Homeಮುಖಪುಟಮರ್ಯಾದೆಗೇಡು ಹತ್ಯೆ: ಸಹೋದರಿಯ ಶಿರಚ್ಛೇದ ಮಾಡಿ ಸೆಲ್ಫಿ ತೆಗೆದುಕೊಂಡ ಬಾಲಕ!

ಮರ್ಯಾದೆಗೇಡು ಹತ್ಯೆ: ಸಹೋದರಿಯ ಶಿರಚ್ಛೇದ ಮಾಡಿ ಸೆಲ್ಫಿ ತೆಗೆದುಕೊಂಡ ಬಾಲಕ!

- Advertisement -
- Advertisement -

ಮಹಾರಾಷ್ಟ್ರದ ಔರಂಗಾಬಾದ್‌ ಜಿಲ್ಲೆಯಲ್ಲಿ ಭಾನುವಾರ ಭೀಕರ ಮರ್ಯಾದೆಗೇಡು ಹತ್ಯೆಯ ಘಟನೆ ನಡೆದಿದೆ. ಪ್ರಕರಣದಲ್ಲಿ ಹದಿಹರೆಯದ ಬಾಲಕನೊಬ್ಬ ತನ್ನ 19 ವರ್ಷದ ಸಹೋದರಿಯನ್ನು ತಾಯಿಯ ಸಹಾಯದಿಂದ ಶಿರಚ್ಛೇದನ ಮಾಡಿದ್ದಾನೆ. ಶಿರಚ್ಛೇದನ ಮಾಡಿದ್ದಲ್ಲದೆ, ನೆರೆಹೊರೆಯವರ ಮುಂದೆ ಆಕೆಯ ತಲೆಯನ್ನು ಪ್ರದರ್ಶಿಸಿ, ತುಂಡರಿಸಿದ ತಲೆಯೊಂದಿಗೆ ಬಾಲಕ ಮತ್ತು ಆತನ ತಾಯಿ ಸೆಲ್ಫಿ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಯುವತಿಯ ಪತಿ ಮನೆಯಲ್ಲಿದ್ದ ವೇಳೆ ಆಕೆಯ ತಾಯಿ ಮತ್ತು ಸಹೋದರ ಸೇರಿಕೊಂಡು ಈ ಕೊಲೆಯನ್ನು ಮಾಡಿದ್ದಾರೆ ಎಂದು ಎನ್‌‌ಡಿಟಿವಿ ವರದಿ ಮಾಡಿದೆ. ಬಾಲಕನೂ ತನ್ನ ಭಾವನ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ್ದನಾದರೂ, ಅವರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಬರಗೂರು ಮರ್ಯಾದೆಗೇಡು ಹತ್ಯೆ ಪ್ರಕರಣ; ದುಡಿಮೆ ಬಡತನ ಕೊಟ್ಟಿತು, ಜಾತಿ ಕೊಲೆ ಮಾಡಿಸಿತು

ಮೃತ ಯುವತಿಯು ಗರ್ಭಿಣಿ ಎಂದು ವರದಿಯಾಗಿದ್ದು, ತನ್ನ ಸಹೋದರಿಯನ್ನು ಕೊಂದ ನಂತರ ಬಾಲಕನು ತುಂಡರಿಸಿದ ತಲೆಯನ್ನು ವರಾಂಡಾಕ್ಕೆ ತೆಗೆದುಕೊಂಡು ಶರಣಾಗುವ ಮೊದಲು ಎಲ್ಲರಿಗೂ ಕಾಣುವಂತೆ ಗಾಳಿಯಲ್ಲಿ ಬೀಸಿದನು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಹತ್ಯೆಗೀಡಾದ ಯುವತಿಯನ್ನು ಕೀರ್ತಿ ಥೋರ್ ಎಂದು ಗುರುತಿಸಲಾಗಿದೆ. ಅವರು ಜೂನ್‌ನಲ್ಲಿ ಮನೆಬಿಟ್ಟು ತನ್ನ ಪತಿಯೊಂದಿಗೆ ವಾಸಿಸುತ್ತಿದ್ದಳು. ಆಕೆಯ ತಾಯಿ ಕಳೆದ ವಾರ ಆಕೆಯನ್ನು ಸಂಪರ್ಕಿಸಿ ಭೇಟಿಯಾಗುವುದಾಗಿ ಕೇಳಿಕೊಂಡಿದ್ದರು. ಹೀಗಾಗಿ ಭಾನುವಾರ ತನ್ನ ಮಗನೊಂದಿಗೆ ಮಗಳ ಮನೆಗೆ ತೆರಳಿದ್ದರು.

ಭಾನುವಾರದಂದು ಅವರು ಮಗಳ ಮನೆಗೆ ಬಂದಿದ್ದಾಗ ಪತಿ ಬೇರೆ ಕೋಣೆಯಲ್ಲಿದ್ದರು. ಅಂದು ಅವರು ಅನಾರೋಗ್ಯದಿಂದಾಗಿ ಅಸ್ವಸ್ಥರಾಗಿದ್ದರು. ತಾಯಿ ಮತ್ತು ಸಹೋದರನಿಗೆ ಟೀ ಮಾಡುತ್ತಿದ್ದಾಗ ಹಿಂಬದಿಯಿಂದ ಕೀರ್ತಿ ಮೇಲೆ ಹಲ್ಲೆ ನಡೆಸಲಾಗಿದೆ. ಆಕೆಯ ತಾಯಿ ಯುವತಿಯ ಕಾಲನ್ನು ಹಿಡಿದುಕೊಂಡಿದ್ದು, ಸಹೋದರನೂ ತನ್ನೊಂದಿಗೆ ತಂದಿದ್ದ ಕುಡುಗೋಲಿನಿಂದ ತಲೆಯನ್ನು ಕತ್ತರಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಷ್ಟೇ ಅಲ್ಲದೆ ಅಕ್ಕಪಕ್ಕದ ಮನೆಯವರು ನೋಡಲೆಂದು ತಲೆಯನ್ನು ಹೊರಕ್ಕೆ ಕೊಂಡೊಯ್ದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ’ಮರ್ಯಾದೆ’ ಮತ್ತು ಮನುಷ್ಯತ್ವದ ಕಂದರವನ್ನು ಶೋಧಿಸುವ ’ಪಾವ ಕದೈಗಳ್’

ಆರೋಪಿಗಳು ವಿರ್ಗೋನ್ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದು, ಇದೀಗ ಬಂಧನಕ್ಕೆ ಒಳಗಾಗಿದ್ದಾರೆ.

ರಾಜ್ಯದಲ್ಲೂ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಇಂತಹ ಹತ್ತೆನ್ನರಡು ಘಟನೆಗಳು ನಡೆದಿದ್ದು, ಜೂನ್‌ ತಿಂಗಳೊಂದರಲ್ಲಿಯೇ ನಾಲ್ಕು ಘಟನೆಗಳು ನಡೆದಿರುವುದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇಂತಹ ಘಟನೆಗಳು ಹೆಚ್ಚುತ್ತಿದ್ದರೂ ಸರ್ಕಾರಗಳು ಇಂತಹ ಕ್ರೌರ್ಯಗಳನ್ನು ತಡೆಗಟ್ಟುವತ್ತ ಗಮನ ಹರಿಸದೇ ಇರುವುದು ಬೇಸರದ ಸಂಗತಿ.

ಈ ದೇಶದ ಕ್ರೂರ, ಕರಾಳ ಜಾತಿವ್ಯವಸ್ಥೆಯ ಬಲೆಯಲ್ಲಿ ಸಿಕ್ಕಿಕೊಂಡ ಸಾವಿರಾರು ತಂದೆ ತಾಯಿಯರು ತಮ್ಮ ಮಗಳು ಅನ್ಯಜಾತೀಯ ಯುವಕನನ್ನು ಪ್ರೀತಿಸಿದರೆಂಬ ಏಕೈಕ ಕಾರಣಕ್ಕೆ ಮಗಳನ್ನೇ ಅಮಾನವೀಯವಾಗಿ ಕೊಂದುಹಾಕಿ ಜೈಲು ಸೇರಿದ್ದಾರೆ. ಮರ್ಯಾದೆ ಉಳಿಸಿಕೊಳ್ಳಲು ಕೊಲೆ ಎಂಬ ಅಹಂಕಾರ, ಗರ್ವಕ್ಕೆ ತಮ್ಮ ಮಗಳ ಜೀವನದೊಂದಿಗೆ ತಮ್ಮ ಜೀವನವನ್ನು ನರಕ ಮಾಡಿಕೊಂಡಿದ್ದಾರೆ. ಇದುವರೆಗೂ ತನ್ನ ಮಗಳನ್ನು ಕೊಂದ ಒಬ್ಬ ಅಪ್ಪ-ಅಮ್ಮನು ನೆಮ್ಮದಿಯಾಗಿಲ್ಲ ಎಂಬುದು ಸತ್ಯ. ಹಾಗಾಗಿ ಇದರ ವಿರುದ್ಧ ಜಾಗೃತಿ ಅತಿ ಹೆಚ್ಚು ಅಗತ್ಯವಾಗಿದೆ.

ಇದನ್ನೂ ಓದಿ:ಕೊಲೆಗಡುಕ ಜಾತಿ ಪ್ರತಿಷ್ಠೆಗೆ ತಂದೆಯ ಜೊತೆಗೆ ಸಮಾಜವೂ ಕಾರಣವಾಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...