Homeಮುಖಪುಟಮರ್ಯಾದೆಗೇಡು ಹತ್ಯೆ: ಸಹೋದರಿಯ ಶಿರಚ್ಛೇದ ಮಾಡಿ ಸೆಲ್ಫಿ ತೆಗೆದುಕೊಂಡ ಬಾಲಕ!

ಮರ್ಯಾದೆಗೇಡು ಹತ್ಯೆ: ಸಹೋದರಿಯ ಶಿರಚ್ಛೇದ ಮಾಡಿ ಸೆಲ್ಫಿ ತೆಗೆದುಕೊಂಡ ಬಾಲಕ!

- Advertisement -
- Advertisement -

ಮಹಾರಾಷ್ಟ್ರದ ಔರಂಗಾಬಾದ್‌ ಜಿಲ್ಲೆಯಲ್ಲಿ ಭಾನುವಾರ ಭೀಕರ ಮರ್ಯಾದೆಗೇಡು ಹತ್ಯೆಯ ಘಟನೆ ನಡೆದಿದೆ. ಪ್ರಕರಣದಲ್ಲಿ ಹದಿಹರೆಯದ ಬಾಲಕನೊಬ್ಬ ತನ್ನ 19 ವರ್ಷದ ಸಹೋದರಿಯನ್ನು ತಾಯಿಯ ಸಹಾಯದಿಂದ ಶಿರಚ್ಛೇದನ ಮಾಡಿದ್ದಾನೆ. ಶಿರಚ್ಛೇದನ ಮಾಡಿದ್ದಲ್ಲದೆ, ನೆರೆಹೊರೆಯವರ ಮುಂದೆ ಆಕೆಯ ತಲೆಯನ್ನು ಪ್ರದರ್ಶಿಸಿ, ತುಂಡರಿಸಿದ ತಲೆಯೊಂದಿಗೆ ಬಾಲಕ ಮತ್ತು ಆತನ ತಾಯಿ ಸೆಲ್ಫಿ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಯುವತಿಯ ಪತಿ ಮನೆಯಲ್ಲಿದ್ದ ವೇಳೆ ಆಕೆಯ ತಾಯಿ ಮತ್ತು ಸಹೋದರ ಸೇರಿಕೊಂಡು ಈ ಕೊಲೆಯನ್ನು ಮಾಡಿದ್ದಾರೆ ಎಂದು ಎನ್‌‌ಡಿಟಿವಿ ವರದಿ ಮಾಡಿದೆ. ಬಾಲಕನೂ ತನ್ನ ಭಾವನ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ್ದನಾದರೂ, ಅವರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಬರಗೂರು ಮರ್ಯಾದೆಗೇಡು ಹತ್ಯೆ ಪ್ರಕರಣ; ದುಡಿಮೆ ಬಡತನ ಕೊಟ್ಟಿತು, ಜಾತಿ ಕೊಲೆ ಮಾಡಿಸಿತು

ಮೃತ ಯುವತಿಯು ಗರ್ಭಿಣಿ ಎಂದು ವರದಿಯಾಗಿದ್ದು, ತನ್ನ ಸಹೋದರಿಯನ್ನು ಕೊಂದ ನಂತರ ಬಾಲಕನು ತುಂಡರಿಸಿದ ತಲೆಯನ್ನು ವರಾಂಡಾಕ್ಕೆ ತೆಗೆದುಕೊಂಡು ಶರಣಾಗುವ ಮೊದಲು ಎಲ್ಲರಿಗೂ ಕಾಣುವಂತೆ ಗಾಳಿಯಲ್ಲಿ ಬೀಸಿದನು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಹತ್ಯೆಗೀಡಾದ ಯುವತಿಯನ್ನು ಕೀರ್ತಿ ಥೋರ್ ಎಂದು ಗುರುತಿಸಲಾಗಿದೆ. ಅವರು ಜೂನ್‌ನಲ್ಲಿ ಮನೆಬಿಟ್ಟು ತನ್ನ ಪತಿಯೊಂದಿಗೆ ವಾಸಿಸುತ್ತಿದ್ದಳು. ಆಕೆಯ ತಾಯಿ ಕಳೆದ ವಾರ ಆಕೆಯನ್ನು ಸಂಪರ್ಕಿಸಿ ಭೇಟಿಯಾಗುವುದಾಗಿ ಕೇಳಿಕೊಂಡಿದ್ದರು. ಹೀಗಾಗಿ ಭಾನುವಾರ ತನ್ನ ಮಗನೊಂದಿಗೆ ಮಗಳ ಮನೆಗೆ ತೆರಳಿದ್ದರು.

ಭಾನುವಾರದಂದು ಅವರು ಮಗಳ ಮನೆಗೆ ಬಂದಿದ್ದಾಗ ಪತಿ ಬೇರೆ ಕೋಣೆಯಲ್ಲಿದ್ದರು. ಅಂದು ಅವರು ಅನಾರೋಗ್ಯದಿಂದಾಗಿ ಅಸ್ವಸ್ಥರಾಗಿದ್ದರು. ತಾಯಿ ಮತ್ತು ಸಹೋದರನಿಗೆ ಟೀ ಮಾಡುತ್ತಿದ್ದಾಗ ಹಿಂಬದಿಯಿಂದ ಕೀರ್ತಿ ಮೇಲೆ ಹಲ್ಲೆ ನಡೆಸಲಾಗಿದೆ. ಆಕೆಯ ತಾಯಿ ಯುವತಿಯ ಕಾಲನ್ನು ಹಿಡಿದುಕೊಂಡಿದ್ದು, ಸಹೋದರನೂ ತನ್ನೊಂದಿಗೆ ತಂದಿದ್ದ ಕುಡುಗೋಲಿನಿಂದ ತಲೆಯನ್ನು ಕತ್ತರಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಷ್ಟೇ ಅಲ್ಲದೆ ಅಕ್ಕಪಕ್ಕದ ಮನೆಯವರು ನೋಡಲೆಂದು ತಲೆಯನ್ನು ಹೊರಕ್ಕೆ ಕೊಂಡೊಯ್ದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ’ಮರ್ಯಾದೆ’ ಮತ್ತು ಮನುಷ್ಯತ್ವದ ಕಂದರವನ್ನು ಶೋಧಿಸುವ ’ಪಾವ ಕದೈಗಳ್’

ಆರೋಪಿಗಳು ವಿರ್ಗೋನ್ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದು, ಇದೀಗ ಬಂಧನಕ್ಕೆ ಒಳಗಾಗಿದ್ದಾರೆ.

ರಾಜ್ಯದಲ್ಲೂ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಇಂತಹ ಹತ್ತೆನ್ನರಡು ಘಟನೆಗಳು ನಡೆದಿದ್ದು, ಜೂನ್‌ ತಿಂಗಳೊಂದರಲ್ಲಿಯೇ ನಾಲ್ಕು ಘಟನೆಗಳು ನಡೆದಿರುವುದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇಂತಹ ಘಟನೆಗಳು ಹೆಚ್ಚುತ್ತಿದ್ದರೂ ಸರ್ಕಾರಗಳು ಇಂತಹ ಕ್ರೌರ್ಯಗಳನ್ನು ತಡೆಗಟ್ಟುವತ್ತ ಗಮನ ಹರಿಸದೇ ಇರುವುದು ಬೇಸರದ ಸಂಗತಿ.

ಈ ದೇಶದ ಕ್ರೂರ, ಕರಾಳ ಜಾತಿವ್ಯವಸ್ಥೆಯ ಬಲೆಯಲ್ಲಿ ಸಿಕ್ಕಿಕೊಂಡ ಸಾವಿರಾರು ತಂದೆ ತಾಯಿಯರು ತಮ್ಮ ಮಗಳು ಅನ್ಯಜಾತೀಯ ಯುವಕನನ್ನು ಪ್ರೀತಿಸಿದರೆಂಬ ಏಕೈಕ ಕಾರಣಕ್ಕೆ ಮಗಳನ್ನೇ ಅಮಾನವೀಯವಾಗಿ ಕೊಂದುಹಾಕಿ ಜೈಲು ಸೇರಿದ್ದಾರೆ. ಮರ್ಯಾದೆ ಉಳಿಸಿಕೊಳ್ಳಲು ಕೊಲೆ ಎಂಬ ಅಹಂಕಾರ, ಗರ್ವಕ್ಕೆ ತಮ್ಮ ಮಗಳ ಜೀವನದೊಂದಿಗೆ ತಮ್ಮ ಜೀವನವನ್ನು ನರಕ ಮಾಡಿಕೊಂಡಿದ್ದಾರೆ. ಇದುವರೆಗೂ ತನ್ನ ಮಗಳನ್ನು ಕೊಂದ ಒಬ್ಬ ಅಪ್ಪ-ಅಮ್ಮನು ನೆಮ್ಮದಿಯಾಗಿಲ್ಲ ಎಂಬುದು ಸತ್ಯ. ಹಾಗಾಗಿ ಇದರ ವಿರುದ್ಧ ಜಾಗೃತಿ ಅತಿ ಹೆಚ್ಚು ಅಗತ್ಯವಾಗಿದೆ.

ಇದನ್ನೂ ಓದಿ:ಕೊಲೆಗಡುಕ ಜಾತಿ ಪ್ರತಿಷ್ಠೆಗೆ ತಂದೆಯ ಜೊತೆಗೆ ಸಮಾಜವೂ ಕಾರಣವಾಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...