Homeಮುಖಪುಟಬಾಯ್ಕಾಟ್ ಅಭಿಯಾನ: ಏರ್‌ಟೆಲ್, ವೊಡಾಫೋನ್ ವಿರುದ್ಧ ದೂರು ನೀಡಿದ ಜಿಯೋ!

ಬಾಯ್ಕಾಟ್ ಅಭಿಯಾನ: ಏರ್‌ಟೆಲ್, ವೊಡಾಫೋನ್ ವಿರುದ್ಧ ದೂರು ನೀಡಿದ ಜಿಯೋ!

- Advertisement -
- Advertisement -

ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ರೈತರು ಜಿಯೋ ಸಿಮ್‌ ಅನ್ನು ತಿರಸ್ಕರಿಸಿರುವುದರ ಹಿಂದೆ ಏರ್‌ಟೆಲ್ ಮತ್ತು ವೊಡಾಫೋನ್ ಕಂಪನಿಗಳ ಕೈವಾಡವಿದೆ ಎಂದು ಆರೋಪಿಸಿರುವ ಅಂಬಾನಿಯ ಜಿಯೋ ಕಂಪನಿ, ಈ ಎರಡು ನೆಟ್‌ವರ್ಕ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಟೆಲಿಕಾಂ ರೆಗ್ಯುಲೇಟರ್ ಅಥಾರಿಟಿ ಆಫ್ ಇಂಡಿಯಾ (TRAI)ಗೆ ಡಿಸಂಬರ್ 10 ರಂದು ದೂರು ನೀಡಿದೆ.

ಜಿಯೋ ಕಂಪನಿ ಸೆಪ್ಟೆಂಬರ್ 28 ರಂದು ಬರೆದಿದ್ದ ಪತ್ರವನ್ನು ಉಲ್ಲೇಖಿಸಿ ಮುಂದುವರೆಸುತ್ತಾ, “ರೈತರ ಪ್ರತಿಭಟನೆಯ ಉಪಯೋಗ ಪಡೆದುಕೊಳ್ಳುತ್ತಿರುವ ಏರ್‌ಟೆಲ್ ಮತ್ತು ವೊಡಾಫೋನ್ ಕಂಪನಿಗಳು, ಅನೈತಿಕ ಮತ್ತು ಸ್ಪರ್ಧಾತ್ಮಕ ವಿರೋಧಿ ರೀತಿಯಲ್ಲಿ ಮೊಬೈಲ್ ಸಂಖ್ಯೆ ಪೋರ್ಟಬಿಲಿಟಿ (MNP) ಅಭಿಯಾನವನ್ನು ನಡೆಸುತ್ತಿದೆ ಎಂದು ಆರೋಪಿಸಿದೆ.

ಇದನ್ನೂ ಓದಿ: ಭಾರತದ ಆರ್ಥಿಕತೆ ಕುಸಿಯುತ್ತಿದ್ದರೂ ಅದಾನಿ ಕಂಪನಿ ಮಾತ್ರ ಬೆಳೆಯುತ್ತಿರುವುದು ಹೇಗೆ?

“ಜಿಯೋ ಮೊಬೈಲ್ ಸಂಖ್ಯೆಗಳನ್ನು ತಮ್ಮ ನೆಟ್‌ವರ್ಕ್‌ಗಳಿಗೆ ಸ್ಥಳಾಂತರಿಸುವುದರಿಂದ ರೈತರ ಪ್ರತಿಭಟನೆಗೆ ಸಹಕಾರಿಯಾಗಲಿದೆ ಎಂದು ಹೇಳಿಕೆಗಳನ್ನು ನೀಡುವ ಮೂಲಕ ಈ ನೆಟ್‌ವರ್ಕ್‌ಗಳು ಸಾರ್ವಜನಿಕರನ್ನು ಪ್ರಚೋದಿಸುತ್ತಿದೆ” ಎಂದು ಡಿಸೆಂಬರ್ 10 ರಂದು ಬರೆದ ಪತ್ರದಲ್ಲಿ ತಿಳಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಏಮ್ಸ್ ನರ್ಸ್‌ಗಳ ಅನಿರ್ದಿಷ್ಟ ಮುಷ್ಕರ: ಕೆಲಸಕ್ಕೆ ಬರುವಂತೆ ಏಮ್ಸ್ ನಿರ್ದೇಶಕರ ಮನವಿ

ಜಿಯೋ ಮಾಡಿದ ಆರೋಪಗಳಿಗೆ ಪ್ರತಿಕ್ರಿಯಿಸಿದ ಭಾರತೀಯ ಏರ್‌ಟೆಲ್, “ಏರ್‌ಟೆಲ್ ಟೆಲಿಕಾಂ ಉದ್ಯಮದಲ್ಲಿ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಈ ಅವಧಿಯಲ್ಲಿ, ನಾವು ಮಾರುಕಟ್ಟೆಯಲ್ಲಿ ತೀವ್ರವಾಗಿ ಸ್ಪರ್ಧಿಸಿದ್ದೇವೆ ಮತ್ತು ನಮ್ಮ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡಲು ಶ್ರಮಿಸಿದ್ದೇವೆ. ಅದೇ ಸಮಯದಲ್ಲಿ ನಮ್ಮ ಸ್ಪರ್ಧಿಗಳು ಮತ್ತು ಪಾಲುದಾರರನ್ನು ಗೌರವದಿಂದ ನಡೆಸಿಕೊಂಡಿದ್ದೇವೆ. ನಾವು ನಮ್ಮ ವ್ಯವಹಾರವನ್ನು ಪಾರದರ್ಶಕವಾಗಿ ನಡೆಸಿದ್ದೇವೆ. ಇದಕ್ಕೆ ನಮಗೆ ಬಹಳ ಹೆಮ್ಮೆಯಿದೆ” ಎಂದು ಹೇಳಿದೆ.

ಅಂಬಾನಿ ಮತ್ತು ಅವರ ಕಂಪನಿಗಳ ಉತ್ಪನ್ನಗಳಾದ ಪೆಟ್ರೋಲ್ ಪಂಪ್, ಜಿಯೋ ಸಿಮ್, ರಿಲಯನ್ಸ್ ಸೇರಿದಂತೆ ಇತರೆ ಉತ್ಪನ್ನಗಳನ್ನು ಬಾಯ್ಕಾಟ್ ಮಾಡುವಂತೆ ಪ್ರತಿಭಟನಾ ನಿರತ ರೈತರು ಇತ್ತೀಚೆಗೆ ಕರೆ ನೀಡಿದ್ದರು. ಕರ್ನಾಟಕದಲ್ಲಿಯೂ ಯುವಕರು ಜಿಯೋ ಸಿಮ್ ಇಂದ ಪೋರ್ಟಿಂಗ್ ಅಭಿಯಾನವನ್ನು ಕೈಗೊಂಡಿದ್ದರು.

ಕೇಂದ್ರ ಸರ್ಕಾರ ತನ್ನ ಕೃಷಿ ಕಾನೂನುಗಳನ್ನು ಹಿಂಪಡೆಯಲಿ ಎಂದು ಒತ್ತಾಯಿಸಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕೃಷಿ ಕಾನೂನುಗಳು ಪರೋಕ್ಷವಾಗಿ ಅಂಬಾನಿಗೆ ಸಹಕಾರಿಯಾಗುತ್ತದೆ ಎಂಬ ಕಾರಣಕ್ಕೆ ಅಂಬಾನಿ ಕಂಪನಿಯ ಉತ್ಪನ್ನಗಳನ್ನು ಬಾಯ್ಕಾಟ್‌ ಮಾಡಬೇಕು ಎಂದು ಕರೆ ನೀಡಲಾಗಿತ್ತು.


ಇದನ್ನೂ ಓದಿ: ಬಾಹ್ಯಾಕಾಶ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಖಾಸಗಿ ವಲಯಕ್ಕೆ ಮುಕ್ತ ಅವಕಾಶ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನೀವು ಜಿಯೋಮಾರ್ಟ್ ಪ್ರಚಾರಮಾಡುತ್ತಿದ್ದೀರ?
    ನಾನು ಗೌರಿ ಪೇಜ್ ತೆರೆದಕೂಡಲೇ ಜಿಯೋಮಾರ್ಟ್ ಬರುತ್ತದೆ ನಡುವಿನಲ್ಲಿ ಯಾಕೆ?

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...