Homeಕರ್ನಾಟಕದೇವದುರ್ಗದಲ್ಲಿ ಕಲುಷಿತ ನೀರು ಕುಡಿದ ಬಾಲಕ ಸಾವು, ಹಲವರು ಅಸ್ವಸ್ಥ: ಈ ದುರಂತಗಳಿಗೆ ಕೊನೆ ಇಲ್ಲವೇ?

ದೇವದುರ್ಗದಲ್ಲಿ ಕಲುಷಿತ ನೀರು ಕುಡಿದ ಬಾಲಕ ಸಾವು, ಹಲವರು ಅಸ್ವಸ್ಥ: ಈ ದುರಂತಗಳಿಗೆ ಕೊನೆ ಇಲ್ಲವೇ?

- Advertisement -
- Advertisement -

ರಾಯಚೂರು ಜಿಲ್ಲೆಯಲ್ಲಿ ತಮ್ಮದಲ್ಲದ ತಪ್ಪಿಗೆ ಮತ್ತೊಂದು ಮುಗ್ದ ಜೀವ ಕೊನೆಯುಸಿರೆಳೆದಿದೆ. ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಐದು ವರ್ಷದ ಬಾಲಕ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ. ಇದು ಜಿಲ್ಲೆಯಲ್ಲಿ ಕುಲುಷಿತ ನೀರು ಕುಡಿದ ಪರಿಣಾಮ ಸಾವನಪ್ಪುತ್ತಿರುವವ ಪಟ್ಟಿಗೆ ಮತ್ತೊಂದು ಸೇರ್ಪಡೆಯಾಗಿದ್ದು, ಈ ದುರಂತಗಳಿಗೆ ಕೊನೆ ಇಲ್ಲವೇ ಎಂಬ ಆಕ್ರೋಶಕ್ಕೆ ಕಾರಣವಾಗಿದೆ.

ರೇಕಲಮರಡಿ ಗ್ರಾಮದಲ್ಲಿರುವ ಓವರ್‌ಹೆಡ್‌ ಟ್ಯಾಂಕ್‌ ಅನ್ನು ಹಲವು ವರ್ಷಗಳಿಂದ ಸ್ವಚ್ಚಗೊಳಿಸಿಲ್ಲ. ಅದೇ ಟ್ಯಾಂಕ್‌ನಿಂದ ಗ್ರಾಮಕ್ಕೆ ಕುಡಿಯುವ ನೀರು ಪೂರೈಸಲಾಗುತ್ತಿದೆ. ಟ್ಯಾಂಕ್‌ ಸ್ವಚ್ಛಗೊಳಿಸದ ಕಾರಣ, ನೀರು ಕಲುಷಿತಗೊಂಡಿದ್ದು, ಆ ನೀರು ಕುಡಿದರು ಅಸ್ವಸ್ಥರಾಗಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಅಸ್ವಸ್ಥರಾದವರಲ್ಲಿ 11 ಮಂದಿಯನ್ನು ರಾಯಚೂರಿನ ರಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಬಾಲಕ ಹನುಮಂತ ಈರಪ್ಪ ಮೃತಪಟ್ಟಿದ್ದಾನೆ. ಉಳಿದವರನ್ನು ಅರಕೇರಾ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ದೇವದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ಓವರ್‌ಹೆಡ್‌ ಟ್ಯಾಂಕ್‌ ಅರ್ಧದಷ್ಟು ಮಾತ್ರ ತುಂಬುತ್ತಿದೆ. ಗ್ರಾಮಕ್ಕೆ ಡೆಡ್ ಸ್ಟೋರೇಜ್ ನೀರು ಪೂರೈಕೆಯಾಗುತ್ತಿದೆ. ಹೀಗಾಗಿ, ಘಟನೆ ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಟ್ಯಾಂಕ್‌ ಅನ್ನು ಸ್ವಚ್ಚಗೊಳಿಸದ ಗ್ರಾಮ ಪಂಚಾಯತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷದ ಜೂನ್ ತಿಂಗಳಿನಲ್ಲಿ ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮಲ್ಲಮ್ಮ, ಅಬ್ದುಲ್ ಗಫಾರ್ ಮತ್ತು ಮೊಹಮದ್ ನೂರ್ ಎಂಬ ಮೂವರು ಸಾವನ್ನಪ್ಪಿದ್ದರು. ಹಲವು ಮಂದಿ ಮೂತ್ರಪಿಂಡದ ಸಮಸ್ಯೆ ಸೇರಿದಂತೆ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರಸಭೆಯ ನಿರ್ಲಕ್ಷಕ್ಕೆ ರಾಯಚೂರು ನಾಗರಿಕ ವೇದಿಕೆಯು ರಾಯಚೂರು ಬಂದ್ ನಡೆಸಿತ್ತು.

ರಾಯಚೂರು ನಗರಕ್ಕೆ ಕುಡಿಯುವ ನೀರಿನ ಸರಬರಾಜು ಮಾಡುವ ರಾಂಪುರದಲ್ಲಿರುವ ನೀರು ಶುದ್ಧಿಕರಣ ಘಟಕವನ್ನು ಕಳೆದ 16 ವರ್ಷಗಳಿಂದ ಸ್ವಚ್ಛಗೊಳಿಸಲಾಗಿಲ್ಲ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.

2022ರ  ಜುಲೈ ತಿಂಗಳಿನಲ್ಲಿ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಗೋರ್ಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಲ್ಕಂದಿನ್ನಿ ಮತ್ತು ಜುಕೂರ ಗ್ರಾಮಗಳಲ್ಲಿ ಕಲುಷಿತ ನೀರು ಸೇವಿಸಿ ಇದು 8 ಮಂದಿ ಸಾವಿಗೀಡಾಗಿ, ಹಲವರು ಅನಾರೋಗ್ಯಕ್ಕೊಳಗಾಗಿದ್ದರು. 

ಆ ಸಂದರ್ಭದಲ್ಲಿ ಮಾತನಾಡಿದ್ದ ಅಂದಿನ ಸಿಎಂ ಬಸವರಾಜ ಬೊಮ್ಮಾಯಿಯವರು “ರಾಯಚೂರಿನ ಎಲ್ಲಾ ವಾರ್ಡ್‌ಗಳ ನೀರನ್ನು ಪರೀಕ್ಷೆ ಮಾಡಿಸಬೇಕು. ಕುಡಿಯುವ ನೀರಿನ ಸರ್ಟಿಫಿಕೇಷನ್ ಆಗಬೇಕು. ಇದರಲ್ಲಿ ಅಧಿಕಾರಿಗಳ ಲೋಪದೋಷ ಇದೆಯಾ ಎಂಬುದನ್ನು ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತದೆ. ತಪಿತಸ್ಥರು ಕಂಡುಬಂದರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೆವೆ. ದುರಂತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ನಿಧಿಯಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲು ನಿರ್ಧಾರಿಸಲಾಗಿದೆ” ಎಂದಿದ್ದರು.

ಕಳೆದ ವರ್ಷದ ಜುಲೈನಲ್ಲಿ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಗೋನಾಳ ಗ್ರಾಮದಲ್ಲಿ ನಲ್ಲಿ ನೀರಿನಲ್ಲಿ ಬಂದ ಕಲುಷಿತ ನೀರನ್ನು ಸೇವಿಸಿ 11 ವರ್ಷದ ಬಾಲಕಿ ಮೃತಪಟ್ಟು 20 ಕ್ಕೂ ಹೆಚ್ಚು ಜನರು ವಾಂತಿ, ಭೇದಿಯಿಂದ ಅಸ್ವಸ್ಥರಾಗಿದ್ದರು.

ಹೋರಾಟಗಾರರಾದ ರಜಾಕ್ ಉಸ್ತಾದ್‌ರವರು ಈ ಕುರಿತು ನಾನುಗೌರಿ.ಕಾಂನೊಂದಿಗೆ ಮಾತನಾಡಿ, “ಈ ರೀತಿಯಾಗಿ ಪದೇ ಪದೇ ಕಲುಷಿತ ನೀರಿನಿಂದಾಗಿ ಸಾವಿನ ಪ್ರಕರಣಗಳು ಹೆಚ್ಚುತ್ತಲೇ ಇದ್ದರೂ ಸ್ಥಳೀಯಾಡಳಿತ ಮತ್ತು ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ. ಜಿಲ್ಲಾ ಪಂಚಾಯತ್‌ ಸಿಇಓರವರು ನೀರು ಸರಬರಾಜು ಇಲಾಖೆ ಇಂಜಿನಿಯರ್‌ಗಳ ಮೇಲೆ ಕ್ರಮ ತೆಗೆದುಕೊಳ್ಳುವ ಬದಲು ಪಿಡಿಒ ಒಬ್ಬರನ್ನು ಅಮಾನತು ಮಾಡಿದರೆ ಸಮಸ್ಯೆ ಬಗೆಹರಿಯುವುದಿಲ್ಲ. ಇಡೀ ಅಧಿಕಾರಿಗಳಿಗೆ ಚುರುಕು ಮುಟ್ಟಿಸಬೇಕು. ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳು ಈ ಕುರಿತು ಎಚ್ಚೆತ್ತುಕೊಳ್ಳುವಂತೆ ಮಾಡಬೇಕು” ಎಂದರು.

ಎಲ್ಲಾ ಇಲಾಖೆಯ ಅಧಿಕಾರಿಗಳು ಜಡ್ಡುಗಟ್ಟಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಅವರೊಂದಿಗೆ ಸಭೆ ನಡೆಸಿದರೆ ಯಾವುದೇ ಪ್ರಯೋಜನವಾಗುವುದಿಲ್ಲ. ನೇರವಾಗಿ ಜಿಲ್ಲಾ ಮಟ್ಟದಲ್ಲಿ ಜನರ ನಡುವೆಯೇ ಸಭೆ ನಡೆಸಿ ಸಮಸ್ಯೆಗಳನ್ನು ಆಲಿಸಬೇಕು. ಸಮರ್ಪಕವಾಗಿ ಕೆಲಸ ಮಾಡುವಂತೆ ಎಚ್ಚರಿಕೆ ನೀಡಬೇಕು. ಅಲ್ಲದೇ ಸ್ಥಳೀಯ ಆಸ್ಪತ್ರೆಗಳನ್ನು ಸಮರ್ಪಕವಾಗಿಡಬೇಕು. ಈ ರೀತಿಯಾಗಿ ಇಂತಹ ಘಟನೆಗಳು ನಡೆಯದಂತೆ ಉಳಿದವರೆಲ್ಲರೂ ಎಚ್ಚೆತ್ತುಕೊಳ್ಳಬೇಕು ಎಂದರು.

ಕನಿಷ್ಟ ವಾಟರ್‌ ಟ್ಯಾಂಕ್‌ಗಳನ್ನು ಆಗಾಗ್ಗೆ ಶುದ್ದೀಕರಣ ಮಾಡಲು ಮುಂದಾಗದಿರುವುದು ದೊಡ್ಡ ದುರಂತಗಳಿಗೆ ಎಡೆ ಮಾಡಿಕೊಡುತ್ತಿವೆ. ತಮ್ಮ ತಪ್ಪಿಲ್ಲದ ಮುಗ್ದ ಜೀವಗಳು ಬಲಿಯಾಗುತ್ತಿವೆ. ಈ ಕೂಡಲೇ ಸರ್ಕಾರ ಎಚೆತ್ತುಕೊಂಡು ಸ್ಥಳೀಯಾಡಳಿತಗಳಿಗೆ ಸ್ಪಷ್ಟ ಸೂಚನೆ ನೀಡಬೇಕಾಗಿದೆ. ಆ ಮೂಲಕ ಇಂತಹ ಘಟನೆಗಳು ಮತ್ತೆ ಜರುಗದಂತೆ ತಡೆಯಬೇಕಿದೆ.

ಇದನ್ನೂ ಓದಿ: ರಾಯಚೂರು: ಕಲುಷಿತ ನೀರು ಸೇವಿಸಿ ಮೂವರ ಸಾವು ಪ್ರಕರಣ, ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...