Homeಮುಖಪುಟಮರ್ಯಾದೆಗೇಡು ಹತ್ಯೆ: ಸಹೋದರಿಯ ಶಿರಚ್ಛೇದ ಮಾಡಿ ಸೆಲ್ಫಿ ತೆಗೆದುಕೊಂಡ ಬಾಲಕ!

ಮರ್ಯಾದೆಗೇಡು ಹತ್ಯೆ: ಸಹೋದರಿಯ ಶಿರಚ್ಛೇದ ಮಾಡಿ ಸೆಲ್ಫಿ ತೆಗೆದುಕೊಂಡ ಬಾಲಕ!

- Advertisement -
- Advertisement -

ಮಹಾರಾಷ್ಟ್ರದ ಔರಂಗಾಬಾದ್‌ ಜಿಲ್ಲೆಯಲ್ಲಿ ಭಾನುವಾರ ಭೀಕರ ಮರ್ಯಾದೆಗೇಡು ಹತ್ಯೆಯ ಘಟನೆ ನಡೆದಿದೆ. ಪ್ರಕರಣದಲ್ಲಿ ಹದಿಹರೆಯದ ಬಾಲಕನೊಬ್ಬ ತನ್ನ 19 ವರ್ಷದ ಸಹೋದರಿಯನ್ನು ತಾಯಿಯ ಸಹಾಯದಿಂದ ಶಿರಚ್ಛೇದನ ಮಾಡಿದ್ದಾನೆ. ಶಿರಚ್ಛೇದನ ಮಾಡಿದ್ದಲ್ಲದೆ, ನೆರೆಹೊರೆಯವರ ಮುಂದೆ ಆಕೆಯ ತಲೆಯನ್ನು ಪ್ರದರ್ಶಿಸಿ, ತುಂಡರಿಸಿದ ತಲೆಯೊಂದಿಗೆ ಬಾಲಕ ಮತ್ತು ಆತನ ತಾಯಿ ಸೆಲ್ಫಿ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಯುವತಿಯ ಪತಿ ಮನೆಯಲ್ಲಿದ್ದ ವೇಳೆ ಆಕೆಯ ತಾಯಿ ಮತ್ತು ಸಹೋದರ ಸೇರಿಕೊಂಡು ಈ ಕೊಲೆಯನ್ನು ಮಾಡಿದ್ದಾರೆ ಎಂದು ಎನ್‌‌ಡಿಟಿವಿ ವರದಿ ಮಾಡಿದೆ. ಬಾಲಕನೂ ತನ್ನ ಭಾವನ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ್ದನಾದರೂ, ಅವರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಬರಗೂರು ಮರ್ಯಾದೆಗೇಡು ಹತ್ಯೆ ಪ್ರಕರಣ; ದುಡಿಮೆ ಬಡತನ ಕೊಟ್ಟಿತು, ಜಾತಿ ಕೊಲೆ ಮಾಡಿಸಿತು

ಮೃತ ಯುವತಿಯು ಗರ್ಭಿಣಿ ಎಂದು ವರದಿಯಾಗಿದ್ದು, ತನ್ನ ಸಹೋದರಿಯನ್ನು ಕೊಂದ ನಂತರ ಬಾಲಕನು ತುಂಡರಿಸಿದ ತಲೆಯನ್ನು ವರಾಂಡಾಕ್ಕೆ ತೆಗೆದುಕೊಂಡು ಶರಣಾಗುವ ಮೊದಲು ಎಲ್ಲರಿಗೂ ಕಾಣುವಂತೆ ಗಾಳಿಯಲ್ಲಿ ಬೀಸಿದನು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಹತ್ಯೆಗೀಡಾದ ಯುವತಿಯನ್ನು ಕೀರ್ತಿ ಥೋರ್ ಎಂದು ಗುರುತಿಸಲಾಗಿದೆ. ಅವರು ಜೂನ್‌ನಲ್ಲಿ ಮನೆಬಿಟ್ಟು ತನ್ನ ಪತಿಯೊಂದಿಗೆ ವಾಸಿಸುತ್ತಿದ್ದಳು. ಆಕೆಯ ತಾಯಿ ಕಳೆದ ವಾರ ಆಕೆಯನ್ನು ಸಂಪರ್ಕಿಸಿ ಭೇಟಿಯಾಗುವುದಾಗಿ ಕೇಳಿಕೊಂಡಿದ್ದರು. ಹೀಗಾಗಿ ಭಾನುವಾರ ತನ್ನ ಮಗನೊಂದಿಗೆ ಮಗಳ ಮನೆಗೆ ತೆರಳಿದ್ದರು.

ಭಾನುವಾರದಂದು ಅವರು ಮಗಳ ಮನೆಗೆ ಬಂದಿದ್ದಾಗ ಪತಿ ಬೇರೆ ಕೋಣೆಯಲ್ಲಿದ್ದರು. ಅಂದು ಅವರು ಅನಾರೋಗ್ಯದಿಂದಾಗಿ ಅಸ್ವಸ್ಥರಾಗಿದ್ದರು. ತಾಯಿ ಮತ್ತು ಸಹೋದರನಿಗೆ ಟೀ ಮಾಡುತ್ತಿದ್ದಾಗ ಹಿಂಬದಿಯಿಂದ ಕೀರ್ತಿ ಮೇಲೆ ಹಲ್ಲೆ ನಡೆಸಲಾಗಿದೆ. ಆಕೆಯ ತಾಯಿ ಯುವತಿಯ ಕಾಲನ್ನು ಹಿಡಿದುಕೊಂಡಿದ್ದು, ಸಹೋದರನೂ ತನ್ನೊಂದಿಗೆ ತಂದಿದ್ದ ಕುಡುಗೋಲಿನಿಂದ ತಲೆಯನ್ನು ಕತ್ತರಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಷ್ಟೇ ಅಲ್ಲದೆ ಅಕ್ಕಪಕ್ಕದ ಮನೆಯವರು ನೋಡಲೆಂದು ತಲೆಯನ್ನು ಹೊರಕ್ಕೆ ಕೊಂಡೊಯ್ದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ’ಮರ್ಯಾದೆ’ ಮತ್ತು ಮನುಷ್ಯತ್ವದ ಕಂದರವನ್ನು ಶೋಧಿಸುವ ’ಪಾವ ಕದೈಗಳ್’

ಆರೋಪಿಗಳು ವಿರ್ಗೋನ್ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದು, ಇದೀಗ ಬಂಧನಕ್ಕೆ ಒಳಗಾಗಿದ್ದಾರೆ.

ರಾಜ್ಯದಲ್ಲೂ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಇಂತಹ ಹತ್ತೆನ್ನರಡು ಘಟನೆಗಳು ನಡೆದಿದ್ದು, ಜೂನ್‌ ತಿಂಗಳೊಂದರಲ್ಲಿಯೇ ನಾಲ್ಕು ಘಟನೆಗಳು ನಡೆದಿರುವುದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇಂತಹ ಘಟನೆಗಳು ಹೆಚ್ಚುತ್ತಿದ್ದರೂ ಸರ್ಕಾರಗಳು ಇಂತಹ ಕ್ರೌರ್ಯಗಳನ್ನು ತಡೆಗಟ್ಟುವತ್ತ ಗಮನ ಹರಿಸದೇ ಇರುವುದು ಬೇಸರದ ಸಂಗತಿ.

ಈ ದೇಶದ ಕ್ರೂರ, ಕರಾಳ ಜಾತಿವ್ಯವಸ್ಥೆಯ ಬಲೆಯಲ್ಲಿ ಸಿಕ್ಕಿಕೊಂಡ ಸಾವಿರಾರು ತಂದೆ ತಾಯಿಯರು ತಮ್ಮ ಮಗಳು ಅನ್ಯಜಾತೀಯ ಯುವಕನನ್ನು ಪ್ರೀತಿಸಿದರೆಂಬ ಏಕೈಕ ಕಾರಣಕ್ಕೆ ಮಗಳನ್ನೇ ಅಮಾನವೀಯವಾಗಿ ಕೊಂದುಹಾಕಿ ಜೈಲು ಸೇರಿದ್ದಾರೆ. ಮರ್ಯಾದೆ ಉಳಿಸಿಕೊಳ್ಳಲು ಕೊಲೆ ಎಂಬ ಅಹಂಕಾರ, ಗರ್ವಕ್ಕೆ ತಮ್ಮ ಮಗಳ ಜೀವನದೊಂದಿಗೆ ತಮ್ಮ ಜೀವನವನ್ನು ನರಕ ಮಾಡಿಕೊಂಡಿದ್ದಾರೆ. ಇದುವರೆಗೂ ತನ್ನ ಮಗಳನ್ನು ಕೊಂದ ಒಬ್ಬ ಅಪ್ಪ-ಅಮ್ಮನು ನೆಮ್ಮದಿಯಾಗಿಲ್ಲ ಎಂಬುದು ಸತ್ಯ. ಹಾಗಾಗಿ ಇದರ ವಿರುದ್ಧ ಜಾಗೃತಿ ಅತಿ ಹೆಚ್ಚು ಅಗತ್ಯವಾಗಿದೆ.

ಇದನ್ನೂ ಓದಿ:ಕೊಲೆಗಡುಕ ಜಾತಿ ಪ್ರತಿಷ್ಠೆಗೆ ತಂದೆಯ ಜೊತೆಗೆ ಸಮಾಜವೂ ಕಾರಣವಾಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...