Homeಮುಖಪುಟಬೌರಿಂಗ್ ಮತ್ತು ಲೇಡಿ ಕರ್ಜನ್ ಬದಲು ಶ್ರೀ ಅಟಲ್ ಬಿಹಾರಿ ವಾಜಪೇಯಿ!: ಕನ್ನಡಿಗರ ವಿರೋಧ

ಬೌರಿಂಗ್ ಮತ್ತು ಲೇಡಿ ಕರ್ಜನ್ ಬದಲು ಶ್ರೀ ಅಟಲ್ ಬಿಹಾರಿ ವಾಜಪೇಯಿ!: ಕನ್ನಡಿಗರ ವಿರೋಧ

'ಬೌರಿಂಗ್ ಮತ್ತು ಲೇಡಿ ಕರ್ಜನ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ'ಯ ಹೆಸರನ್ನು 'ಶ್ರೀ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ' ಎಂದು ಮರುನಾಮಕರಣ ಮಾಡಲಾಗಿದೆ.

- Advertisement -
- Advertisement -

ಸರ್ಕಾರ ಕೋವಿಡ್ ನಿಭಾಯಿಸಲು ಯಶಸ್ವಿಯಾಗಿದೆಯೋ, ಇಲ್ಲವೋ ಅದು ಬೇರೆ ಮಾತು ಆದರೆ ಅದು ತನ್ನ ಅಜೆಂಡಾಗಳನ್ನು ಮಾತ್ರ ಸ್ಪಷ್ಟವಾಗಿ ಜಾರಿ ಮಾಡುತ್ತಿದೆ. ಕರ್ನಾಟಕ ಸರ್ಕಾರ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವನ್ನು ಅನುಕರಣೆ ಮಾಡುತ್ತಿದ್ದು, ಕರ್ನಾಟಕದಲ್ಲಿಯೂ ಮರುನಾಮಕರಣ ಮಾಡುವುದರಲ್ಲಿ ನಿರತವಾಗಿದೆ.

ಯಲಹಂಕದ ಮೇಲ್ಸೆತುವೆಗೆ ಕನ್ನಡಿಗರ ವಿರೋಧದ ನಡುವೆಯೂ ಸರ್ಕಾರ ಸಾವರ್ಕರ್ ಹೆಸರು ಇಡಲಾಯಿತು. ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣಕ್ಕೆ ಅಡ್ಡಗಾಲು ಹಾಕಿ, ಕನ್ನಡಿಗರ ಮೇಲೆ ಲಾಠಿ ಚಾರ್ಜ್ ಮಾಡಲಾಯಿತು. ಆನಂತರ ಜನರಿಗೆ ಪ್ರವಾಹ ಪರಿಹಾರ ನೀಡಲಾಗದಿದ್ದರೂ ಮರಾಠ ಅಭಿವೃದ್ದಿ ಪ್ರಾಧಿಕಾರ ಮಾಡಲು ಮುಂದಾಯಿತು. ಇಂತಹ ಕನ್ನಡಿಗರ ವಿರೋಧದ ಮತ್ತೊಂದು ಕೆಲಸಕ್ಕೆ ಸರ್ಕಾರ ಕೈ ಹಾಕಿದೆ. ಅದೇ ಬೆಂಗಳೂರಿನ ಶಿವಾಜಿನಗರದಲ್ಲಿರುವ ‘ಬೌರಿಂಗ್ ಮತ್ತು ಲೇಡಿ ಕರ್ಜನ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ’ಯ ಹೆಸರನ್ನು ‘ಶ್ರೀ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ’ ಎಂದು ಮರುನಾಮಕರಣ ಮಾಡಿ ಆದೇಶ ಹೊರಡಿಸಿದೆ.

ಈ ಹೆಸರುಗಳ ಬದಲಾವಣೆಯಿಂದ ಏನಾದರೂ ಪರಿವರ್ತನೆ ಸಾಧ್ಯವೇ? ಜನರಿಗೆ ಏನು ಉಪಯೋಗ ಎಂಬುದನ್ನು ಯೋಚಿಸದ ಸರ್ಕಾರ ತನ್ನ ಅಜೆಂಡಾಗಳನ್ನು ಹೇರುತ್ತಿದೆ ಎಂದು ಹಲವರು ದೂರಿದ್ದಾರೆ. ಇನ್ನು ನೀವು ಹೆಸರು ಬದಲಾವಣೆ ಮಾಡಲೇಬೇಕೆಂದರೆ ಕನ್ನಡ ನಾಡಿನಲ್ಲಿ ಸಾಧನೆಗೈದ ಕನ್ನಡಿಗರು ಹೆಸರು ಇಡಬಹುದಲ್ಲವೇ? ಎಲ್ಲಕ್ಕೂ ಉತ್ತರ ಭಾರತೀಯರ ಹೆಸರು ಏಕೆ ಎಂದು ಕನ್ನಡಿಗರು ಕಿಡಿಕಾರಿದ್ದಾರೆ.

“ಯಾಕೆ ನಿಮಗೆ ಯಾವ ಕನ್ನಡಿಗ ಸಾಧಕರ ಹೆಸರು ಸಿಗಲಿಲ್ಲವೇ? ಕೊರೊನಾಗೆ ಜೀವತೆತ್ತ ಕೊರನಾ ಸೈನಿಕರ ಹೆಸರು ಇಡಬಹುದಿತ್ತು ಕಡೆಪಕ್ಷ ನಿಮ್ಮ ಪಕ್ಷದ ಕರ್ನಾಟಕದ ನಾಯಕರ ಹೆಸರು ಆದ್ರೂ ಇಡಬಹುದಿತ್ತು ಅಲ್ವಾ! ಎಂತ ಶೋಚನೀಯ ಗುಲಾಮಗಿರಿ! ಕಾಂಗ್ರೆಸ್‌ನವರಿಗೆ ನೆಹರು, ಇಂದಿರಾ, ರಾಜೀವ್. ನಿಮಗೆ ಮಾಳವೀಯ, ಮುಖರ್ಜಿ, ವಾಜಪೇಯಿ ಇಷ್ಟೇನಾ ನಿಮ್ಮ ರಾಜಕೀಯ ಜೀವನ!” ಎಂದು ಕೃಷಿಕ ಎವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಾರನ್ನ ಕೇಳಿ ಹೆಸರಿಟ್ರಿ. ಸರ್ಕಾರ ನಿಮ್ಮದೆ ಆಗಿರಬಹುದು, ಆದ್ರೆ ರಾಜ್ಯದ ಆಸ್ತಿ ಅಡವು ನಿಮ್ಮಪ್ಪಗಳು ಎಂಬಂತೆ ಬೇಕಾಬಿಟ್ಟಿ ನಿಮಗಿಶ್ಟ ಬಂದವರ ಹೆಸರಿಡುತ್ತಿದ್ದೀರಿ. ನಿಮ್ಮ ಒಡೆತನದ ಆಸ್ತಿಗಳಿಗೆ ಇಟ್ಕಳ್ರಯ್ಯ ವಾಜಪೇಯೊ, ಮುಕರ್ಜಿಯೊ ಮತ್ತಿನ್ನಾರದೊ. ಯಾರು ಕೇಳಿಯಾರು ಎಂದು ಸೋಮಶೇಖರ್ ಬಜ್ಜಣ್ಣ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಸರ್ಕಾರ ಕಟ್ಟಿದ ಸಂಸ್ಥೆಗಳನ್ನ ಮರುನಾಮಕರಣ ಮಾಡುವುದೇ ತಮ್ಮ ಅಭಿವೃದ್ಧಿ ಅನ್ಸುತ್ತೆ. ಇದು ಕೈಲಾಗದೆ ಇರೋರು ಮಾಡೋ ಕೆಲಸ. ನೀವು ಸಾರ್ವಜನಿಕ ಸಂಸ್ಥೆಗಳನ್ನು ಕಟ್ಟಿ ಆಮೇಲೆ ಅವಕ್ಕೆ ಹೆಸರಿಡಿ ಎಂದು ಅಜಯ್ ರಾಜ್ ಸವಾಲು ಹಾಕಿದ್ದಾರೆ.


ಇದನ್ನೂ ಓದಿ; ಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...