Homeಮುಖಪುಟಬ್ರಾಹ್ಮಣ, ಬನಿಯಾ ಸಮುದಾಯದವರು ನನ್ನ ಜೇಬಿನಲ್ಲಿದ್ದಾರೆ: ಬಿಜೆಪಿ ನಾಯಕ ಮುರಳೀಧರ ರಾವ್‌

ಬ್ರಾಹ್ಮಣ, ಬನಿಯಾ ಸಮುದಾಯದವರು ನನ್ನ ಜೇಬಿನಲ್ಲಿದ್ದಾರೆ: ಬಿಜೆಪಿ ನಾಯಕ ಮುರಳೀಧರ ರಾವ್‌

- Advertisement -
- Advertisement -

ಬಿಜೆಪಿ ನಾಯಕ ಪಿ. ಮುರಳೀಧರ ರಾವ್‌ ಅವರ ‘ಬ್ರಾಹ್ಮಣ ಮತ್ತು ಬನಿಯಾ ಸಮುದಾಯದ ಜನರು ನನ್ನ ‘ಜೇಬಿನಲ್ಲಿನದ್ದಾರೆ’ ಎಂಬ ಹೇಳಿಕೆಯು ಭಾರೀ ಗದ್ದಲಕ್ಕೆ ಕಾರಣವಾಗಿದ್ದು, ರಾವ್‌ ಅವರು ಆ ಸಮುದಾಯಗಳಿಗೆ ಕ್ಷಮೆಯಾಚಿಸಬೇಕು ಎಂದು ಮಧ್ಯಪ್ರದೇಶ ಕಾಂಗ್ರೆಸ್ ಪಕ್ಷವು ಒತ್ತಾಯಿಸಿದೆ.

ಮಧ್ಯಪ್ರದೇಶದ ಉಸ್ತುವಾರಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿರುವ ರಾವ್‌ ಅವರ ಹೇಳಿಕೆಯನ್ನು ವಿರೋಧಿಸಿ ಕಾಂಗ್ರೆಸ್‌ ಪಕ್ಷವು ವಾಗ್ದಾಳಿ ನಡೆಸಿದ್ದು,  ಬಿಜೆಪಿ ನಾಯಕರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ. ಇದಕ್ಕೆ ಪ್ರತಿಕ್ರಿಯಿಸಿದ ರಾವ್‌, ವಿರೋಧ ಪಕ್ಷವು ತನ್ನ ಹೇಳಿಕೆಯನ್ನು ‘ತಿರುಚಿದೆ’ ಎಂದು ಹೇಳಿದ್ದಾರೆ.

ಭೋಪಾಲ್‌ನಲ್ಲಿರುವ ಬಿಜೆಪಿಯ ರಾಜ್ಯ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದ ಅವರು ಪಕ್ಷ ಮತ್ತು ಸರ್ಕಾರವು ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೇಲೆ ವಿಶೇಷ ಗಮನಹರಿಸಲಿವೆ. ನಮ್ಮ ಕಾಳಜಿ ಈ ಸಮುದಾಯದ ಜನರಿಗೆ ಉದ್ಯೋಗ ಮತ್ತು ಶಿಕ್ಷಣವನ್ನು ಒದಗಿಸುವುದು. ಈ ಮೂಲಕ ಹಿಂದುಳಿದಿರುವ ಸಮುದಾಯಗಳ ಸಮಸ್ಯೆಗಳನ್ನು ಪರಿಹರಿಸುವ ಕುರಿತು ಕೆಲಸ ಮಾಡುತ್ತೇವೆ ಹೊರತು ವೋಟ್‌ ಬ್ಯಾಂಕ್‌ಗಾಗಿ ಅಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ಮಾತನಾಡಿ, ಬಿಜೆಪಿ ಪಕ್ಷದ ಘೋಷಣೆಯು ‘ಎಲ್ಲರೊಂದಿಗೆ, ಪ್ರತಿಯೊಬ್ಬರ ಅಭಿವೃದ್ಧಿಗಾಗಿ’ (ಸಾಥ್‌, ಸಬ್‌ ಕಾ ವಿಕಾಸ್‌) ಆಗಿರುವ ಸಮಯದಲ್ಲಿ, ರಾವ್‌ ಅವರು ಎಸ್‌ಸಿ/ಎಸ್‌ಟಿಗಳಿಗೆ ವಿಶೇಷ ಗಮನ ನೀಡುವ ಬಗ್ಗೆ ಮಾತನಾಡುತ್ತಿದ್ದೀರ. ಆದರೆ ಬಿಜೆಪಿಯು ‘ಬ್ರಾಹ್ಮಣ-ಬನಿಯಾ’ಗಳ ಪಕ್ಷವಾಗಿದೆ ಎಂಬ ಗ್ರಹಿಕೆ ಇದೆ. ಅದರ ಬಗ್ಗೆ ನೀವು ಏನು ಹೇಳುತ್ತೀರಿ?’ ಎಂದು ಪ್ರಶ್ನಿಸಿದರು.

ಪತ್ರಕರ್ತರ ಪ್ರಶ್ನೆಗೆ ಮುರಳೀಧರ ರಾವ್‌, ತಮ್ಮ ಕುರ್ತಾದ ಜೇಬಿನತ್ತ ತೋರಿಸುತ್ತಾ, ‘ಬ್ರಾಹ್ಮಣರು ಮತ್ತು ಬನಿಯಾಗಳು ನನ್ನ ಜೇಬಿನಲ್ಲಿದ್ದಾರೆ. ಪಕ್ಷದ ಕಾರ್ಯಕರ್ತರು ಮತ್ತು ವೋಟ್‌ ಬ್ಯಾಂಕ್‌ ಇದೇ ವರ್ಗದವರು ಹೆಚ್ಚಾಗಿರುವುದರಿಂದ ನೀವು (ಮಾಧ್ಯಮ) ನಮ್ಮನ್ನು ಬ್ರಾಹ್ಮಣ ಮತ್ತು ಬನಿಯಾ ಪಕ್ಷ ಎಂದು ಕರೆದಿದ್ದೀರಿ’ ಎಂದು ಪ್ರತಿಕ್ರಿಯಿಸಿದರು.

‘ಕೆಲವು ವಿಭಾಗಗಳಿಗೆ ಸೇರಿದವರ ಸಂಖ್ಯೆ ಹೆಚ್ಚಿದ್ದಾಗ ಜನರು ಪಕ್ಷ ಅವರದ್ದೇ ಎಂದು ಹೇಳುತ್ತಿದ್ದರು. ನಮ್ಮ ಪಕ್ಷದಲ್ಲಿ ಎಸ್‌ಸಿ/ಎಸ್‌ಟಿ ಸಮುದಾಯದವರ ಪ್ರಾತಿನಿಧ್ಯ ಕಡಿಮೆಯಿದ್ದು, ಅವರನ್ನು ನಮ್ಮೊಟ್ಟಿಗೆ ಸೇರಿಸಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ನಾವು ಎಲ್ಲರನ್ನು ತಲುಪುತ್ತಿದದ್ದು ಬಿಜೆಪಿಯನ್ನು ಎಲ್ಲಾ ವರ್ಗದ ಪಕ್ಷವನ್ನಾಗಿ ಮಾಡುತ್ತಿದ್ದೇವೆ’ ಎಂದು ಮುರಳೀಧರ ರಾವ್‌ ಅವರು ಹೇಳಿದರು.

ರಾವ್ ಅವರ ವಿವಾದಾತ್ಮಕ ಹೇಳಿಕೆಯ 6 ಸೆಕೆಂಡುಗಳ ವೀಡಿಯೋವನ್ನು ವಿರೋಧ ಪಕ್ಷದ ಹಲವಾರು ನಾಯಕರು ಸೇರಿದಂತೆ ಜನರು ಸಾಮಾಜಿಕ ಜಾಲತಾಣಗಳಲ್ಲಿ  ಹಂಚಿಕೊಂಡಿದ್ದು, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಕುರಿತು ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿಯು ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಎಂಬ ಘೋಷಣೆಯನ್ನು ನೀಡಿದೆ ಮತ್ತು ಅವರ ಪಕ್ಷದ ಪ್ರಧಾನ ಕಾರ್ಯದರ್ಶಿ ಬ್ರಾಹ್ಮಣರು ಮತ್ತು ಬನಿಯಾಗಳು ತಮ್ಮ ಜೇಬಿನಲ್ಲಿದ್ದಾರೆ ಎಂದು ಹೇಳುತ್ತಿದ್ದಾರೆ’ ಎಂದು ಹೇಳಿದರು.

‘ಬಿಜೆಪಿಯು ಬ್ರಾಹ್ಮಣ ಮತ್ತು ಬನಿಯಾ ಸಮುದಾಯಗಳನ್ನು ತನಗೆ ಬೇಕಾದಂತೆ ಆಡಿಸುತ್ತಿದೆ. ಅದು ಈ ವರ್ಗಗಳಿಗೆ ಮಾಡಿದ ಅವಮಾನವಾಗಿದೆ. ಬಿಜೆಪಿ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಈ ವರ್ಗಗಳಿಗೆ ಯಾವ ರೀತಿಯ ಗೌರವ ನೀಡುತ್ತಿದೆ? ಬಿಜೆಪಿ ನಾಯಕರು ಅಧಿಕಾರದ ದುರಹಂಕಾರಕ್ಕೆ ಒಳಗಾಗಿದ್ದಾರೆ’ ಎಂದರು.

‘ಬಿಜೆಪಿ ಈ ಸಮುದಾಯಗಳಿಗೆಗ ಕ್ಷಮೆಯಾಚಿಸಬೇಕು’ ಎಂದು ಕಮಲ್‌ ನಾಥ್ ಹೇಳಿದರು. ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಬಗ್ಗೆ ಮಾತನಾಡುವ ಪಕ್ಷ ಈಗ ಅಧಿಕಾರಕ್ಕಾಗಿ ಕೆಲವು ವರ್ಗಗಳ ಮೇಲೆ ಕೇಂದ್ರೀಕರಿಸುತ್ತಿದೆ,” ಎಂದು ಅವರು ಆರೋಪಿಸಿದರು.

ನಂತರ, ವೀಡಿಯೊ ಹೇಳಿಕೆಯಲ್ಲಿ ಮಾತನಾಡಿದ, ರಾವ್ ಅವರು ಕಾಂಗ್ರೆಸ್‌ಗೆ ಸತ್ಯ ಮತ್ತು ಹೇಳಿಕೆಗಳನ್ನು ’ತಿರುಚುವ’ ಅಭ್ಯಾಸವಿದೆ ಎಂದು ಹೇಳಿದರು.

‘ನಾವು ಸಮಾಜದ ವರ್ಗಗಳ ನಡುವೆ ತಾರತಮ್ಯ ಮಾಡುವುದಿಲ್ಲ. ಎಲ್ಲಾ ಭಾರತೀಯರು ಅಭಿವೃದ್ಧಿಯ ಭಾಗವಾಗಬೇಕು. ಕಾಂಗ್ರೆಸ್ ದ್ರೋಹ ಬಗೆದಿದೆ ಮತ್ತು ಸಮಾಜದ ಎಲ್ಲಾ ವರ್ಗಗಳನ್ನು ಒಡೆದಿದೆ, ಎಸ್‌ಟಿಗಳು ಹಿಂದುಳಿದಿದ್ದರೆ, ಅವರಿಗೆ ಕಾಂಗ್ರೆಸ್ ಅನ್ಯಾಯ ಮಾಡಿದೆ ಎಂಬುದಷ್ಟೇ ಕಾರಣ.” ಎಂದು ಬಿಜೆಪಿ ಮುಖಂಡರು ತಿಳಿಸಿದರು.


ಇದನ್ನು ಓದಿ: ಕೇರಳ ದಲಿತ ವಿದ್ಯಾರ್ಥಿನಿ ಹೋರಾಟಕ್ಕೆ ಜಯ: ಜಾತಿ ತಾರತಮ್ಯವೆಸಗಿದ್ದ ಪ್ರಾಧ್ಯಾಪಕನ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...