Homeಕರ್ನಾಟಕದೇವದುರ್ಗದಲ್ಲಿ ಕಲುಷಿತ ನೀರು ಕುಡಿದ ಬಾಲಕ ಸಾವು, ಹಲವರು ಅಸ್ವಸ್ಥ: ಈ ದುರಂತಗಳಿಗೆ ಕೊನೆ ಇಲ್ಲವೇ?

ದೇವದುರ್ಗದಲ್ಲಿ ಕಲುಷಿತ ನೀರು ಕುಡಿದ ಬಾಲಕ ಸಾವು, ಹಲವರು ಅಸ್ವಸ್ಥ: ಈ ದುರಂತಗಳಿಗೆ ಕೊನೆ ಇಲ್ಲವೇ?

- Advertisement -
- Advertisement -

ರಾಯಚೂರು ಜಿಲ್ಲೆಯಲ್ಲಿ ತಮ್ಮದಲ್ಲದ ತಪ್ಪಿಗೆ ಮತ್ತೊಂದು ಮುಗ್ದ ಜೀವ ಕೊನೆಯುಸಿರೆಳೆದಿದೆ. ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಐದು ವರ್ಷದ ಬಾಲಕ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ. ಇದು ಜಿಲ್ಲೆಯಲ್ಲಿ ಕುಲುಷಿತ ನೀರು ಕುಡಿದ ಪರಿಣಾಮ ಸಾವನಪ್ಪುತ್ತಿರುವವ ಪಟ್ಟಿಗೆ ಮತ್ತೊಂದು ಸೇರ್ಪಡೆಯಾಗಿದ್ದು, ಈ ದುರಂತಗಳಿಗೆ ಕೊನೆ ಇಲ್ಲವೇ ಎಂಬ ಆಕ್ರೋಶಕ್ಕೆ ಕಾರಣವಾಗಿದೆ.

ರೇಕಲಮರಡಿ ಗ್ರಾಮದಲ್ಲಿರುವ ಓವರ್‌ಹೆಡ್‌ ಟ್ಯಾಂಕ್‌ ಅನ್ನು ಹಲವು ವರ್ಷಗಳಿಂದ ಸ್ವಚ್ಚಗೊಳಿಸಿಲ್ಲ. ಅದೇ ಟ್ಯಾಂಕ್‌ನಿಂದ ಗ್ರಾಮಕ್ಕೆ ಕುಡಿಯುವ ನೀರು ಪೂರೈಸಲಾಗುತ್ತಿದೆ. ಟ್ಯಾಂಕ್‌ ಸ್ವಚ್ಛಗೊಳಿಸದ ಕಾರಣ, ನೀರು ಕಲುಷಿತಗೊಂಡಿದ್ದು, ಆ ನೀರು ಕುಡಿದರು ಅಸ್ವಸ್ಥರಾಗಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಅಸ್ವಸ್ಥರಾದವರಲ್ಲಿ 11 ಮಂದಿಯನ್ನು ರಾಯಚೂರಿನ ರಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಬಾಲಕ ಹನುಮಂತ ಈರಪ್ಪ ಮೃತಪಟ್ಟಿದ್ದಾನೆ. ಉಳಿದವರನ್ನು ಅರಕೇರಾ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ದೇವದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ಓವರ್‌ಹೆಡ್‌ ಟ್ಯಾಂಕ್‌ ಅರ್ಧದಷ್ಟು ಮಾತ್ರ ತುಂಬುತ್ತಿದೆ. ಗ್ರಾಮಕ್ಕೆ ಡೆಡ್ ಸ್ಟೋರೇಜ್ ನೀರು ಪೂರೈಕೆಯಾಗುತ್ತಿದೆ. ಹೀಗಾಗಿ, ಘಟನೆ ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಟ್ಯಾಂಕ್‌ ಅನ್ನು ಸ್ವಚ್ಚಗೊಳಿಸದ ಗ್ರಾಮ ಪಂಚಾಯತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷದ ಜೂನ್ ತಿಂಗಳಿನಲ್ಲಿ ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮಲ್ಲಮ್ಮ, ಅಬ್ದುಲ್ ಗಫಾರ್ ಮತ್ತು ಮೊಹಮದ್ ನೂರ್ ಎಂಬ ಮೂವರು ಸಾವನ್ನಪ್ಪಿದ್ದರು. ಹಲವು ಮಂದಿ ಮೂತ್ರಪಿಂಡದ ಸಮಸ್ಯೆ ಸೇರಿದಂತೆ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರಸಭೆಯ ನಿರ್ಲಕ್ಷಕ್ಕೆ ರಾಯಚೂರು ನಾಗರಿಕ ವೇದಿಕೆಯು ರಾಯಚೂರು ಬಂದ್ ನಡೆಸಿತ್ತು.

ರಾಯಚೂರು ನಗರಕ್ಕೆ ಕುಡಿಯುವ ನೀರಿನ ಸರಬರಾಜು ಮಾಡುವ ರಾಂಪುರದಲ್ಲಿರುವ ನೀರು ಶುದ್ಧಿಕರಣ ಘಟಕವನ್ನು ಕಳೆದ 16 ವರ್ಷಗಳಿಂದ ಸ್ವಚ್ಛಗೊಳಿಸಲಾಗಿಲ್ಲ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.

2022ರ  ಜುಲೈ ತಿಂಗಳಿನಲ್ಲಿ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಗೋರ್ಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಲ್ಕಂದಿನ್ನಿ ಮತ್ತು ಜುಕೂರ ಗ್ರಾಮಗಳಲ್ಲಿ ಕಲುಷಿತ ನೀರು ಸೇವಿಸಿ ಇದು 8 ಮಂದಿ ಸಾವಿಗೀಡಾಗಿ, ಹಲವರು ಅನಾರೋಗ್ಯಕ್ಕೊಳಗಾಗಿದ್ದರು. 

ಆ ಸಂದರ್ಭದಲ್ಲಿ ಮಾತನಾಡಿದ್ದ ಅಂದಿನ ಸಿಎಂ ಬಸವರಾಜ ಬೊಮ್ಮಾಯಿಯವರು “ರಾಯಚೂರಿನ ಎಲ್ಲಾ ವಾರ್ಡ್‌ಗಳ ನೀರನ್ನು ಪರೀಕ್ಷೆ ಮಾಡಿಸಬೇಕು. ಕುಡಿಯುವ ನೀರಿನ ಸರ್ಟಿಫಿಕೇಷನ್ ಆಗಬೇಕು. ಇದರಲ್ಲಿ ಅಧಿಕಾರಿಗಳ ಲೋಪದೋಷ ಇದೆಯಾ ಎಂಬುದನ್ನು ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತದೆ. ತಪಿತಸ್ಥರು ಕಂಡುಬಂದರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೆವೆ. ದುರಂತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ನಿಧಿಯಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲು ನಿರ್ಧಾರಿಸಲಾಗಿದೆ” ಎಂದಿದ್ದರು.

ಕಳೆದ ವರ್ಷದ ಜುಲೈನಲ್ಲಿ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಗೋನಾಳ ಗ್ರಾಮದಲ್ಲಿ ನಲ್ಲಿ ನೀರಿನಲ್ಲಿ ಬಂದ ಕಲುಷಿತ ನೀರನ್ನು ಸೇವಿಸಿ 11 ವರ್ಷದ ಬಾಲಕಿ ಮೃತಪಟ್ಟು 20 ಕ್ಕೂ ಹೆಚ್ಚು ಜನರು ವಾಂತಿ, ಭೇದಿಯಿಂದ ಅಸ್ವಸ್ಥರಾಗಿದ್ದರು.

ಹೋರಾಟಗಾರರಾದ ರಜಾಕ್ ಉಸ್ತಾದ್‌ರವರು ಈ ಕುರಿತು ನಾನುಗೌರಿ.ಕಾಂನೊಂದಿಗೆ ಮಾತನಾಡಿ, “ಈ ರೀತಿಯಾಗಿ ಪದೇ ಪದೇ ಕಲುಷಿತ ನೀರಿನಿಂದಾಗಿ ಸಾವಿನ ಪ್ರಕರಣಗಳು ಹೆಚ್ಚುತ್ತಲೇ ಇದ್ದರೂ ಸ್ಥಳೀಯಾಡಳಿತ ಮತ್ತು ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ. ಜಿಲ್ಲಾ ಪಂಚಾಯತ್‌ ಸಿಇಓರವರು ನೀರು ಸರಬರಾಜು ಇಲಾಖೆ ಇಂಜಿನಿಯರ್‌ಗಳ ಮೇಲೆ ಕ್ರಮ ತೆಗೆದುಕೊಳ್ಳುವ ಬದಲು ಪಿಡಿಒ ಒಬ್ಬರನ್ನು ಅಮಾನತು ಮಾಡಿದರೆ ಸಮಸ್ಯೆ ಬಗೆಹರಿಯುವುದಿಲ್ಲ. ಇಡೀ ಅಧಿಕಾರಿಗಳಿಗೆ ಚುರುಕು ಮುಟ್ಟಿಸಬೇಕು. ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳು ಈ ಕುರಿತು ಎಚ್ಚೆತ್ತುಕೊಳ್ಳುವಂತೆ ಮಾಡಬೇಕು” ಎಂದರು.

ಎಲ್ಲಾ ಇಲಾಖೆಯ ಅಧಿಕಾರಿಗಳು ಜಡ್ಡುಗಟ್ಟಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಅವರೊಂದಿಗೆ ಸಭೆ ನಡೆಸಿದರೆ ಯಾವುದೇ ಪ್ರಯೋಜನವಾಗುವುದಿಲ್ಲ. ನೇರವಾಗಿ ಜಿಲ್ಲಾ ಮಟ್ಟದಲ್ಲಿ ಜನರ ನಡುವೆಯೇ ಸಭೆ ನಡೆಸಿ ಸಮಸ್ಯೆಗಳನ್ನು ಆಲಿಸಬೇಕು. ಸಮರ್ಪಕವಾಗಿ ಕೆಲಸ ಮಾಡುವಂತೆ ಎಚ್ಚರಿಕೆ ನೀಡಬೇಕು. ಅಲ್ಲದೇ ಸ್ಥಳೀಯ ಆಸ್ಪತ್ರೆಗಳನ್ನು ಸಮರ್ಪಕವಾಗಿಡಬೇಕು. ಈ ರೀತಿಯಾಗಿ ಇಂತಹ ಘಟನೆಗಳು ನಡೆಯದಂತೆ ಉಳಿದವರೆಲ್ಲರೂ ಎಚ್ಚೆತ್ತುಕೊಳ್ಳಬೇಕು ಎಂದರು.

ಕನಿಷ್ಟ ವಾಟರ್‌ ಟ್ಯಾಂಕ್‌ಗಳನ್ನು ಆಗಾಗ್ಗೆ ಶುದ್ದೀಕರಣ ಮಾಡಲು ಮುಂದಾಗದಿರುವುದು ದೊಡ್ಡ ದುರಂತಗಳಿಗೆ ಎಡೆ ಮಾಡಿಕೊಡುತ್ತಿವೆ. ತಮ್ಮ ತಪ್ಪಿಲ್ಲದ ಮುಗ್ದ ಜೀವಗಳು ಬಲಿಯಾಗುತ್ತಿವೆ. ಈ ಕೂಡಲೇ ಸರ್ಕಾರ ಎಚೆತ್ತುಕೊಂಡು ಸ್ಥಳೀಯಾಡಳಿತಗಳಿಗೆ ಸ್ಪಷ್ಟ ಸೂಚನೆ ನೀಡಬೇಕಾಗಿದೆ. ಆ ಮೂಲಕ ಇಂತಹ ಘಟನೆಗಳು ಮತ್ತೆ ಜರುಗದಂತೆ ತಡೆಯಬೇಕಿದೆ.

ಇದನ್ನೂ ಓದಿ: ರಾಯಚೂರು: ಕಲುಷಿತ ನೀರು ಸೇವಿಸಿ ಮೂವರ ಸಾವು ಪ್ರಕರಣ, ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...