Homeಅಂತರಾಷ್ಟ್ರೀಯತೇಜಸ್ವಿ ಸೂರ್ಯನ ಕೋಮುವಾದಿ ಭಾಷಣ ಬೇಡ: ಜರ್ಮನ್ ಭಾರತೀಯರ ಒತ್ತಾಯ

ತೇಜಸ್ವಿ ಸೂರ್ಯನ ಕೋಮುವಾದಿ ಭಾಷಣ ಬೇಡ: ಜರ್ಮನ್ ಭಾರತೀಯರ ಒತ್ತಾಯ

ಇವರಿಗೆ ಅವಕಾಶ ನಿಡುವುದರಿಂದ ಜರ್ಮನ್ ನೆಲೆದಲ್ಲಿ ಮತ್ತಷ್ಟು ವಿಭಜನೆಯಾಗಿ ಬಲಪಂಥೀಯವಾದ ಹೆಚ್ಚಾಗುತ್ತದೆ...

- Advertisement -
- Advertisement -

ಅಕ್ಟೋಬರ್ 7 ರಂದು ನಡೆಯುವ ಜರ್ಮನ್-ಭಾರತೀಯ ಸ್ಟಾರ್ಟಪ್ ಸಮಾವೇಶದಲ್ಲಿ ಸಂಸದ ತೇಜಸ್ವಿ ಸೂರ್ಯ ಅತಿಥಿ ಭಾಷಣಕಾರರಾಗಿದ್ದು, ಇದನ್ನು ವಿರೋಧಿಸಿ ಜರ್ಮನಿಯಲ್ಲಿರುವ ಭಾರತೀಯರು ಹ್ಯಾಂಬರ್ಗ್‌ನಲ್ಲಿರುವ ಭಾರತದ ರಾಯಭಾರಿಗೆ ಪತ್ರಬರೆದಿದ್ದಾರೆ.

ಸ್ಟಾರ್ಟಪ್‌ಗಳನ್ನು ಉತ್ತೇಜಿಸಲು ಮತ್ತು ಹ್ಯಾಂಬರ್ಗ್-ಭಾರತದ ನಡುವೆ ಆರ್ಥಿಕ ಸಂಬಂಧಗಳನ್ನು ಬೆಂಬಲಿಸುವ ಸಲುವಾಗಿ, ಅಕ್ಟೋಬರ್ 7 ರಂದು ಗ್ಲೋಮನ್ ಕನ್ಸಲ್ಟಿಂಗ್ GmbH ಸಹಭಾಗಿತ್ವದಲ್ಲಿ ಭಾರತದ ರಾಯಭಾರ ಕಛೇರಿ, “ಇಂಡಿಯಾ ಸ್ಟಾರ್ಟಪ್ ಕಾನ್ಫರೆನ್ಸ್- 2020” ಕಾರ್ಯಕ್ರಮವನ್ನು ನಡೆಸುತ್ತಿದೆ. ಈ ಕಾರ್ಯಕ್ರಮದ ಸಂಘಟಕರಿಗೆ ಪತ್ರ ಬರೆದಿರುವ ಜರ್ಮನ್ ಭಾರತೀಯರು, ಭಾಷಣಕಾರರ ಪಟ್ಟಿಯಲ್ಲಿರುವ ಹೆಸರಿನ ಪೈಕಿ, ಆರ್‌ಎಸ್ಎಸ್‌ನಿಂದ ಪ್ರೇರೇಪಿತವಾಗಿ ಪ್ರಚೋದನಕಾರಿ ಮತ್ತು ಕೋಮುವಾದಿ ಭಾಷಣಗಳನ್ನು ಮಾಡುವ ಬೆಂಗಳೂರಿನ ಸಂಸದ ತೇಜಸ್ವಿ ಸೂರ್ಯ ಅವರನ್ನು ಉಲ್ಲೇಖಿಸಿ ಆಕ್ಷೇಪಿಸಿದ್ದಾರೆ ಎಂದು “ಟು ಸರ್ಕಲ್ಸ್‌.ನೆಟ್” ವರದಿ ಮಾಡಿದೆ.

ಇದನ್ನೂ ಓದಿ: ಬಹುಜನ ಭಾರತ: ಕೋಮುವಾದದ ಇರುಳ ಸೀಳುವ ಬೆಳಕು ಭಗತ್

ಪತ್ರದಲ್ಲಿ ತಮ್ಮ ಜಾತ್ಯಾತೀತತೆಯ ಅಭಿಪ್ರಾಯಗಳನ್ನು ಉಲ್ಲೇಖಿಸಿ, “ಇದು ನಾವು ರಚಿಸುತ್ತಿರುವ ಭಾರತ. ಇಲ್ಲಿಯವರೆಗೆ ನೀವು ಬಿಂಬಿಸಿರುವ ಟೊಳ್ಳು ಜಾತ್ಯಾತೀತತೆ ಇನ್ನುಮುಂದೆ ಕೆಲಸ ಮಾಡುವುದಿಲ್ಲ” ಎಂದು ತೇಜಸ್ವಿ ಸೂರ್ಯ ಅವರನ್ನು ಉಲ್ಲೇಖಿಸಿ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

ವಾಸ್ತವಿಕವಾಗಿ ಉಭಯ ದೇಶಗಳ ವ್ಯಾಪಾರ ಮತ್ತು ಹೂಡಿಕೆಗಳಲ್ಲಿ ಅಂತರಾಷ್ಟ್ರೀಯ ಸಹಕಾರವನ್ನು ಹೆಚ್ಚಿಸಲು ಸೃಷ್ಟಿಸಿರುವ ಈ ವೇದಿಕೆಯು ಪ್ಯಾನಲಿಸ್ಟ್‌ಗಳ ಅಧಿಕೃತ ರಿಜಿಸ್ಟರ್‌ ಸಂಸದರ ಹೆಸರನ್ನು ಹೊಂದಿದೆ. ಹಾಗಾಗಿ ಈ ಪತ್ರದಲ್ಲಿ ಭಾರತದ ರಾಯಭಾರಿಯ ನಿರ್ಧಾರವನ್ನು ಪ್ರಶ್ನಿಸಿರುವ ಜರ್ಮನ್ ಭಾರತೀಯರು, “ಭಾರತಿಯ ರಾಜಕಾರಣದ ಅತ್ಯಂತ ದೃವೀಕರಣ ಮನಸ್ಥತಿಯ ವ್ಯಕ್ತಿ, ಸರ್ವಧರ್ಮ ಸಮನ್ವಯ ಅಂತರ್ಗತವಾಗಿರುವ ಭಾರತದಿಂದ ಅತಿಥಿಯಾಗಲು ಸಾಧ್ಯವಿಲ್ಲ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಕೋಮುವಾದಿ ಪುಂಡರ ರಕ್ಷಿಸಲು ದ.ಕ.ಜಿಲ್ಲಾಧಿಕಾರಿಗಳ ವರ್ಗಾವಣೆ: ಸಿದ್ದರಾಮಯ್ಯ

ಮುಂದುವರಿದು, ” ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅಲ್ಪಸಂಖ್ಯಾತರನ್ನು ಅನಕ್ಷರಸ್ಥರು, ಪಂಕ್ಚರ್ ಹಾಕುವವರು ಎಂದು ಹೀಯಾಳಿಸಿ ಮಾತನಾಡಿದ್ದರು. ಈ ಬಿಜೆಪಿ ನಾಯಕ ಅಸಹ್ಯಕರ ಮತ್ತು ಅಮಾನವೀಯ ದೃಷ್ಟಿಕೋನಗಳನ್ನು ಹೊಂದಿದ್ದು, ಇಂತಹ ವಿವಾದಾತ್ಮಕ ವ್ಯಕ್ತಿಗೆ ಅಧಿಕೃತವಾಗಿ ವೇದಿಕೆಯೊಂದನ್ನು ನೀಡುತ್ತಿರುವುದು ಸರಿಯಲ್ಲ. ಇವರಿಗೆ ಅವಕಾಶ ನಿಡುವುದರಿಂದ ಜರ್ಮನ್ ನೆಲೆದಲ್ಲಿ ಮತ್ತಷ್ಟು ವಿಭಜನೆಯಾಗಿ ಬಲಪಂಥೀಯವಾದ ಹೆಚ್ಚಾಗುತ್ತದೆ” ಎಂದು ಉಲ್ಲೇಖಿಸಿದ್ದಾರೆ.

ಹಾಗಾಗಿ ಇದನ್ನು ವಿರೋಧಿಸಿ ಆನ್‌ಲೈನ್ ಅಭಿಯಾನವನ್ನು ಕೈಗೊಂಡಿರುವ ಇವರು ಸಮಾನಮನಸ್ಕರ ಬೆಂಬಲವನ್ನು ಕೊರಿದ್ದಾರೆ. ತೇಜಸ್ವಿ ಸೂರ್ಯ ಅವರ ಉಪಸ್ಥತಿಯನ್ನು ವಿರೋಧಿಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೋಂದಾತಯಿಸಿಕೊಳ್ಳಬಹುದು.

ಇದನ್ನೂ ಓದಿ: ಸಂಘರ್ಷವಿರುವುದು 99% ಭಾರತೀಯರು v/s 1% ಕೋಮುವಾದಿ ಗ್ಯಾಂಗ್ ನಡುವೆ – ದೇವನೂರ ಮಹಾದೇವ

ತೇಜಸ್ವಿ ಸೂರ್ಯ ಅವರನ್ನು ಪ್ಯಾನಲ್ ಸ್ಪೀಕರ್ ಆಗಿ ಬಹಿಷ್ಕರಿಸುವ ಈ ಅಭಿಯಾನಕ್ಕೆ ನೋಂದಾಯಿಸಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.

https://bit.ly/36v6nFz

“ಯುರೋಪಿನಲ್ಲಿ ಸುರಕ್ಷಿತ ವಾತಾವರಣವನ್ನು ಕಾಪಾಡುವ ಸಲುವಾಗಿ ಇಂತಹ ಧೃವೀಕರಣದ ಘಟನೆಗಳನ್ನು ಅನುಮತಿಸಲು ಸಾಧ್ಯವಿಲ್ಲ. ಈ ಸಂದರ್ಭದಲ್ಲಿ ಸಂಸದರನ್ನು ಅತಿಥಿ ಭಾಷಣಕಾರರಾಗಿ ಆಯ್ಕೆ ಮಾಡಿದ್ದಕ್ಕಾಗಿ ಭಾರತೀಯ ಸಂಜಾತ ಯುರೋಪಿಯನ್ ವಲಸೆಗಾರರು ಭಾರತದ ರಾಯಭಾರ ಕಛೇರಿಯೊಂದಿಗೆ ಅಕ್ಷೇಪಣೆ ವ್ಯಕ್ತಪಡಿಸುವ ಮೂಲಕ ಪ್ರತಿಕ್ರಿಯಿಸಬೇಕೆಂದು ನಾವು ಕೋರುತ್ತೇವೆ. ನಾವು ಈ ಪತ್ರವನ್ನು ಹ್ಯಾಂಬರ್ಗ್‌ನ ಭಾರತೀಯ ರಾಯಭಾರ ಕಛೇರಿ ಮತ್ತು ಮಾನವ ಹಕ್ಕುಗಳ ಗುಂಪುಗಳಿಗೆ ಕಳುಹಿಸುತ್ತೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೇಸೇ ಹಾಕಲು ಬರದ ವಕೀಲ ತೇಜಸ್ವಿ ಸೂರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...