Homeಸಿನಿಮಾಕ್ರೀಡೆಹ್ಯಾಟ್ರಿಕ್ ಗಳಿಸಿದ ಬೌಲರ್ ಅಕಿಲಾ ಧನಂಜಯ: ಮರು ಓವರ್‌ನಲ್ಲೆ 6 ಬಾಲ್‌ಗೆ 6 ಸಿಕ್ಸರ್‌ ಬಾರಿಸಿದ...

ಹ್ಯಾಟ್ರಿಕ್ ಗಳಿಸಿದ ಬೌಲರ್ ಅಕಿಲಾ ಧನಂಜಯ: ಮರು ಓವರ್‌ನಲ್ಲೆ 6 ಬಾಲ್‌ಗೆ 6 ಸಿಕ್ಸರ್‌ ಬಾರಿಸಿದ ಪೊಲಾರ್ಡ್!

ಕೇವಲ 10 ನಿಮಿಷಗಳ ಅಂತರದಲ್ಲಿ ಒಂದು ಹ್ಯಾಟ್ರಿಕ್ ಸಾಧನೆ ಬೌಲರ್ ತಲೆಗೇರಿದರೆ, ಅದೇ ಬೌಲರ್‌ನ ಮರು ಓವರಿನಲ್ಲಿ ಎದುರಾಳಿ ಬ್ಯಾಟ್ಸ್‌ಮನ್ ಓವರ್‌ನಲ್ಲಿ 6 ಸಿಕ್ಸರ್ ಎತ್ತಿ ಸಾಧನೆ ಮಾಡಿದ ಅಪರೂಪದ ಆಟ ದಾಖಲಾಗಿದೆ!

- Advertisement -
- Advertisement -

ಆಂಟಿಗುವಾದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಇಂಟರ್ನ್ಯಾಷನಲ್ (ಟಿ20ಐ) ಪಂದ್ಯದಲ್ಲಿ ಶ್ರೀಲಂಕಾ ಸ್ಪಿನ್ನರ್ ಅಕಿಲಾ ಧನಂಜಯ ಅದ್ಭುತ ಹ್ಯಾಟ್ರಿಕ್ ಸಾಧನೆ ಮಾಡಿದರು. ಆದರೆ ಸ್ವಲ್ಪ ಸಮಯದಲ್ಲಿಯೇ ಅವರ ಅದೃಷ್ಟ ಉಲ್ಟಾ ಹೊಡೆಯಿತು! ಏಕೆಂದರೆ ಆತಿಥೇಯ ತಂಡದ ನಾಯಕ ಕೀರನ್ ಪೊಲಾರ್ಡ್ ಮುಂದಿನ ಅಕಿಲಾ ದನಂಜಯ ಓವರಿನಲ್ಲಿ ಆರು ಬಾಲ್‌ಗೆ ಆರು ಸಿಕ್ಸರ್‌ಗಳನ್ನು ಬಾರಿಸಿದರು!

ಕೇವಲ 10 ನಿಮಿಷಗಳ ಅಂತರದಲ್ಲಿ ಒಂದು ಹ್ಯಾಟ್ರಿಕ್ ಸಾಧನೆ ಬೌಲರ್ ತಲೆಗೇರಿದರೆ, ಅದೇ ಬೌಲರ್‌ನ ಮರು ಓವರಿನಲ್ಲಿ ಎದುರಾಳಿ ಬ್ಯಾಟ್ಸ್‌ಮನ್ ಓವರ್‌ನಲ್ಲಿ 6 ಸಿಕ್ಸರ್ ಎತ್ತಿ ಸಾಧನೆ ಮಾಡಿದ ಅಪರೂಪದ ಆಟ ದಾಖಲಾಗಿದೆ!

ಟಿ 20 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ಎರಡನೇ ಬ್ಯಾಟ್ಸ್‌ಮನ್ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೂರನೆಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪೊಲಾರ್ಡ್ ಪಾತ್ರರಾಗಿದ್ದಾರೆ.

ನೆದರ್ಲ್ಯಾಂಡ್ಸ್ ವಿರುದ್ಧದ ಏಕದಿನ ಪಂದ್ಯದಲ್ಲಿ ಹರ್ಷಲ್ ಗಿಬ್ಸ್ ಮೊದಲು ಆರು ಬಾಲ್‌ಗೆ ಆರು ಸಿಕ್ಸರ್‌ ಸಿಡಿಸಿದ್ದರು. ಯುವರಾಜ್ ಸಿಂಗ್ 2007 ರ ಟಿ 20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್‌ನ ಸ್ಟುವರ್ಟ್ ಬ್ರಾಡ್‌ರ ಒಂದು ಓವರಿನಲ್ಲಿ ಆರು ಸಲ ಸಿಕ್ಸ್‌ರ್ ಗಳಿಸಿದ್ದರು.

ವೆಸ್ಟ್ ಇಂಡೀಸ್ ತಂಡವು ಇಂದಿನ ಪಂದ್ಯದಲ್ಲಿ 3.1 ಓವರ್‌ಗಳಲ್ಲಿ 52/0 ರನ್‌ಗಳ ವೇಗದ ಆರಂಭ ಮಾಡಿತ್ತು. ಧನಂಜಯ ಅವರು ಎವಿನ್ ಲೂಯಿಸ್, ಕ್ರಿಸ್ ಗೇಲ್ ಮತ್ತು ನಿಕೋಲಸ್ ಪೂರನ್‌ರನ್ನು ಸತತ ಎಸೆತಗಳಲ್ಲಿ ಔಟ್ ಮಾಡಿ ಹ್ಯಾಟ್ರಿಕ್ ಸಾಧನೆ ಮೂಲಕ, ವೆಸ್ಟ್ ಇಂಡೀಸ್‌ನ ಆವೇಗವನ್ನು ನಿಲ್ಲಿಸಿದ್ದರು.

ಅವರು ಆರನೇ ಓವರ್ ಬೌಲಿಂಗ್ ಮಾಡಲು ಹಿಂತಿರುಗುತ್ತಿದ್ದಂತೆ, ವೆಸ್ಟ್ ಇಂಡೀಸ್ ನಾಯಕ ಕೀರನ್ ಪೊಲಾರ್ಡ್ ಓವರ್‌ನ ಪ್ರತಿ ಚೆಂಡನ್ನು ಸಿಕ್ಸರ್‌ ಎತ್ತಿದರು.

ಓವರ್‌ನ ಮೊದಲ ಚೆಂಡು ಕೌ ಕಾರ್ನರ್‌ನಲ್ಲಿ ಕಣ್ಮರೆಯಾಯಿತು. ಎರಡನೆಯ ಸಿಕ್ಸರ್ ನೇರವಾಗಿ ಸೈಟ್ ಸ್ಕ್ರೀ ನ್‌ಗೆ ಅಪ್ಪಳಿಸಿತು. ಮೂರನೇ ಎಸೆತದಲ್ಲಿ ಲಾಂಗ್-ಆಫ್ ಮತ್ತು ನಾಲ್ಕನೆಯದಕ್ಕೆ ಡಿಪ್ ಮಿಡ್‌ವಿಕೆಟ್‌ನಲ್ಲಿ ಸಿಕ್ಸರ್‌ ಬಾರಿಸಿದರು. ಐದನೇ ಎಸೆತದಲ್ಲಿ ಲಾಂಗ್-ಆನ್ ಮೇಲೆ ಮತ್ತು ಕೊನೆಯ ಎಸೆತದಲ್ಲಿ ಮತ್ತೆ ಡೀಪ್ ಮಿಡ್ ವಿಕೆಟ್ ಮೇಲೆ ಸಿಕ್ಸರ್ ಬಾರಿಸಿದರು.

ಮುಂದಿನ ಓವರ್‌ನಲ್ಲಿ ಪೊಲಾರ್ಡ್ ಎಲ್‌ಬಿಡಬ್ಲೂ ಬಲೆಗೆ ಬಿದ್ದರು. ಆದರೆ ಅಷ್ಟರಲ್ಲಿ ಅವರು ಶ್ರೀಲಂಕಾಕ್ಕೆ ಅಪಾರ ಹಾನಿ ಮಾಡಿದ್ದರು. ಪಂದ್ಯದಲ್ಲಿ ವೆಸ್ಟ್ ಇಂಡೀಸ್ 132 ರನ್‌ಗಳ ಗುರಿಯನ್ನು ಆರು ಓವರ್ ಬಾಕಿ ಇರುವಾಗಲೇ ಮುಟ್ಟಿ ವಿಜಯಿಯಾಯಿತು.


ಇದನ್ನೂ ಓದಿ: ಮೊಹಮ್ಮದ್ ಸಿರಾಜ್: ಭಾರತೀಯ ಕ್ರಿಕೆಟ್‌ನಲ್ಲಿ ಹೊಸ ಛಾಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...