Homeಮುಖಪುಟಕಲುಷಿತ ನೀರು ಸೇವಿಸಿ ಬಾಲಕ ಸಾವು: ನ್ಯಾಯಾಂಗ ತನಿಖೆಗೆ ಸಿಪಿಐ(ಎಂಎಲ್) ಲಿಬರೇಶನ್ ಆಗ್ರಹ

ಕಲುಷಿತ ನೀರು ಸೇವಿಸಿ ಬಾಲಕ ಸಾವು: ನ್ಯಾಯಾಂಗ ತನಿಖೆಗೆ ಸಿಪಿಐ(ಎಂಎಲ್) ಲಿಬರೇಶನ್ ಆಗ್ರಹ

- Advertisement -
- Advertisement -

ದೇವದುರ್ಗ ತಾಲೂಕಿನ ರೇಕಲಮರಡಿಯಲ್ಲಿ ಕಲುಷಿತ ನೀರು ಕುಡಿದು ಬಾಲಕ ಮೃತಪಟ್ಟು, 30 ಜನರು ಅಸ್ವಸ್ಥಗೊಂಡ ಘಟನೆಯನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಬೇಕು ಎಂದು ಸಿಪಿಐ(ಎಂಎಲ್) ಲಿಬರೇಶನ್ ರಾಜ್ಯ ಸಮಿತಿ ಆಗ್ರಹಿಸಿದೆ.

ರಾಜ್ಯ ಸಮಿತಿ ಸದಸ್ಯ ನಾಗರಾಜ ಪೂಜಾರ್, ತಾಲೂಕು ಕಾರ್ಯದರ್ಶಿ ಬಸವರಾಜ ಬೆಳಗುರ್ಕಿ ಜಂಟಿ ಹೇಳಿಕೆ ನೀಡಿದ್ದು, “ಕಳೆದ ನಾಲ್ಕಾರು ವರ್ಷಗಳಿಂದ ಕುಡಿವ ನೀರಿನ ಟ್ಯಾಂಕ್ ಸ್ವಚ್ಛಗೊಳಿಸದೇ ಇರುವುದು ಹಾಗೂ ಪೈಪ್‌ಲೈನ್‌ನಲ್ಲಿ ಚರಂಡಿ ನೀರು ಮಿಶ್ರಣವಾಗಿ ಪೂರೈಕೆಯಾಗಿದ್ದೆ ಈ ದುರಂತಕ್ಕೆ ಕಾರಣವಾಗಿದೆ. ಈ ದುರ್ಘಟನೆಗೆ ತಾಲೂಕು ಹಾಗೂ ಜಿಲ್ಲಾಡಳಿತದ ಆಡಳಿತ ವೈಫಲ್ಯವೇ ಕಾರಣವಾಗಿದ್ದು, ನ್ಯಾಯಾಂಗ ತನಿಖೆಗೆ ಒಳಪಡಿಸಿ ತಪ್ಪಿತಸ್ಥರ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

ರಾಯಚೂರು ಜಿಲ್ಲೆಯಲ್ಲೇ ಅತ್ಯಂತ ಹಿಂದುಳಿದ ತಾಲೂಕು ಆಗಿರುವ ದೇವದುರ್ಗ ವ್ಯಾಪ್ತಿಯಲ್ಲಿ ಕೃಷ್ಣಾ ನದಿಯೇ ಹರಿದುಹೋಗಿದ್ದರೂ ಸಮರ್ಪಕ ಕುಡಿವ ನೀರು ಪೂರೈಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ. ರೇಕಲಮರಡಿ ಗ್ರಾಮದಲ್ಲಿ ಕಳೆದ ಹಲವು ವರ್ಷಗಳಿಂದ ಕುಡಿವ ನೀರಿಗೆ ತತ್ವಾರವಿದ್ದು, ಶುದ್ಧ ನೀರು ಪೂರೈಕೆಯಾಗುತ್ತಿಲ್ಲ. ನೀರಿನಲ್ಲಿ ಆರ್ಸೆನಿಕ್ ಅಂಶವಿದ್ದರೂ ಅಧಿಕಾರಿಗಳು ಗಮನ ಹರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಗ್ರಾಮದಲ್ಲಿ 50 ವರ್ಷ ವಯಸ್ಸಾದವರು ಮೊಣಕಾಲು, ಕೀಲು ಹಾಗೂ ಮೈಕೈಬೇನೆ ಸೇರಿದಂತೆ ಇನ್ನಿತರೆ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಇನ್ನೂ ಗ್ರಾಮೀಣ ಪ್ರದೇಶದ ಜನರಿಗೆ ತಾಲೂಕು, ಜಿಲ್ಲಾಡಳಿತಗಳು ಕನಿಷ್ಠ ಶುದ್ಧ ಕುಡಿವ ನೀರು ಪೂರೈಸಲಾರದಷ್ಟು ಅಸಮರ್ಥವಾಗಿರುವುದು ನಾಚಿಕೆಗೇಡಿತನದ ಸಂಗತಿಯಾಗಿದೆ ಎಂದಿದ್ದಾರೆ.

ರೇಕಲಮರಡಿ ಘಟನೆಯಲ್ಲಿ ಮೃತಪಟ್ಟ ಬಾಲಕನ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು, ಗ್ರಾಮದಲ್ಲಿ ಶುದ್ಧ ಕುಡಿವ ನೀರಿನ ಘಟಕವನ್ನು ಪುನಶ್ಚೇತನಗೊಳಿಸಿ ಸಮರ್ಪಕ ಪೂರೈಕೆ ಮಾಡಬೇಕು, ಇಂತಹ ಘಟನೆಗಳು ಮರುಕಳಿಸದಂತೆ ನಿಗಾವಹಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ದೇವದುರ್ಗದಲ್ಲಿ ಕಲುಷಿತ ನೀರು ಕುಡಿದ ಬಾಲಕ ಸಾವು, ಹಲವರು ಅಸ್ವಸ್ಥ: ಈ ದುರಂತಗಳಿಗೆ ಕೊನೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...