Homeಮುಖಪುಟ‘ಬಾಯ್ಸ್ ಲಾಕರ್ ರೂಮ್’ ವಿವಾದ: ಆರೋಪಿ ಅಪ್ರಾಪ್ತ ಬಾಲಕನೊಬ್ಬನ ಬಂಧನ

‘ಬಾಯ್ಸ್ ಲಾಕರ್ ರೂಮ್’ ವಿವಾದ: ಆರೋಪಿ ಅಪ್ರಾಪ್ತ ಬಾಲಕನೊಬ್ಬನ ಬಂಧನ

- Advertisement -
- Advertisement -

ವಿವಾದಾತ್ಮಕ ಇನ್‌ಸ್ಟಾಗ್ರಾಮ್ ಚಾಟ್ ಗ್ರೂಪ್ ‘ಬಾಯ್ಸ್ ಲಾಕರ್ ರೂಮ್’ ಕುರಿತಂತೆ ದೆಹಲಿಯ ಅಪ್ರಾಪ್ರ ಶಾಲಾ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು “ದಿ ಕ್ವಿಂಟ್” ವರದಿ ಮಾಡಿದೆ.

ದಕ್ಷಿಣ ದೆಹಲಿಯ ನೂರಾರು ಬಾಲಕರು ಇನ್ಸ್ಟ್ರಾಗ್ರಾಮ್ ಗುಂಪೊಂದರಲ್ಲಿ ಅಪ್ರಾಪ್ತ ಬಾಲಕಿಯರ ಅಶ್ಲೀಲ ಫೋಟೋಗಳನ್ನು ಹಂಚಿಕೊಂಡು ಗುಂಪು ಅತ್ಯಾಚಾರ ಮಾಡುವಂತೆ ಉತ್ತೇಜಿಸಲಾಗಿದೆ ಎಂದು ಮೇ 3 ರ ಭಾನುವಾರದಂದು ಟ್ವಿಟರ್‌ನಲ್ಲಿ ಬಳಕೆದಾರರೊಬ್ಬರು ಬಹಿರಂಗಪಡಿಸಿದ್ದರು.

ಬಾಲಕರು ಅಪ್ರಾಪ್ತ ಬಾಲಕಿಯರ ಮಾರ್ಫ್ (ಫೋಟೊಶಾಪ್‌) ಮಾಡಿದ ಫೋಟೋಗಳನ್ನು ಹಂಚಿಕೊಂಡು ಅವಮಾನಿಸುತ್ತಿದ್ದಾರೆ ಎಂದು ಅದರಲ್ಲಿ ದೂರಲಾಗಿತ್ತು.

ದೆಹಲಿಯ ಕ್ರೈಂ ಬ್ರಾಂಚ್ ಸೆಲ್ ಪೊಲೀಸರು ಈ ಬಗ್ಗೆ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಆಧಾರದ ಮೇಲೆ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಇಂತಹದ್ದೇ ಪ್ರತ್ಯೇಕ ಘಟನೆಯೊಂದರಲ್ಲಿ ವೈರಲ್ ಆಗಿರುವ ಮತ್ತೊಂದು ಸ್ಕ್ರೀನ್‌ಶಾಟ್ ಅಪ್ರಾಪ್ತ ಬಾಲಕರು ‘ಸಾಮೂಹಿಕ ಅತ್ಯಾಚಾರವನ್ನು ಯೋಜಿಸುತ್ತಿದ್ದಾರೆ’ ಹಾಗೂ ಅಂತಹ ಅಶ್ಲೀಲ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಏನಿದು ಘಟನೆ ?

ದಕ್ಷಿಣ ದೆಹಲಿಯ ಶಾಲಾಕಾಲೇಜುಗಳ ಬಾಲಕರು “ಬಾಯ್ಸ್ ಲಾಕರ್‌ ರೂಮ್” ಎಂಬ ಗುಂಪನ್ನು ಇನ್ಸ್ಟಾಗ್ರಾಮಿನಲ್ಲಿ ರಚಿಸಿಕೊಂಡಿದ್ದರು. ಅದರಲ್ಲಿ ಈ ಬಾಲಕರು ತಮ್ಮ ಪರಿಚಯದ, ದೈನಂದಿನ ಒಡನಾಟದ ಹುಡುಗಿಯರ ಬಗ್ಗೆ ಅಶ್ಲೀಲವಾಗಿ ಮಾತನಾಡುತ್ತಾ, ಅವರ ಚಿತ್ರಗಳನ್ನ ಬೆತ್ತಲೆ ಚಿತ್ರಗಳ ಮೇಲೆ ಮಾರ್ಫ್ ಮಾಡಿ ಶೇರ್ ಮಾಡುತ್ತಿದ್ದರು.

ಕೆಲವರು ಒಂದು ಬಾಲಕಿಯ ಚಿತ್ರವನ್ನು ಮುಂದಿಟ್ಟುಕೊಂಡು ಆಕೆಯನ್ನ ಗ್ಯಾಂಗ್’ರೇಪ್ ಮಾಡುವ ಹುನ್ನಾರದಲ್ಲಿದ್ದರು, ಇಷ್ಟೆಲ್ಲಾ ಅವಾಂತರಗಳು ನಕಲಿ ಅಕೌಂಟ್ ರಚಿಸಿ ಆ ಗುಂಪಿನೊಳಗೆ ನುಸುಳಿದ ಬಾಲಕಿಯೊಬ್ಬಳಿಂದ ಬಯಲಾಗಿವೆ. ಈ ಗುಂಪಿನ ಸದಸ್ಯರಲ್ಲಿ 14 ವಯಸ್ಸಿನಿಂದ ಹಿಡಿದು 18 ವಯೋಮಾನದವರೇ ಇದ್ದಿದ್ದು ವಿಶೇಷವಾಗಿದೆ.

ಈ ಗುಂಪಿನ ಬಗ್ಗೆ ನಿನ್ನೆ ಟ್ವಿಟರ್ ಮತ್ತು ಇನ್ಸ್ಟಾಗ್ರಾಮುಗಳಲ್ಲಿ ಬಹಿರಂಗವಾಗಿದ್ದು, ಭಾರೀ ವಿವಾದವನ್ನು ಎಬ್ಬಿದಿದೆ. ಇಂದು ಟ್ವಿಟ್ಟರ್‌ ನಲ್ಲಿ ’ಬಾಯ್ಸ್ ಲಾಕರ್ ರೂಮ್’ ಘಟನೆಯ ಬಗ್ಗೆ #boyslockerroom ಎಂದು ಹ್ಯಾಶ್‌ಟ್ಯಾಗ್‌ ಟ್ರೆಂಡ್ ಆಗಿದೆ.

ಇದರ ವಿರುದ್ದವಾಗಿ ಈಗ #girlslockerroom ಎಂಬ ಹ್ಯಾಸ್‌ಟ್ಯಾಗ್‌ ಟ್ರೆಂಡ್ ಆಗುತ್ತಿದ್ದು ಮಹಿಳೆಯರು ಕೂಡಾ ಅಶ್ಲೀಲವಾಗಿ ಮಾತನಾಡುತ್ತಿದ್ದಾರೆ ಎಂದು ಆರೋಪಗಳೆದ್ದಿದೆ.


ಇದನ್ನೂ ಓದಿ: `ಮಹಿಳೆಯರ ಮೇಲಿನ ದೌರ್ಜನ್ಯ ವಿರೋಧಿಸುವುದು ಪಕ್ಷ, ಪಂಥಗಳ ಪರ-ವಿರೋಧವಲ್ಲ; ಮಾನವೀಯತೆಯ ವಿಚಾರ’


ನಾನು ಗೌರಿ ಯೂಟ್ಯೂಬ್ ಚಾನೆಲನ್ನು Subscribe ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...