Homeಮುಖಪುಟಹರ್‌‌ ಘರ್‌ ತಿರಂಗ ಬಹಿಷ್ಕರಿಸಿ, ಕೇಸರಿ ಧ್ವಜ ಹಾರಿಸಿ: ಯತಿ ನರಸಿಂಗಾನಂದ

ಹರ್‌‌ ಘರ್‌ ತಿರಂಗ ಬಹಿಷ್ಕರಿಸಿ, ಕೇಸರಿ ಧ್ವಜ ಹಾರಿಸಿ: ಯತಿ ನರಸಿಂಗಾನಂದ

ದ್ವೇಷ ಭಾಷಣಗಳಿಂದ ಕುಖ್ಯಾತಿ ಪಡೆದಿರುವ ಯತಿ ನರಸಿಂಗಾನಂದ ಮತ್ತೊಮ್ಮೆ ನಾಲಿಗೆ ಹರಿಬಿಟ್ಟಿದ್ದಾರೆ.

- Advertisement -
- Advertisement -

75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೇಂದ್ರ ಸರ್ಕಾರ ಆರಂಭಿಸಿರುವ “ಹರ್ ಘರ್ ತಿರಂಗ” ಅಭಿಯಾನವನ್ನು ಬಹಿಷ್ಕರಿಸುವಂತೆ ಹಿಂದುತ್ವವಾದಿ ಯತಿ ನರಸಿಂಗಾನಂದ ಹಿಂದೂಗಳಿಗೆ ತಿಳಿಸಿದ್ದಾರೆ.

ದ್ವೇಷ ಭಾಷಣಗಳಿಗೆ ಕುಖ್ಯಾತಿ ಪಡೆದಿರುವ, ಭಾರತದ ಸಂವಿಧಾನದ ಬಗ್ಗೆ ಅಗೌರವವನ್ನು ಹೊಂದಿರುವ ಯತಿ ನರಸಿಂಗಾನಂದ ಮತ್ತೊಮ್ಮೆ ತಮ್ಮ ಪ್ರವೃತ್ತಿಯನ್ನು ಮುಂದುವರಿಸಿದ್ದು, “ಹರ್‌ ಘರ್‌ ತಿರಂಗ ಅಭಿಯಾನದಿಂದ ಮುಸ್ಲಿಂ ಒಡೆತನದ ಸಂಸ್ಥೆಗೆ ಲಾಭವಾಗುತ್ತಿದೆ. ತಿರಂಗ ಧ್ವಜ ಹಾರಿಸುವ ಬದಲು ಹಿಂದೂಗಳು ತಮ್ಮ ಮನೆಯ ಮೇಲೆ ಭಗವಾ ಧ್ವಜ (ಕೇಸರಿ ಧ್ವಜ) ಹಾರಿಸಬೇಕು” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ಅಭಿಯಾನಕ್ಕಾಗಿ [ಧ್ವಜಗಳನ್ನು ಸಂಗ್ರಹಿಸುವ] ಅತಿದೊಡ್ಡ ಆದೇಶವನ್ನು ಪಶ್ಚಿಮ ಬಂಗಾಳದ ಸಲಾವುದ್ದೀನ್ ಒಡೆತನದ ಕಂಪನಿಗೆ ನೀಡಲಾಗಿದೆ. ಇದು ಹಿಂದೂಗಳ ವಿರುದ್ಧದ ಒಂದು ದೊಡ್ಡ ಪಿತೂರಿ. ನೀವು [ಹಿಂದೂಗಳು] ಜೀವಂತವಾಗಿರಲು ಬಯಸಿದರೆ, ಈ ಅಭಿಯಾನದ ಹೆಸರಿನಲ್ಲಿ ನಿಮ್ಮ ಹಣವನ್ನು ಮುಸ್ಲಿಮರಿಗೆ ನೀಡುವುದನ್ನು ನಿಲ್ಲಿಸಿ” ಎಂದು ನರಸಿಂಗಾನಂದ ನಾಲಿಗೆ ಹರಿಬಿಟ್ಟಿದ್ದಾರೆ.

ಆಗಸ್ಟ್ 13 ರಿಂದ ಆಗಸ್ಟ್ 15ರವರೆಗೆ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ “ಹರ್ ಘರ್ ತಿರಂಗ” ಅಭಿಯಾನದಲ್ಲಿ ಪಾಲ್ಗೊಳ್ಳವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

“ಹಿಂದೂ ರಾಜಕಾರಣಿಗಳು ಮುಸ್ಲಿಮರ ಆರ್ಥಿಕ ಬಹಿಷ್ಕಾರಕ್ಕಾಗಿ ಪ್ರಚಾರ ಮಾಡುತ್ತಾರೆ. ಆದರೆ ಅಧಿಕಾರಕ್ಕೆ ಬಂದ ನಂತರ ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಗಳನ್ನು ನೀಡುತ್ತಾರೆ” ಎಂದು ನರಸಿಂಹಾನಂದ ಆರೋಪಿಸಿರುವ ವಿಡಿಯೊ ವೈರಲ್ ಆಗುತ್ತಿದೆ.

ಈ ರಾಜಕಾರಣಿಗಳಿಗೆ ತಕ್ಕ ಪಾಠ ಕಲಿಸಿ ಎಂದಿರುವ ನರಸಿಂಗಾನಂದ, “ರಾಜಕಾರಣಿಗಳು ನಿಮ್ಮ [ಹಿಂದೂಗಳ] ಹಣವನ್ನು ಮುಸ್ಲಿಮರನ್ನು ಶ್ರೀಮಂತರನ್ನಾಗಿ ಮಾಡಲು ಬಳಸಬಾರದು. ನಿಮ್ಮ ಮಕ್ಕಳನ್ನು ಕೊಲ್ಲಲು ವ್ಯವಸ್ಥೆ ಮಾಡಬಾರು. ಇವರ ಬಲೆಗೆ ಬೀಳಬೇಡಿ” ಎಂದಿದ್ದಾರೆ.

“ಹಿಂದೂಗಳು ರಾಷ್ಟ್ರಧ್ವಜವನ್ನು ಹಾರಿಸಬಾರದು. ಅದು ಹಿಂದೂಗಳಿಗೆ ಹಾನಿಯುಂಟುಮಾಡುತ್ತದೆ. ಪ್ರತಿಯೊಬ್ಬ ಹಿಂದೂ ತನ್ನ ಮನೆಯ ಮೇಲೆ ಕೇಸರಿ ಬಣ್ಣದ ಧ್ವಜವನ್ನು ಹಾರಿಸಬೇಕು” ಎಂದು ಪ್ರತಿಪಾದಿಸಿದ್ದಾರೆ.

ಹರಿದ್ವಾರದಲ್ಲಿ ನಡೆದ ಧಾರ್ಮಿಕ ಸಮಾವೇಶದಲ್ಲಿ ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ ನಂತರ ಜನವರಿ 15ರಂದು ನರಸಿಂಗಾನಂದ ಬಂಧನಕ್ಕೊಳಗಾಗಿದ್ದರು. “ಸಮುದಾಯಗಳ ನಡುವೆ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸುವ ಉದ್ದೇಶದಿಂದ” ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂಬ ಷರತ್ತಿನ ಮೇಲೆ ಫೆಬ್ರವರಿ 7ರಂದು ಅವರಿಗೆ ಜಾಮೀನು ನೀಡಲಾಗಿದೆ.

ಆದಾಗ್ಯೂ, ಏಪ್ರಿಲ್ 17 ರಂದು, ಅವರು ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಡೆದ ಧಾರ್ಮಿಕ ಸಮಾವೇಶದಲ್ಲಿ ಮತ್ತೊಂದು ಪ್ರಚೋದನಾತ್ಮಕ ಭಾಷಣವನ್ನು ನರಸಿಂಗಾನಂದ ಮಾಡಿದ್ದರು. ಭಾರತವು ಇಸ್ಲಾಮಿಕ್ ರಾಷ್ಟ್ರವಾಗದಂತೆ ತಡೆಯಲು ಹಿಂದೂಗಳು ಹೆಚ್ಚು ಮಕ್ಕಳನ್ನು ಹುಟ್ಟಿಸಬೇಕು ಎಂದು ಹೇಳಿಕೆ ನೀಡಿದ್ದರು.

ಕಳೆದ ಜೂನ್‌ನಲ್ಲಿ ಮತ್ತೆ ನಾಲಿಗೆ ಹರಿಬಿಟ್ಟಿದ್ದ ಯತಿ ನರಸಿಂಗಾನಂದ, “ಮಹಾತ್ಮ ಗಾಂಧಿ ಭಾರತೀಯ ಮುಸ್ಲಿಮರಿಗೆ ಹಕ್ಕುಗಳನ್ನು ನೀಡಿದರು. ಗಾಂಧಿ ಕಾರಣದಿಂದಾಗಿ 100 ಕೋಟಿ ಹಿಂದೂ ಸಮುದಾಯಕ್ಕೆ ತಮ್ಮದೇ ಆದ ಒಂದು ಇಂಚು ಭೂಮಿ ಇಲ್ಲ” ಎಂದು ಆರೋಪಿಸಿದ್ದರು. ಉತ್ತರ ಪ್ರದೇಶದ ಗಾಜಿಯಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿರಿ: ಹಿಂದೂ ಮಹಾಪಂಚಾಯತ್‌ ಆಯೋಜಕನ ವಿಕೃತಿ ಅನಾವರಣ; ಸರಣಿ ಅತ್ಯಾಚಾರದಿಂದ ನೊಂದ ಪತ್ನಿಯಿಂದ ಪ್ರಕರಣ ದಾಖಲು

ಮುಸ್ಸೂರಿ ಪೊಲೀಸ್ ಠಾಣೆಯಲ್ಲಿ ನರಸಿಂಗಾನಂದ ಸರಸ್ವತಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505(2) (ವರ್ಗಗಳ ನಡುವೆ ದ್ವೇಷ ಉತ್ತೇಜಿಸುವ ಹೇಳಿಕೆಗಳು), 153ಬಿ (ರಾಷ್ಟ್ರೀಯ ಏಕೀಕರಣಕ್ಕೆ ಹಾನಿಯುಂಟುಮಾಡುವ ಆರೋಪ) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ದ್ವೇಷ ಭಾಷಣ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡುತ್ತಾ ನರಸಿಂಗಾನಂದ, “ನಮಗೆ ಭಾರತದ ಸುಪ್ರೀಂ ಕೋರ್ಟ್ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಈ ದೇಶದ 100 ಕೋಟಿ ಹಿಂದೂಗಳನ್ನು ಸಂವಿಧಾನ ಕೊಲ್ಲುತ್ತಿದೆ. ಈ ಸಂವಿಧಾನವನ್ನು ನಂಬಿದವರನ್ನು ಕೊಲ್ಲಲಾಗುತ್ತದೆ. ಈ ವ್ಯವಸ್ಥೆಯನ್ನು ನಂಬುವವರು, ಈ ರಾಜಕಾರಣಿಗಳು, ಸುಪ್ರೀಂ ಕೋರ್ಟ್ ಮತ್ತು ಸೈನ್ಯದಲ್ಲಿರುವವರು ಎಲ್ಲರೂ ನಾಯಿಯಂತೆ ಸಾಯುತ್ತಾರೆ” ಎಂದು ಮತ್ತೊಮ್ಮೆ ಪ್ರಚೋದನೆ ನೀಡಿದ್ದರು.

ಹೀಗೆ ದ್ವೇಷ ಭಾಷಣಗಳ ಬಹುದೊಡ್ಡ ಇತಿಹಾಸ ಹೊಂದಿರುವ ಯತಿ ನರಸಿಂಗಾನಂದ ಮತ್ತೆ ಮತ್ತೆ ಜಾಮೀನು ಪಡೆದು ಹೊರಬಂದು ದ್ವೇಷ ಭಾಷಣಗಳನ್ನು ಮಾಡುತ್ತಾ ಸಮಾಜದಲ್ಲಿ ಕ್ಷೋಭೆಯನ್ನು ಉಂಟು ಮಾಡುತ್ತಲೇ ಇದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ನರಸಿಂಗಾನಂದನ ವಿರುದ್ಧ ಈ ಕೂಡಲೇ ಕಾನೂನು ಕ್ರಮವನ್ನು ಜರುಗಿಸಬೇಕು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...