Homeಅಂತರಾಷ್ಟ್ರೀಯಬ್ರಹ್ಮಪುತ್ರ ನದಿಗೆ ವಿಶ್ವದ ಅತಿದೊಡ್ಡ ಅಣೆಕಟ್ಟು ಕಟ್ಟಲು ಮುಂದಾದ ಚೀನಾ; ಭಾರತ, ಬಾಂಗ್ಲಾದೇಶದಲ್ಲಿ ಆತಂಕ

ಬ್ರಹ್ಮಪುತ್ರ ನದಿಗೆ ವಿಶ್ವದ ಅತಿದೊಡ್ಡ ಅಣೆಕಟ್ಟು ಕಟ್ಟಲು ಮುಂದಾದ ಚೀನಾ; ಭಾರತ, ಬಾಂಗ್ಲಾದೇಶದಲ್ಲಿ ಆತಂಕ

- Advertisement -
- Advertisement -

ಭಾರತದ ಗಡಿಗೆ ಸಮೀಪವಿರುವ ಟಿಬೆಟ್‌ನಲ್ಲಿ ಬ್ರಹ್ಮಪುತ್ರ ನದಿಗೆ ವಿಶ್ವದ ಅತಿದೊಡ್ಡ ಅಣೆಕಟ್ಟು ನಿರ್ಮಾಣಕ್ಕೆ ಚೀನಾ ಅನುಮೋದನೆ ನೀಡಿದೆ ಎಂದು ಚೀನಾದ ಸರ್ಕಾರಿ ಸುದ್ದಿ ಸಂಸ್ಥೆ ಕ್ಸಿನ್ಹುವಾ ಬುಧವಾರ ವರದಿ ಮಾಡಿದೆ. ಯೋಜನೆಯನ್ನು ಮೊದಲ ಬಾರಿಗೆ 2020 ರಲ್ಲಿ ಘೋಷಿಸಲಾಗಿತ್ತು. ಯೋಜನೆಗೆ $137 ಶತಕೋಟಿ ವೆಚ್ಚ ತಗುಲಲಿದ್ದು, ವಿಶ್ವದ ಅತ್ಯಂತ ದುಬಾರಿ ಮೂಲಸೌಕರ್ಯ ಯೋಜನೆಯಾಗಲಿದೆ. ಯೋಜನೆಯ ನಿರ್ಮಾಣ ಯಾವಾಗ ಪ್ರಾರಂಭವಾಗಲಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಬ್ರಹ್ಮಪುತ್ರ ನದಿಗೆ ವಿಶ್ವದ

ಅರುಣಾಚಲ ಪ್ರದೇಶದ ಮೂಲಕ ಭಾರತವನ್ನು ಪ್ರವೇಶಿಸುವ ಮೊದಲು ಬ್ರಹ್ಮಪುತ್ರ ಯು-ಟರ್ನ್ ಮಾಡುವ ಹಿಮಾಲಯದ ವಿಶಾಲವಾದ ಕಂದರಕ್ಕೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಲು ಯೋಜಿಸಲಾಗಿದೆ. ನಂತರ ನದಿಯು ಬಂಗಾಳಕೊಲ್ಲಿಯನ್ನು ಸೇರುವ ಮೊದಲು ಬಾಂಗ್ಲಾದೇಶಕ್ಕೆ ಹರಿಯುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಯೋಜನೆಯು ವಿಶ್ವದ ಪ್ರಸ್ತುತ ಅತಿದೊಡ್ಡ ಜಲವಿದ್ಯುತ್ ಸ್ಥಾವರದ ಸಾಮರ್ಥ್ಯಕ್ಕಿಂತ ಮೂರು ಪಟ್ಟು ಹೆಚ್ಚು 300 ಶತಕೋಟಿ ಕಿಲೋವ್ಯಾಟ್ ಅನ್ನು ಉತ್ಪಾದಿಸುತ್ತದೆ ಎಂದು ಅಂದಾಜಿಸಲಾಗಿದೆ ಎಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ. ಬ್ರಹ್ಮಪುತ್ರ ನದಿಗೆ ವಿಶ್ವದ

ಪ್ರಪಂಚದ ಉಳಿದ ಭಾಗಗಳಲ್ಲಿ ಸೌರ ಮತ್ತು ಪವನ ಶಕ್ತಿ ಉತ್ಪಾದನಾ ಸಾಮರ್ಥ್ಯವನ್ನು ಸುಮಾರು ಎರಡು ಪಟ್ಟು ಸ್ಥಾಪಿಸಲು ಚೀನಾ ಯೋಜಿಸಿದೆ ಎಂದು ನವೆಂಬರ್‌ನಲ್ಲಿ ಗ್ಲೋಬಲ್ ಎನರ್ಜಿ ಮಾನಿಟರ್‌ನ ವರದಿಯು ಹೇಳಿತ್ತು. ಬ್ರಹ್ಮಪುತ್ರ ಅಣೆಕಟ್ಟು ಯೋಜನೆಯು ಚೀನಾಗೆ ತನ್ನ ಕಾರ್ಬನ್ ನ್ಯೂಟ್ರಾಲಿಟಿ ಗುರಿಗಳ ಕಡೆಗೆ ಗಮನಾರ್ಹ ಪ್ರಗತಿಯನ್ನು ಸಾಧಿಸಲು ಸಹಾಯ ಮಾಡುತ್ತದೆ.

ಆದಾಗ್ಯೂ, ಈ ಯೋಜನೆಯ ಬಗ್ಗೆ ಭಾರತ ಮತ್ತು ಬಾಂಗ್ಲಾದೇಶದಲ್ಲಿ ಆತಂಕ ವ್ಯಕ್ತವಾಗಿದೆ. ಈ ಅಣೆಕಟ್ಟು ಸ್ಥಳೀಯ ಪರಿಸರವನ್ನು ವ್ಯಾಪಕವಾಗಿ ಬದಲಾಗುತ್ತದೆ ಮತ್ತು ನದಿಯ ಹರಿವು ಮತ್ತು ಹಾದಿಯನ್ನು ಬದಲಾಗಲಿದೆ ಎಂದು ಹೇಳಲಾಗಿದೆ. ಜೊತೆಗೆ, ದೇಶಗಳ ನಡುವೆ ಸಂಘರ್ಷ ನಡೆಯುವ ಸಮಯದಲ್ಲಿ ಈ ಅಣೆಕಟ್ಟು ಚೀನಾಗೆ ಅಪಾರ ಲಾಭ ಮಾಡುತ್ತದೆ.

ಡಿಸೆಂಬರ್ 18 ರಂದು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ನಡುವಿನ ಸಭೆಯು ಗಡಿಯಾಚೆಗಿನ ನದಿಗಳ ದತ್ತಾಂಶ ಹಂಚಿಕೆ ಕುರಿತು “ಸಕಾರಾತ್ಮಕ” ಚರ್ಚೆಗಳನ್ನು ನಡೆಸಲಾಗಿದೆ ಎಂದು ವರದಿಯಾಗಿತ್ತು.

ಇದನ್ನೂ ಓದಿ: ಮನಮೋಹನ್ ಸಿಂಗ್ ನಿಧನ | 7 ದಿನಗಳ ರಾಷ್ಟ್ರೀಯ ಶೋಕಾಚರಣೆ; ಇಂದು ಸರ್ಕಾರಿ ರಜೆ ಘೋಷಣೆ

ಮನಮೋಹನ್ ಸಿಂಗ್ ನಿಧನ | 7 ದಿನಗಳ ರಾಷ್ಟ್ರೀಯ ಶೋಕಾಚರಣೆ; ಇಂದು ಸರ್ಕಾರಿ ರಜೆ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...