Homeಮುಖಪುಟಬಾಯ್ಕಟ್ ಜ್ಯೊಮ್ಯಾಟೋ ಟ್ವಿಟ್ಟರ್ ಟ್ರೆಂಡ್ ಎಂಬುದೊಂದು ಮಾನಸಿಕ ರೋಗ - ಡಾ.ಶ್ರೀಧರ್

ಬಾಯ್ಕಟ್ ಜ್ಯೊಮ್ಯಾಟೋ ಟ್ವಿಟ್ಟರ್ ಟ್ರೆಂಡ್ ಎಂಬುದೊಂದು ಮಾನಸಿಕ ರೋಗ – ಡಾ.ಶ್ರೀಧರ್

- Advertisement -
- Advertisement -

ಇದು ಬಹಳ ಅತಿರೇಕದ ವರ್ತನೆಯಾಗಿದೆ. ಹಾಗೆ ನೋಡಿದರೆ ಬೇಸಾಯ ಮಾಡುವವರು ವಿವಿಧ ಜಾತಿ ಧರ್ಮಗಳಿಗೆ ಸೇರಿರುತ್ತಾರೆ. ಅವುಗಳನ್ನು ಮಾರುವವರು ಸಹ ಅಷ್ಟೇ. ಅವರ ಬಳಿ ನಾವು ಕೊಂಡುಕೊಳ್ಳುವುದಿಲ್ಲ ಎನ್ನಲಾಗುತ್ತದೆಯೇ? ಎಂದು ಮನೋರೋಗ ಶಾಸ್ತ್ರಜ್ಞರಾದ ಡಾ.ಶ್ರೀಧರ್ ರವರು ಪ್ರಶ್ನಿಸಿದ್ದಾರೆ.

ಡೆಲಿವರಿ ಬಾಯ್ ಹಿಂದೂವಲ್ಲದ ಕಾರಣಕ್ಕೆ ಜೊಮ್ಯಾಟೊ ಆರ್ಡರ್ ರದ್ದು ಮಾಡಿ ಟ್ವಿಟ್ಟರ್ ನಲ್ಲಿ ಪ್ರಕಟಿಸಿದ ವಿಷಯದ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು ಮಾಧ್ಯಮಗಳಲ್ಲಿ ವಿಶೇಷವಾಗಿ ತಂತ್ರಜ್ಞಾನದ ಸಾಮಾಜಿಕ ಜಾಲತಾಣಗಳು ವಿವೇಕ ಮತ್ತು ವಿವೇಚನೆಗಳನ್ನು ಹೆಚ್ಚಿಸುವ ಬದಲು ಭಾವುಕತನಕ್ಕೆ ತಕ್ಷಣದಲ್ಲಿ ಪ್ರತಿಕ್ರಿಯೆ ಕೊಡುವಂತದ್ದನ್ನು ಉತ್ತೇಜನ ನೀಡುತ್ತಿವೆ. ಹೀಗಾಗಿ ಬಾಯ್ಕಟ್ ಜೊಮ್ಯಾಟೋ ಟ್ವಿಟ್ಟರ್ ಟ್ರೆಂಡ್ ಆಗಿರುವ ಹಿನ್ನೆಲೆಯಲ್ಲಿ ನಾವು ನಂಬರ್ ಗಳನ್ನು ತೆಗೆದುಕೊಂಡರೆ ಅವರು ತಮ್ಮ ಮೊಬೈಲ್ ನಲ್ಲಿ ಗುಂಡಿ ಒತ್ತಿದ್ದಾರೆ ಅಷ್ಟೇ, ಅವರಿಗೆ ಸ್ವತಂತ್ರ ಚಿಂತನೆಗಳಿಲ್ಲ ಎಂದು ಟೀಕಿಸಿದ್ದಾರೆ ಎಂದಿದ್ದಾರೆ.

ಅವರ ಪ್ರತಿಕ್ರಿಯೆ ದೇಹದ ಬೆರಳುಗಳು ಆ ಕ್ಷಣದಲ್ಲಿ ಒತ್ತಿದ ಗುಂಡಿ ಅಷ್ಟೇ ಆಗಿದೆ. ಅದರಲ್ಲಿ ವಿವೇಚನೆ ಮಾಡುವ ಸಾಮರ್ಥ್ಯವಾಗಲಿ, ವಿಚಾರ ಮಾಡುವಂತಹ ಶಕ್ತಿಯ ಪ್ರದರ್ಶನವಾಗಲಿ ಇಲ್ಲದಿರುವುದರಿಂದ ಅವುಗಳನ್ನು ಗಂಭೀರವಾಗಿ ಪರಿಗಣಿಸಲು ಸಾಧ್ಯವಾಗುವುದಿಲ್ಲ. ಆ ಮಂದಿಯನ್ನು ಒಂದು ಕಡೆ ಕೂಡಿಸಿ, ಪ್ರಶ್ನೆ ಕೇಳಿದರೆ ಅವರಲ್ಲಿ ವಿಚಾರವಿರುವುದಿಲ್ಲ. ಕೊನೆಗೆ ನನಗೆ ಗೊತ್ತಿಲ್ಲದೇ ಗುಂಡಿ ಒತ್ತಿಬಿಟ್ಟೇ ಎಂದು ಹೇಳಬಹುದು. ಹಾಗಾಗಿ ಸಂಖ್ಯೆ ಮುಖ್ಯವಲ್ಲ ಎಂದರು.

ಆದರೆ ಆಹಾರ ನಿರಾಕರಿಸಿ ಆ ಒಬ್ಬ ವ್ಯಕ್ತಿ ಮಾಡಿದ್ದು ಕೋಟಿ ಜನಕ್ಕೆ ಮಾಡುವ ಅವಮಾನವಾಗಿದೆ. ಅವರು ಜನಗಳ ಮಧ್ಯೆ ಬದುಕಲು ಸಾಧ್ಯವಿಲ್ಲ ಎಂದರೆ ಬೇಕಾದರೆ ಹಿಮಾಲಯಕ್ಕೆ ಹೋಗಿ ಸೇರಿಕೊಳ್ಳಲ್ಲಿ. ಇದನ್ನು ಏಕೆ ಪ್ರತಿಭಟಿಸಬೇಕೆಂದರೆ ಇದೆಲ್ಲಾ ಮಾನಸಿಕ ಅಸ್ವಸ್ಥತೆಯ ಸಂಕೇತ ಆಗಿದೆ. ಇದನ್ನು ಪ್ಯಾರನೊಯ್ಡ್ ಎಂದು ಕರೆಯುತ್ತಾರೆ.

ಅಂದರೆ ತೀವ್ರ ಭಯ ಮತ್ತು ಆತಂಕದ ಕಾರಣಕ್ಕೆ ಅತಾರ್ಕಿಕವಾಗಿ ವಾದ ಮಾಡುವ ಅತಿ ಸಂದೇಹ ಮತ್ತು ಸಂಶಯಪಡುವ ಖಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿ ಎಂದರ್ಥ. ಬಾಯ್ಕಟ್ ಜೊಮ್ಯಾಟೋ ಎಂದು ಟ್ವೀಟ್ ಮಾಡಿರುವವರು ಅತೀ ತೀವ್ರ ಸಂದೇಹ ಮತ್ತು ಸಂಶಯದಿಂದ ಬಳಲುತ್ತಿದ್ದೀರಿ, ಆದಷ್ಟು ಬೇಗ ನೀವು ಮಾನಸಿಕ ತಜ್ಞರನ್ನು ಭೇಟಿ ಮಾಡಿದರೆ ಒಳ್ಳೆಯದು ಮನೋರೋಗ ಶಾಸ್ತ್ರಜ್ಞರಾದ ಡಾ.ಶ್ರೀಧರ್ ರವರು ಸಲಹೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...