Homeಮುಖಪುಟಮರ್ಯಾದೆಗೇಡು ಹತ್ಯೆ: ಸಹೋದರಿಯ ಶಿರಚ್ಛೇದ ಮಾಡಿ ಸೆಲ್ಫಿ ತೆಗೆದುಕೊಂಡ ಬಾಲಕ!

ಮರ್ಯಾದೆಗೇಡು ಹತ್ಯೆ: ಸಹೋದರಿಯ ಶಿರಚ್ಛೇದ ಮಾಡಿ ಸೆಲ್ಫಿ ತೆಗೆದುಕೊಂಡ ಬಾಲಕ!

- Advertisement -
- Advertisement -

ಮಹಾರಾಷ್ಟ್ರದ ಔರಂಗಾಬಾದ್‌ ಜಿಲ್ಲೆಯಲ್ಲಿ ಭಾನುವಾರ ಭೀಕರ ಮರ್ಯಾದೆಗೇಡು ಹತ್ಯೆಯ ಘಟನೆ ನಡೆದಿದೆ. ಪ್ರಕರಣದಲ್ಲಿ ಹದಿಹರೆಯದ ಬಾಲಕನೊಬ್ಬ ತನ್ನ 19 ವರ್ಷದ ಸಹೋದರಿಯನ್ನು ತಾಯಿಯ ಸಹಾಯದಿಂದ ಶಿರಚ್ಛೇದನ ಮಾಡಿದ್ದಾನೆ. ಶಿರಚ್ಛೇದನ ಮಾಡಿದ್ದಲ್ಲದೆ, ನೆರೆಹೊರೆಯವರ ಮುಂದೆ ಆಕೆಯ ತಲೆಯನ್ನು ಪ್ರದರ್ಶಿಸಿ, ತುಂಡರಿಸಿದ ತಲೆಯೊಂದಿಗೆ ಬಾಲಕ ಮತ್ತು ಆತನ ತಾಯಿ ಸೆಲ್ಫಿ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಯುವತಿಯ ಪತಿ ಮನೆಯಲ್ಲಿದ್ದ ವೇಳೆ ಆಕೆಯ ತಾಯಿ ಮತ್ತು ಸಹೋದರ ಸೇರಿಕೊಂಡು ಈ ಕೊಲೆಯನ್ನು ಮಾಡಿದ್ದಾರೆ ಎಂದು ಎನ್‌‌ಡಿಟಿವಿ ವರದಿ ಮಾಡಿದೆ. ಬಾಲಕನೂ ತನ್ನ ಭಾವನ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ್ದನಾದರೂ, ಅವರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಬರಗೂರು ಮರ್ಯಾದೆಗೇಡು ಹತ್ಯೆ ಪ್ರಕರಣ; ದುಡಿಮೆ ಬಡತನ ಕೊಟ್ಟಿತು, ಜಾತಿ ಕೊಲೆ ಮಾಡಿಸಿತು

ಮೃತ ಯುವತಿಯು ಗರ್ಭಿಣಿ ಎಂದು ವರದಿಯಾಗಿದ್ದು, ತನ್ನ ಸಹೋದರಿಯನ್ನು ಕೊಂದ ನಂತರ ಬಾಲಕನು ತುಂಡರಿಸಿದ ತಲೆಯನ್ನು ವರಾಂಡಾಕ್ಕೆ ತೆಗೆದುಕೊಂಡು ಶರಣಾಗುವ ಮೊದಲು ಎಲ್ಲರಿಗೂ ಕಾಣುವಂತೆ ಗಾಳಿಯಲ್ಲಿ ಬೀಸಿದನು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಹತ್ಯೆಗೀಡಾದ ಯುವತಿಯನ್ನು ಕೀರ್ತಿ ಥೋರ್ ಎಂದು ಗುರುತಿಸಲಾಗಿದೆ. ಅವರು ಜೂನ್‌ನಲ್ಲಿ ಮನೆಬಿಟ್ಟು ತನ್ನ ಪತಿಯೊಂದಿಗೆ ವಾಸಿಸುತ್ತಿದ್ದಳು. ಆಕೆಯ ತಾಯಿ ಕಳೆದ ವಾರ ಆಕೆಯನ್ನು ಸಂಪರ್ಕಿಸಿ ಭೇಟಿಯಾಗುವುದಾಗಿ ಕೇಳಿಕೊಂಡಿದ್ದರು. ಹೀಗಾಗಿ ಭಾನುವಾರ ತನ್ನ ಮಗನೊಂದಿಗೆ ಮಗಳ ಮನೆಗೆ ತೆರಳಿದ್ದರು.

ಭಾನುವಾರದಂದು ಅವರು ಮಗಳ ಮನೆಗೆ ಬಂದಿದ್ದಾಗ ಪತಿ ಬೇರೆ ಕೋಣೆಯಲ್ಲಿದ್ದರು. ಅಂದು ಅವರು ಅನಾರೋಗ್ಯದಿಂದಾಗಿ ಅಸ್ವಸ್ಥರಾಗಿದ್ದರು. ತಾಯಿ ಮತ್ತು ಸಹೋದರನಿಗೆ ಟೀ ಮಾಡುತ್ತಿದ್ದಾಗ ಹಿಂಬದಿಯಿಂದ ಕೀರ್ತಿ ಮೇಲೆ ಹಲ್ಲೆ ನಡೆಸಲಾಗಿದೆ. ಆಕೆಯ ತಾಯಿ ಯುವತಿಯ ಕಾಲನ್ನು ಹಿಡಿದುಕೊಂಡಿದ್ದು, ಸಹೋದರನೂ ತನ್ನೊಂದಿಗೆ ತಂದಿದ್ದ ಕುಡುಗೋಲಿನಿಂದ ತಲೆಯನ್ನು ಕತ್ತರಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಷ್ಟೇ ಅಲ್ಲದೆ ಅಕ್ಕಪಕ್ಕದ ಮನೆಯವರು ನೋಡಲೆಂದು ತಲೆಯನ್ನು ಹೊರಕ್ಕೆ ಕೊಂಡೊಯ್ದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ’ಮರ್ಯಾದೆ’ ಮತ್ತು ಮನುಷ್ಯತ್ವದ ಕಂದರವನ್ನು ಶೋಧಿಸುವ ’ಪಾವ ಕದೈಗಳ್’

ಆರೋಪಿಗಳು ವಿರ್ಗೋನ್ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದು, ಇದೀಗ ಬಂಧನಕ್ಕೆ ಒಳಗಾಗಿದ್ದಾರೆ.

ರಾಜ್ಯದಲ್ಲೂ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಇಂತಹ ಹತ್ತೆನ್ನರಡು ಘಟನೆಗಳು ನಡೆದಿದ್ದು, ಜೂನ್‌ ತಿಂಗಳೊಂದರಲ್ಲಿಯೇ ನಾಲ್ಕು ಘಟನೆಗಳು ನಡೆದಿರುವುದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇಂತಹ ಘಟನೆಗಳು ಹೆಚ್ಚುತ್ತಿದ್ದರೂ ಸರ್ಕಾರಗಳು ಇಂತಹ ಕ್ರೌರ್ಯಗಳನ್ನು ತಡೆಗಟ್ಟುವತ್ತ ಗಮನ ಹರಿಸದೇ ಇರುವುದು ಬೇಸರದ ಸಂಗತಿ.

ಈ ದೇಶದ ಕ್ರೂರ, ಕರಾಳ ಜಾತಿವ್ಯವಸ್ಥೆಯ ಬಲೆಯಲ್ಲಿ ಸಿಕ್ಕಿಕೊಂಡ ಸಾವಿರಾರು ತಂದೆ ತಾಯಿಯರು ತಮ್ಮ ಮಗಳು ಅನ್ಯಜಾತೀಯ ಯುವಕನನ್ನು ಪ್ರೀತಿಸಿದರೆಂಬ ಏಕೈಕ ಕಾರಣಕ್ಕೆ ಮಗಳನ್ನೇ ಅಮಾನವೀಯವಾಗಿ ಕೊಂದುಹಾಕಿ ಜೈಲು ಸೇರಿದ್ದಾರೆ. ಮರ್ಯಾದೆ ಉಳಿಸಿಕೊಳ್ಳಲು ಕೊಲೆ ಎಂಬ ಅಹಂಕಾರ, ಗರ್ವಕ್ಕೆ ತಮ್ಮ ಮಗಳ ಜೀವನದೊಂದಿಗೆ ತಮ್ಮ ಜೀವನವನ್ನು ನರಕ ಮಾಡಿಕೊಂಡಿದ್ದಾರೆ. ಇದುವರೆಗೂ ತನ್ನ ಮಗಳನ್ನು ಕೊಂದ ಒಬ್ಬ ಅಪ್ಪ-ಅಮ್ಮನು ನೆಮ್ಮದಿಯಾಗಿಲ್ಲ ಎಂಬುದು ಸತ್ಯ. ಹಾಗಾಗಿ ಇದರ ವಿರುದ್ಧ ಜಾಗೃತಿ ಅತಿ ಹೆಚ್ಚು ಅಗತ್ಯವಾಗಿದೆ.

ಇದನ್ನೂ ಓದಿ:ಕೊಲೆಗಡುಕ ಜಾತಿ ಪ್ರತಿಷ್ಠೆಗೆ ತಂದೆಯ ಜೊತೆಗೆ ಸಮಾಜವೂ ಕಾರಣವಾಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....