Homeಅಂತರಾಷ್ಟ್ರೀಯತೇಜಸ್ವಿ ಸೂರ್ಯನ ಕೋಮುವಾದಿ ಭಾಷಣ ಬೇಡ: ಜರ್ಮನ್ ಭಾರತೀಯರ ಒತ್ತಾಯ

ತೇಜಸ್ವಿ ಸೂರ್ಯನ ಕೋಮುವಾದಿ ಭಾಷಣ ಬೇಡ: ಜರ್ಮನ್ ಭಾರತೀಯರ ಒತ್ತಾಯ

ಇವರಿಗೆ ಅವಕಾಶ ನಿಡುವುದರಿಂದ ಜರ್ಮನ್ ನೆಲೆದಲ್ಲಿ ಮತ್ತಷ್ಟು ವಿಭಜನೆಯಾಗಿ ಬಲಪಂಥೀಯವಾದ ಹೆಚ್ಚಾಗುತ್ತದೆ...

- Advertisement -
- Advertisement -

ಅಕ್ಟೋಬರ್ 7 ರಂದು ನಡೆಯುವ ಜರ್ಮನ್-ಭಾರತೀಯ ಸ್ಟಾರ್ಟಪ್ ಸಮಾವೇಶದಲ್ಲಿ ಸಂಸದ ತೇಜಸ್ವಿ ಸೂರ್ಯ ಅತಿಥಿ ಭಾಷಣಕಾರರಾಗಿದ್ದು, ಇದನ್ನು ವಿರೋಧಿಸಿ ಜರ್ಮನಿಯಲ್ಲಿರುವ ಭಾರತೀಯರು ಹ್ಯಾಂಬರ್ಗ್‌ನಲ್ಲಿರುವ ಭಾರತದ ರಾಯಭಾರಿಗೆ ಪತ್ರಬರೆದಿದ್ದಾರೆ.

ಸ್ಟಾರ್ಟಪ್‌ಗಳನ್ನು ಉತ್ತೇಜಿಸಲು ಮತ್ತು ಹ್ಯಾಂಬರ್ಗ್-ಭಾರತದ ನಡುವೆ ಆರ್ಥಿಕ ಸಂಬಂಧಗಳನ್ನು ಬೆಂಬಲಿಸುವ ಸಲುವಾಗಿ, ಅಕ್ಟೋಬರ್ 7 ರಂದು ಗ್ಲೋಮನ್ ಕನ್ಸಲ್ಟಿಂಗ್ GmbH ಸಹಭಾಗಿತ್ವದಲ್ಲಿ ಭಾರತದ ರಾಯಭಾರ ಕಛೇರಿ, “ಇಂಡಿಯಾ ಸ್ಟಾರ್ಟಪ್ ಕಾನ್ಫರೆನ್ಸ್- 2020” ಕಾರ್ಯಕ್ರಮವನ್ನು ನಡೆಸುತ್ತಿದೆ. ಈ ಕಾರ್ಯಕ್ರಮದ ಸಂಘಟಕರಿಗೆ ಪತ್ರ ಬರೆದಿರುವ ಜರ್ಮನ್ ಭಾರತೀಯರು, ಭಾಷಣಕಾರರ ಪಟ್ಟಿಯಲ್ಲಿರುವ ಹೆಸರಿನ ಪೈಕಿ, ಆರ್‌ಎಸ್ಎಸ್‌ನಿಂದ ಪ್ರೇರೇಪಿತವಾಗಿ ಪ್ರಚೋದನಕಾರಿ ಮತ್ತು ಕೋಮುವಾದಿ ಭಾಷಣಗಳನ್ನು ಮಾಡುವ ಬೆಂಗಳೂರಿನ ಸಂಸದ ತೇಜಸ್ವಿ ಸೂರ್ಯ ಅವರನ್ನು ಉಲ್ಲೇಖಿಸಿ ಆಕ್ಷೇಪಿಸಿದ್ದಾರೆ ಎಂದು “ಟು ಸರ್ಕಲ್ಸ್‌.ನೆಟ್” ವರದಿ ಮಾಡಿದೆ.

ಇದನ್ನೂ ಓದಿ: ಬಹುಜನ ಭಾರತ: ಕೋಮುವಾದದ ಇರುಳ ಸೀಳುವ ಬೆಳಕು ಭಗತ್

ಪತ್ರದಲ್ಲಿ ತಮ್ಮ ಜಾತ್ಯಾತೀತತೆಯ ಅಭಿಪ್ರಾಯಗಳನ್ನು ಉಲ್ಲೇಖಿಸಿ, “ಇದು ನಾವು ರಚಿಸುತ್ತಿರುವ ಭಾರತ. ಇಲ್ಲಿಯವರೆಗೆ ನೀವು ಬಿಂಬಿಸಿರುವ ಟೊಳ್ಳು ಜಾತ್ಯಾತೀತತೆ ಇನ್ನುಮುಂದೆ ಕೆಲಸ ಮಾಡುವುದಿಲ್ಲ” ಎಂದು ತೇಜಸ್ವಿ ಸೂರ್ಯ ಅವರನ್ನು ಉಲ್ಲೇಖಿಸಿ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

ವಾಸ್ತವಿಕವಾಗಿ ಉಭಯ ದೇಶಗಳ ವ್ಯಾಪಾರ ಮತ್ತು ಹೂಡಿಕೆಗಳಲ್ಲಿ ಅಂತರಾಷ್ಟ್ರೀಯ ಸಹಕಾರವನ್ನು ಹೆಚ್ಚಿಸಲು ಸೃಷ್ಟಿಸಿರುವ ಈ ವೇದಿಕೆಯು ಪ್ಯಾನಲಿಸ್ಟ್‌ಗಳ ಅಧಿಕೃತ ರಿಜಿಸ್ಟರ್‌ ಸಂಸದರ ಹೆಸರನ್ನು ಹೊಂದಿದೆ. ಹಾಗಾಗಿ ಈ ಪತ್ರದಲ್ಲಿ ಭಾರತದ ರಾಯಭಾರಿಯ ನಿರ್ಧಾರವನ್ನು ಪ್ರಶ್ನಿಸಿರುವ ಜರ್ಮನ್ ಭಾರತೀಯರು, “ಭಾರತಿಯ ರಾಜಕಾರಣದ ಅತ್ಯಂತ ದೃವೀಕರಣ ಮನಸ್ಥತಿಯ ವ್ಯಕ್ತಿ, ಸರ್ವಧರ್ಮ ಸಮನ್ವಯ ಅಂತರ್ಗತವಾಗಿರುವ ಭಾರತದಿಂದ ಅತಿಥಿಯಾಗಲು ಸಾಧ್ಯವಿಲ್ಲ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಕೋಮುವಾದಿ ಪುಂಡರ ರಕ್ಷಿಸಲು ದ.ಕ.ಜಿಲ್ಲಾಧಿಕಾರಿಗಳ ವರ್ಗಾವಣೆ: ಸಿದ್ದರಾಮಯ್ಯ

ಮುಂದುವರಿದು, ” ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅಲ್ಪಸಂಖ್ಯಾತರನ್ನು ಅನಕ್ಷರಸ್ಥರು, ಪಂಕ್ಚರ್ ಹಾಕುವವರು ಎಂದು ಹೀಯಾಳಿಸಿ ಮಾತನಾಡಿದ್ದರು. ಈ ಬಿಜೆಪಿ ನಾಯಕ ಅಸಹ್ಯಕರ ಮತ್ತು ಅಮಾನವೀಯ ದೃಷ್ಟಿಕೋನಗಳನ್ನು ಹೊಂದಿದ್ದು, ಇಂತಹ ವಿವಾದಾತ್ಮಕ ವ್ಯಕ್ತಿಗೆ ಅಧಿಕೃತವಾಗಿ ವೇದಿಕೆಯೊಂದನ್ನು ನೀಡುತ್ತಿರುವುದು ಸರಿಯಲ್ಲ. ಇವರಿಗೆ ಅವಕಾಶ ನಿಡುವುದರಿಂದ ಜರ್ಮನ್ ನೆಲೆದಲ್ಲಿ ಮತ್ತಷ್ಟು ವಿಭಜನೆಯಾಗಿ ಬಲಪಂಥೀಯವಾದ ಹೆಚ್ಚಾಗುತ್ತದೆ” ಎಂದು ಉಲ್ಲೇಖಿಸಿದ್ದಾರೆ.

ಹಾಗಾಗಿ ಇದನ್ನು ವಿರೋಧಿಸಿ ಆನ್‌ಲೈನ್ ಅಭಿಯಾನವನ್ನು ಕೈಗೊಂಡಿರುವ ಇವರು ಸಮಾನಮನಸ್ಕರ ಬೆಂಬಲವನ್ನು ಕೊರಿದ್ದಾರೆ. ತೇಜಸ್ವಿ ಸೂರ್ಯ ಅವರ ಉಪಸ್ಥತಿಯನ್ನು ವಿರೋಧಿಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೋಂದಾತಯಿಸಿಕೊಳ್ಳಬಹುದು.

ಇದನ್ನೂ ಓದಿ: ಸಂಘರ್ಷವಿರುವುದು 99% ಭಾರತೀಯರು v/s 1% ಕೋಮುವಾದಿ ಗ್ಯಾಂಗ್ ನಡುವೆ – ದೇವನೂರ ಮಹಾದೇವ

ತೇಜಸ್ವಿ ಸೂರ್ಯ ಅವರನ್ನು ಪ್ಯಾನಲ್ ಸ್ಪೀಕರ್ ಆಗಿ ಬಹಿಷ್ಕರಿಸುವ ಈ ಅಭಿಯಾನಕ್ಕೆ ನೋಂದಾಯಿಸಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.

https://bit.ly/36v6nFz

“ಯುರೋಪಿನಲ್ಲಿ ಸುರಕ್ಷಿತ ವಾತಾವರಣವನ್ನು ಕಾಪಾಡುವ ಸಲುವಾಗಿ ಇಂತಹ ಧೃವೀಕರಣದ ಘಟನೆಗಳನ್ನು ಅನುಮತಿಸಲು ಸಾಧ್ಯವಿಲ್ಲ. ಈ ಸಂದರ್ಭದಲ್ಲಿ ಸಂಸದರನ್ನು ಅತಿಥಿ ಭಾಷಣಕಾರರಾಗಿ ಆಯ್ಕೆ ಮಾಡಿದ್ದಕ್ಕಾಗಿ ಭಾರತೀಯ ಸಂಜಾತ ಯುರೋಪಿಯನ್ ವಲಸೆಗಾರರು ಭಾರತದ ರಾಯಭಾರ ಕಛೇರಿಯೊಂದಿಗೆ ಅಕ್ಷೇಪಣೆ ವ್ಯಕ್ತಪಡಿಸುವ ಮೂಲಕ ಪ್ರತಿಕ್ರಿಯಿಸಬೇಕೆಂದು ನಾವು ಕೋರುತ್ತೇವೆ. ನಾವು ಈ ಪತ್ರವನ್ನು ಹ್ಯಾಂಬರ್ಗ್‌ನ ಭಾರತೀಯ ರಾಯಭಾರ ಕಛೇರಿ ಮತ್ತು ಮಾನವ ಹಕ್ಕುಗಳ ಗುಂಪುಗಳಿಗೆ ಕಳುಹಿಸುತ್ತೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೇಸೇ ಹಾಕಲು ಬರದ ವಕೀಲ ತೇಜಸ್ವಿ ಸೂರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...