Homeಮುಖಪುಟ‘ಬಾಯ್ಸ್ ಲಾಕರ್ ರೂಮ್’ ವಿವಾದ: ಆರೋಪಿ ಅಪ್ರಾಪ್ತ ಬಾಲಕನೊಬ್ಬನ ಬಂಧನ

‘ಬಾಯ್ಸ್ ಲಾಕರ್ ರೂಮ್’ ವಿವಾದ: ಆರೋಪಿ ಅಪ್ರಾಪ್ತ ಬಾಲಕನೊಬ್ಬನ ಬಂಧನ

- Advertisement -
- Advertisement -

ವಿವಾದಾತ್ಮಕ ಇನ್‌ಸ್ಟಾಗ್ರಾಮ್ ಚಾಟ್ ಗ್ರೂಪ್ ‘ಬಾಯ್ಸ್ ಲಾಕರ್ ರೂಮ್’ ಕುರಿತಂತೆ ದೆಹಲಿಯ ಅಪ್ರಾಪ್ರ ಶಾಲಾ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು “ದಿ ಕ್ವಿಂಟ್” ವರದಿ ಮಾಡಿದೆ.

ದಕ್ಷಿಣ ದೆಹಲಿಯ ನೂರಾರು ಬಾಲಕರು ಇನ್ಸ್ಟ್ರಾಗ್ರಾಮ್ ಗುಂಪೊಂದರಲ್ಲಿ ಅಪ್ರಾಪ್ತ ಬಾಲಕಿಯರ ಅಶ್ಲೀಲ ಫೋಟೋಗಳನ್ನು ಹಂಚಿಕೊಂಡು ಗುಂಪು ಅತ್ಯಾಚಾರ ಮಾಡುವಂತೆ ಉತ್ತೇಜಿಸಲಾಗಿದೆ ಎಂದು ಮೇ 3 ರ ಭಾನುವಾರದಂದು ಟ್ವಿಟರ್‌ನಲ್ಲಿ ಬಳಕೆದಾರರೊಬ್ಬರು ಬಹಿರಂಗಪಡಿಸಿದ್ದರು.

ಬಾಲಕರು ಅಪ್ರಾಪ್ತ ಬಾಲಕಿಯರ ಮಾರ್ಫ್ (ಫೋಟೊಶಾಪ್‌) ಮಾಡಿದ ಫೋಟೋಗಳನ್ನು ಹಂಚಿಕೊಂಡು ಅವಮಾನಿಸುತ್ತಿದ್ದಾರೆ ಎಂದು ಅದರಲ್ಲಿ ದೂರಲಾಗಿತ್ತು.

ದೆಹಲಿಯ ಕ್ರೈಂ ಬ್ರಾಂಚ್ ಸೆಲ್ ಪೊಲೀಸರು ಈ ಬಗ್ಗೆ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಆಧಾರದ ಮೇಲೆ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಇಂತಹದ್ದೇ ಪ್ರತ್ಯೇಕ ಘಟನೆಯೊಂದರಲ್ಲಿ ವೈರಲ್ ಆಗಿರುವ ಮತ್ತೊಂದು ಸ್ಕ್ರೀನ್‌ಶಾಟ್ ಅಪ್ರಾಪ್ತ ಬಾಲಕರು ‘ಸಾಮೂಹಿಕ ಅತ್ಯಾಚಾರವನ್ನು ಯೋಜಿಸುತ್ತಿದ್ದಾರೆ’ ಹಾಗೂ ಅಂತಹ ಅಶ್ಲೀಲ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಏನಿದು ಘಟನೆ ?

ದಕ್ಷಿಣ ದೆಹಲಿಯ ಶಾಲಾಕಾಲೇಜುಗಳ ಬಾಲಕರು “ಬಾಯ್ಸ್ ಲಾಕರ್‌ ರೂಮ್” ಎಂಬ ಗುಂಪನ್ನು ಇನ್ಸ್ಟಾಗ್ರಾಮಿನಲ್ಲಿ ರಚಿಸಿಕೊಂಡಿದ್ದರು. ಅದರಲ್ಲಿ ಈ ಬಾಲಕರು ತಮ್ಮ ಪರಿಚಯದ, ದೈನಂದಿನ ಒಡನಾಟದ ಹುಡುಗಿಯರ ಬಗ್ಗೆ ಅಶ್ಲೀಲವಾಗಿ ಮಾತನಾಡುತ್ತಾ, ಅವರ ಚಿತ್ರಗಳನ್ನ ಬೆತ್ತಲೆ ಚಿತ್ರಗಳ ಮೇಲೆ ಮಾರ್ಫ್ ಮಾಡಿ ಶೇರ್ ಮಾಡುತ್ತಿದ್ದರು.

ಕೆಲವರು ಒಂದು ಬಾಲಕಿಯ ಚಿತ್ರವನ್ನು ಮುಂದಿಟ್ಟುಕೊಂಡು ಆಕೆಯನ್ನ ಗ್ಯಾಂಗ್’ರೇಪ್ ಮಾಡುವ ಹುನ್ನಾರದಲ್ಲಿದ್ದರು, ಇಷ್ಟೆಲ್ಲಾ ಅವಾಂತರಗಳು ನಕಲಿ ಅಕೌಂಟ್ ರಚಿಸಿ ಆ ಗುಂಪಿನೊಳಗೆ ನುಸುಳಿದ ಬಾಲಕಿಯೊಬ್ಬಳಿಂದ ಬಯಲಾಗಿವೆ. ಈ ಗುಂಪಿನ ಸದಸ್ಯರಲ್ಲಿ 14 ವಯಸ್ಸಿನಿಂದ ಹಿಡಿದು 18 ವಯೋಮಾನದವರೇ ಇದ್ದಿದ್ದು ವಿಶೇಷವಾಗಿದೆ.

ಈ ಗುಂಪಿನ ಬಗ್ಗೆ ನಿನ್ನೆ ಟ್ವಿಟರ್ ಮತ್ತು ಇನ್ಸ್ಟಾಗ್ರಾಮುಗಳಲ್ಲಿ ಬಹಿರಂಗವಾಗಿದ್ದು, ಭಾರೀ ವಿವಾದವನ್ನು ಎಬ್ಬಿದಿದೆ. ಇಂದು ಟ್ವಿಟ್ಟರ್‌ ನಲ್ಲಿ ’ಬಾಯ್ಸ್ ಲಾಕರ್ ರೂಮ್’ ಘಟನೆಯ ಬಗ್ಗೆ #boyslockerroom ಎಂದು ಹ್ಯಾಶ್‌ಟ್ಯಾಗ್‌ ಟ್ರೆಂಡ್ ಆಗಿದೆ.

ಇದರ ವಿರುದ್ದವಾಗಿ ಈಗ #girlslockerroom ಎಂಬ ಹ್ಯಾಸ್‌ಟ್ಯಾಗ್‌ ಟ್ರೆಂಡ್ ಆಗುತ್ತಿದ್ದು ಮಹಿಳೆಯರು ಕೂಡಾ ಅಶ್ಲೀಲವಾಗಿ ಮಾತನಾಡುತ್ತಿದ್ದಾರೆ ಎಂದು ಆರೋಪಗಳೆದ್ದಿದೆ.


ಇದನ್ನೂ ಓದಿ: `ಮಹಿಳೆಯರ ಮೇಲಿನ ದೌರ್ಜನ್ಯ ವಿರೋಧಿಸುವುದು ಪಕ್ಷ, ಪಂಥಗಳ ಪರ-ವಿರೋಧವಲ್ಲ; ಮಾನವೀಯತೆಯ ವಿಚಾರ’


ನಾನು ಗೌರಿ ಯೂಟ್ಯೂಬ್ ಚಾನೆಲನ್ನು Subscribe ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...