Homeಮುಖಪುಟಅಂಗಡಿಯಿಂದ ಚಿಪ್ಸ್ ಪ್ಯಾಕೆಟ್ ಕದ್ದ ಆರೋಪ; ಮನನೊಂದು ಕೀಟನಾಶಕ ಕುಡಿದು ಸಾವನ್ನಪ್ಪಿದ ಬಾಲಕ

ಅಂಗಡಿಯಿಂದ ಚಿಪ್ಸ್ ಪ್ಯಾಕೆಟ್ ಕದ್ದ ಆರೋಪ; ಮನನೊಂದು ಕೀಟನಾಶಕ ಕುಡಿದು ಸಾವನ್ನಪ್ಪಿದ ಬಾಲಕ

- Advertisement -
- Advertisement -

ಅಂಗಡಿಯವನಿಂದ ಚಿಪ್ಸ್ ಪ್ಯಾಕೆಟ್ ಕದ್ದ ಆರೋಪ ಎದುರಿಸುತ್ತಿದ್ದ 12 ವರ್ಷದ ಬಾಲಕ ಕೀಟನಾಶಕ ಸೇವಿಸಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದು, ಕೋಲ್ಕತ್ತಾ ಬಳಿಯ ಪಶ್ಚಿಮ ಮೇದಿನಿಪುರ ಜಿಲ್ಲೆಯ ಪನ್ಸ್ಕುರಾದಲ್ಲಿ ದುರ್ಘನೆ ನಡೆದಿದೆ.

ಗುರುವಾರ ಸಂಜೆ ಪನ್ಸ್ಕುರಾ ಪ್ರದೇಶದ ಗೋಸೈಬರ್ ಬಜಾರ್‌ನಲ್ಲಿರುವ ಅಂಗಡಿಯಿಂದ 7 ನೇ ತರಗತಿಯ ವಿದ್ಯಾರ್ಥಿ ಕೃಷೇಂದು ದಾಸ್ ಅಂಗಡಿ ಮಾಲೀಕ ಶುಭಂಕರ್ ದೀಕ್ಷಿತ್ ಸಿಗದ ಕಾರಣ ಅಂಗಡಿಯಿಂದ ಚಿಪ್ಸ್ ಪ್ಯಾಕೆಟ್ ತೆಗೆದುಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಯಾವುದೇ ಪ್ರತಿಕ್ರಿಯೆಯಿಲ್ಲದೆ ಅವನು “ಚಿಕ್ಕಪ್ಪ ನಾನು ಚಿಪ್ಸ್ ಖರೀದಿಸುತ್ತೇನೆ” ಎಂದು ಪದೇಪದೆ ಕರೆದಿದ್ದನು, ಅಂತಿಮವಾಗಿ ಒಂದು ಪ್ಯಾಕೆಟ್ ಚಿಪ್ಸ್‌ನೊಂದಿಗೆ ಅಂಗಡಿಯಿಂದ ಹೊರಟುಹೋದನು ಎಂದು ಅಧಿಕಾರಿ ಬಾಲಕನ ತಾಯಿ ಹೇಳಿಕೆ ಉಲ್ಲೇಖಿಸಿ ಹೇಳಿದರು.

ದೀಕ್ಷಿತ್ ಬಾಲಕನ ಬೆನ್ನಟ್ಟಿದ್ದಾನೆ ಎಂದು ಆರೋಪಿಸಲಾಗಿದೆ, ಅವರು ಶೀಘ್ರದಲ್ಲೇ ಅಂಗಡಿಗೆ ಹಿಂತಿರುಗಿ, ಕಪಾಳಮೋಕ್ಷ ಮಾಡಿ ಸಾರ್ವಜನಿಕರ ಮುಂದೆ ಬಸ್ಕಿ ಹೊಡೆಯಲು ಹೇಳಿದರು ಎಂದು ಅಧಿಕಾರಿಯು ಕುಟುಂಬದ ದೂರನ್ನು ಉಲ್ಲೇಖಿಸಿ ಹೇಳಿದರು.

ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದರು, ದಾಸ್ ಅವರ ತಾಯಿಯನ್ನು ಸ್ಥಳಕ್ಕೆ ಕರೆಸಲಾಯಿತು. ಅವರು ಸಹ ಬಾಲಕನನ್ನು ಗದರಿಸಿ ಕಪಾಳಮೋಕ್ಷ ಮಾಡಿದರು. ಆದರೆ, ಹುಡುಗ ಅಂಗಡಿಯ ಚಿಪ್ಸ್‌ ಪ್ಯಾಕೆಟ್ ಅನ್ನು ಎತ್ತಿಕೊಂಡು, ನಂತರ ಬಂದು ಹಣ ನೀಡಲು ಯೋಚಿಸಿದ್ದೆ ಎಂದು ಹೇಳಿಕೊಂಡಿದ್ದಾನೆ.

ಅಂಗಡಿಯ ಮಾಲೀಕರ ಒಪ್ಪಿಗೆಯಿಲ್ಲದೆ ಪ್ಯಾಕೆಟ್ ಎತ್ತಿದ್ದಕ್ಕಾಗಿ ಕ್ಷಮೆಯಾಚಿಸಿ ತಕ್ಷಣ ಹಣ ನೀಡಲು ಸಹ ಅವನು ಮುಂದಾದನು. ಆದರೆ, ಅಂಗಡಿಯ ಮಾಲೀಕರು ಅವನು ಸುಳ್ಳು ಹೇಳುತ್ತಿದ್ದಾನೆ ಎಂದು ಆರೋಪಿಸಿದರು.

ನಂತರ ದುಃಖಿತನಾದ ಕೃಷ್ಣೇಂದು ತನ್ನ ತಾಯಿಯೊಂದಿಗೆ ತನ್ನ ಮನೆಗೆ ಹಿಂತಿರುಗಿ, ಒಳಗಿನಿಂದ ತನ್ನ ಕೋಣೆಯ ಬಾಗಿಲನ್ನು ಚಿಲಕ ಹಾಕಿದ್ದಾರೆ. ಬಳಿಕ ಆತ ಬಾಗಿಲು ತೆರೆಯಲಿಲ್ಲ.

ಸ್ವಲ್ಪ ಸಮಯದ ನಂತರ ಅವನ ತಾಯಿ ನೆರೆಹೊರೆಯವರೊಂದಿಗೆ ಬಾಗಿಲು ಒಡೆದು ನೋಡಿದಾಗ ಅವನ ಬಾಯಿಯಿಂದ ನೊರೆ ಬರುತ್ತಿರುವುದು, ಅವನ ಪಕ್ಕದಲ್ಲಿ ಅರ್ಧ ಖಾಲಿ ಕೀಟನಾಶಕ ಬಾಟಲಿ ಬಿದ್ದಿರುವುದು ಕಂಡುಬಂದಿದೆ ಎಂದು ಅಧಿಕಾರಿ ಹೇಳಿದರು. ಬಂಗಾಳಿ ಭಾಷೆಯಲ್ಲಿ ಅವನು ಬರೆದಿದ್ದಾನೆಂದು ಹೇಳಲಾದ ಡೆತ್‌fನೋಟ್ ಪಕ್ಕದಲ್ಲಿ ಬಿದ್ದಿರುವುದು ಕಂಡುಬಂದಿದೆ.

“ಅಮ್ಮಾ, ನಾನು ಕಳ್ಳನಲ್ಲ. ನಾನು ಕದ್ದಿಲ್ಲ. ನಾನು ಕಾಯುತ್ತಿದ್ದಾಗ ಚಿಕ್ಕಪ್ಪ (ಅಂಗಡಿಗಾರ) ಸುತ್ತಮುತ್ತ ಇರಲಿಲ್ಲ. ಹಿಂತಿರುಗುವಾಗ ರಸ್ತೆಯಲ್ಲಿ ಬಿದ್ದಿದ್ದ ಕುರ್ಕುರೆ ಪ್ಯಾಕೆಟ್ ಅನ್ನು ಗಮನಿಸಿ ಅದನ್ನು ಎತ್ತಿಕೊಂಡೆ. ನನಗೆ ಕುರ್ಕುರೆ ತುಂಬಾ ಇಷ್ಟ” ಎಂದು ಟಿಪ್ಪಣಿಯಲ್ಲಿ ಹೇಳಲಾಗಿದೆ.

“ಹೊರಡುವ ಮೊದಲು ನಾನು ಹೇಳಿದ ಕೊನೆಯ ಮಾತುಗಳು ಇವು. ದಯವಿಟ್ಟು ಈ ಕೃತ್ಯಕ್ಕೆ (ಕೀಟನಾಶಕ ಸೇವಿಸುವ) ನನ್ನನ್ನು ಕ್ಷಮಿಸಿ”.

ಅವರನ್ನು ತಮ್ಲುಕ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಐಸಿಯುಗೆ ದಾಖಲಿಸಲಾಯಿತು ಆದರೆ ಶೀಘ್ರದಲ್ಲೇ ಪ್ರಾಣ ಬಿಟ್ಟಿದ್ದಾನೆ.

ಬೆಟ್ಟಿಂಗ್ ಅಪ್ಲಿಕೇಶನ್‌ ನಿಷೇಧಿಸುವಂತೆ ಅರ್ಜಿ; ಕೇಂದ್ರಕ್ಕೆ ನೋಟಿಸ್ ಕೊಟ್ಟ ಸುಪ್ರೀಂ ಕೋರ್ಟ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...