Homeಮುಖಪುಟಹರ್‌‌ ಘರ್‌ ತಿರಂಗ ಬಹಿಷ್ಕರಿಸಿ, ಕೇಸರಿ ಧ್ವಜ ಹಾರಿಸಿ: ಯತಿ ನರಸಿಂಗಾನಂದ

ಹರ್‌‌ ಘರ್‌ ತಿರಂಗ ಬಹಿಷ್ಕರಿಸಿ, ಕೇಸರಿ ಧ್ವಜ ಹಾರಿಸಿ: ಯತಿ ನರಸಿಂಗಾನಂದ

ದ್ವೇಷ ಭಾಷಣಗಳಿಂದ ಕುಖ್ಯಾತಿ ಪಡೆದಿರುವ ಯತಿ ನರಸಿಂಗಾನಂದ ಮತ್ತೊಮ್ಮೆ ನಾಲಿಗೆ ಹರಿಬಿಟ್ಟಿದ್ದಾರೆ.

- Advertisement -
- Advertisement -

75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೇಂದ್ರ ಸರ್ಕಾರ ಆರಂಭಿಸಿರುವ “ಹರ್ ಘರ್ ತಿರಂಗ” ಅಭಿಯಾನವನ್ನು ಬಹಿಷ್ಕರಿಸುವಂತೆ ಹಿಂದುತ್ವವಾದಿ ಯತಿ ನರಸಿಂಗಾನಂದ ಹಿಂದೂಗಳಿಗೆ ತಿಳಿಸಿದ್ದಾರೆ.

ದ್ವೇಷ ಭಾಷಣಗಳಿಗೆ ಕುಖ್ಯಾತಿ ಪಡೆದಿರುವ, ಭಾರತದ ಸಂವಿಧಾನದ ಬಗ್ಗೆ ಅಗೌರವವನ್ನು ಹೊಂದಿರುವ ಯತಿ ನರಸಿಂಗಾನಂದ ಮತ್ತೊಮ್ಮೆ ತಮ್ಮ ಪ್ರವೃತ್ತಿಯನ್ನು ಮುಂದುವರಿಸಿದ್ದು, “ಹರ್‌ ಘರ್‌ ತಿರಂಗ ಅಭಿಯಾನದಿಂದ ಮುಸ್ಲಿಂ ಒಡೆತನದ ಸಂಸ್ಥೆಗೆ ಲಾಭವಾಗುತ್ತಿದೆ. ತಿರಂಗ ಧ್ವಜ ಹಾರಿಸುವ ಬದಲು ಹಿಂದೂಗಳು ತಮ್ಮ ಮನೆಯ ಮೇಲೆ ಭಗವಾ ಧ್ವಜ (ಕೇಸರಿ ಧ್ವಜ) ಹಾರಿಸಬೇಕು” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ಅಭಿಯಾನಕ್ಕಾಗಿ [ಧ್ವಜಗಳನ್ನು ಸಂಗ್ರಹಿಸುವ] ಅತಿದೊಡ್ಡ ಆದೇಶವನ್ನು ಪಶ್ಚಿಮ ಬಂಗಾಳದ ಸಲಾವುದ್ದೀನ್ ಒಡೆತನದ ಕಂಪನಿಗೆ ನೀಡಲಾಗಿದೆ. ಇದು ಹಿಂದೂಗಳ ವಿರುದ್ಧದ ಒಂದು ದೊಡ್ಡ ಪಿತೂರಿ. ನೀವು [ಹಿಂದೂಗಳು] ಜೀವಂತವಾಗಿರಲು ಬಯಸಿದರೆ, ಈ ಅಭಿಯಾನದ ಹೆಸರಿನಲ್ಲಿ ನಿಮ್ಮ ಹಣವನ್ನು ಮುಸ್ಲಿಮರಿಗೆ ನೀಡುವುದನ್ನು ನಿಲ್ಲಿಸಿ” ಎಂದು ನರಸಿಂಗಾನಂದ ನಾಲಿಗೆ ಹರಿಬಿಟ್ಟಿದ್ದಾರೆ.

ಆಗಸ್ಟ್ 13 ರಿಂದ ಆಗಸ್ಟ್ 15ರವರೆಗೆ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ “ಹರ್ ಘರ್ ತಿರಂಗ” ಅಭಿಯಾನದಲ್ಲಿ ಪಾಲ್ಗೊಳ್ಳವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

“ಹಿಂದೂ ರಾಜಕಾರಣಿಗಳು ಮುಸ್ಲಿಮರ ಆರ್ಥಿಕ ಬಹಿಷ್ಕಾರಕ್ಕಾಗಿ ಪ್ರಚಾರ ಮಾಡುತ್ತಾರೆ. ಆದರೆ ಅಧಿಕಾರಕ್ಕೆ ಬಂದ ನಂತರ ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಗಳನ್ನು ನೀಡುತ್ತಾರೆ” ಎಂದು ನರಸಿಂಹಾನಂದ ಆರೋಪಿಸಿರುವ ವಿಡಿಯೊ ವೈರಲ್ ಆಗುತ್ತಿದೆ.

ಈ ರಾಜಕಾರಣಿಗಳಿಗೆ ತಕ್ಕ ಪಾಠ ಕಲಿಸಿ ಎಂದಿರುವ ನರಸಿಂಗಾನಂದ, “ರಾಜಕಾರಣಿಗಳು ನಿಮ್ಮ [ಹಿಂದೂಗಳ] ಹಣವನ್ನು ಮುಸ್ಲಿಮರನ್ನು ಶ್ರೀಮಂತರನ್ನಾಗಿ ಮಾಡಲು ಬಳಸಬಾರದು. ನಿಮ್ಮ ಮಕ್ಕಳನ್ನು ಕೊಲ್ಲಲು ವ್ಯವಸ್ಥೆ ಮಾಡಬಾರು. ಇವರ ಬಲೆಗೆ ಬೀಳಬೇಡಿ” ಎಂದಿದ್ದಾರೆ.

“ಹಿಂದೂಗಳು ರಾಷ್ಟ್ರಧ್ವಜವನ್ನು ಹಾರಿಸಬಾರದು. ಅದು ಹಿಂದೂಗಳಿಗೆ ಹಾನಿಯುಂಟುಮಾಡುತ್ತದೆ. ಪ್ರತಿಯೊಬ್ಬ ಹಿಂದೂ ತನ್ನ ಮನೆಯ ಮೇಲೆ ಕೇಸರಿ ಬಣ್ಣದ ಧ್ವಜವನ್ನು ಹಾರಿಸಬೇಕು” ಎಂದು ಪ್ರತಿಪಾದಿಸಿದ್ದಾರೆ.

ಹರಿದ್ವಾರದಲ್ಲಿ ನಡೆದ ಧಾರ್ಮಿಕ ಸಮಾವೇಶದಲ್ಲಿ ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ ನಂತರ ಜನವರಿ 15ರಂದು ನರಸಿಂಗಾನಂದ ಬಂಧನಕ್ಕೊಳಗಾಗಿದ್ದರು. “ಸಮುದಾಯಗಳ ನಡುವೆ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸುವ ಉದ್ದೇಶದಿಂದ” ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂಬ ಷರತ್ತಿನ ಮೇಲೆ ಫೆಬ್ರವರಿ 7ರಂದು ಅವರಿಗೆ ಜಾಮೀನು ನೀಡಲಾಗಿದೆ.

ಆದಾಗ್ಯೂ, ಏಪ್ರಿಲ್ 17 ರಂದು, ಅವರು ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಡೆದ ಧಾರ್ಮಿಕ ಸಮಾವೇಶದಲ್ಲಿ ಮತ್ತೊಂದು ಪ್ರಚೋದನಾತ್ಮಕ ಭಾಷಣವನ್ನು ನರಸಿಂಗಾನಂದ ಮಾಡಿದ್ದರು. ಭಾರತವು ಇಸ್ಲಾಮಿಕ್ ರಾಷ್ಟ್ರವಾಗದಂತೆ ತಡೆಯಲು ಹಿಂದೂಗಳು ಹೆಚ್ಚು ಮಕ್ಕಳನ್ನು ಹುಟ್ಟಿಸಬೇಕು ಎಂದು ಹೇಳಿಕೆ ನೀಡಿದ್ದರು.

ಕಳೆದ ಜೂನ್‌ನಲ್ಲಿ ಮತ್ತೆ ನಾಲಿಗೆ ಹರಿಬಿಟ್ಟಿದ್ದ ಯತಿ ನರಸಿಂಗಾನಂದ, “ಮಹಾತ್ಮ ಗಾಂಧಿ ಭಾರತೀಯ ಮುಸ್ಲಿಮರಿಗೆ ಹಕ್ಕುಗಳನ್ನು ನೀಡಿದರು. ಗಾಂಧಿ ಕಾರಣದಿಂದಾಗಿ 100 ಕೋಟಿ ಹಿಂದೂ ಸಮುದಾಯಕ್ಕೆ ತಮ್ಮದೇ ಆದ ಒಂದು ಇಂಚು ಭೂಮಿ ಇಲ್ಲ” ಎಂದು ಆರೋಪಿಸಿದ್ದರು. ಉತ್ತರ ಪ್ರದೇಶದ ಗಾಜಿಯಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿರಿ: ಹಿಂದೂ ಮಹಾಪಂಚಾಯತ್‌ ಆಯೋಜಕನ ವಿಕೃತಿ ಅನಾವರಣ; ಸರಣಿ ಅತ್ಯಾಚಾರದಿಂದ ನೊಂದ ಪತ್ನಿಯಿಂದ ಪ್ರಕರಣ ದಾಖಲು

ಮುಸ್ಸೂರಿ ಪೊಲೀಸ್ ಠಾಣೆಯಲ್ಲಿ ನರಸಿಂಗಾನಂದ ಸರಸ್ವತಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505(2) (ವರ್ಗಗಳ ನಡುವೆ ದ್ವೇಷ ಉತ್ತೇಜಿಸುವ ಹೇಳಿಕೆಗಳು), 153ಬಿ (ರಾಷ್ಟ್ರೀಯ ಏಕೀಕರಣಕ್ಕೆ ಹಾನಿಯುಂಟುಮಾಡುವ ಆರೋಪ) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ದ್ವೇಷ ಭಾಷಣ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡುತ್ತಾ ನರಸಿಂಗಾನಂದ, “ನಮಗೆ ಭಾರತದ ಸುಪ್ರೀಂ ಕೋರ್ಟ್ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಈ ದೇಶದ 100 ಕೋಟಿ ಹಿಂದೂಗಳನ್ನು ಸಂವಿಧಾನ ಕೊಲ್ಲುತ್ತಿದೆ. ಈ ಸಂವಿಧಾನವನ್ನು ನಂಬಿದವರನ್ನು ಕೊಲ್ಲಲಾಗುತ್ತದೆ. ಈ ವ್ಯವಸ್ಥೆಯನ್ನು ನಂಬುವವರು, ಈ ರಾಜಕಾರಣಿಗಳು, ಸುಪ್ರೀಂ ಕೋರ್ಟ್ ಮತ್ತು ಸೈನ್ಯದಲ್ಲಿರುವವರು ಎಲ್ಲರೂ ನಾಯಿಯಂತೆ ಸಾಯುತ್ತಾರೆ” ಎಂದು ಮತ್ತೊಮ್ಮೆ ಪ್ರಚೋದನೆ ನೀಡಿದ್ದರು.

ಹೀಗೆ ದ್ವೇಷ ಭಾಷಣಗಳ ಬಹುದೊಡ್ಡ ಇತಿಹಾಸ ಹೊಂದಿರುವ ಯತಿ ನರಸಿಂಗಾನಂದ ಮತ್ತೆ ಮತ್ತೆ ಜಾಮೀನು ಪಡೆದು ಹೊರಬಂದು ದ್ವೇಷ ಭಾಷಣಗಳನ್ನು ಮಾಡುತ್ತಾ ಸಮಾಜದಲ್ಲಿ ಕ್ಷೋಭೆಯನ್ನು ಉಂಟು ಮಾಡುತ್ತಲೇ ಇದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ನರಸಿಂಗಾನಂದನ ವಿರುದ್ಧ ಈ ಕೂಡಲೇ ಕಾನೂನು ಕ್ರಮವನ್ನು ಜರುಗಿಸಬೇಕು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...