Homeಸಿನಿಮಾಕ್ರೀಡೆಹ್ಯಾಟ್ರಿಕ್ ಗಳಿಸಿದ ಬೌಲರ್ ಅಕಿಲಾ ಧನಂಜಯ: ಮರು ಓವರ್‌ನಲ್ಲೆ 6 ಬಾಲ್‌ಗೆ 6 ಸಿಕ್ಸರ್‌ ಬಾರಿಸಿದ...

ಹ್ಯಾಟ್ರಿಕ್ ಗಳಿಸಿದ ಬೌಲರ್ ಅಕಿಲಾ ಧನಂಜಯ: ಮರು ಓವರ್‌ನಲ್ಲೆ 6 ಬಾಲ್‌ಗೆ 6 ಸಿಕ್ಸರ್‌ ಬಾರಿಸಿದ ಪೊಲಾರ್ಡ್!

ಕೇವಲ 10 ನಿಮಿಷಗಳ ಅಂತರದಲ್ಲಿ ಒಂದು ಹ್ಯಾಟ್ರಿಕ್ ಸಾಧನೆ ಬೌಲರ್ ತಲೆಗೇರಿದರೆ, ಅದೇ ಬೌಲರ್‌ನ ಮರು ಓವರಿನಲ್ಲಿ ಎದುರಾಳಿ ಬ್ಯಾಟ್ಸ್‌ಮನ್ ಓವರ್‌ನಲ್ಲಿ 6 ಸಿಕ್ಸರ್ ಎತ್ತಿ ಸಾಧನೆ ಮಾಡಿದ ಅಪರೂಪದ ಆಟ ದಾಖಲಾಗಿದೆ!

- Advertisement -
- Advertisement -

ಆಂಟಿಗುವಾದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಇಂಟರ್ನ್ಯಾಷನಲ್ (ಟಿ20ಐ) ಪಂದ್ಯದಲ್ಲಿ ಶ್ರೀಲಂಕಾ ಸ್ಪಿನ್ನರ್ ಅಕಿಲಾ ಧನಂಜಯ ಅದ್ಭುತ ಹ್ಯಾಟ್ರಿಕ್ ಸಾಧನೆ ಮಾಡಿದರು. ಆದರೆ ಸ್ವಲ್ಪ ಸಮಯದಲ್ಲಿಯೇ ಅವರ ಅದೃಷ್ಟ ಉಲ್ಟಾ ಹೊಡೆಯಿತು! ಏಕೆಂದರೆ ಆತಿಥೇಯ ತಂಡದ ನಾಯಕ ಕೀರನ್ ಪೊಲಾರ್ಡ್ ಮುಂದಿನ ಅಕಿಲಾ ದನಂಜಯ ಓವರಿನಲ್ಲಿ ಆರು ಬಾಲ್‌ಗೆ ಆರು ಸಿಕ್ಸರ್‌ಗಳನ್ನು ಬಾರಿಸಿದರು!

ಕೇವಲ 10 ನಿಮಿಷಗಳ ಅಂತರದಲ್ಲಿ ಒಂದು ಹ್ಯಾಟ್ರಿಕ್ ಸಾಧನೆ ಬೌಲರ್ ತಲೆಗೇರಿದರೆ, ಅದೇ ಬೌಲರ್‌ನ ಮರು ಓವರಿನಲ್ಲಿ ಎದುರಾಳಿ ಬ್ಯಾಟ್ಸ್‌ಮನ್ ಓವರ್‌ನಲ್ಲಿ 6 ಸಿಕ್ಸರ್ ಎತ್ತಿ ಸಾಧನೆ ಮಾಡಿದ ಅಪರೂಪದ ಆಟ ದಾಖಲಾಗಿದೆ!

ಟಿ 20 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ಎರಡನೇ ಬ್ಯಾಟ್ಸ್‌ಮನ್ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೂರನೆಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪೊಲಾರ್ಡ್ ಪಾತ್ರರಾಗಿದ್ದಾರೆ.

ನೆದರ್ಲ್ಯಾಂಡ್ಸ್ ವಿರುದ್ಧದ ಏಕದಿನ ಪಂದ್ಯದಲ್ಲಿ ಹರ್ಷಲ್ ಗಿಬ್ಸ್ ಮೊದಲು ಆರು ಬಾಲ್‌ಗೆ ಆರು ಸಿಕ್ಸರ್‌ ಸಿಡಿಸಿದ್ದರು. ಯುವರಾಜ್ ಸಿಂಗ್ 2007 ರ ಟಿ 20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್‌ನ ಸ್ಟುವರ್ಟ್ ಬ್ರಾಡ್‌ರ ಒಂದು ಓವರಿನಲ್ಲಿ ಆರು ಸಲ ಸಿಕ್ಸ್‌ರ್ ಗಳಿಸಿದ್ದರು.

ವೆಸ್ಟ್ ಇಂಡೀಸ್ ತಂಡವು ಇಂದಿನ ಪಂದ್ಯದಲ್ಲಿ 3.1 ಓವರ್‌ಗಳಲ್ಲಿ 52/0 ರನ್‌ಗಳ ವೇಗದ ಆರಂಭ ಮಾಡಿತ್ತು. ಧನಂಜಯ ಅವರು ಎವಿನ್ ಲೂಯಿಸ್, ಕ್ರಿಸ್ ಗೇಲ್ ಮತ್ತು ನಿಕೋಲಸ್ ಪೂರನ್‌ರನ್ನು ಸತತ ಎಸೆತಗಳಲ್ಲಿ ಔಟ್ ಮಾಡಿ ಹ್ಯಾಟ್ರಿಕ್ ಸಾಧನೆ ಮೂಲಕ, ವೆಸ್ಟ್ ಇಂಡೀಸ್‌ನ ಆವೇಗವನ್ನು ನಿಲ್ಲಿಸಿದ್ದರು.

ಅವರು ಆರನೇ ಓವರ್ ಬೌಲಿಂಗ್ ಮಾಡಲು ಹಿಂತಿರುಗುತ್ತಿದ್ದಂತೆ, ವೆಸ್ಟ್ ಇಂಡೀಸ್ ನಾಯಕ ಕೀರನ್ ಪೊಲಾರ್ಡ್ ಓವರ್‌ನ ಪ್ರತಿ ಚೆಂಡನ್ನು ಸಿಕ್ಸರ್‌ ಎತ್ತಿದರು.

ಓವರ್‌ನ ಮೊದಲ ಚೆಂಡು ಕೌ ಕಾರ್ನರ್‌ನಲ್ಲಿ ಕಣ್ಮರೆಯಾಯಿತು. ಎರಡನೆಯ ಸಿಕ್ಸರ್ ನೇರವಾಗಿ ಸೈಟ್ ಸ್ಕ್ರೀ ನ್‌ಗೆ ಅಪ್ಪಳಿಸಿತು. ಮೂರನೇ ಎಸೆತದಲ್ಲಿ ಲಾಂಗ್-ಆಫ್ ಮತ್ತು ನಾಲ್ಕನೆಯದಕ್ಕೆ ಡಿಪ್ ಮಿಡ್‌ವಿಕೆಟ್‌ನಲ್ಲಿ ಸಿಕ್ಸರ್‌ ಬಾರಿಸಿದರು. ಐದನೇ ಎಸೆತದಲ್ಲಿ ಲಾಂಗ್-ಆನ್ ಮೇಲೆ ಮತ್ತು ಕೊನೆಯ ಎಸೆತದಲ್ಲಿ ಮತ್ತೆ ಡೀಪ್ ಮಿಡ್ ವಿಕೆಟ್ ಮೇಲೆ ಸಿಕ್ಸರ್ ಬಾರಿಸಿದರು.

ಮುಂದಿನ ಓವರ್‌ನಲ್ಲಿ ಪೊಲಾರ್ಡ್ ಎಲ್‌ಬಿಡಬ್ಲೂ ಬಲೆಗೆ ಬಿದ್ದರು. ಆದರೆ ಅಷ್ಟರಲ್ಲಿ ಅವರು ಶ್ರೀಲಂಕಾಕ್ಕೆ ಅಪಾರ ಹಾನಿ ಮಾಡಿದ್ದರು. ಪಂದ್ಯದಲ್ಲಿ ವೆಸ್ಟ್ ಇಂಡೀಸ್ 132 ರನ್‌ಗಳ ಗುರಿಯನ್ನು ಆರು ಓವರ್ ಬಾಕಿ ಇರುವಾಗಲೇ ಮುಟ್ಟಿ ವಿಜಯಿಯಾಯಿತು.


ಇದನ್ನೂ ಓದಿ: ಮೊಹಮ್ಮದ್ ಸಿರಾಜ್: ಭಾರತೀಯ ಕ್ರಿಕೆಟ್‌ನಲ್ಲಿ ಹೊಸ ಛಾಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...