Homeಮುಖಪುಟಬಾಯ್ಕಟ್ ಜ್ಯೊಮ್ಯಾಟೋ ಟ್ವಿಟ್ಟರ್ ಟ್ರೆಂಡ್ ಎಂಬುದೊಂದು ಮಾನಸಿಕ ರೋಗ - ಡಾ.ಶ್ರೀಧರ್

ಬಾಯ್ಕಟ್ ಜ್ಯೊಮ್ಯಾಟೋ ಟ್ವಿಟ್ಟರ್ ಟ್ರೆಂಡ್ ಎಂಬುದೊಂದು ಮಾನಸಿಕ ರೋಗ – ಡಾ.ಶ್ರೀಧರ್

- Advertisement -
- Advertisement -

ಇದು ಬಹಳ ಅತಿರೇಕದ ವರ್ತನೆಯಾಗಿದೆ. ಹಾಗೆ ನೋಡಿದರೆ ಬೇಸಾಯ ಮಾಡುವವರು ವಿವಿಧ ಜಾತಿ ಧರ್ಮಗಳಿಗೆ ಸೇರಿರುತ್ತಾರೆ. ಅವುಗಳನ್ನು ಮಾರುವವರು ಸಹ ಅಷ್ಟೇ. ಅವರ ಬಳಿ ನಾವು ಕೊಂಡುಕೊಳ್ಳುವುದಿಲ್ಲ ಎನ್ನಲಾಗುತ್ತದೆಯೇ? ಎಂದು ಮನೋರೋಗ ಶಾಸ್ತ್ರಜ್ಞರಾದ ಡಾ.ಶ್ರೀಧರ್ ರವರು ಪ್ರಶ್ನಿಸಿದ್ದಾರೆ.

ಡೆಲಿವರಿ ಬಾಯ್ ಹಿಂದೂವಲ್ಲದ ಕಾರಣಕ್ಕೆ ಜೊಮ್ಯಾಟೊ ಆರ್ಡರ್ ರದ್ದು ಮಾಡಿ ಟ್ವಿಟ್ಟರ್ ನಲ್ಲಿ ಪ್ರಕಟಿಸಿದ ವಿಷಯದ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು ಮಾಧ್ಯಮಗಳಲ್ಲಿ ವಿಶೇಷವಾಗಿ ತಂತ್ರಜ್ಞಾನದ ಸಾಮಾಜಿಕ ಜಾಲತಾಣಗಳು ವಿವೇಕ ಮತ್ತು ವಿವೇಚನೆಗಳನ್ನು ಹೆಚ್ಚಿಸುವ ಬದಲು ಭಾವುಕತನಕ್ಕೆ ತಕ್ಷಣದಲ್ಲಿ ಪ್ರತಿಕ್ರಿಯೆ ಕೊಡುವಂತದ್ದನ್ನು ಉತ್ತೇಜನ ನೀಡುತ್ತಿವೆ. ಹೀಗಾಗಿ ಬಾಯ್ಕಟ್ ಜೊಮ್ಯಾಟೋ ಟ್ವಿಟ್ಟರ್ ಟ್ರೆಂಡ್ ಆಗಿರುವ ಹಿನ್ನೆಲೆಯಲ್ಲಿ ನಾವು ನಂಬರ್ ಗಳನ್ನು ತೆಗೆದುಕೊಂಡರೆ ಅವರು ತಮ್ಮ ಮೊಬೈಲ್ ನಲ್ಲಿ ಗುಂಡಿ ಒತ್ತಿದ್ದಾರೆ ಅಷ್ಟೇ, ಅವರಿಗೆ ಸ್ವತಂತ್ರ ಚಿಂತನೆಗಳಿಲ್ಲ ಎಂದು ಟೀಕಿಸಿದ್ದಾರೆ ಎಂದಿದ್ದಾರೆ.

ಅವರ ಪ್ರತಿಕ್ರಿಯೆ ದೇಹದ ಬೆರಳುಗಳು ಆ ಕ್ಷಣದಲ್ಲಿ ಒತ್ತಿದ ಗುಂಡಿ ಅಷ್ಟೇ ಆಗಿದೆ. ಅದರಲ್ಲಿ ವಿವೇಚನೆ ಮಾಡುವ ಸಾಮರ್ಥ್ಯವಾಗಲಿ, ವಿಚಾರ ಮಾಡುವಂತಹ ಶಕ್ತಿಯ ಪ್ರದರ್ಶನವಾಗಲಿ ಇಲ್ಲದಿರುವುದರಿಂದ ಅವುಗಳನ್ನು ಗಂಭೀರವಾಗಿ ಪರಿಗಣಿಸಲು ಸಾಧ್ಯವಾಗುವುದಿಲ್ಲ. ಆ ಮಂದಿಯನ್ನು ಒಂದು ಕಡೆ ಕೂಡಿಸಿ, ಪ್ರಶ್ನೆ ಕೇಳಿದರೆ ಅವರಲ್ಲಿ ವಿಚಾರವಿರುವುದಿಲ್ಲ. ಕೊನೆಗೆ ನನಗೆ ಗೊತ್ತಿಲ್ಲದೇ ಗುಂಡಿ ಒತ್ತಿಬಿಟ್ಟೇ ಎಂದು ಹೇಳಬಹುದು. ಹಾಗಾಗಿ ಸಂಖ್ಯೆ ಮುಖ್ಯವಲ್ಲ ಎಂದರು.

ಆದರೆ ಆಹಾರ ನಿರಾಕರಿಸಿ ಆ ಒಬ್ಬ ವ್ಯಕ್ತಿ ಮಾಡಿದ್ದು ಕೋಟಿ ಜನಕ್ಕೆ ಮಾಡುವ ಅವಮಾನವಾಗಿದೆ. ಅವರು ಜನಗಳ ಮಧ್ಯೆ ಬದುಕಲು ಸಾಧ್ಯವಿಲ್ಲ ಎಂದರೆ ಬೇಕಾದರೆ ಹಿಮಾಲಯಕ್ಕೆ ಹೋಗಿ ಸೇರಿಕೊಳ್ಳಲ್ಲಿ. ಇದನ್ನು ಏಕೆ ಪ್ರತಿಭಟಿಸಬೇಕೆಂದರೆ ಇದೆಲ್ಲಾ ಮಾನಸಿಕ ಅಸ್ವಸ್ಥತೆಯ ಸಂಕೇತ ಆಗಿದೆ. ಇದನ್ನು ಪ್ಯಾರನೊಯ್ಡ್ ಎಂದು ಕರೆಯುತ್ತಾರೆ.

ಅಂದರೆ ತೀವ್ರ ಭಯ ಮತ್ತು ಆತಂಕದ ಕಾರಣಕ್ಕೆ ಅತಾರ್ಕಿಕವಾಗಿ ವಾದ ಮಾಡುವ ಅತಿ ಸಂದೇಹ ಮತ್ತು ಸಂಶಯಪಡುವ ಖಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿ ಎಂದರ್ಥ. ಬಾಯ್ಕಟ್ ಜೊಮ್ಯಾಟೋ ಎಂದು ಟ್ವೀಟ್ ಮಾಡಿರುವವರು ಅತೀ ತೀವ್ರ ಸಂದೇಹ ಮತ್ತು ಸಂಶಯದಿಂದ ಬಳಲುತ್ತಿದ್ದೀರಿ, ಆದಷ್ಟು ಬೇಗ ನೀವು ಮಾನಸಿಕ ತಜ್ಞರನ್ನು ಭೇಟಿ ಮಾಡಿದರೆ ಒಳ್ಳೆಯದು ಮನೋರೋಗ ಶಾಸ್ತ್ರಜ್ಞರಾದ ಡಾ.ಶ್ರೀಧರ್ ರವರು ಸಲಹೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರದಿಂದ ಬೆಂಬಲ, ಭರವಸೆ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ರಾಜ್ಯದಿಂದ ಕಾರ್ಯಸಾಧ್ಯತಾ ವರದಿ ಬಂದ ನಂತರ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರವು ನೀಡಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು...

ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಗ್ರಾಮದ ಪ್ರಬಲಜಾತಿ ಗುಂಪೊಂದು ಜಾತಿ ಆಧಾರಿತ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ದೂರ ನೀಡಿದರೂ ಕ್ರಮ ತಗೆದುಕೊಂಡಿದ್ದ ಎಂದು ಆರೋಪಿಸಿರುವ ಕುಟುಂಬ, ಪೊಲೀಸರು ನಿಷ್ಕ್ರಿಯತೆ...

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...