Homeಮುಖಪುಟ‘ಬಾಯ್ಸ್ ಲಾಕರ್ ರೂಮ್’ ವಿವಾದ: ಆರೋಪಿ ಅಪ್ರಾಪ್ತ ಬಾಲಕನೊಬ್ಬನ ಬಂಧನ

‘ಬಾಯ್ಸ್ ಲಾಕರ್ ರೂಮ್’ ವಿವಾದ: ಆರೋಪಿ ಅಪ್ರಾಪ್ತ ಬಾಲಕನೊಬ್ಬನ ಬಂಧನ

- Advertisement -
- Advertisement -

ವಿವಾದಾತ್ಮಕ ಇನ್‌ಸ್ಟಾಗ್ರಾಮ್ ಚಾಟ್ ಗ್ರೂಪ್ ‘ಬಾಯ್ಸ್ ಲಾಕರ್ ರೂಮ್’ ಕುರಿತಂತೆ ದೆಹಲಿಯ ಅಪ್ರಾಪ್ರ ಶಾಲಾ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು “ದಿ ಕ್ವಿಂಟ್” ವರದಿ ಮಾಡಿದೆ.

ದಕ್ಷಿಣ ದೆಹಲಿಯ ನೂರಾರು ಬಾಲಕರು ಇನ್ಸ್ಟ್ರಾಗ್ರಾಮ್ ಗುಂಪೊಂದರಲ್ಲಿ ಅಪ್ರಾಪ್ತ ಬಾಲಕಿಯರ ಅಶ್ಲೀಲ ಫೋಟೋಗಳನ್ನು ಹಂಚಿಕೊಂಡು ಗುಂಪು ಅತ್ಯಾಚಾರ ಮಾಡುವಂತೆ ಉತ್ತೇಜಿಸಲಾಗಿದೆ ಎಂದು ಮೇ 3 ರ ಭಾನುವಾರದಂದು ಟ್ವಿಟರ್‌ನಲ್ಲಿ ಬಳಕೆದಾರರೊಬ್ಬರು ಬಹಿರಂಗಪಡಿಸಿದ್ದರು.

ಬಾಲಕರು ಅಪ್ರಾಪ್ತ ಬಾಲಕಿಯರ ಮಾರ್ಫ್ (ಫೋಟೊಶಾಪ್‌) ಮಾಡಿದ ಫೋಟೋಗಳನ್ನು ಹಂಚಿಕೊಂಡು ಅವಮಾನಿಸುತ್ತಿದ್ದಾರೆ ಎಂದು ಅದರಲ್ಲಿ ದೂರಲಾಗಿತ್ತು.

ದೆಹಲಿಯ ಕ್ರೈಂ ಬ್ರಾಂಚ್ ಸೆಲ್ ಪೊಲೀಸರು ಈ ಬಗ್ಗೆ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಆಧಾರದ ಮೇಲೆ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಇಂತಹದ್ದೇ ಪ್ರತ್ಯೇಕ ಘಟನೆಯೊಂದರಲ್ಲಿ ವೈರಲ್ ಆಗಿರುವ ಮತ್ತೊಂದು ಸ್ಕ್ರೀನ್‌ಶಾಟ್ ಅಪ್ರಾಪ್ತ ಬಾಲಕರು ‘ಸಾಮೂಹಿಕ ಅತ್ಯಾಚಾರವನ್ನು ಯೋಜಿಸುತ್ತಿದ್ದಾರೆ’ ಹಾಗೂ ಅಂತಹ ಅಶ್ಲೀಲ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಏನಿದು ಘಟನೆ ?

ದಕ್ಷಿಣ ದೆಹಲಿಯ ಶಾಲಾಕಾಲೇಜುಗಳ ಬಾಲಕರು “ಬಾಯ್ಸ್ ಲಾಕರ್‌ ರೂಮ್” ಎಂಬ ಗುಂಪನ್ನು ಇನ್ಸ್ಟಾಗ್ರಾಮಿನಲ್ಲಿ ರಚಿಸಿಕೊಂಡಿದ್ದರು. ಅದರಲ್ಲಿ ಈ ಬಾಲಕರು ತಮ್ಮ ಪರಿಚಯದ, ದೈನಂದಿನ ಒಡನಾಟದ ಹುಡುಗಿಯರ ಬಗ್ಗೆ ಅಶ್ಲೀಲವಾಗಿ ಮಾತನಾಡುತ್ತಾ, ಅವರ ಚಿತ್ರಗಳನ್ನ ಬೆತ್ತಲೆ ಚಿತ್ರಗಳ ಮೇಲೆ ಮಾರ್ಫ್ ಮಾಡಿ ಶೇರ್ ಮಾಡುತ್ತಿದ್ದರು.

ಕೆಲವರು ಒಂದು ಬಾಲಕಿಯ ಚಿತ್ರವನ್ನು ಮುಂದಿಟ್ಟುಕೊಂಡು ಆಕೆಯನ್ನ ಗ್ಯಾಂಗ್’ರೇಪ್ ಮಾಡುವ ಹುನ್ನಾರದಲ್ಲಿದ್ದರು, ಇಷ್ಟೆಲ್ಲಾ ಅವಾಂತರಗಳು ನಕಲಿ ಅಕೌಂಟ್ ರಚಿಸಿ ಆ ಗುಂಪಿನೊಳಗೆ ನುಸುಳಿದ ಬಾಲಕಿಯೊಬ್ಬಳಿಂದ ಬಯಲಾಗಿವೆ. ಈ ಗುಂಪಿನ ಸದಸ್ಯರಲ್ಲಿ 14 ವಯಸ್ಸಿನಿಂದ ಹಿಡಿದು 18 ವಯೋಮಾನದವರೇ ಇದ್ದಿದ್ದು ವಿಶೇಷವಾಗಿದೆ.

ಈ ಗುಂಪಿನ ಬಗ್ಗೆ ನಿನ್ನೆ ಟ್ವಿಟರ್ ಮತ್ತು ಇನ್ಸ್ಟಾಗ್ರಾಮುಗಳಲ್ಲಿ ಬಹಿರಂಗವಾಗಿದ್ದು, ಭಾರೀ ವಿವಾದವನ್ನು ಎಬ್ಬಿದಿದೆ. ಇಂದು ಟ್ವಿಟ್ಟರ್‌ ನಲ್ಲಿ ’ಬಾಯ್ಸ್ ಲಾಕರ್ ರೂಮ್’ ಘಟನೆಯ ಬಗ್ಗೆ #boyslockerroom ಎಂದು ಹ್ಯಾಶ್‌ಟ್ಯಾಗ್‌ ಟ್ರೆಂಡ್ ಆಗಿದೆ.

ಇದರ ವಿರುದ್ದವಾಗಿ ಈಗ #girlslockerroom ಎಂಬ ಹ್ಯಾಸ್‌ಟ್ಯಾಗ್‌ ಟ್ರೆಂಡ್ ಆಗುತ್ತಿದ್ದು ಮಹಿಳೆಯರು ಕೂಡಾ ಅಶ್ಲೀಲವಾಗಿ ಮಾತನಾಡುತ್ತಿದ್ದಾರೆ ಎಂದು ಆರೋಪಗಳೆದ್ದಿದೆ.


ಇದನ್ನೂ ಓದಿ: `ಮಹಿಳೆಯರ ಮೇಲಿನ ದೌರ್ಜನ್ಯ ವಿರೋಧಿಸುವುದು ಪಕ್ಷ, ಪಂಥಗಳ ಪರ-ವಿರೋಧವಲ್ಲ; ಮಾನವೀಯತೆಯ ವಿಚಾರ’


ನಾನು ಗೌರಿ ಯೂಟ್ಯೂಬ್ ಚಾನೆಲನ್ನು Subscribe ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...