Homeಅಂತರಾಷ್ಟ್ರೀಯಬ್ರಹ್ಮಪುತ್ರ ನದಿಗೆ ವಿಶ್ವದ ಅತಿದೊಡ್ಡ ಅಣೆಕಟ್ಟು ಕಟ್ಟಲು ಮುಂದಾದ ಚೀನಾ; ಭಾರತ, ಬಾಂಗ್ಲಾದೇಶದಲ್ಲಿ ಆತಂಕ

ಬ್ರಹ್ಮಪುತ್ರ ನದಿಗೆ ವಿಶ್ವದ ಅತಿದೊಡ್ಡ ಅಣೆಕಟ್ಟು ಕಟ್ಟಲು ಮುಂದಾದ ಚೀನಾ; ಭಾರತ, ಬಾಂಗ್ಲಾದೇಶದಲ್ಲಿ ಆತಂಕ

- Advertisement -
- Advertisement -

ಭಾರತದ ಗಡಿಗೆ ಸಮೀಪವಿರುವ ಟಿಬೆಟ್‌ನಲ್ಲಿ ಬ್ರಹ್ಮಪುತ್ರ ನದಿಗೆ ವಿಶ್ವದ ಅತಿದೊಡ್ಡ ಅಣೆಕಟ್ಟು ನಿರ್ಮಾಣಕ್ಕೆ ಚೀನಾ ಅನುಮೋದನೆ ನೀಡಿದೆ ಎಂದು ಚೀನಾದ ಸರ್ಕಾರಿ ಸುದ್ದಿ ಸಂಸ್ಥೆ ಕ್ಸಿನ್ಹುವಾ ಬುಧವಾರ ವರದಿ ಮಾಡಿದೆ. ಯೋಜನೆಯನ್ನು ಮೊದಲ ಬಾರಿಗೆ 2020 ರಲ್ಲಿ ಘೋಷಿಸಲಾಗಿತ್ತು. ಯೋಜನೆಗೆ $137 ಶತಕೋಟಿ ವೆಚ್ಚ ತಗುಲಲಿದ್ದು, ವಿಶ್ವದ ಅತ್ಯಂತ ದುಬಾರಿ ಮೂಲಸೌಕರ್ಯ ಯೋಜನೆಯಾಗಲಿದೆ. ಯೋಜನೆಯ ನಿರ್ಮಾಣ ಯಾವಾಗ ಪ್ರಾರಂಭವಾಗಲಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಬ್ರಹ್ಮಪುತ್ರ ನದಿಗೆ ವಿಶ್ವದ

ಅರುಣಾಚಲ ಪ್ರದೇಶದ ಮೂಲಕ ಭಾರತವನ್ನು ಪ್ರವೇಶಿಸುವ ಮೊದಲು ಬ್ರಹ್ಮಪುತ್ರ ಯು-ಟರ್ನ್ ಮಾಡುವ ಹಿಮಾಲಯದ ವಿಶಾಲವಾದ ಕಂದರಕ್ಕೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಲು ಯೋಜಿಸಲಾಗಿದೆ. ನಂತರ ನದಿಯು ಬಂಗಾಳಕೊಲ್ಲಿಯನ್ನು ಸೇರುವ ಮೊದಲು ಬಾಂಗ್ಲಾದೇಶಕ್ಕೆ ಹರಿಯುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಯೋಜನೆಯು ವಿಶ್ವದ ಪ್ರಸ್ತುತ ಅತಿದೊಡ್ಡ ಜಲವಿದ್ಯುತ್ ಸ್ಥಾವರದ ಸಾಮರ್ಥ್ಯಕ್ಕಿಂತ ಮೂರು ಪಟ್ಟು ಹೆಚ್ಚು 300 ಶತಕೋಟಿ ಕಿಲೋವ್ಯಾಟ್ ಅನ್ನು ಉತ್ಪಾದಿಸುತ್ತದೆ ಎಂದು ಅಂದಾಜಿಸಲಾಗಿದೆ ಎಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ. ಬ್ರಹ್ಮಪುತ್ರ ನದಿಗೆ ವಿಶ್ವದ

ಪ್ರಪಂಚದ ಉಳಿದ ಭಾಗಗಳಲ್ಲಿ ಸೌರ ಮತ್ತು ಪವನ ಶಕ್ತಿ ಉತ್ಪಾದನಾ ಸಾಮರ್ಥ್ಯವನ್ನು ಸುಮಾರು ಎರಡು ಪಟ್ಟು ಸ್ಥಾಪಿಸಲು ಚೀನಾ ಯೋಜಿಸಿದೆ ಎಂದು ನವೆಂಬರ್‌ನಲ್ಲಿ ಗ್ಲೋಬಲ್ ಎನರ್ಜಿ ಮಾನಿಟರ್‌ನ ವರದಿಯು ಹೇಳಿತ್ತು. ಬ್ರಹ್ಮಪುತ್ರ ಅಣೆಕಟ್ಟು ಯೋಜನೆಯು ಚೀನಾಗೆ ತನ್ನ ಕಾರ್ಬನ್ ನ್ಯೂಟ್ರಾಲಿಟಿ ಗುರಿಗಳ ಕಡೆಗೆ ಗಮನಾರ್ಹ ಪ್ರಗತಿಯನ್ನು ಸಾಧಿಸಲು ಸಹಾಯ ಮಾಡುತ್ತದೆ.

ಆದಾಗ್ಯೂ, ಈ ಯೋಜನೆಯ ಬಗ್ಗೆ ಭಾರತ ಮತ್ತು ಬಾಂಗ್ಲಾದೇಶದಲ್ಲಿ ಆತಂಕ ವ್ಯಕ್ತವಾಗಿದೆ. ಈ ಅಣೆಕಟ್ಟು ಸ್ಥಳೀಯ ಪರಿಸರವನ್ನು ವ್ಯಾಪಕವಾಗಿ ಬದಲಾಗುತ್ತದೆ ಮತ್ತು ನದಿಯ ಹರಿವು ಮತ್ತು ಹಾದಿಯನ್ನು ಬದಲಾಗಲಿದೆ ಎಂದು ಹೇಳಲಾಗಿದೆ. ಜೊತೆಗೆ, ದೇಶಗಳ ನಡುವೆ ಸಂಘರ್ಷ ನಡೆಯುವ ಸಮಯದಲ್ಲಿ ಈ ಅಣೆಕಟ್ಟು ಚೀನಾಗೆ ಅಪಾರ ಲಾಭ ಮಾಡುತ್ತದೆ.

ಡಿಸೆಂಬರ್ 18 ರಂದು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ನಡುವಿನ ಸಭೆಯು ಗಡಿಯಾಚೆಗಿನ ನದಿಗಳ ದತ್ತಾಂಶ ಹಂಚಿಕೆ ಕುರಿತು “ಸಕಾರಾತ್ಮಕ” ಚರ್ಚೆಗಳನ್ನು ನಡೆಸಲಾಗಿದೆ ಎಂದು ವರದಿಯಾಗಿತ್ತು.

ಇದನ್ನೂ ಓದಿ: ಮನಮೋಹನ್ ಸಿಂಗ್ ನಿಧನ | 7 ದಿನಗಳ ರಾಷ್ಟ್ರೀಯ ಶೋಕಾಚರಣೆ; ಇಂದು ಸರ್ಕಾರಿ ರಜೆ ಘೋಷಣೆ

ಮನಮೋಹನ್ ಸಿಂಗ್ ನಿಧನ | 7 ದಿನಗಳ ರಾಷ್ಟ್ರೀಯ ಶೋಕಾಚರಣೆ; ಇಂದು ಸರ್ಕಾರಿ ರಜೆ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...