Homeಕರ್ನಾಟಕಬೀದರ್‌: ಆಟವಾಡುತ್ತಿದ್ದಾಗ ಕಾರು ಹರಿದು ಮಗು ಮೃತ್ಯು : ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೀದರ್‌: ಆಟವಾಡುತ್ತಿದ್ದಾಗ ಕಾರು ಹರಿದು ಮಗು ಮೃತ್ಯು : ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

- Advertisement -
- Advertisement -

ಬೀದರ್‌ನಲ್ಲಿ ಹೃದಯವಿದ್ರಾಹಕ ಘಟನೆಯೊಂದು ನಡೆದಿದ್ದು,  ಆಟವಾಡುತ್ತಿದ್ದಾಗ ಕಾರು ಹರಿದು ಎರಡು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಚಾಲಕನ ನಿರ್ಲಕ್ಷ್ಯದ ಆರೋಪ ಕೇಳಿ ಬಂದಿದೆ.

ಬೀದರ್ ನಗರದ ಹಾರೂರಗೇರಿ ಸಮೀಪದ ಡಾ.ಗುರುಪಾದಪ್ಪ ನಾಗಮಾರಪಳ್ಳಿ ಆಸ್ಪತ್ರೆ ಎದುರು ಮಂಗಳವಾರ ಸಂಜೆ ಘಟನೆ ನಡೆದಿದೆ. ಸಿಸಿಟಿವಿಯಲ್ಲಿ ಘಟನೆಯ ದೃಶ್ಯ ಸೆರೆಯಾಗಿದ್ದು, ಇದೀಗ ಈ ಕುರಿತ ವಿಡಿಯೋ  ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ.

ವಕೀಲ ಸತೀಶ ಪಾಟೀಲ ಹಾಗೂ ಸಂಗೀತಾ ದಂಪತಿಯ ಎರಡನೇ ಮಗ ಬಸವಚೇತನ ಮೃತ ಬಾಲಕ. ಬಾಲಕ ಮನೆ ಮುಂದೆ ಓಡಾಡುವಾಗ ಈ ಘಟನೆ ಸಂಭವಿಸಿದೆ.

 

ಘಟನೆಯ ವಿವರ: ಸತೀಶ ಪಾಟೀಲ ಅವರು ಹಾರೂರಗೇರಿಯಲ್ಲಿನ ಸಹೋದರಿಯ ಮನೆಗೆ ಬಂದಿದ್ದರು. ಸತೀಶ ಸಹೋದರಿ, ಸಂಬಂಧಿಕರ  ಜೊತೆ ಮಾತನಾಡುತ್ತಿದ್ದು ಬಳಿಕ ಅವರನ್ನು ಬೀಳ್ಕೊಟ್ಟು ಮನೆಯೊಳಗೆ ಬಂದಿದ್ದರು. ಆದರೆ ಅವರನ್ನು ಹುಡುಕಿಕೊಂಡು ಚಾಕೊಲೇಟ್‌ ತಿನ್ನುತ್ತ ಬಸವಚೇತನ ಮನೆ ಹೊರಗೆ ಹೋಗಿದ್ದ. ಒಂದು ಬದಿ ನಿಂತಿದ್ದ ಬಾಲಕ ಮತ್ತೊಂದು ಕಡೆಗೆ ನಿಧಾನವಾಗಿ ಹೋಗುತ್ತಿದ್ದ. ಈ ವೇಳೆ ದಂತ ವೈದ್ಯ ಡಾ. ಸುನೀಲ ಭಂಡಾರಿ ಅವರ ಇನ್ನೋವಾ ಕಾರು ಚಲಾಯಿಸಿಕೊಂಡು ಬಂದಿದ್ದಾರೆ. ಬಾಲಕ ಬರುವುದನ್ನು ಸುನೀಲ ಭಂಡಾರಿ ಗಮನಿಸಿಲ್ಲ. ಕಾರು ಬಾಲಕನ ಮೇಲೆ ಹರಿದಿದ್ದು, ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಆವರಣದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಘಟನೆಯ ದೃಶ್ಯ ದಾಖಲಾಗಿದ್ದು, ಮಗು ವಾಹನದಡಿಗೆ ಬಿದ್ದ ನಂತರ ಚಾಲಕ ಸ್ಥಳದಿಂದ ಹೇಗೆ ಪರಾರಿಯಾಗಿದ್ದಾನೆ ಎಂಬುದನ್ನು ತೋರಿಸಿದೆ. ಘಟನೆಯ ವೇಳೆ ಸ್ಥಳದಲ್ಲಿದ್ದ ಜನ ಬಾಲಕನ ಬಳಿ ಧಾವಿಸಿ ರಕ್ಷಣೆಗೆ ಪ್ರಯತ್ನಿಸಿದ್ದರು.

ಘಟನೆಗೆ ಕಾರು ಚಾಲಕ ಸುನೀಲ್‌ ಭಂಡಾರಿಯ ನಿರ್ಲಕ್ಷ್ಯದ ಚಾಲನೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಗಾಂಧಿ ಗಂಜ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಇದೇ ರೀತಿಯ ಹೃದಯವಿದ್ರಾವಕ ಘಟನೆಯೊಂದು ಇತ್ತೀಚೆಗೆ ಕಾಸರಗೋಡಿನ ಉಪ್ಪಳದ ಸೋಂಕಾಲ್‌ ಬಳಿ ನಡೆದಿತ್ತು. ಪಾರ್ಕಿಂಗ್‌ ಮಾಡುತ್ತಿದ್ದಾಗ ಒಂದೂವರೆ ವರ್ಷದ ಮಗು ಚಿಕ್ಕಪ್ಪನ ಕಾರಿನಡಿಗೆ ಬಿದ್ದು ಮೃತಪಟ್ಟಿತ್ತು. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ವ್ಯಾಪಕವಾಗಿ ವೈರಲ್‌ ಆಗಿತ್ತು. ಉತ್ತರಪ್ರದೇಶದ  ಶಹಜಹಾನ್‌ಪುರದಲ್ಲಿ ಕಾರನ್ನು ಹಿಮ್ಮುಖವಾಗಿ ತೆಗೆಯುವಾಗ ಕಾರಿನ ಚಕ್ರಗಳ ಅಡಿಯಲ್ಲಿ ಸಿಲುಕಿ 3 ವರ್ಷದ ಮಗು ಮೃತಪಟ್ಟಿತ್ತು. ಪ್ರಕರಣದಲ್ಲಿ ಚಾಲಕನ ನಿರ್ಲಕ್ಷ್ಯದ ಆರೋಪ ಕೇಳಿ ಬಂದಿತ್ತು. ಇತ್ತೀಚೆಗೆ ಬೆಂಗಳೂರಿನಲ್ಲಿ ಟೆಕ್ಕಿಯೊಬ್ಬರು ಅಪಾರ್ಟ್‌ಮೆಂಟ್‌ ಗೇಟ್‌ ಮುಂಭಾಗದಲ್ಲಿ ಮಗು ಆಟವಾಡುತ್ತಿರುವುದನ್ನು ಗಮನಿಸದೆ ಕಾರು ಚಲಾಯಿಸಿದ ಪರಿಣಾಮ ಮಗು ಕಾರಿನಡಿಗೆ ಬಿದ್ದು ಮೃತಪಟ್ಟಿತ್ತು. ಬೆಳ್ಳಂದೂರಿನ ಸಮೃದ್ದಿ ಅಪಾರ್ಟ್‌ಮೆಂಟ್‌ನಲ್ಲಿ ಘಟನೆ ನಡೆದಿದ್ದು, ಈ ಕುರಿತ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇಂತಹ ಹಲವು ಘಟನೆಗಳು ಮತ್ತೆ ಮತ್ತೆ ಮರುಕಳಿಸುತ್ತಿದ್ದು, ವಾಹನ ಚಾಲನೆಯ ವೇಳಿನ ನಿರ್ಲಕ್ಷ್ಯ ಮತ್ತು ಪೋಷಕರು ತಮ್ಮ ಪುಟ್ಟ ಮಕ್ಕಳ ಬಗ್ಗೆ ಕೆಲವೊಮ್ಮೆ ಗಮನಹರಿಸದಿರುವುದು ಇಂತಹ ಘಟನೆಗಳಿಗೆ ಕಾರಣವಾಗುತ್ತಿದೆ.

ಇದನ್ನು ಓದಿ: ರೈಲ್ವೆ ನಿಲ್ದಾಣಗಳಲ್ಲಿ ಮೋದಿ ಪೋಟೋ ಇರುವ ಸೆಲ್ಫಿ ಬೂತ್‌ ನಿರ್ಮಾಣ: ಸಾರ್ವಜನಿಕ ನಿಧಿ ಬಳಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...