Homeಮುಖಪುಟಮರ್ಯಾದೆಗೇಡು ಹತ್ಯೆ: ಸಹೋದರಿಯ ಶಿರಚ್ಛೇದ ಮಾಡಿ ಸೆಲ್ಫಿ ತೆಗೆದುಕೊಂಡ ಬಾಲಕ!

ಮರ್ಯಾದೆಗೇಡು ಹತ್ಯೆ: ಸಹೋದರಿಯ ಶಿರಚ್ಛೇದ ಮಾಡಿ ಸೆಲ್ಫಿ ತೆಗೆದುಕೊಂಡ ಬಾಲಕ!

- Advertisement -
- Advertisement -

ಮಹಾರಾಷ್ಟ್ರದ ಔರಂಗಾಬಾದ್‌ ಜಿಲ್ಲೆಯಲ್ಲಿ ಭಾನುವಾರ ಭೀಕರ ಮರ್ಯಾದೆಗೇಡು ಹತ್ಯೆಯ ಘಟನೆ ನಡೆದಿದೆ. ಪ್ರಕರಣದಲ್ಲಿ ಹದಿಹರೆಯದ ಬಾಲಕನೊಬ್ಬ ತನ್ನ 19 ವರ್ಷದ ಸಹೋದರಿಯನ್ನು ತಾಯಿಯ ಸಹಾಯದಿಂದ ಶಿರಚ್ಛೇದನ ಮಾಡಿದ್ದಾನೆ. ಶಿರಚ್ಛೇದನ ಮಾಡಿದ್ದಲ್ಲದೆ, ನೆರೆಹೊರೆಯವರ ಮುಂದೆ ಆಕೆಯ ತಲೆಯನ್ನು ಪ್ರದರ್ಶಿಸಿ, ತುಂಡರಿಸಿದ ತಲೆಯೊಂದಿಗೆ ಬಾಲಕ ಮತ್ತು ಆತನ ತಾಯಿ ಸೆಲ್ಫಿ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಯುವತಿಯ ಪತಿ ಮನೆಯಲ್ಲಿದ್ದ ವೇಳೆ ಆಕೆಯ ತಾಯಿ ಮತ್ತು ಸಹೋದರ ಸೇರಿಕೊಂಡು ಈ ಕೊಲೆಯನ್ನು ಮಾಡಿದ್ದಾರೆ ಎಂದು ಎನ್‌‌ಡಿಟಿವಿ ವರದಿ ಮಾಡಿದೆ. ಬಾಲಕನೂ ತನ್ನ ಭಾವನ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ್ದನಾದರೂ, ಅವರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಬರಗೂರು ಮರ್ಯಾದೆಗೇಡು ಹತ್ಯೆ ಪ್ರಕರಣ; ದುಡಿಮೆ ಬಡತನ ಕೊಟ್ಟಿತು, ಜಾತಿ ಕೊಲೆ ಮಾಡಿಸಿತು

ಮೃತ ಯುವತಿಯು ಗರ್ಭಿಣಿ ಎಂದು ವರದಿಯಾಗಿದ್ದು, ತನ್ನ ಸಹೋದರಿಯನ್ನು ಕೊಂದ ನಂತರ ಬಾಲಕನು ತುಂಡರಿಸಿದ ತಲೆಯನ್ನು ವರಾಂಡಾಕ್ಕೆ ತೆಗೆದುಕೊಂಡು ಶರಣಾಗುವ ಮೊದಲು ಎಲ್ಲರಿಗೂ ಕಾಣುವಂತೆ ಗಾಳಿಯಲ್ಲಿ ಬೀಸಿದನು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಹತ್ಯೆಗೀಡಾದ ಯುವತಿಯನ್ನು ಕೀರ್ತಿ ಥೋರ್ ಎಂದು ಗುರುತಿಸಲಾಗಿದೆ. ಅವರು ಜೂನ್‌ನಲ್ಲಿ ಮನೆಬಿಟ್ಟು ತನ್ನ ಪತಿಯೊಂದಿಗೆ ವಾಸಿಸುತ್ತಿದ್ದಳು. ಆಕೆಯ ತಾಯಿ ಕಳೆದ ವಾರ ಆಕೆಯನ್ನು ಸಂಪರ್ಕಿಸಿ ಭೇಟಿಯಾಗುವುದಾಗಿ ಕೇಳಿಕೊಂಡಿದ್ದರು. ಹೀಗಾಗಿ ಭಾನುವಾರ ತನ್ನ ಮಗನೊಂದಿಗೆ ಮಗಳ ಮನೆಗೆ ತೆರಳಿದ್ದರು.

ಭಾನುವಾರದಂದು ಅವರು ಮಗಳ ಮನೆಗೆ ಬಂದಿದ್ದಾಗ ಪತಿ ಬೇರೆ ಕೋಣೆಯಲ್ಲಿದ್ದರು. ಅಂದು ಅವರು ಅನಾರೋಗ್ಯದಿಂದಾಗಿ ಅಸ್ವಸ್ಥರಾಗಿದ್ದರು. ತಾಯಿ ಮತ್ತು ಸಹೋದರನಿಗೆ ಟೀ ಮಾಡುತ್ತಿದ್ದಾಗ ಹಿಂಬದಿಯಿಂದ ಕೀರ್ತಿ ಮೇಲೆ ಹಲ್ಲೆ ನಡೆಸಲಾಗಿದೆ. ಆಕೆಯ ತಾಯಿ ಯುವತಿಯ ಕಾಲನ್ನು ಹಿಡಿದುಕೊಂಡಿದ್ದು, ಸಹೋದರನೂ ತನ್ನೊಂದಿಗೆ ತಂದಿದ್ದ ಕುಡುಗೋಲಿನಿಂದ ತಲೆಯನ್ನು ಕತ್ತರಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಷ್ಟೇ ಅಲ್ಲದೆ ಅಕ್ಕಪಕ್ಕದ ಮನೆಯವರು ನೋಡಲೆಂದು ತಲೆಯನ್ನು ಹೊರಕ್ಕೆ ಕೊಂಡೊಯ್ದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ’ಮರ್ಯಾದೆ’ ಮತ್ತು ಮನುಷ್ಯತ್ವದ ಕಂದರವನ್ನು ಶೋಧಿಸುವ ’ಪಾವ ಕದೈಗಳ್’

ಆರೋಪಿಗಳು ವಿರ್ಗೋನ್ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದು, ಇದೀಗ ಬಂಧನಕ್ಕೆ ಒಳಗಾಗಿದ್ದಾರೆ.

ರಾಜ್ಯದಲ್ಲೂ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಇಂತಹ ಹತ್ತೆನ್ನರಡು ಘಟನೆಗಳು ನಡೆದಿದ್ದು, ಜೂನ್‌ ತಿಂಗಳೊಂದರಲ್ಲಿಯೇ ನಾಲ್ಕು ಘಟನೆಗಳು ನಡೆದಿರುವುದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇಂತಹ ಘಟನೆಗಳು ಹೆಚ್ಚುತ್ತಿದ್ದರೂ ಸರ್ಕಾರಗಳು ಇಂತಹ ಕ್ರೌರ್ಯಗಳನ್ನು ತಡೆಗಟ್ಟುವತ್ತ ಗಮನ ಹರಿಸದೇ ಇರುವುದು ಬೇಸರದ ಸಂಗತಿ.

ಈ ದೇಶದ ಕ್ರೂರ, ಕರಾಳ ಜಾತಿವ್ಯವಸ್ಥೆಯ ಬಲೆಯಲ್ಲಿ ಸಿಕ್ಕಿಕೊಂಡ ಸಾವಿರಾರು ತಂದೆ ತಾಯಿಯರು ತಮ್ಮ ಮಗಳು ಅನ್ಯಜಾತೀಯ ಯುವಕನನ್ನು ಪ್ರೀತಿಸಿದರೆಂಬ ಏಕೈಕ ಕಾರಣಕ್ಕೆ ಮಗಳನ್ನೇ ಅಮಾನವೀಯವಾಗಿ ಕೊಂದುಹಾಕಿ ಜೈಲು ಸೇರಿದ್ದಾರೆ. ಮರ್ಯಾದೆ ಉಳಿಸಿಕೊಳ್ಳಲು ಕೊಲೆ ಎಂಬ ಅಹಂಕಾರ, ಗರ್ವಕ್ಕೆ ತಮ್ಮ ಮಗಳ ಜೀವನದೊಂದಿಗೆ ತಮ್ಮ ಜೀವನವನ್ನು ನರಕ ಮಾಡಿಕೊಂಡಿದ್ದಾರೆ. ಇದುವರೆಗೂ ತನ್ನ ಮಗಳನ್ನು ಕೊಂದ ಒಬ್ಬ ಅಪ್ಪ-ಅಮ್ಮನು ನೆಮ್ಮದಿಯಾಗಿಲ್ಲ ಎಂಬುದು ಸತ್ಯ. ಹಾಗಾಗಿ ಇದರ ವಿರುದ್ಧ ಜಾಗೃತಿ ಅತಿ ಹೆಚ್ಚು ಅಗತ್ಯವಾಗಿದೆ.

ಇದನ್ನೂ ಓದಿ:ಕೊಲೆಗಡುಕ ಜಾತಿ ಪ್ರತಿಷ್ಠೆಗೆ ತಂದೆಯ ಜೊತೆಗೆ ಸಮಾಜವೂ ಕಾರಣವಾಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...