Homeಕರ್ನಾಟಕದೇವದುರ್ಗದಲ್ಲಿ ಕಲುಷಿತ ನೀರು ಕುಡಿದ ಬಾಲಕ ಸಾವು, ಹಲವರು ಅಸ್ವಸ್ಥ: ಈ ದುರಂತಗಳಿಗೆ ಕೊನೆ ಇಲ್ಲವೇ?

ದೇವದುರ್ಗದಲ್ಲಿ ಕಲುಷಿತ ನೀರು ಕುಡಿದ ಬಾಲಕ ಸಾವು, ಹಲವರು ಅಸ್ವಸ್ಥ: ಈ ದುರಂತಗಳಿಗೆ ಕೊನೆ ಇಲ್ಲವೇ?

- Advertisement -
- Advertisement -

ರಾಯಚೂರು ಜಿಲ್ಲೆಯಲ್ಲಿ ತಮ್ಮದಲ್ಲದ ತಪ್ಪಿಗೆ ಮತ್ತೊಂದು ಮುಗ್ದ ಜೀವ ಕೊನೆಯುಸಿರೆಳೆದಿದೆ. ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಐದು ವರ್ಷದ ಬಾಲಕ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ. ಇದು ಜಿಲ್ಲೆಯಲ್ಲಿ ಕುಲುಷಿತ ನೀರು ಕುಡಿದ ಪರಿಣಾಮ ಸಾವನಪ್ಪುತ್ತಿರುವವ ಪಟ್ಟಿಗೆ ಮತ್ತೊಂದು ಸೇರ್ಪಡೆಯಾಗಿದ್ದು, ಈ ದುರಂತಗಳಿಗೆ ಕೊನೆ ಇಲ್ಲವೇ ಎಂಬ ಆಕ್ರೋಶಕ್ಕೆ ಕಾರಣವಾಗಿದೆ.

ರೇಕಲಮರಡಿ ಗ್ರಾಮದಲ್ಲಿರುವ ಓವರ್‌ಹೆಡ್‌ ಟ್ಯಾಂಕ್‌ ಅನ್ನು ಹಲವು ವರ್ಷಗಳಿಂದ ಸ್ವಚ್ಚಗೊಳಿಸಿಲ್ಲ. ಅದೇ ಟ್ಯಾಂಕ್‌ನಿಂದ ಗ್ರಾಮಕ್ಕೆ ಕುಡಿಯುವ ನೀರು ಪೂರೈಸಲಾಗುತ್ತಿದೆ. ಟ್ಯಾಂಕ್‌ ಸ್ವಚ್ಛಗೊಳಿಸದ ಕಾರಣ, ನೀರು ಕಲುಷಿತಗೊಂಡಿದ್ದು, ಆ ನೀರು ಕುಡಿದರು ಅಸ್ವಸ್ಥರಾಗಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಅಸ್ವಸ್ಥರಾದವರಲ್ಲಿ 11 ಮಂದಿಯನ್ನು ರಾಯಚೂರಿನ ರಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಬಾಲಕ ಹನುಮಂತ ಈರಪ್ಪ ಮೃತಪಟ್ಟಿದ್ದಾನೆ. ಉಳಿದವರನ್ನು ಅರಕೇರಾ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ದೇವದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ಓವರ್‌ಹೆಡ್‌ ಟ್ಯಾಂಕ್‌ ಅರ್ಧದಷ್ಟು ಮಾತ್ರ ತುಂಬುತ್ತಿದೆ. ಗ್ರಾಮಕ್ಕೆ ಡೆಡ್ ಸ್ಟೋರೇಜ್ ನೀರು ಪೂರೈಕೆಯಾಗುತ್ತಿದೆ. ಹೀಗಾಗಿ, ಘಟನೆ ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಟ್ಯಾಂಕ್‌ ಅನ್ನು ಸ್ವಚ್ಚಗೊಳಿಸದ ಗ್ರಾಮ ಪಂಚಾಯತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷದ ಜೂನ್ ತಿಂಗಳಿನಲ್ಲಿ ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮಲ್ಲಮ್ಮ, ಅಬ್ದುಲ್ ಗಫಾರ್ ಮತ್ತು ಮೊಹಮದ್ ನೂರ್ ಎಂಬ ಮೂವರು ಸಾವನ್ನಪ್ಪಿದ್ದರು. ಹಲವು ಮಂದಿ ಮೂತ್ರಪಿಂಡದ ಸಮಸ್ಯೆ ಸೇರಿದಂತೆ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರಸಭೆಯ ನಿರ್ಲಕ್ಷಕ್ಕೆ ರಾಯಚೂರು ನಾಗರಿಕ ವೇದಿಕೆಯು ರಾಯಚೂರು ಬಂದ್ ನಡೆಸಿತ್ತು.

ರಾಯಚೂರು ನಗರಕ್ಕೆ ಕುಡಿಯುವ ನೀರಿನ ಸರಬರಾಜು ಮಾಡುವ ರಾಂಪುರದಲ್ಲಿರುವ ನೀರು ಶುದ್ಧಿಕರಣ ಘಟಕವನ್ನು ಕಳೆದ 16 ವರ್ಷಗಳಿಂದ ಸ್ವಚ್ಛಗೊಳಿಸಲಾಗಿಲ್ಲ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.

2022ರ  ಜುಲೈ ತಿಂಗಳಿನಲ್ಲಿ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಗೋರ್ಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಲ್ಕಂದಿನ್ನಿ ಮತ್ತು ಜುಕೂರ ಗ್ರಾಮಗಳಲ್ಲಿ ಕಲುಷಿತ ನೀರು ಸೇವಿಸಿ ಇದು 8 ಮಂದಿ ಸಾವಿಗೀಡಾಗಿ, ಹಲವರು ಅನಾರೋಗ್ಯಕ್ಕೊಳಗಾಗಿದ್ದರು. 

ಆ ಸಂದರ್ಭದಲ್ಲಿ ಮಾತನಾಡಿದ್ದ ಅಂದಿನ ಸಿಎಂ ಬಸವರಾಜ ಬೊಮ್ಮಾಯಿಯವರು “ರಾಯಚೂರಿನ ಎಲ್ಲಾ ವಾರ್ಡ್‌ಗಳ ನೀರನ್ನು ಪರೀಕ್ಷೆ ಮಾಡಿಸಬೇಕು. ಕುಡಿಯುವ ನೀರಿನ ಸರ್ಟಿಫಿಕೇಷನ್ ಆಗಬೇಕು. ಇದರಲ್ಲಿ ಅಧಿಕಾರಿಗಳ ಲೋಪದೋಷ ಇದೆಯಾ ಎಂಬುದನ್ನು ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತದೆ. ತಪಿತಸ್ಥರು ಕಂಡುಬಂದರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೆವೆ. ದುರಂತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ನಿಧಿಯಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲು ನಿರ್ಧಾರಿಸಲಾಗಿದೆ” ಎಂದಿದ್ದರು.

ಕಳೆದ ವರ್ಷದ ಜುಲೈನಲ್ಲಿ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಗೋನಾಳ ಗ್ರಾಮದಲ್ಲಿ ನಲ್ಲಿ ನೀರಿನಲ್ಲಿ ಬಂದ ಕಲುಷಿತ ನೀರನ್ನು ಸೇವಿಸಿ 11 ವರ್ಷದ ಬಾಲಕಿ ಮೃತಪಟ್ಟು 20 ಕ್ಕೂ ಹೆಚ್ಚು ಜನರು ವಾಂತಿ, ಭೇದಿಯಿಂದ ಅಸ್ವಸ್ಥರಾಗಿದ್ದರು.

ಹೋರಾಟಗಾರರಾದ ರಜಾಕ್ ಉಸ್ತಾದ್‌ರವರು ಈ ಕುರಿತು ನಾನುಗೌರಿ.ಕಾಂನೊಂದಿಗೆ ಮಾತನಾಡಿ, “ಈ ರೀತಿಯಾಗಿ ಪದೇ ಪದೇ ಕಲುಷಿತ ನೀರಿನಿಂದಾಗಿ ಸಾವಿನ ಪ್ರಕರಣಗಳು ಹೆಚ್ಚುತ್ತಲೇ ಇದ್ದರೂ ಸ್ಥಳೀಯಾಡಳಿತ ಮತ್ತು ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ. ಜಿಲ್ಲಾ ಪಂಚಾಯತ್‌ ಸಿಇಓರವರು ನೀರು ಸರಬರಾಜು ಇಲಾಖೆ ಇಂಜಿನಿಯರ್‌ಗಳ ಮೇಲೆ ಕ್ರಮ ತೆಗೆದುಕೊಳ್ಳುವ ಬದಲು ಪಿಡಿಒ ಒಬ್ಬರನ್ನು ಅಮಾನತು ಮಾಡಿದರೆ ಸಮಸ್ಯೆ ಬಗೆಹರಿಯುವುದಿಲ್ಲ. ಇಡೀ ಅಧಿಕಾರಿಗಳಿಗೆ ಚುರುಕು ಮುಟ್ಟಿಸಬೇಕು. ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳು ಈ ಕುರಿತು ಎಚ್ಚೆತ್ತುಕೊಳ್ಳುವಂತೆ ಮಾಡಬೇಕು” ಎಂದರು.

ಎಲ್ಲಾ ಇಲಾಖೆಯ ಅಧಿಕಾರಿಗಳು ಜಡ್ಡುಗಟ್ಟಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಅವರೊಂದಿಗೆ ಸಭೆ ನಡೆಸಿದರೆ ಯಾವುದೇ ಪ್ರಯೋಜನವಾಗುವುದಿಲ್ಲ. ನೇರವಾಗಿ ಜಿಲ್ಲಾ ಮಟ್ಟದಲ್ಲಿ ಜನರ ನಡುವೆಯೇ ಸಭೆ ನಡೆಸಿ ಸಮಸ್ಯೆಗಳನ್ನು ಆಲಿಸಬೇಕು. ಸಮರ್ಪಕವಾಗಿ ಕೆಲಸ ಮಾಡುವಂತೆ ಎಚ್ಚರಿಕೆ ನೀಡಬೇಕು. ಅಲ್ಲದೇ ಸ್ಥಳೀಯ ಆಸ್ಪತ್ರೆಗಳನ್ನು ಸಮರ್ಪಕವಾಗಿಡಬೇಕು. ಈ ರೀತಿಯಾಗಿ ಇಂತಹ ಘಟನೆಗಳು ನಡೆಯದಂತೆ ಉಳಿದವರೆಲ್ಲರೂ ಎಚ್ಚೆತ್ತುಕೊಳ್ಳಬೇಕು ಎಂದರು.

ಕನಿಷ್ಟ ವಾಟರ್‌ ಟ್ಯಾಂಕ್‌ಗಳನ್ನು ಆಗಾಗ್ಗೆ ಶುದ್ದೀಕರಣ ಮಾಡಲು ಮುಂದಾಗದಿರುವುದು ದೊಡ್ಡ ದುರಂತಗಳಿಗೆ ಎಡೆ ಮಾಡಿಕೊಡುತ್ತಿವೆ. ತಮ್ಮ ತಪ್ಪಿಲ್ಲದ ಮುಗ್ದ ಜೀವಗಳು ಬಲಿಯಾಗುತ್ತಿವೆ. ಈ ಕೂಡಲೇ ಸರ್ಕಾರ ಎಚೆತ್ತುಕೊಂಡು ಸ್ಥಳೀಯಾಡಳಿತಗಳಿಗೆ ಸ್ಪಷ್ಟ ಸೂಚನೆ ನೀಡಬೇಕಾಗಿದೆ. ಆ ಮೂಲಕ ಇಂತಹ ಘಟನೆಗಳು ಮತ್ತೆ ಜರುಗದಂತೆ ತಡೆಯಬೇಕಿದೆ.

ಇದನ್ನೂ ಓದಿ: ರಾಯಚೂರು: ಕಲುಷಿತ ನೀರು ಸೇವಿಸಿ ಮೂವರ ಸಾವು ಪ್ರಕರಣ, ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...