Homeಕರ್ನಾಟಕಬೀದರ್‌: ಆಟವಾಡುತ್ತಿದ್ದಾಗ ಕಾರು ಹರಿದು ಮಗು ಮೃತ್ಯು : ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೀದರ್‌: ಆಟವಾಡುತ್ತಿದ್ದಾಗ ಕಾರು ಹರಿದು ಮಗು ಮೃತ್ಯು : ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

- Advertisement -
- Advertisement -

ಬೀದರ್‌ನಲ್ಲಿ ಹೃದಯವಿದ್ರಾಹಕ ಘಟನೆಯೊಂದು ನಡೆದಿದ್ದು,  ಆಟವಾಡುತ್ತಿದ್ದಾಗ ಕಾರು ಹರಿದು ಎರಡು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಚಾಲಕನ ನಿರ್ಲಕ್ಷ್ಯದ ಆರೋಪ ಕೇಳಿ ಬಂದಿದೆ.

ಬೀದರ್ ನಗರದ ಹಾರೂರಗೇರಿ ಸಮೀಪದ ಡಾ.ಗುರುಪಾದಪ್ಪ ನಾಗಮಾರಪಳ್ಳಿ ಆಸ್ಪತ್ರೆ ಎದುರು ಮಂಗಳವಾರ ಸಂಜೆ ಘಟನೆ ನಡೆದಿದೆ. ಸಿಸಿಟಿವಿಯಲ್ಲಿ ಘಟನೆಯ ದೃಶ್ಯ ಸೆರೆಯಾಗಿದ್ದು, ಇದೀಗ ಈ ಕುರಿತ ವಿಡಿಯೋ  ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ.

ವಕೀಲ ಸತೀಶ ಪಾಟೀಲ ಹಾಗೂ ಸಂಗೀತಾ ದಂಪತಿಯ ಎರಡನೇ ಮಗ ಬಸವಚೇತನ ಮೃತ ಬಾಲಕ. ಬಾಲಕ ಮನೆ ಮುಂದೆ ಓಡಾಡುವಾಗ ಈ ಘಟನೆ ಸಂಭವಿಸಿದೆ.

 

ಘಟನೆಯ ವಿವರ: ಸತೀಶ ಪಾಟೀಲ ಅವರು ಹಾರೂರಗೇರಿಯಲ್ಲಿನ ಸಹೋದರಿಯ ಮನೆಗೆ ಬಂದಿದ್ದರು. ಸತೀಶ ಸಹೋದರಿ, ಸಂಬಂಧಿಕರ  ಜೊತೆ ಮಾತನಾಡುತ್ತಿದ್ದು ಬಳಿಕ ಅವರನ್ನು ಬೀಳ್ಕೊಟ್ಟು ಮನೆಯೊಳಗೆ ಬಂದಿದ್ದರು. ಆದರೆ ಅವರನ್ನು ಹುಡುಕಿಕೊಂಡು ಚಾಕೊಲೇಟ್‌ ತಿನ್ನುತ್ತ ಬಸವಚೇತನ ಮನೆ ಹೊರಗೆ ಹೋಗಿದ್ದ. ಒಂದು ಬದಿ ನಿಂತಿದ್ದ ಬಾಲಕ ಮತ್ತೊಂದು ಕಡೆಗೆ ನಿಧಾನವಾಗಿ ಹೋಗುತ್ತಿದ್ದ. ಈ ವೇಳೆ ದಂತ ವೈದ್ಯ ಡಾ. ಸುನೀಲ ಭಂಡಾರಿ ಅವರ ಇನ್ನೋವಾ ಕಾರು ಚಲಾಯಿಸಿಕೊಂಡು ಬಂದಿದ್ದಾರೆ. ಬಾಲಕ ಬರುವುದನ್ನು ಸುನೀಲ ಭಂಡಾರಿ ಗಮನಿಸಿಲ್ಲ. ಕಾರು ಬಾಲಕನ ಮೇಲೆ ಹರಿದಿದ್ದು, ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಆವರಣದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಘಟನೆಯ ದೃಶ್ಯ ದಾಖಲಾಗಿದ್ದು, ಮಗು ವಾಹನದಡಿಗೆ ಬಿದ್ದ ನಂತರ ಚಾಲಕ ಸ್ಥಳದಿಂದ ಹೇಗೆ ಪರಾರಿಯಾಗಿದ್ದಾನೆ ಎಂಬುದನ್ನು ತೋರಿಸಿದೆ. ಘಟನೆಯ ವೇಳೆ ಸ್ಥಳದಲ್ಲಿದ್ದ ಜನ ಬಾಲಕನ ಬಳಿ ಧಾವಿಸಿ ರಕ್ಷಣೆಗೆ ಪ್ರಯತ್ನಿಸಿದ್ದರು.

ಘಟನೆಗೆ ಕಾರು ಚಾಲಕ ಸುನೀಲ್‌ ಭಂಡಾರಿಯ ನಿರ್ಲಕ್ಷ್ಯದ ಚಾಲನೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಗಾಂಧಿ ಗಂಜ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಇದೇ ರೀತಿಯ ಹೃದಯವಿದ್ರಾವಕ ಘಟನೆಯೊಂದು ಇತ್ತೀಚೆಗೆ ಕಾಸರಗೋಡಿನ ಉಪ್ಪಳದ ಸೋಂಕಾಲ್‌ ಬಳಿ ನಡೆದಿತ್ತು. ಪಾರ್ಕಿಂಗ್‌ ಮಾಡುತ್ತಿದ್ದಾಗ ಒಂದೂವರೆ ವರ್ಷದ ಮಗು ಚಿಕ್ಕಪ್ಪನ ಕಾರಿನಡಿಗೆ ಬಿದ್ದು ಮೃತಪಟ್ಟಿತ್ತು. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ವ್ಯಾಪಕವಾಗಿ ವೈರಲ್‌ ಆಗಿತ್ತು. ಉತ್ತರಪ್ರದೇಶದ  ಶಹಜಹಾನ್‌ಪುರದಲ್ಲಿ ಕಾರನ್ನು ಹಿಮ್ಮುಖವಾಗಿ ತೆಗೆಯುವಾಗ ಕಾರಿನ ಚಕ್ರಗಳ ಅಡಿಯಲ್ಲಿ ಸಿಲುಕಿ 3 ವರ್ಷದ ಮಗು ಮೃತಪಟ್ಟಿತ್ತು. ಪ್ರಕರಣದಲ್ಲಿ ಚಾಲಕನ ನಿರ್ಲಕ್ಷ್ಯದ ಆರೋಪ ಕೇಳಿ ಬಂದಿತ್ತು. ಇತ್ತೀಚೆಗೆ ಬೆಂಗಳೂರಿನಲ್ಲಿ ಟೆಕ್ಕಿಯೊಬ್ಬರು ಅಪಾರ್ಟ್‌ಮೆಂಟ್‌ ಗೇಟ್‌ ಮುಂಭಾಗದಲ್ಲಿ ಮಗು ಆಟವಾಡುತ್ತಿರುವುದನ್ನು ಗಮನಿಸದೆ ಕಾರು ಚಲಾಯಿಸಿದ ಪರಿಣಾಮ ಮಗು ಕಾರಿನಡಿಗೆ ಬಿದ್ದು ಮೃತಪಟ್ಟಿತ್ತು. ಬೆಳ್ಳಂದೂರಿನ ಸಮೃದ್ದಿ ಅಪಾರ್ಟ್‌ಮೆಂಟ್‌ನಲ್ಲಿ ಘಟನೆ ನಡೆದಿದ್ದು, ಈ ಕುರಿತ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇಂತಹ ಹಲವು ಘಟನೆಗಳು ಮತ್ತೆ ಮತ್ತೆ ಮರುಕಳಿಸುತ್ತಿದ್ದು, ವಾಹನ ಚಾಲನೆಯ ವೇಳಿನ ನಿರ್ಲಕ್ಷ್ಯ ಮತ್ತು ಪೋಷಕರು ತಮ್ಮ ಪುಟ್ಟ ಮಕ್ಕಳ ಬಗ್ಗೆ ಕೆಲವೊಮ್ಮೆ ಗಮನಹರಿಸದಿರುವುದು ಇಂತಹ ಘಟನೆಗಳಿಗೆ ಕಾರಣವಾಗುತ್ತಿದೆ.

ಇದನ್ನು ಓದಿ: ರೈಲ್ವೆ ನಿಲ್ದಾಣಗಳಲ್ಲಿ ಮೋದಿ ಪೋಟೋ ಇರುವ ಸೆಲ್ಫಿ ಬೂತ್‌ ನಿರ್ಮಾಣ: ಸಾರ್ವಜನಿಕ ನಿಧಿ ಬಳಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...