Homeಮುಖಪುಟಅಂಗಡಿಯಿಂದ ಚಿಪ್ಸ್ ಪ್ಯಾಕೆಟ್ ಕದ್ದ ಆರೋಪ; ಮನನೊಂದು ಕೀಟನಾಶಕ ಕುಡಿದು ಸಾವನ್ನಪ್ಪಿದ ಬಾಲಕ

ಅಂಗಡಿಯಿಂದ ಚಿಪ್ಸ್ ಪ್ಯಾಕೆಟ್ ಕದ್ದ ಆರೋಪ; ಮನನೊಂದು ಕೀಟನಾಶಕ ಕುಡಿದು ಸಾವನ್ನಪ್ಪಿದ ಬಾಲಕ

- Advertisement -
- Advertisement -

ಅಂಗಡಿಯವನಿಂದ ಚಿಪ್ಸ್ ಪ್ಯಾಕೆಟ್ ಕದ್ದ ಆರೋಪ ಎದುರಿಸುತ್ತಿದ್ದ 12 ವರ್ಷದ ಬಾಲಕ ಕೀಟನಾಶಕ ಸೇವಿಸಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದು, ಕೋಲ್ಕತ್ತಾ ಬಳಿಯ ಪಶ್ಚಿಮ ಮೇದಿನಿಪುರ ಜಿಲ್ಲೆಯ ಪನ್ಸ್ಕುರಾದಲ್ಲಿ ದುರ್ಘನೆ ನಡೆದಿದೆ.

ಗುರುವಾರ ಸಂಜೆ ಪನ್ಸ್ಕುರಾ ಪ್ರದೇಶದ ಗೋಸೈಬರ್ ಬಜಾರ್‌ನಲ್ಲಿರುವ ಅಂಗಡಿಯಿಂದ 7 ನೇ ತರಗತಿಯ ವಿದ್ಯಾರ್ಥಿ ಕೃಷೇಂದು ದಾಸ್ ಅಂಗಡಿ ಮಾಲೀಕ ಶುಭಂಕರ್ ದೀಕ್ಷಿತ್ ಸಿಗದ ಕಾರಣ ಅಂಗಡಿಯಿಂದ ಚಿಪ್ಸ್ ಪ್ಯಾಕೆಟ್ ತೆಗೆದುಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಯಾವುದೇ ಪ್ರತಿಕ್ರಿಯೆಯಿಲ್ಲದೆ ಅವನು “ಚಿಕ್ಕಪ್ಪ ನಾನು ಚಿಪ್ಸ್ ಖರೀದಿಸುತ್ತೇನೆ” ಎಂದು ಪದೇಪದೆ ಕರೆದಿದ್ದನು, ಅಂತಿಮವಾಗಿ ಒಂದು ಪ್ಯಾಕೆಟ್ ಚಿಪ್ಸ್‌ನೊಂದಿಗೆ ಅಂಗಡಿಯಿಂದ ಹೊರಟುಹೋದನು ಎಂದು ಅಧಿಕಾರಿ ಬಾಲಕನ ತಾಯಿ ಹೇಳಿಕೆ ಉಲ್ಲೇಖಿಸಿ ಹೇಳಿದರು.

ದೀಕ್ಷಿತ್ ಬಾಲಕನ ಬೆನ್ನಟ್ಟಿದ್ದಾನೆ ಎಂದು ಆರೋಪಿಸಲಾಗಿದೆ, ಅವರು ಶೀಘ್ರದಲ್ಲೇ ಅಂಗಡಿಗೆ ಹಿಂತಿರುಗಿ, ಕಪಾಳಮೋಕ್ಷ ಮಾಡಿ ಸಾರ್ವಜನಿಕರ ಮುಂದೆ ಬಸ್ಕಿ ಹೊಡೆಯಲು ಹೇಳಿದರು ಎಂದು ಅಧಿಕಾರಿಯು ಕುಟುಂಬದ ದೂರನ್ನು ಉಲ್ಲೇಖಿಸಿ ಹೇಳಿದರು.

ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದರು, ದಾಸ್ ಅವರ ತಾಯಿಯನ್ನು ಸ್ಥಳಕ್ಕೆ ಕರೆಸಲಾಯಿತು. ಅವರು ಸಹ ಬಾಲಕನನ್ನು ಗದರಿಸಿ ಕಪಾಳಮೋಕ್ಷ ಮಾಡಿದರು. ಆದರೆ, ಹುಡುಗ ಅಂಗಡಿಯ ಚಿಪ್ಸ್‌ ಪ್ಯಾಕೆಟ್ ಅನ್ನು ಎತ್ತಿಕೊಂಡು, ನಂತರ ಬಂದು ಹಣ ನೀಡಲು ಯೋಚಿಸಿದ್ದೆ ಎಂದು ಹೇಳಿಕೊಂಡಿದ್ದಾನೆ.

ಅಂಗಡಿಯ ಮಾಲೀಕರ ಒಪ್ಪಿಗೆಯಿಲ್ಲದೆ ಪ್ಯಾಕೆಟ್ ಎತ್ತಿದ್ದಕ್ಕಾಗಿ ಕ್ಷಮೆಯಾಚಿಸಿ ತಕ್ಷಣ ಹಣ ನೀಡಲು ಸಹ ಅವನು ಮುಂದಾದನು. ಆದರೆ, ಅಂಗಡಿಯ ಮಾಲೀಕರು ಅವನು ಸುಳ್ಳು ಹೇಳುತ್ತಿದ್ದಾನೆ ಎಂದು ಆರೋಪಿಸಿದರು.

ನಂತರ ದುಃಖಿತನಾದ ಕೃಷ್ಣೇಂದು ತನ್ನ ತಾಯಿಯೊಂದಿಗೆ ತನ್ನ ಮನೆಗೆ ಹಿಂತಿರುಗಿ, ಒಳಗಿನಿಂದ ತನ್ನ ಕೋಣೆಯ ಬಾಗಿಲನ್ನು ಚಿಲಕ ಹಾಕಿದ್ದಾರೆ. ಬಳಿಕ ಆತ ಬಾಗಿಲು ತೆರೆಯಲಿಲ್ಲ.

ಸ್ವಲ್ಪ ಸಮಯದ ನಂತರ ಅವನ ತಾಯಿ ನೆರೆಹೊರೆಯವರೊಂದಿಗೆ ಬಾಗಿಲು ಒಡೆದು ನೋಡಿದಾಗ ಅವನ ಬಾಯಿಯಿಂದ ನೊರೆ ಬರುತ್ತಿರುವುದು, ಅವನ ಪಕ್ಕದಲ್ಲಿ ಅರ್ಧ ಖಾಲಿ ಕೀಟನಾಶಕ ಬಾಟಲಿ ಬಿದ್ದಿರುವುದು ಕಂಡುಬಂದಿದೆ ಎಂದು ಅಧಿಕಾರಿ ಹೇಳಿದರು. ಬಂಗಾಳಿ ಭಾಷೆಯಲ್ಲಿ ಅವನು ಬರೆದಿದ್ದಾನೆಂದು ಹೇಳಲಾದ ಡೆತ್‌fನೋಟ್ ಪಕ್ಕದಲ್ಲಿ ಬಿದ್ದಿರುವುದು ಕಂಡುಬಂದಿದೆ.

“ಅಮ್ಮಾ, ನಾನು ಕಳ್ಳನಲ್ಲ. ನಾನು ಕದ್ದಿಲ್ಲ. ನಾನು ಕಾಯುತ್ತಿದ್ದಾಗ ಚಿಕ್ಕಪ್ಪ (ಅಂಗಡಿಗಾರ) ಸುತ್ತಮುತ್ತ ಇರಲಿಲ್ಲ. ಹಿಂತಿರುಗುವಾಗ ರಸ್ತೆಯಲ್ಲಿ ಬಿದ್ದಿದ್ದ ಕುರ್ಕುರೆ ಪ್ಯಾಕೆಟ್ ಅನ್ನು ಗಮನಿಸಿ ಅದನ್ನು ಎತ್ತಿಕೊಂಡೆ. ನನಗೆ ಕುರ್ಕುರೆ ತುಂಬಾ ಇಷ್ಟ” ಎಂದು ಟಿಪ್ಪಣಿಯಲ್ಲಿ ಹೇಳಲಾಗಿದೆ.

“ಹೊರಡುವ ಮೊದಲು ನಾನು ಹೇಳಿದ ಕೊನೆಯ ಮಾತುಗಳು ಇವು. ದಯವಿಟ್ಟು ಈ ಕೃತ್ಯಕ್ಕೆ (ಕೀಟನಾಶಕ ಸೇವಿಸುವ) ನನ್ನನ್ನು ಕ್ಷಮಿಸಿ”.

ಅವರನ್ನು ತಮ್ಲುಕ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಐಸಿಯುಗೆ ದಾಖಲಿಸಲಾಯಿತು ಆದರೆ ಶೀಘ್ರದಲ್ಲೇ ಪ್ರಾಣ ಬಿಟ್ಟಿದ್ದಾನೆ.

ಬೆಟ್ಟಿಂಗ್ ಅಪ್ಲಿಕೇಶನ್‌ ನಿಷೇಧಿಸುವಂತೆ ಅರ್ಜಿ; ಕೇಂದ್ರಕ್ಕೆ ನೋಟಿಸ್ ಕೊಟ್ಟ ಸುಪ್ರೀಂ ಕೋರ್ಟ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....