Homeಕರ್ನಾಟಕಬೀದರ್‌: ಆಟವಾಡುತ್ತಿದ್ದಾಗ ಕಾರು ಹರಿದು ಮಗು ಮೃತ್ಯು : ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೀದರ್‌: ಆಟವಾಡುತ್ತಿದ್ದಾಗ ಕಾರು ಹರಿದು ಮಗು ಮೃತ್ಯು : ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

- Advertisement -
- Advertisement -

ಬೀದರ್‌ನಲ್ಲಿ ಹೃದಯವಿದ್ರಾಹಕ ಘಟನೆಯೊಂದು ನಡೆದಿದ್ದು,  ಆಟವಾಡುತ್ತಿದ್ದಾಗ ಕಾರು ಹರಿದು ಎರಡು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಚಾಲಕನ ನಿರ್ಲಕ್ಷ್ಯದ ಆರೋಪ ಕೇಳಿ ಬಂದಿದೆ.

ಬೀದರ್ ನಗರದ ಹಾರೂರಗೇರಿ ಸಮೀಪದ ಡಾ.ಗುರುಪಾದಪ್ಪ ನಾಗಮಾರಪಳ್ಳಿ ಆಸ್ಪತ್ರೆ ಎದುರು ಮಂಗಳವಾರ ಸಂಜೆ ಘಟನೆ ನಡೆದಿದೆ. ಸಿಸಿಟಿವಿಯಲ್ಲಿ ಘಟನೆಯ ದೃಶ್ಯ ಸೆರೆಯಾಗಿದ್ದು, ಇದೀಗ ಈ ಕುರಿತ ವಿಡಿಯೋ  ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ.

ವಕೀಲ ಸತೀಶ ಪಾಟೀಲ ಹಾಗೂ ಸಂಗೀತಾ ದಂಪತಿಯ ಎರಡನೇ ಮಗ ಬಸವಚೇತನ ಮೃತ ಬಾಲಕ. ಬಾಲಕ ಮನೆ ಮುಂದೆ ಓಡಾಡುವಾಗ ಈ ಘಟನೆ ಸಂಭವಿಸಿದೆ.

 

ಘಟನೆಯ ವಿವರ: ಸತೀಶ ಪಾಟೀಲ ಅವರು ಹಾರೂರಗೇರಿಯಲ್ಲಿನ ಸಹೋದರಿಯ ಮನೆಗೆ ಬಂದಿದ್ದರು. ಸತೀಶ ಸಹೋದರಿ, ಸಂಬಂಧಿಕರ  ಜೊತೆ ಮಾತನಾಡುತ್ತಿದ್ದು ಬಳಿಕ ಅವರನ್ನು ಬೀಳ್ಕೊಟ್ಟು ಮನೆಯೊಳಗೆ ಬಂದಿದ್ದರು. ಆದರೆ ಅವರನ್ನು ಹುಡುಕಿಕೊಂಡು ಚಾಕೊಲೇಟ್‌ ತಿನ್ನುತ್ತ ಬಸವಚೇತನ ಮನೆ ಹೊರಗೆ ಹೋಗಿದ್ದ. ಒಂದು ಬದಿ ನಿಂತಿದ್ದ ಬಾಲಕ ಮತ್ತೊಂದು ಕಡೆಗೆ ನಿಧಾನವಾಗಿ ಹೋಗುತ್ತಿದ್ದ. ಈ ವೇಳೆ ದಂತ ವೈದ್ಯ ಡಾ. ಸುನೀಲ ಭಂಡಾರಿ ಅವರ ಇನ್ನೋವಾ ಕಾರು ಚಲಾಯಿಸಿಕೊಂಡು ಬಂದಿದ್ದಾರೆ. ಬಾಲಕ ಬರುವುದನ್ನು ಸುನೀಲ ಭಂಡಾರಿ ಗಮನಿಸಿಲ್ಲ. ಕಾರು ಬಾಲಕನ ಮೇಲೆ ಹರಿದಿದ್ದು, ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಆವರಣದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಘಟನೆಯ ದೃಶ್ಯ ದಾಖಲಾಗಿದ್ದು, ಮಗು ವಾಹನದಡಿಗೆ ಬಿದ್ದ ನಂತರ ಚಾಲಕ ಸ್ಥಳದಿಂದ ಹೇಗೆ ಪರಾರಿಯಾಗಿದ್ದಾನೆ ಎಂಬುದನ್ನು ತೋರಿಸಿದೆ. ಘಟನೆಯ ವೇಳೆ ಸ್ಥಳದಲ್ಲಿದ್ದ ಜನ ಬಾಲಕನ ಬಳಿ ಧಾವಿಸಿ ರಕ್ಷಣೆಗೆ ಪ್ರಯತ್ನಿಸಿದ್ದರು.

ಘಟನೆಗೆ ಕಾರು ಚಾಲಕ ಸುನೀಲ್‌ ಭಂಡಾರಿಯ ನಿರ್ಲಕ್ಷ್ಯದ ಚಾಲನೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಗಾಂಧಿ ಗಂಜ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಇದೇ ರೀತಿಯ ಹೃದಯವಿದ್ರಾವಕ ಘಟನೆಯೊಂದು ಇತ್ತೀಚೆಗೆ ಕಾಸರಗೋಡಿನ ಉಪ್ಪಳದ ಸೋಂಕಾಲ್‌ ಬಳಿ ನಡೆದಿತ್ತು. ಪಾರ್ಕಿಂಗ್‌ ಮಾಡುತ್ತಿದ್ದಾಗ ಒಂದೂವರೆ ವರ್ಷದ ಮಗು ಚಿಕ್ಕಪ್ಪನ ಕಾರಿನಡಿಗೆ ಬಿದ್ದು ಮೃತಪಟ್ಟಿತ್ತು. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ವ್ಯಾಪಕವಾಗಿ ವೈರಲ್‌ ಆಗಿತ್ತು. ಉತ್ತರಪ್ರದೇಶದ  ಶಹಜಹಾನ್‌ಪುರದಲ್ಲಿ ಕಾರನ್ನು ಹಿಮ್ಮುಖವಾಗಿ ತೆಗೆಯುವಾಗ ಕಾರಿನ ಚಕ್ರಗಳ ಅಡಿಯಲ್ಲಿ ಸಿಲುಕಿ 3 ವರ್ಷದ ಮಗು ಮೃತಪಟ್ಟಿತ್ತು. ಪ್ರಕರಣದಲ್ಲಿ ಚಾಲಕನ ನಿರ್ಲಕ್ಷ್ಯದ ಆರೋಪ ಕೇಳಿ ಬಂದಿತ್ತು. ಇತ್ತೀಚೆಗೆ ಬೆಂಗಳೂರಿನಲ್ಲಿ ಟೆಕ್ಕಿಯೊಬ್ಬರು ಅಪಾರ್ಟ್‌ಮೆಂಟ್‌ ಗೇಟ್‌ ಮುಂಭಾಗದಲ್ಲಿ ಮಗು ಆಟವಾಡುತ್ತಿರುವುದನ್ನು ಗಮನಿಸದೆ ಕಾರು ಚಲಾಯಿಸಿದ ಪರಿಣಾಮ ಮಗು ಕಾರಿನಡಿಗೆ ಬಿದ್ದು ಮೃತಪಟ್ಟಿತ್ತು. ಬೆಳ್ಳಂದೂರಿನ ಸಮೃದ್ದಿ ಅಪಾರ್ಟ್‌ಮೆಂಟ್‌ನಲ್ಲಿ ಘಟನೆ ನಡೆದಿದ್ದು, ಈ ಕುರಿತ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇಂತಹ ಹಲವು ಘಟನೆಗಳು ಮತ್ತೆ ಮತ್ತೆ ಮರುಕಳಿಸುತ್ತಿದ್ದು, ವಾಹನ ಚಾಲನೆಯ ವೇಳಿನ ನಿರ್ಲಕ್ಷ್ಯ ಮತ್ತು ಪೋಷಕರು ತಮ್ಮ ಪುಟ್ಟ ಮಕ್ಕಳ ಬಗ್ಗೆ ಕೆಲವೊಮ್ಮೆ ಗಮನಹರಿಸದಿರುವುದು ಇಂತಹ ಘಟನೆಗಳಿಗೆ ಕಾರಣವಾಗುತ್ತಿದೆ.

ಇದನ್ನು ಓದಿ: ರೈಲ್ವೆ ನಿಲ್ದಾಣಗಳಲ್ಲಿ ಮೋದಿ ಪೋಟೋ ಇರುವ ಸೆಲ್ಫಿ ಬೂತ್‌ ನಿರ್ಮಾಣ: ಸಾರ್ವಜನಿಕ ನಿಧಿ ಬಳಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...