

ಆಂಟಿಗುವಾದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಇಂಟರ್ನ್ಯಾಷನಲ್ (ಟಿ20ಐ) ಪಂದ್ಯದಲ್ಲಿ ಶ್ರೀಲಂಕಾ ಸ್ಪಿನ್ನರ್ ಅಕಿಲಾ ಧನಂಜಯ ಅದ್ಭುತ ಹ್ಯಾಟ್ರಿಕ್ ಸಾಧನೆ ಮಾಡಿದರು. ಆದರೆ ಸ್ವಲ್ಪ ಸಮಯದಲ್ಲಿಯೇ ಅವರ ಅದೃಷ್ಟ ಉಲ್ಟಾ ಹೊಡೆಯಿತು! ಏಕೆಂದರೆ ಆತಿಥೇಯ ತಂಡದ ನಾಯಕ ಕೀರನ್ ಪೊಲಾರ್ಡ್ ಮುಂದಿನ ಅಕಿಲಾ ದನಂಜಯ ಓವರಿನಲ್ಲಿ ಆರು ಬಾಲ್‌ಗೆ ಆರು ಸಿಕ್ಸರ್‌ಗಳನ್ನು ಬಾರಿಸಿದರು!

ಕೇವಲ 10 ನಿಮಿಷಗಳ ಅಂತರದಲ್ಲಿ ಒಂದು ಹ್ಯಾಟ್ರಿಕ್ ಸಾಧನೆ ಬೌಲರ್ ತಲೆಗೇರಿದರೆ, ಅದೇ ಬೌಲರ್‌ನ ಮರು ಓವರಿನಲ್ಲಿ ಎದುರಾಳಿ ಬ್ಯಾಟ್ಸ್‌ಮನ್ ಓವರ್‌ನಲ್ಲಿ 6 ಸಿಕ್ಸರ್ ಎತ್ತಿ ಸಾಧನೆ ಮಾಡಿದ ಅಪರೂಪದ ಆಟ ದಾಖಲಾಗಿದೆ!

ಟಿ 20 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ಎರಡನೇ ಬ್ಯಾಟ್ಸ್‌ಮನ್ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೂರನೆಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪೊಲಾರ್ಡ್ ಪಾತ್ರರಾಗಿದ್ದಾರೆ.

ನೆದರ್ಲ್ಯಾಂಡ್ಸ್ ವಿರುದ್ಧದ ಏಕದಿನ ಪಂದ್ಯದಲ್ಲಿ ಹರ್ಷಲ್ ಗಿಬ್ಸ್ ಮೊದಲು ಆರು ಬಾಲ್‌ಗೆ ಆರು ಸಿಕ್ಸರ್‌ ಸಿಡಿಸಿದ್ದರು. ಯುವರಾಜ್ ಸಿಂಗ್ 2007 ರ ಟಿ 20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್‌ನ ಸ್ಟುವರ್ಟ್ ಬ್ರಾಡ್‌ರ ಒಂದು ಓವರಿನಲ್ಲಿ ಆರು ಸಲ ಸಿಕ್ಸ್‌ರ್ ಗಳಿಸಿದ್ದರು.

ವೆಸ್ಟ್ ಇಂಡೀಸ್ ತಂಡವು ಇಂದಿನ ಪಂದ್ಯದಲ್ಲಿ 3.1 ಓವರ್‌ಗಳಲ್ಲಿ 52/0 ರನ್‌ಗಳ ವೇಗದ ಆರಂಭ ಮಾಡಿತ್ತು. ಧನಂಜಯ ಅವರು ಎವಿನ್ ಲೂಯಿಸ್, ಕ್ರಿಸ್ ಗೇಲ್ ಮತ್ತು ನಿಕೋಲಸ್ ಪೂರನ್‌ರನ್ನು ಸತತ ಎಸೆತಗಳಲ್ಲಿ ಔಟ್ ಮಾಡಿ ಹ್ಯಾಟ್ರಿಕ್ ಸಾಧನೆ ಮೂಲಕ, ವೆಸ್ಟ್ ಇಂಡೀಸ್‌ನ ಆವೇಗವನ್ನು ನಿಲ್ಲಿಸಿದ್ದರು.

ಅವರು ಆರನೇ ಓವರ್ ಬೌಲಿಂಗ್ ಮಾಡಲು ಹಿಂತಿರುಗುತ್ತಿದ್ದಂತೆ, ವೆಸ್ಟ್ ಇಂಡೀಸ್ ನಾಯಕ ಕೀರನ್ ಪೊಲಾರ್ಡ್ ಓವರ್‌ನ ಪ್ರತಿ ಚೆಂಡನ್ನು ಸಿಕ್ಸರ್‌ ಎತ್ತಿದರು.

ಓವರ್‌ನ ಮೊದಲ ಚೆಂಡು ಕೌ ಕಾರ್ನರ್‌ನಲ್ಲಿ ಕಣ್ಮರೆಯಾಯಿತು. ಎರಡನೆಯ ಸಿಕ್ಸರ್ ನೇರವಾಗಿ ಸೈಟ್ ಸ್ಕ್ರೀ ನ್‌ಗೆ ಅಪ್ಪಳಿಸಿತು. ಮೂರನೇ ಎಸೆತದಲ್ಲಿ ಲಾಂಗ್-ಆಫ್ ಮತ್ತು ನಾಲ್ಕನೆಯದಕ್ಕೆ ಡಿಪ್ ಮಿಡ್‌ವಿಕೆಟ್‌ನಲ್ಲಿ ಸಿಕ್ಸರ್‌ ಬಾರಿಸಿದರು. ಐದನೇ ಎಸೆತದಲ್ಲಿ ಲಾಂಗ್-ಆನ್ ಮೇಲೆ ಮತ್ತು ಕೊನೆಯ ಎಸೆತದಲ್ಲಿ ಮತ್ತೆ ಡೀಪ್ ಮಿಡ್ ವಿಕೆಟ್ ಮೇಲೆ ಸಿಕ್ಸರ್ ಬಾರಿಸಿದರು.

ಮುಂದಿನ ಓವರ್‌ನಲ್ಲಿ ಪೊಲಾರ್ಡ್ ಎಲ್‌ಬಿಡಬ್ಲೂ ಬಲೆಗೆ ಬಿದ್ದರು. ಆದರೆ ಅಷ್ಟರಲ್ಲಿ ಅವರು ಶ್ರೀಲಂಕಾಕ್ಕೆ ಅಪಾರ ಹಾನಿ ಮಾಡಿದ್ದರು. ಪಂದ್ಯದಲ್ಲಿ ವೆಸ್ಟ್ ಇಂಡೀಸ್ 132 ರನ್‌ಗಳ ಗುರಿಯನ್ನು ಆರು ಓವರ್ ಬಾಕಿ ಇರುವಾಗಲೇ ಮುಟ್ಟಿ ವಿಜಯಿಯಾಯಿತು.


ಇದನ್ನೂ ಓದಿ: ಮೊಹಮ್ಮದ್ ಸಿರಾಜ್: ಭಾರತೀಯ ಕ್ರಿಕೆಟ್‌ನಲ್ಲಿ ಹೊಸ ಛಾಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....