Homeಮುಖಪುಟಹರ್‌‌ ಘರ್‌ ತಿರಂಗ ಬಹಿಷ್ಕರಿಸಿ, ಕೇಸರಿ ಧ್ವಜ ಹಾರಿಸಿ: ಯತಿ ನರಸಿಂಗಾನಂದ

ಹರ್‌‌ ಘರ್‌ ತಿರಂಗ ಬಹಿಷ್ಕರಿಸಿ, ಕೇಸರಿ ಧ್ವಜ ಹಾರಿಸಿ: ಯತಿ ನರಸಿಂಗಾನಂದ

ದ್ವೇಷ ಭಾಷಣಗಳಿಂದ ಕುಖ್ಯಾತಿ ಪಡೆದಿರುವ ಯತಿ ನರಸಿಂಗಾನಂದ ಮತ್ತೊಮ್ಮೆ ನಾಲಿಗೆ ಹರಿಬಿಟ್ಟಿದ್ದಾರೆ.

- Advertisement -
- Advertisement -

75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೇಂದ್ರ ಸರ್ಕಾರ ಆರಂಭಿಸಿರುವ “ಹರ್ ಘರ್ ತಿರಂಗ” ಅಭಿಯಾನವನ್ನು ಬಹಿಷ್ಕರಿಸುವಂತೆ ಹಿಂದುತ್ವವಾದಿ ಯತಿ ನರಸಿಂಗಾನಂದ ಹಿಂದೂಗಳಿಗೆ ತಿಳಿಸಿದ್ದಾರೆ.

ದ್ವೇಷ ಭಾಷಣಗಳಿಗೆ ಕುಖ್ಯಾತಿ ಪಡೆದಿರುವ, ಭಾರತದ ಸಂವಿಧಾನದ ಬಗ್ಗೆ ಅಗೌರವವನ್ನು ಹೊಂದಿರುವ ಯತಿ ನರಸಿಂಗಾನಂದ ಮತ್ತೊಮ್ಮೆ ತಮ್ಮ ಪ್ರವೃತ್ತಿಯನ್ನು ಮುಂದುವರಿಸಿದ್ದು, “ಹರ್‌ ಘರ್‌ ತಿರಂಗ ಅಭಿಯಾನದಿಂದ ಮುಸ್ಲಿಂ ಒಡೆತನದ ಸಂಸ್ಥೆಗೆ ಲಾಭವಾಗುತ್ತಿದೆ. ತಿರಂಗ ಧ್ವಜ ಹಾರಿಸುವ ಬದಲು ಹಿಂದೂಗಳು ತಮ್ಮ ಮನೆಯ ಮೇಲೆ ಭಗವಾ ಧ್ವಜ (ಕೇಸರಿ ಧ್ವಜ) ಹಾರಿಸಬೇಕು” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ಅಭಿಯಾನಕ್ಕಾಗಿ [ಧ್ವಜಗಳನ್ನು ಸಂಗ್ರಹಿಸುವ] ಅತಿದೊಡ್ಡ ಆದೇಶವನ್ನು ಪಶ್ಚಿಮ ಬಂಗಾಳದ ಸಲಾವುದ್ದೀನ್ ಒಡೆತನದ ಕಂಪನಿಗೆ ನೀಡಲಾಗಿದೆ. ಇದು ಹಿಂದೂಗಳ ವಿರುದ್ಧದ ಒಂದು ದೊಡ್ಡ ಪಿತೂರಿ. ನೀವು [ಹಿಂದೂಗಳು] ಜೀವಂತವಾಗಿರಲು ಬಯಸಿದರೆ, ಈ ಅಭಿಯಾನದ ಹೆಸರಿನಲ್ಲಿ ನಿಮ್ಮ ಹಣವನ್ನು ಮುಸ್ಲಿಮರಿಗೆ ನೀಡುವುದನ್ನು ನಿಲ್ಲಿಸಿ” ಎಂದು ನರಸಿಂಗಾನಂದ ನಾಲಿಗೆ ಹರಿಬಿಟ್ಟಿದ್ದಾರೆ.

ಆಗಸ್ಟ್ 13 ರಿಂದ ಆಗಸ್ಟ್ 15ರವರೆಗೆ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ “ಹರ್ ಘರ್ ತಿರಂಗ” ಅಭಿಯಾನದಲ್ಲಿ ಪಾಲ್ಗೊಳ್ಳವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

“ಹಿಂದೂ ರಾಜಕಾರಣಿಗಳು ಮುಸ್ಲಿಮರ ಆರ್ಥಿಕ ಬಹಿಷ್ಕಾರಕ್ಕಾಗಿ ಪ್ರಚಾರ ಮಾಡುತ್ತಾರೆ. ಆದರೆ ಅಧಿಕಾರಕ್ಕೆ ಬಂದ ನಂತರ ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಗಳನ್ನು ನೀಡುತ್ತಾರೆ” ಎಂದು ನರಸಿಂಹಾನಂದ ಆರೋಪಿಸಿರುವ ವಿಡಿಯೊ ವೈರಲ್ ಆಗುತ್ತಿದೆ.

ಈ ರಾಜಕಾರಣಿಗಳಿಗೆ ತಕ್ಕ ಪಾಠ ಕಲಿಸಿ ಎಂದಿರುವ ನರಸಿಂಗಾನಂದ, “ರಾಜಕಾರಣಿಗಳು ನಿಮ್ಮ [ಹಿಂದೂಗಳ] ಹಣವನ್ನು ಮುಸ್ಲಿಮರನ್ನು ಶ್ರೀಮಂತರನ್ನಾಗಿ ಮಾಡಲು ಬಳಸಬಾರದು. ನಿಮ್ಮ ಮಕ್ಕಳನ್ನು ಕೊಲ್ಲಲು ವ್ಯವಸ್ಥೆ ಮಾಡಬಾರು. ಇವರ ಬಲೆಗೆ ಬೀಳಬೇಡಿ” ಎಂದಿದ್ದಾರೆ.

“ಹಿಂದೂಗಳು ರಾಷ್ಟ್ರಧ್ವಜವನ್ನು ಹಾರಿಸಬಾರದು. ಅದು ಹಿಂದೂಗಳಿಗೆ ಹಾನಿಯುಂಟುಮಾಡುತ್ತದೆ. ಪ್ರತಿಯೊಬ್ಬ ಹಿಂದೂ ತನ್ನ ಮನೆಯ ಮೇಲೆ ಕೇಸರಿ ಬಣ್ಣದ ಧ್ವಜವನ್ನು ಹಾರಿಸಬೇಕು” ಎಂದು ಪ್ರತಿಪಾದಿಸಿದ್ದಾರೆ.

ಹರಿದ್ವಾರದಲ್ಲಿ ನಡೆದ ಧಾರ್ಮಿಕ ಸಮಾವೇಶದಲ್ಲಿ ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ ನಂತರ ಜನವರಿ 15ರಂದು ನರಸಿಂಗಾನಂದ ಬಂಧನಕ್ಕೊಳಗಾಗಿದ್ದರು. “ಸಮುದಾಯಗಳ ನಡುವೆ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸುವ ಉದ್ದೇಶದಿಂದ” ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂಬ ಷರತ್ತಿನ ಮೇಲೆ ಫೆಬ್ರವರಿ 7ರಂದು ಅವರಿಗೆ ಜಾಮೀನು ನೀಡಲಾಗಿದೆ.

ಆದಾಗ್ಯೂ, ಏಪ್ರಿಲ್ 17 ರಂದು, ಅವರು ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಡೆದ ಧಾರ್ಮಿಕ ಸಮಾವೇಶದಲ್ಲಿ ಮತ್ತೊಂದು ಪ್ರಚೋದನಾತ್ಮಕ ಭಾಷಣವನ್ನು ನರಸಿಂಗಾನಂದ ಮಾಡಿದ್ದರು. ಭಾರತವು ಇಸ್ಲಾಮಿಕ್ ರಾಷ್ಟ್ರವಾಗದಂತೆ ತಡೆಯಲು ಹಿಂದೂಗಳು ಹೆಚ್ಚು ಮಕ್ಕಳನ್ನು ಹುಟ್ಟಿಸಬೇಕು ಎಂದು ಹೇಳಿಕೆ ನೀಡಿದ್ದರು.

ಕಳೆದ ಜೂನ್‌ನಲ್ಲಿ ಮತ್ತೆ ನಾಲಿಗೆ ಹರಿಬಿಟ್ಟಿದ್ದ ಯತಿ ನರಸಿಂಗಾನಂದ, “ಮಹಾತ್ಮ ಗಾಂಧಿ ಭಾರತೀಯ ಮುಸ್ಲಿಮರಿಗೆ ಹಕ್ಕುಗಳನ್ನು ನೀಡಿದರು. ಗಾಂಧಿ ಕಾರಣದಿಂದಾಗಿ 100 ಕೋಟಿ ಹಿಂದೂ ಸಮುದಾಯಕ್ಕೆ ತಮ್ಮದೇ ಆದ ಒಂದು ಇಂಚು ಭೂಮಿ ಇಲ್ಲ” ಎಂದು ಆರೋಪಿಸಿದ್ದರು. ಉತ್ತರ ಪ್ರದೇಶದ ಗಾಜಿಯಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿರಿ: ಹಿಂದೂ ಮಹಾಪಂಚಾಯತ್‌ ಆಯೋಜಕನ ವಿಕೃತಿ ಅನಾವರಣ; ಸರಣಿ ಅತ್ಯಾಚಾರದಿಂದ ನೊಂದ ಪತ್ನಿಯಿಂದ ಪ್ರಕರಣ ದಾಖಲು

ಮುಸ್ಸೂರಿ ಪೊಲೀಸ್ ಠಾಣೆಯಲ್ಲಿ ನರಸಿಂಗಾನಂದ ಸರಸ್ವತಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505(2) (ವರ್ಗಗಳ ನಡುವೆ ದ್ವೇಷ ಉತ್ತೇಜಿಸುವ ಹೇಳಿಕೆಗಳು), 153ಬಿ (ರಾಷ್ಟ್ರೀಯ ಏಕೀಕರಣಕ್ಕೆ ಹಾನಿಯುಂಟುಮಾಡುವ ಆರೋಪ) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ದ್ವೇಷ ಭಾಷಣ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡುತ್ತಾ ನರಸಿಂಗಾನಂದ, “ನಮಗೆ ಭಾರತದ ಸುಪ್ರೀಂ ಕೋರ್ಟ್ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಈ ದೇಶದ 100 ಕೋಟಿ ಹಿಂದೂಗಳನ್ನು ಸಂವಿಧಾನ ಕೊಲ್ಲುತ್ತಿದೆ. ಈ ಸಂವಿಧಾನವನ್ನು ನಂಬಿದವರನ್ನು ಕೊಲ್ಲಲಾಗುತ್ತದೆ. ಈ ವ್ಯವಸ್ಥೆಯನ್ನು ನಂಬುವವರು, ಈ ರಾಜಕಾರಣಿಗಳು, ಸುಪ್ರೀಂ ಕೋರ್ಟ್ ಮತ್ತು ಸೈನ್ಯದಲ್ಲಿರುವವರು ಎಲ್ಲರೂ ನಾಯಿಯಂತೆ ಸಾಯುತ್ತಾರೆ” ಎಂದು ಮತ್ತೊಮ್ಮೆ ಪ್ರಚೋದನೆ ನೀಡಿದ್ದರು.

ಹೀಗೆ ದ್ವೇಷ ಭಾಷಣಗಳ ಬಹುದೊಡ್ಡ ಇತಿಹಾಸ ಹೊಂದಿರುವ ಯತಿ ನರಸಿಂಗಾನಂದ ಮತ್ತೆ ಮತ್ತೆ ಜಾಮೀನು ಪಡೆದು ಹೊರಬಂದು ದ್ವೇಷ ಭಾಷಣಗಳನ್ನು ಮಾಡುತ್ತಾ ಸಮಾಜದಲ್ಲಿ ಕ್ಷೋಭೆಯನ್ನು ಉಂಟು ಮಾಡುತ್ತಲೇ ಇದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ನರಸಿಂಗಾನಂದನ ವಿರುದ್ಧ ಈ ಕೂಡಲೇ ಕಾನೂನು ಕ್ರಮವನ್ನು ಜರುಗಿಸಬೇಕು.

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...