Homeಅಂತರಾಷ್ಟ್ರೀಯತೇಜಸ್ವಿ ಸೂರ್ಯನ ಕೋಮುವಾದಿ ಭಾಷಣ ಬೇಡ: ಜರ್ಮನ್ ಭಾರತೀಯರ ಒತ್ತಾಯ

ತೇಜಸ್ವಿ ಸೂರ್ಯನ ಕೋಮುವಾದಿ ಭಾಷಣ ಬೇಡ: ಜರ್ಮನ್ ಭಾರತೀಯರ ಒತ್ತಾಯ

ಇವರಿಗೆ ಅವಕಾಶ ನಿಡುವುದರಿಂದ ಜರ್ಮನ್ ನೆಲೆದಲ್ಲಿ ಮತ್ತಷ್ಟು ವಿಭಜನೆಯಾಗಿ ಬಲಪಂಥೀಯವಾದ ಹೆಚ್ಚಾಗುತ್ತದೆ...

- Advertisement -
- Advertisement -

ಅಕ್ಟೋಬರ್ 7 ರಂದು ನಡೆಯುವ ಜರ್ಮನ್-ಭಾರತೀಯ ಸ್ಟಾರ್ಟಪ್ ಸಮಾವೇಶದಲ್ಲಿ ಸಂಸದ ತೇಜಸ್ವಿ ಸೂರ್ಯ ಅತಿಥಿ ಭಾಷಣಕಾರರಾಗಿದ್ದು, ಇದನ್ನು ವಿರೋಧಿಸಿ ಜರ್ಮನಿಯಲ್ಲಿರುವ ಭಾರತೀಯರು ಹ್ಯಾಂಬರ್ಗ್‌ನಲ್ಲಿರುವ ಭಾರತದ ರಾಯಭಾರಿಗೆ ಪತ್ರಬರೆದಿದ್ದಾರೆ.

ಸ್ಟಾರ್ಟಪ್‌ಗಳನ್ನು ಉತ್ತೇಜಿಸಲು ಮತ್ತು ಹ್ಯಾಂಬರ್ಗ್-ಭಾರತದ ನಡುವೆ ಆರ್ಥಿಕ ಸಂಬಂಧಗಳನ್ನು ಬೆಂಬಲಿಸುವ ಸಲುವಾಗಿ, ಅಕ್ಟೋಬರ್ 7 ರಂದು ಗ್ಲೋಮನ್ ಕನ್ಸಲ್ಟಿಂಗ್ GmbH ಸಹಭಾಗಿತ್ವದಲ್ಲಿ ಭಾರತದ ರಾಯಭಾರ ಕಛೇರಿ, “ಇಂಡಿಯಾ ಸ್ಟಾರ್ಟಪ್ ಕಾನ್ಫರೆನ್ಸ್- 2020” ಕಾರ್ಯಕ್ರಮವನ್ನು ನಡೆಸುತ್ತಿದೆ. ಈ ಕಾರ್ಯಕ್ರಮದ ಸಂಘಟಕರಿಗೆ ಪತ್ರ ಬರೆದಿರುವ ಜರ್ಮನ್ ಭಾರತೀಯರು, ಭಾಷಣಕಾರರ ಪಟ್ಟಿಯಲ್ಲಿರುವ ಹೆಸರಿನ ಪೈಕಿ, ಆರ್‌ಎಸ್ಎಸ್‌ನಿಂದ ಪ್ರೇರೇಪಿತವಾಗಿ ಪ್ರಚೋದನಕಾರಿ ಮತ್ತು ಕೋಮುವಾದಿ ಭಾಷಣಗಳನ್ನು ಮಾಡುವ ಬೆಂಗಳೂರಿನ ಸಂಸದ ತೇಜಸ್ವಿ ಸೂರ್ಯ ಅವರನ್ನು ಉಲ್ಲೇಖಿಸಿ ಆಕ್ಷೇಪಿಸಿದ್ದಾರೆ ಎಂದು “ಟು ಸರ್ಕಲ್ಸ್‌.ನೆಟ್” ವರದಿ ಮಾಡಿದೆ.

ಇದನ್ನೂ ಓದಿ: ಬಹುಜನ ಭಾರತ: ಕೋಮುವಾದದ ಇರುಳ ಸೀಳುವ ಬೆಳಕು ಭಗತ್

ಪತ್ರದಲ್ಲಿ ತಮ್ಮ ಜಾತ್ಯಾತೀತತೆಯ ಅಭಿಪ್ರಾಯಗಳನ್ನು ಉಲ್ಲೇಖಿಸಿ, “ಇದು ನಾವು ರಚಿಸುತ್ತಿರುವ ಭಾರತ. ಇಲ್ಲಿಯವರೆಗೆ ನೀವು ಬಿಂಬಿಸಿರುವ ಟೊಳ್ಳು ಜಾತ್ಯಾತೀತತೆ ಇನ್ನುಮುಂದೆ ಕೆಲಸ ಮಾಡುವುದಿಲ್ಲ” ಎಂದು ತೇಜಸ್ವಿ ಸೂರ್ಯ ಅವರನ್ನು ಉಲ್ಲೇಖಿಸಿ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

ವಾಸ್ತವಿಕವಾಗಿ ಉಭಯ ದೇಶಗಳ ವ್ಯಾಪಾರ ಮತ್ತು ಹೂಡಿಕೆಗಳಲ್ಲಿ ಅಂತರಾಷ್ಟ್ರೀಯ ಸಹಕಾರವನ್ನು ಹೆಚ್ಚಿಸಲು ಸೃಷ್ಟಿಸಿರುವ ಈ ವೇದಿಕೆಯು ಪ್ಯಾನಲಿಸ್ಟ್‌ಗಳ ಅಧಿಕೃತ ರಿಜಿಸ್ಟರ್‌ ಸಂಸದರ ಹೆಸರನ್ನು ಹೊಂದಿದೆ. ಹಾಗಾಗಿ ಈ ಪತ್ರದಲ್ಲಿ ಭಾರತದ ರಾಯಭಾರಿಯ ನಿರ್ಧಾರವನ್ನು ಪ್ರಶ್ನಿಸಿರುವ ಜರ್ಮನ್ ಭಾರತೀಯರು, “ಭಾರತಿಯ ರಾಜಕಾರಣದ ಅತ್ಯಂತ ದೃವೀಕರಣ ಮನಸ್ಥತಿಯ ವ್ಯಕ್ತಿ, ಸರ್ವಧರ್ಮ ಸಮನ್ವಯ ಅಂತರ್ಗತವಾಗಿರುವ ಭಾರತದಿಂದ ಅತಿಥಿಯಾಗಲು ಸಾಧ್ಯವಿಲ್ಲ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಕೋಮುವಾದಿ ಪುಂಡರ ರಕ್ಷಿಸಲು ದ.ಕ.ಜಿಲ್ಲಾಧಿಕಾರಿಗಳ ವರ್ಗಾವಣೆ: ಸಿದ್ದರಾಮಯ್ಯ

ಮುಂದುವರಿದು, ” ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅಲ್ಪಸಂಖ್ಯಾತರನ್ನು ಅನಕ್ಷರಸ್ಥರು, ಪಂಕ್ಚರ್ ಹಾಕುವವರು ಎಂದು ಹೀಯಾಳಿಸಿ ಮಾತನಾಡಿದ್ದರು. ಈ ಬಿಜೆಪಿ ನಾಯಕ ಅಸಹ್ಯಕರ ಮತ್ತು ಅಮಾನವೀಯ ದೃಷ್ಟಿಕೋನಗಳನ್ನು ಹೊಂದಿದ್ದು, ಇಂತಹ ವಿವಾದಾತ್ಮಕ ವ್ಯಕ್ತಿಗೆ ಅಧಿಕೃತವಾಗಿ ವೇದಿಕೆಯೊಂದನ್ನು ನೀಡುತ್ತಿರುವುದು ಸರಿಯಲ್ಲ. ಇವರಿಗೆ ಅವಕಾಶ ನಿಡುವುದರಿಂದ ಜರ್ಮನ್ ನೆಲೆದಲ್ಲಿ ಮತ್ತಷ್ಟು ವಿಭಜನೆಯಾಗಿ ಬಲಪಂಥೀಯವಾದ ಹೆಚ್ಚಾಗುತ್ತದೆ” ಎಂದು ಉಲ್ಲೇಖಿಸಿದ್ದಾರೆ.

ಹಾಗಾಗಿ ಇದನ್ನು ವಿರೋಧಿಸಿ ಆನ್‌ಲೈನ್ ಅಭಿಯಾನವನ್ನು ಕೈಗೊಂಡಿರುವ ಇವರು ಸಮಾನಮನಸ್ಕರ ಬೆಂಬಲವನ್ನು ಕೊರಿದ್ದಾರೆ. ತೇಜಸ್ವಿ ಸೂರ್ಯ ಅವರ ಉಪಸ್ಥತಿಯನ್ನು ವಿರೋಧಿಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೋಂದಾತಯಿಸಿಕೊಳ್ಳಬಹುದು.

ಇದನ್ನೂ ಓದಿ: ಸಂಘರ್ಷವಿರುವುದು 99% ಭಾರತೀಯರು v/s 1% ಕೋಮುವಾದಿ ಗ್ಯಾಂಗ್ ನಡುವೆ – ದೇವನೂರ ಮಹಾದೇವ

ತೇಜಸ್ವಿ ಸೂರ್ಯ ಅವರನ್ನು ಪ್ಯಾನಲ್ ಸ್ಪೀಕರ್ ಆಗಿ ಬಹಿಷ್ಕರಿಸುವ ಈ ಅಭಿಯಾನಕ್ಕೆ ನೋಂದಾಯಿಸಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.

https://bit.ly/36v6nFz

“ಯುರೋಪಿನಲ್ಲಿ ಸುರಕ್ಷಿತ ವಾತಾವರಣವನ್ನು ಕಾಪಾಡುವ ಸಲುವಾಗಿ ಇಂತಹ ಧೃವೀಕರಣದ ಘಟನೆಗಳನ್ನು ಅನುಮತಿಸಲು ಸಾಧ್ಯವಿಲ್ಲ. ಈ ಸಂದರ್ಭದಲ್ಲಿ ಸಂಸದರನ್ನು ಅತಿಥಿ ಭಾಷಣಕಾರರಾಗಿ ಆಯ್ಕೆ ಮಾಡಿದ್ದಕ್ಕಾಗಿ ಭಾರತೀಯ ಸಂಜಾತ ಯುರೋಪಿಯನ್ ವಲಸೆಗಾರರು ಭಾರತದ ರಾಯಭಾರ ಕಛೇರಿಯೊಂದಿಗೆ ಅಕ್ಷೇಪಣೆ ವ್ಯಕ್ತಪಡಿಸುವ ಮೂಲಕ ಪ್ರತಿಕ್ರಿಯಿಸಬೇಕೆಂದು ನಾವು ಕೋರುತ್ತೇವೆ. ನಾವು ಈ ಪತ್ರವನ್ನು ಹ್ಯಾಂಬರ್ಗ್‌ನ ಭಾರತೀಯ ರಾಯಭಾರ ಕಛೇರಿ ಮತ್ತು ಮಾನವ ಹಕ್ಕುಗಳ ಗುಂಪುಗಳಿಗೆ ಕಳುಹಿಸುತ್ತೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೇಸೇ ಹಾಕಲು ಬರದ ವಕೀಲ ತೇಜಸ್ವಿ ಸೂರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...