Homeಸಿನಿಮಾಕ್ರೀಡೆಹ್ಯಾಟ್ರಿಕ್ ಗಳಿಸಿದ ಬೌಲರ್ ಅಕಿಲಾ ಧನಂಜಯ: ಮರು ಓವರ್‌ನಲ್ಲೆ 6 ಬಾಲ್‌ಗೆ 6 ಸಿಕ್ಸರ್‌ ಬಾರಿಸಿದ...

ಹ್ಯಾಟ್ರಿಕ್ ಗಳಿಸಿದ ಬೌಲರ್ ಅಕಿಲಾ ಧನಂಜಯ: ಮರು ಓವರ್‌ನಲ್ಲೆ 6 ಬಾಲ್‌ಗೆ 6 ಸಿಕ್ಸರ್‌ ಬಾರಿಸಿದ ಪೊಲಾರ್ಡ್!

ಕೇವಲ 10 ನಿಮಿಷಗಳ ಅಂತರದಲ್ಲಿ ಒಂದು ಹ್ಯಾಟ್ರಿಕ್ ಸಾಧನೆ ಬೌಲರ್ ತಲೆಗೇರಿದರೆ, ಅದೇ ಬೌಲರ್‌ನ ಮರು ಓವರಿನಲ್ಲಿ ಎದುರಾಳಿ ಬ್ಯಾಟ್ಸ್‌ಮನ್ ಓವರ್‌ನಲ್ಲಿ 6 ಸಿಕ್ಸರ್ ಎತ್ತಿ ಸಾಧನೆ ಮಾಡಿದ ಅಪರೂಪದ ಆಟ ದಾಖಲಾಗಿದೆ!

- Advertisement -
- Advertisement -

ಆಂಟಿಗುವಾದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಇಂಟರ್ನ್ಯಾಷನಲ್ (ಟಿ20ಐ) ಪಂದ್ಯದಲ್ಲಿ ಶ್ರೀಲಂಕಾ ಸ್ಪಿನ್ನರ್ ಅಕಿಲಾ ಧನಂಜಯ ಅದ್ಭುತ ಹ್ಯಾಟ್ರಿಕ್ ಸಾಧನೆ ಮಾಡಿದರು. ಆದರೆ ಸ್ವಲ್ಪ ಸಮಯದಲ್ಲಿಯೇ ಅವರ ಅದೃಷ್ಟ ಉಲ್ಟಾ ಹೊಡೆಯಿತು! ಏಕೆಂದರೆ ಆತಿಥೇಯ ತಂಡದ ನಾಯಕ ಕೀರನ್ ಪೊಲಾರ್ಡ್ ಮುಂದಿನ ಅಕಿಲಾ ದನಂಜಯ ಓವರಿನಲ್ಲಿ ಆರು ಬಾಲ್‌ಗೆ ಆರು ಸಿಕ್ಸರ್‌ಗಳನ್ನು ಬಾರಿಸಿದರು!

ಕೇವಲ 10 ನಿಮಿಷಗಳ ಅಂತರದಲ್ಲಿ ಒಂದು ಹ್ಯಾಟ್ರಿಕ್ ಸಾಧನೆ ಬೌಲರ್ ತಲೆಗೇರಿದರೆ, ಅದೇ ಬೌಲರ್‌ನ ಮರು ಓವರಿನಲ್ಲಿ ಎದುರಾಳಿ ಬ್ಯಾಟ್ಸ್‌ಮನ್ ಓವರ್‌ನಲ್ಲಿ 6 ಸಿಕ್ಸರ್ ಎತ್ತಿ ಸಾಧನೆ ಮಾಡಿದ ಅಪರೂಪದ ಆಟ ದಾಖಲಾಗಿದೆ!

ಟಿ 20 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ಎರಡನೇ ಬ್ಯಾಟ್ಸ್‌ಮನ್ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೂರನೆಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪೊಲಾರ್ಡ್ ಪಾತ್ರರಾಗಿದ್ದಾರೆ.

ನೆದರ್ಲ್ಯಾಂಡ್ಸ್ ವಿರುದ್ಧದ ಏಕದಿನ ಪಂದ್ಯದಲ್ಲಿ ಹರ್ಷಲ್ ಗಿಬ್ಸ್ ಮೊದಲು ಆರು ಬಾಲ್‌ಗೆ ಆರು ಸಿಕ್ಸರ್‌ ಸಿಡಿಸಿದ್ದರು. ಯುವರಾಜ್ ಸಿಂಗ್ 2007 ರ ಟಿ 20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್‌ನ ಸ್ಟುವರ್ಟ್ ಬ್ರಾಡ್‌ರ ಒಂದು ಓವರಿನಲ್ಲಿ ಆರು ಸಲ ಸಿಕ್ಸ್‌ರ್ ಗಳಿಸಿದ್ದರು.

ವೆಸ್ಟ್ ಇಂಡೀಸ್ ತಂಡವು ಇಂದಿನ ಪಂದ್ಯದಲ್ಲಿ 3.1 ಓವರ್‌ಗಳಲ್ಲಿ 52/0 ರನ್‌ಗಳ ವೇಗದ ಆರಂಭ ಮಾಡಿತ್ತು. ಧನಂಜಯ ಅವರು ಎವಿನ್ ಲೂಯಿಸ್, ಕ್ರಿಸ್ ಗೇಲ್ ಮತ್ತು ನಿಕೋಲಸ್ ಪೂರನ್‌ರನ್ನು ಸತತ ಎಸೆತಗಳಲ್ಲಿ ಔಟ್ ಮಾಡಿ ಹ್ಯಾಟ್ರಿಕ್ ಸಾಧನೆ ಮೂಲಕ, ವೆಸ್ಟ್ ಇಂಡೀಸ್‌ನ ಆವೇಗವನ್ನು ನಿಲ್ಲಿಸಿದ್ದರು.

ಅವರು ಆರನೇ ಓವರ್ ಬೌಲಿಂಗ್ ಮಾಡಲು ಹಿಂತಿರುಗುತ್ತಿದ್ದಂತೆ, ವೆಸ್ಟ್ ಇಂಡೀಸ್ ನಾಯಕ ಕೀರನ್ ಪೊಲಾರ್ಡ್ ಓವರ್‌ನ ಪ್ರತಿ ಚೆಂಡನ್ನು ಸಿಕ್ಸರ್‌ ಎತ್ತಿದರು.

ಓವರ್‌ನ ಮೊದಲ ಚೆಂಡು ಕೌ ಕಾರ್ನರ್‌ನಲ್ಲಿ ಕಣ್ಮರೆಯಾಯಿತು. ಎರಡನೆಯ ಸಿಕ್ಸರ್ ನೇರವಾಗಿ ಸೈಟ್ ಸ್ಕ್ರೀ ನ್‌ಗೆ ಅಪ್ಪಳಿಸಿತು. ಮೂರನೇ ಎಸೆತದಲ್ಲಿ ಲಾಂಗ್-ಆಫ್ ಮತ್ತು ನಾಲ್ಕನೆಯದಕ್ಕೆ ಡಿಪ್ ಮಿಡ್‌ವಿಕೆಟ್‌ನಲ್ಲಿ ಸಿಕ್ಸರ್‌ ಬಾರಿಸಿದರು. ಐದನೇ ಎಸೆತದಲ್ಲಿ ಲಾಂಗ್-ಆನ್ ಮೇಲೆ ಮತ್ತು ಕೊನೆಯ ಎಸೆತದಲ್ಲಿ ಮತ್ತೆ ಡೀಪ್ ಮಿಡ್ ವಿಕೆಟ್ ಮೇಲೆ ಸಿಕ್ಸರ್ ಬಾರಿಸಿದರು.

ಮುಂದಿನ ಓವರ್‌ನಲ್ಲಿ ಪೊಲಾರ್ಡ್ ಎಲ್‌ಬಿಡಬ್ಲೂ ಬಲೆಗೆ ಬಿದ್ದರು. ಆದರೆ ಅಷ್ಟರಲ್ಲಿ ಅವರು ಶ್ರೀಲಂಕಾಕ್ಕೆ ಅಪಾರ ಹಾನಿ ಮಾಡಿದ್ದರು. ಪಂದ್ಯದಲ್ಲಿ ವೆಸ್ಟ್ ಇಂಡೀಸ್ 132 ರನ್‌ಗಳ ಗುರಿಯನ್ನು ಆರು ಓವರ್ ಬಾಕಿ ಇರುವಾಗಲೇ ಮುಟ್ಟಿ ವಿಜಯಿಯಾಯಿತು.


ಇದನ್ನೂ ಓದಿ: ಮೊಹಮ್ಮದ್ ಸಿರಾಜ್: ಭಾರತೀಯ ಕ್ರಿಕೆಟ್‌ನಲ್ಲಿ ಹೊಸ ಛಾಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...