Homeಅಂತರಾಷ್ಟ್ರೀಯತೇಜಸ್ವಿ ಸೂರ್ಯನ ಕೋಮುವಾದಿ ಭಾಷಣ ಬೇಡ: ಜರ್ಮನ್ ಭಾರತೀಯರ ಒತ್ತಾಯ

ತೇಜಸ್ವಿ ಸೂರ್ಯನ ಕೋಮುವಾದಿ ಭಾಷಣ ಬೇಡ: ಜರ್ಮನ್ ಭಾರತೀಯರ ಒತ್ತಾಯ

ಇವರಿಗೆ ಅವಕಾಶ ನಿಡುವುದರಿಂದ ಜರ್ಮನ್ ನೆಲೆದಲ್ಲಿ ಮತ್ತಷ್ಟು ವಿಭಜನೆಯಾಗಿ ಬಲಪಂಥೀಯವಾದ ಹೆಚ್ಚಾಗುತ್ತದೆ...

- Advertisement -
- Advertisement -

ಅಕ್ಟೋಬರ್ 7 ರಂದು ನಡೆಯುವ ಜರ್ಮನ್-ಭಾರತೀಯ ಸ್ಟಾರ್ಟಪ್ ಸಮಾವೇಶದಲ್ಲಿ ಸಂಸದ ತೇಜಸ್ವಿ ಸೂರ್ಯ ಅತಿಥಿ ಭಾಷಣಕಾರರಾಗಿದ್ದು, ಇದನ್ನು ವಿರೋಧಿಸಿ ಜರ್ಮನಿಯಲ್ಲಿರುವ ಭಾರತೀಯರು ಹ್ಯಾಂಬರ್ಗ್‌ನಲ್ಲಿರುವ ಭಾರತದ ರಾಯಭಾರಿಗೆ ಪತ್ರಬರೆದಿದ್ದಾರೆ.

ಸ್ಟಾರ್ಟಪ್‌ಗಳನ್ನು ಉತ್ತೇಜಿಸಲು ಮತ್ತು ಹ್ಯಾಂಬರ್ಗ್-ಭಾರತದ ನಡುವೆ ಆರ್ಥಿಕ ಸಂಬಂಧಗಳನ್ನು ಬೆಂಬಲಿಸುವ ಸಲುವಾಗಿ, ಅಕ್ಟೋಬರ್ 7 ರಂದು ಗ್ಲೋಮನ್ ಕನ್ಸಲ್ಟಿಂಗ್ GmbH ಸಹಭಾಗಿತ್ವದಲ್ಲಿ ಭಾರತದ ರಾಯಭಾರ ಕಛೇರಿ, “ಇಂಡಿಯಾ ಸ್ಟಾರ್ಟಪ್ ಕಾನ್ಫರೆನ್ಸ್- 2020” ಕಾರ್ಯಕ್ರಮವನ್ನು ನಡೆಸುತ್ತಿದೆ. ಈ ಕಾರ್ಯಕ್ರಮದ ಸಂಘಟಕರಿಗೆ ಪತ್ರ ಬರೆದಿರುವ ಜರ್ಮನ್ ಭಾರತೀಯರು, ಭಾಷಣಕಾರರ ಪಟ್ಟಿಯಲ್ಲಿರುವ ಹೆಸರಿನ ಪೈಕಿ, ಆರ್‌ಎಸ್ಎಸ್‌ನಿಂದ ಪ್ರೇರೇಪಿತವಾಗಿ ಪ್ರಚೋದನಕಾರಿ ಮತ್ತು ಕೋಮುವಾದಿ ಭಾಷಣಗಳನ್ನು ಮಾಡುವ ಬೆಂಗಳೂರಿನ ಸಂಸದ ತೇಜಸ್ವಿ ಸೂರ್ಯ ಅವರನ್ನು ಉಲ್ಲೇಖಿಸಿ ಆಕ್ಷೇಪಿಸಿದ್ದಾರೆ ಎಂದು “ಟು ಸರ್ಕಲ್ಸ್‌.ನೆಟ್” ವರದಿ ಮಾಡಿದೆ.

ಇದನ್ನೂ ಓದಿ: ಬಹುಜನ ಭಾರತ: ಕೋಮುವಾದದ ಇರುಳ ಸೀಳುವ ಬೆಳಕು ಭಗತ್

ಪತ್ರದಲ್ಲಿ ತಮ್ಮ ಜಾತ್ಯಾತೀತತೆಯ ಅಭಿಪ್ರಾಯಗಳನ್ನು ಉಲ್ಲೇಖಿಸಿ, “ಇದು ನಾವು ರಚಿಸುತ್ತಿರುವ ಭಾರತ. ಇಲ್ಲಿಯವರೆಗೆ ನೀವು ಬಿಂಬಿಸಿರುವ ಟೊಳ್ಳು ಜಾತ್ಯಾತೀತತೆ ಇನ್ನುಮುಂದೆ ಕೆಲಸ ಮಾಡುವುದಿಲ್ಲ” ಎಂದು ತೇಜಸ್ವಿ ಸೂರ್ಯ ಅವರನ್ನು ಉಲ್ಲೇಖಿಸಿ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

ವಾಸ್ತವಿಕವಾಗಿ ಉಭಯ ದೇಶಗಳ ವ್ಯಾಪಾರ ಮತ್ತು ಹೂಡಿಕೆಗಳಲ್ಲಿ ಅಂತರಾಷ್ಟ್ರೀಯ ಸಹಕಾರವನ್ನು ಹೆಚ್ಚಿಸಲು ಸೃಷ್ಟಿಸಿರುವ ಈ ವೇದಿಕೆಯು ಪ್ಯಾನಲಿಸ್ಟ್‌ಗಳ ಅಧಿಕೃತ ರಿಜಿಸ್ಟರ್‌ ಸಂಸದರ ಹೆಸರನ್ನು ಹೊಂದಿದೆ. ಹಾಗಾಗಿ ಈ ಪತ್ರದಲ್ಲಿ ಭಾರತದ ರಾಯಭಾರಿಯ ನಿರ್ಧಾರವನ್ನು ಪ್ರಶ್ನಿಸಿರುವ ಜರ್ಮನ್ ಭಾರತೀಯರು, “ಭಾರತಿಯ ರಾಜಕಾರಣದ ಅತ್ಯಂತ ದೃವೀಕರಣ ಮನಸ್ಥತಿಯ ವ್ಯಕ್ತಿ, ಸರ್ವಧರ್ಮ ಸಮನ್ವಯ ಅಂತರ್ಗತವಾಗಿರುವ ಭಾರತದಿಂದ ಅತಿಥಿಯಾಗಲು ಸಾಧ್ಯವಿಲ್ಲ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಕೋಮುವಾದಿ ಪುಂಡರ ರಕ್ಷಿಸಲು ದ.ಕ.ಜಿಲ್ಲಾಧಿಕಾರಿಗಳ ವರ್ಗಾವಣೆ: ಸಿದ್ದರಾಮಯ್ಯ

ಮುಂದುವರಿದು, ” ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅಲ್ಪಸಂಖ್ಯಾತರನ್ನು ಅನಕ್ಷರಸ್ಥರು, ಪಂಕ್ಚರ್ ಹಾಕುವವರು ಎಂದು ಹೀಯಾಳಿಸಿ ಮಾತನಾಡಿದ್ದರು. ಈ ಬಿಜೆಪಿ ನಾಯಕ ಅಸಹ್ಯಕರ ಮತ್ತು ಅಮಾನವೀಯ ದೃಷ್ಟಿಕೋನಗಳನ್ನು ಹೊಂದಿದ್ದು, ಇಂತಹ ವಿವಾದಾತ್ಮಕ ವ್ಯಕ್ತಿಗೆ ಅಧಿಕೃತವಾಗಿ ವೇದಿಕೆಯೊಂದನ್ನು ನೀಡುತ್ತಿರುವುದು ಸರಿಯಲ್ಲ. ಇವರಿಗೆ ಅವಕಾಶ ನಿಡುವುದರಿಂದ ಜರ್ಮನ್ ನೆಲೆದಲ್ಲಿ ಮತ್ತಷ್ಟು ವಿಭಜನೆಯಾಗಿ ಬಲಪಂಥೀಯವಾದ ಹೆಚ್ಚಾಗುತ್ತದೆ” ಎಂದು ಉಲ್ಲೇಖಿಸಿದ್ದಾರೆ.

ಹಾಗಾಗಿ ಇದನ್ನು ವಿರೋಧಿಸಿ ಆನ್‌ಲೈನ್ ಅಭಿಯಾನವನ್ನು ಕೈಗೊಂಡಿರುವ ಇವರು ಸಮಾನಮನಸ್ಕರ ಬೆಂಬಲವನ್ನು ಕೊರಿದ್ದಾರೆ. ತೇಜಸ್ವಿ ಸೂರ್ಯ ಅವರ ಉಪಸ್ಥತಿಯನ್ನು ವಿರೋಧಿಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೋಂದಾತಯಿಸಿಕೊಳ್ಳಬಹುದು.

ಇದನ್ನೂ ಓದಿ: ಸಂಘರ್ಷವಿರುವುದು 99% ಭಾರತೀಯರು v/s 1% ಕೋಮುವಾದಿ ಗ್ಯಾಂಗ್ ನಡುವೆ – ದೇವನೂರ ಮಹಾದೇವ

ತೇಜಸ್ವಿ ಸೂರ್ಯ ಅವರನ್ನು ಪ್ಯಾನಲ್ ಸ್ಪೀಕರ್ ಆಗಿ ಬಹಿಷ್ಕರಿಸುವ ಈ ಅಭಿಯಾನಕ್ಕೆ ನೋಂದಾಯಿಸಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.

https://bit.ly/36v6nFz

“ಯುರೋಪಿನಲ್ಲಿ ಸುರಕ್ಷಿತ ವಾತಾವರಣವನ್ನು ಕಾಪಾಡುವ ಸಲುವಾಗಿ ಇಂತಹ ಧೃವೀಕರಣದ ಘಟನೆಗಳನ್ನು ಅನುಮತಿಸಲು ಸಾಧ್ಯವಿಲ್ಲ. ಈ ಸಂದರ್ಭದಲ್ಲಿ ಸಂಸದರನ್ನು ಅತಿಥಿ ಭಾಷಣಕಾರರಾಗಿ ಆಯ್ಕೆ ಮಾಡಿದ್ದಕ್ಕಾಗಿ ಭಾರತೀಯ ಸಂಜಾತ ಯುರೋಪಿಯನ್ ವಲಸೆಗಾರರು ಭಾರತದ ರಾಯಭಾರ ಕಛೇರಿಯೊಂದಿಗೆ ಅಕ್ಷೇಪಣೆ ವ್ಯಕ್ತಪಡಿಸುವ ಮೂಲಕ ಪ್ರತಿಕ್ರಿಯಿಸಬೇಕೆಂದು ನಾವು ಕೋರುತ್ತೇವೆ. ನಾವು ಈ ಪತ್ರವನ್ನು ಹ್ಯಾಂಬರ್ಗ್‌ನ ಭಾರತೀಯ ರಾಯಭಾರ ಕಛೇರಿ ಮತ್ತು ಮಾನವ ಹಕ್ಕುಗಳ ಗುಂಪುಗಳಿಗೆ ಕಳುಹಿಸುತ್ತೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೇಸೇ ಹಾಕಲು ಬರದ ವಕೀಲ ತೇಜಸ್ವಿ ಸೂರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...