Homeಮುಖಪುಟಬಾಯ್ಕಾಟ್ ಅಭಿಯಾನ: ಏರ್‌ಟೆಲ್, ವೊಡಾಫೋನ್ ವಿರುದ್ಧ ದೂರು ನೀಡಿದ ಜಿಯೋ!

ಬಾಯ್ಕಾಟ್ ಅಭಿಯಾನ: ಏರ್‌ಟೆಲ್, ವೊಡಾಫೋನ್ ವಿರುದ್ಧ ದೂರು ನೀಡಿದ ಜಿಯೋ!

- Advertisement -
- Advertisement -

ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ರೈತರು ಜಿಯೋ ಸಿಮ್‌ ಅನ್ನು ತಿರಸ್ಕರಿಸಿರುವುದರ ಹಿಂದೆ ಏರ್‌ಟೆಲ್ ಮತ್ತು ವೊಡಾಫೋನ್ ಕಂಪನಿಗಳ ಕೈವಾಡವಿದೆ ಎಂದು ಆರೋಪಿಸಿರುವ ಅಂಬಾನಿಯ ಜಿಯೋ ಕಂಪನಿ, ಈ ಎರಡು ನೆಟ್‌ವರ್ಕ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಟೆಲಿಕಾಂ ರೆಗ್ಯುಲೇಟರ್ ಅಥಾರಿಟಿ ಆಫ್ ಇಂಡಿಯಾ (TRAI)ಗೆ ಡಿಸಂಬರ್ 10 ರಂದು ದೂರು ನೀಡಿದೆ.

ಜಿಯೋ ಕಂಪನಿ ಸೆಪ್ಟೆಂಬರ್ 28 ರಂದು ಬರೆದಿದ್ದ ಪತ್ರವನ್ನು ಉಲ್ಲೇಖಿಸಿ ಮುಂದುವರೆಸುತ್ತಾ, “ರೈತರ ಪ್ರತಿಭಟನೆಯ ಉಪಯೋಗ ಪಡೆದುಕೊಳ್ಳುತ್ತಿರುವ ಏರ್‌ಟೆಲ್ ಮತ್ತು ವೊಡಾಫೋನ್ ಕಂಪನಿಗಳು, ಅನೈತಿಕ ಮತ್ತು ಸ್ಪರ್ಧಾತ್ಮಕ ವಿರೋಧಿ ರೀತಿಯಲ್ಲಿ ಮೊಬೈಲ್ ಸಂಖ್ಯೆ ಪೋರ್ಟಬಿಲಿಟಿ (MNP) ಅಭಿಯಾನವನ್ನು ನಡೆಸುತ್ತಿದೆ ಎಂದು ಆರೋಪಿಸಿದೆ.

ಇದನ್ನೂ ಓದಿ: ಭಾರತದ ಆರ್ಥಿಕತೆ ಕುಸಿಯುತ್ತಿದ್ದರೂ ಅದಾನಿ ಕಂಪನಿ ಮಾತ್ರ ಬೆಳೆಯುತ್ತಿರುವುದು ಹೇಗೆ?

“ಜಿಯೋ ಮೊಬೈಲ್ ಸಂಖ್ಯೆಗಳನ್ನು ತಮ್ಮ ನೆಟ್‌ವರ್ಕ್‌ಗಳಿಗೆ ಸ್ಥಳಾಂತರಿಸುವುದರಿಂದ ರೈತರ ಪ್ರತಿಭಟನೆಗೆ ಸಹಕಾರಿಯಾಗಲಿದೆ ಎಂದು ಹೇಳಿಕೆಗಳನ್ನು ನೀಡುವ ಮೂಲಕ ಈ ನೆಟ್‌ವರ್ಕ್‌ಗಳು ಸಾರ್ವಜನಿಕರನ್ನು ಪ್ರಚೋದಿಸುತ್ತಿದೆ” ಎಂದು ಡಿಸೆಂಬರ್ 10 ರಂದು ಬರೆದ ಪತ್ರದಲ್ಲಿ ತಿಳಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಏಮ್ಸ್ ನರ್ಸ್‌ಗಳ ಅನಿರ್ದಿಷ್ಟ ಮುಷ್ಕರ: ಕೆಲಸಕ್ಕೆ ಬರುವಂತೆ ಏಮ್ಸ್ ನಿರ್ದೇಶಕರ ಮನವಿ

ಜಿಯೋ ಮಾಡಿದ ಆರೋಪಗಳಿಗೆ ಪ್ರತಿಕ್ರಿಯಿಸಿದ ಭಾರತೀಯ ಏರ್‌ಟೆಲ್, “ಏರ್‌ಟೆಲ್ ಟೆಲಿಕಾಂ ಉದ್ಯಮದಲ್ಲಿ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಈ ಅವಧಿಯಲ್ಲಿ, ನಾವು ಮಾರುಕಟ್ಟೆಯಲ್ಲಿ ತೀವ್ರವಾಗಿ ಸ್ಪರ್ಧಿಸಿದ್ದೇವೆ ಮತ್ತು ನಮ್ಮ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡಲು ಶ್ರಮಿಸಿದ್ದೇವೆ. ಅದೇ ಸಮಯದಲ್ಲಿ ನಮ್ಮ ಸ್ಪರ್ಧಿಗಳು ಮತ್ತು ಪಾಲುದಾರರನ್ನು ಗೌರವದಿಂದ ನಡೆಸಿಕೊಂಡಿದ್ದೇವೆ. ನಾವು ನಮ್ಮ ವ್ಯವಹಾರವನ್ನು ಪಾರದರ್ಶಕವಾಗಿ ನಡೆಸಿದ್ದೇವೆ. ಇದಕ್ಕೆ ನಮಗೆ ಬಹಳ ಹೆಮ್ಮೆಯಿದೆ” ಎಂದು ಹೇಳಿದೆ.

ಅಂಬಾನಿ ಮತ್ತು ಅವರ ಕಂಪನಿಗಳ ಉತ್ಪನ್ನಗಳಾದ ಪೆಟ್ರೋಲ್ ಪಂಪ್, ಜಿಯೋ ಸಿಮ್, ರಿಲಯನ್ಸ್ ಸೇರಿದಂತೆ ಇತರೆ ಉತ್ಪನ್ನಗಳನ್ನು ಬಾಯ್ಕಾಟ್ ಮಾಡುವಂತೆ ಪ್ರತಿಭಟನಾ ನಿರತ ರೈತರು ಇತ್ತೀಚೆಗೆ ಕರೆ ನೀಡಿದ್ದರು. ಕರ್ನಾಟಕದಲ್ಲಿಯೂ ಯುವಕರು ಜಿಯೋ ಸಿಮ್ ಇಂದ ಪೋರ್ಟಿಂಗ್ ಅಭಿಯಾನವನ್ನು ಕೈಗೊಂಡಿದ್ದರು.

ಕೇಂದ್ರ ಸರ್ಕಾರ ತನ್ನ ಕೃಷಿ ಕಾನೂನುಗಳನ್ನು ಹಿಂಪಡೆಯಲಿ ಎಂದು ಒತ್ತಾಯಿಸಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕೃಷಿ ಕಾನೂನುಗಳು ಪರೋಕ್ಷವಾಗಿ ಅಂಬಾನಿಗೆ ಸಹಕಾರಿಯಾಗುತ್ತದೆ ಎಂಬ ಕಾರಣಕ್ಕೆ ಅಂಬಾನಿ ಕಂಪನಿಯ ಉತ್ಪನ್ನಗಳನ್ನು ಬಾಯ್ಕಾಟ್‌ ಮಾಡಬೇಕು ಎಂದು ಕರೆ ನೀಡಲಾಗಿತ್ತು.


ಇದನ್ನೂ ಓದಿ: ಬಾಹ್ಯಾಕಾಶ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಖಾಸಗಿ ವಲಯಕ್ಕೆ ಮುಕ್ತ ಅವಕಾಶ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನೀವು ಜಿಯೋಮಾರ್ಟ್ ಪ್ರಚಾರಮಾಡುತ್ತಿದ್ದೀರ?
    ನಾನು ಗೌರಿ ಪೇಜ್ ತೆರೆದಕೂಡಲೇ ಜಿಯೋಮಾರ್ಟ್ ಬರುತ್ತದೆ ನಡುವಿನಲ್ಲಿ ಯಾಕೆ?

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...