Homeಮುಖಪುಟಹರ್‌‌ ಘರ್‌ ತಿರಂಗ ಬಹಿಷ್ಕರಿಸಿ, ಕೇಸರಿ ಧ್ವಜ ಹಾರಿಸಿ: ಯತಿ ನರಸಿಂಗಾನಂದ

ಹರ್‌‌ ಘರ್‌ ತಿರಂಗ ಬಹಿಷ್ಕರಿಸಿ, ಕೇಸರಿ ಧ್ವಜ ಹಾರಿಸಿ: ಯತಿ ನರಸಿಂಗಾನಂದ

ದ್ವೇಷ ಭಾಷಣಗಳಿಂದ ಕುಖ್ಯಾತಿ ಪಡೆದಿರುವ ಯತಿ ನರಸಿಂಗಾನಂದ ಮತ್ತೊಮ್ಮೆ ನಾಲಿಗೆ ಹರಿಬಿಟ್ಟಿದ್ದಾರೆ.

- Advertisement -
- Advertisement -

75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೇಂದ್ರ ಸರ್ಕಾರ ಆರಂಭಿಸಿರುವ “ಹರ್ ಘರ್ ತಿರಂಗ” ಅಭಿಯಾನವನ್ನು ಬಹಿಷ್ಕರಿಸುವಂತೆ ಹಿಂದುತ್ವವಾದಿ ಯತಿ ನರಸಿಂಗಾನಂದ ಹಿಂದೂಗಳಿಗೆ ತಿಳಿಸಿದ್ದಾರೆ.

ದ್ವೇಷ ಭಾಷಣಗಳಿಗೆ ಕುಖ್ಯಾತಿ ಪಡೆದಿರುವ, ಭಾರತದ ಸಂವಿಧಾನದ ಬಗ್ಗೆ ಅಗೌರವವನ್ನು ಹೊಂದಿರುವ ಯತಿ ನರಸಿಂಗಾನಂದ ಮತ್ತೊಮ್ಮೆ ತಮ್ಮ ಪ್ರವೃತ್ತಿಯನ್ನು ಮುಂದುವರಿಸಿದ್ದು, “ಹರ್‌ ಘರ್‌ ತಿರಂಗ ಅಭಿಯಾನದಿಂದ ಮುಸ್ಲಿಂ ಒಡೆತನದ ಸಂಸ್ಥೆಗೆ ಲಾಭವಾಗುತ್ತಿದೆ. ತಿರಂಗ ಧ್ವಜ ಹಾರಿಸುವ ಬದಲು ಹಿಂದೂಗಳು ತಮ್ಮ ಮನೆಯ ಮೇಲೆ ಭಗವಾ ಧ್ವಜ (ಕೇಸರಿ ಧ್ವಜ) ಹಾರಿಸಬೇಕು” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ಅಭಿಯಾನಕ್ಕಾಗಿ [ಧ್ವಜಗಳನ್ನು ಸಂಗ್ರಹಿಸುವ] ಅತಿದೊಡ್ಡ ಆದೇಶವನ್ನು ಪಶ್ಚಿಮ ಬಂಗಾಳದ ಸಲಾವುದ್ದೀನ್ ಒಡೆತನದ ಕಂಪನಿಗೆ ನೀಡಲಾಗಿದೆ. ಇದು ಹಿಂದೂಗಳ ವಿರುದ್ಧದ ಒಂದು ದೊಡ್ಡ ಪಿತೂರಿ. ನೀವು [ಹಿಂದೂಗಳು] ಜೀವಂತವಾಗಿರಲು ಬಯಸಿದರೆ, ಈ ಅಭಿಯಾನದ ಹೆಸರಿನಲ್ಲಿ ನಿಮ್ಮ ಹಣವನ್ನು ಮುಸ್ಲಿಮರಿಗೆ ನೀಡುವುದನ್ನು ನಿಲ್ಲಿಸಿ” ಎಂದು ನರಸಿಂಗಾನಂದ ನಾಲಿಗೆ ಹರಿಬಿಟ್ಟಿದ್ದಾರೆ.

ಆಗಸ್ಟ್ 13 ರಿಂದ ಆಗಸ್ಟ್ 15ರವರೆಗೆ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ “ಹರ್ ಘರ್ ತಿರಂಗ” ಅಭಿಯಾನದಲ್ಲಿ ಪಾಲ್ಗೊಳ್ಳವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

“ಹಿಂದೂ ರಾಜಕಾರಣಿಗಳು ಮುಸ್ಲಿಮರ ಆರ್ಥಿಕ ಬಹಿಷ್ಕಾರಕ್ಕಾಗಿ ಪ್ರಚಾರ ಮಾಡುತ್ತಾರೆ. ಆದರೆ ಅಧಿಕಾರಕ್ಕೆ ಬಂದ ನಂತರ ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಗಳನ್ನು ನೀಡುತ್ತಾರೆ” ಎಂದು ನರಸಿಂಹಾನಂದ ಆರೋಪಿಸಿರುವ ವಿಡಿಯೊ ವೈರಲ್ ಆಗುತ್ತಿದೆ.

ಈ ರಾಜಕಾರಣಿಗಳಿಗೆ ತಕ್ಕ ಪಾಠ ಕಲಿಸಿ ಎಂದಿರುವ ನರಸಿಂಗಾನಂದ, “ರಾಜಕಾರಣಿಗಳು ನಿಮ್ಮ [ಹಿಂದೂಗಳ] ಹಣವನ್ನು ಮುಸ್ಲಿಮರನ್ನು ಶ್ರೀಮಂತರನ್ನಾಗಿ ಮಾಡಲು ಬಳಸಬಾರದು. ನಿಮ್ಮ ಮಕ್ಕಳನ್ನು ಕೊಲ್ಲಲು ವ್ಯವಸ್ಥೆ ಮಾಡಬಾರು. ಇವರ ಬಲೆಗೆ ಬೀಳಬೇಡಿ” ಎಂದಿದ್ದಾರೆ.

“ಹಿಂದೂಗಳು ರಾಷ್ಟ್ರಧ್ವಜವನ್ನು ಹಾರಿಸಬಾರದು. ಅದು ಹಿಂದೂಗಳಿಗೆ ಹಾನಿಯುಂಟುಮಾಡುತ್ತದೆ. ಪ್ರತಿಯೊಬ್ಬ ಹಿಂದೂ ತನ್ನ ಮನೆಯ ಮೇಲೆ ಕೇಸರಿ ಬಣ್ಣದ ಧ್ವಜವನ್ನು ಹಾರಿಸಬೇಕು” ಎಂದು ಪ್ರತಿಪಾದಿಸಿದ್ದಾರೆ.

ಹರಿದ್ವಾರದಲ್ಲಿ ನಡೆದ ಧಾರ್ಮಿಕ ಸಮಾವೇಶದಲ್ಲಿ ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ ನಂತರ ಜನವರಿ 15ರಂದು ನರಸಿಂಗಾನಂದ ಬಂಧನಕ್ಕೊಳಗಾಗಿದ್ದರು. “ಸಮುದಾಯಗಳ ನಡುವೆ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸುವ ಉದ್ದೇಶದಿಂದ” ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂಬ ಷರತ್ತಿನ ಮೇಲೆ ಫೆಬ್ರವರಿ 7ರಂದು ಅವರಿಗೆ ಜಾಮೀನು ನೀಡಲಾಗಿದೆ.

ಆದಾಗ್ಯೂ, ಏಪ್ರಿಲ್ 17 ರಂದು, ಅವರು ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಡೆದ ಧಾರ್ಮಿಕ ಸಮಾವೇಶದಲ್ಲಿ ಮತ್ತೊಂದು ಪ್ರಚೋದನಾತ್ಮಕ ಭಾಷಣವನ್ನು ನರಸಿಂಗಾನಂದ ಮಾಡಿದ್ದರು. ಭಾರತವು ಇಸ್ಲಾಮಿಕ್ ರಾಷ್ಟ್ರವಾಗದಂತೆ ತಡೆಯಲು ಹಿಂದೂಗಳು ಹೆಚ್ಚು ಮಕ್ಕಳನ್ನು ಹುಟ್ಟಿಸಬೇಕು ಎಂದು ಹೇಳಿಕೆ ನೀಡಿದ್ದರು.

ಕಳೆದ ಜೂನ್‌ನಲ್ಲಿ ಮತ್ತೆ ನಾಲಿಗೆ ಹರಿಬಿಟ್ಟಿದ್ದ ಯತಿ ನರಸಿಂಗಾನಂದ, “ಮಹಾತ್ಮ ಗಾಂಧಿ ಭಾರತೀಯ ಮುಸ್ಲಿಮರಿಗೆ ಹಕ್ಕುಗಳನ್ನು ನೀಡಿದರು. ಗಾಂಧಿ ಕಾರಣದಿಂದಾಗಿ 100 ಕೋಟಿ ಹಿಂದೂ ಸಮುದಾಯಕ್ಕೆ ತಮ್ಮದೇ ಆದ ಒಂದು ಇಂಚು ಭೂಮಿ ಇಲ್ಲ” ಎಂದು ಆರೋಪಿಸಿದ್ದರು. ಉತ್ತರ ಪ್ರದೇಶದ ಗಾಜಿಯಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿರಿ: ಹಿಂದೂ ಮಹಾಪಂಚಾಯತ್‌ ಆಯೋಜಕನ ವಿಕೃತಿ ಅನಾವರಣ; ಸರಣಿ ಅತ್ಯಾಚಾರದಿಂದ ನೊಂದ ಪತ್ನಿಯಿಂದ ಪ್ರಕರಣ ದಾಖಲು

ಮುಸ್ಸೂರಿ ಪೊಲೀಸ್ ಠಾಣೆಯಲ್ಲಿ ನರಸಿಂಗಾನಂದ ಸರಸ್ವತಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505(2) (ವರ್ಗಗಳ ನಡುವೆ ದ್ವೇಷ ಉತ್ತೇಜಿಸುವ ಹೇಳಿಕೆಗಳು), 153ಬಿ (ರಾಷ್ಟ್ರೀಯ ಏಕೀಕರಣಕ್ಕೆ ಹಾನಿಯುಂಟುಮಾಡುವ ಆರೋಪ) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ದ್ವೇಷ ಭಾಷಣ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡುತ್ತಾ ನರಸಿಂಗಾನಂದ, “ನಮಗೆ ಭಾರತದ ಸುಪ್ರೀಂ ಕೋರ್ಟ್ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಈ ದೇಶದ 100 ಕೋಟಿ ಹಿಂದೂಗಳನ್ನು ಸಂವಿಧಾನ ಕೊಲ್ಲುತ್ತಿದೆ. ಈ ಸಂವಿಧಾನವನ್ನು ನಂಬಿದವರನ್ನು ಕೊಲ್ಲಲಾಗುತ್ತದೆ. ಈ ವ್ಯವಸ್ಥೆಯನ್ನು ನಂಬುವವರು, ಈ ರಾಜಕಾರಣಿಗಳು, ಸುಪ್ರೀಂ ಕೋರ್ಟ್ ಮತ್ತು ಸೈನ್ಯದಲ್ಲಿರುವವರು ಎಲ್ಲರೂ ನಾಯಿಯಂತೆ ಸಾಯುತ್ತಾರೆ” ಎಂದು ಮತ್ತೊಮ್ಮೆ ಪ್ರಚೋದನೆ ನೀಡಿದ್ದರು.

ಹೀಗೆ ದ್ವೇಷ ಭಾಷಣಗಳ ಬಹುದೊಡ್ಡ ಇತಿಹಾಸ ಹೊಂದಿರುವ ಯತಿ ನರಸಿಂಗಾನಂದ ಮತ್ತೆ ಮತ್ತೆ ಜಾಮೀನು ಪಡೆದು ಹೊರಬಂದು ದ್ವೇಷ ಭಾಷಣಗಳನ್ನು ಮಾಡುತ್ತಾ ಸಮಾಜದಲ್ಲಿ ಕ್ಷೋಭೆಯನ್ನು ಉಂಟು ಮಾಡುತ್ತಲೇ ಇದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ನರಸಿಂಗಾನಂದನ ವಿರುದ್ಧ ಈ ಕೂಡಲೇ ಕಾನೂನು ಕ್ರಮವನ್ನು ಜರುಗಿಸಬೇಕು.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...