Homeಮುಖಪುಟಬ್ರಾಹ್ಮಣ, ಬನಿಯಾ ಸಮುದಾಯದವರು ನನ್ನ ಜೇಬಿನಲ್ಲಿದ್ದಾರೆ: ಬಿಜೆಪಿ ನಾಯಕ ಮುರಳೀಧರ ರಾವ್‌

ಬ್ರಾಹ್ಮಣ, ಬನಿಯಾ ಸಮುದಾಯದವರು ನನ್ನ ಜೇಬಿನಲ್ಲಿದ್ದಾರೆ: ಬಿಜೆಪಿ ನಾಯಕ ಮುರಳೀಧರ ರಾವ್‌

- Advertisement -
- Advertisement -

ಬಿಜೆಪಿ ನಾಯಕ ಪಿ. ಮುರಳೀಧರ ರಾವ್‌ ಅವರ ‘ಬ್ರಾಹ್ಮಣ ಮತ್ತು ಬನಿಯಾ ಸಮುದಾಯದ ಜನರು ನನ್ನ ‘ಜೇಬಿನಲ್ಲಿನದ್ದಾರೆ’ ಎಂಬ ಹೇಳಿಕೆಯು ಭಾರೀ ಗದ್ದಲಕ್ಕೆ ಕಾರಣವಾಗಿದ್ದು, ರಾವ್‌ ಅವರು ಆ ಸಮುದಾಯಗಳಿಗೆ ಕ್ಷಮೆಯಾಚಿಸಬೇಕು ಎಂದು ಮಧ್ಯಪ್ರದೇಶ ಕಾಂಗ್ರೆಸ್ ಪಕ್ಷವು ಒತ್ತಾಯಿಸಿದೆ.

ಮಧ್ಯಪ್ರದೇಶದ ಉಸ್ತುವಾರಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿರುವ ರಾವ್‌ ಅವರ ಹೇಳಿಕೆಯನ್ನು ವಿರೋಧಿಸಿ ಕಾಂಗ್ರೆಸ್‌ ಪಕ್ಷವು ವಾಗ್ದಾಳಿ ನಡೆಸಿದ್ದು,  ಬಿಜೆಪಿ ನಾಯಕರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ. ಇದಕ್ಕೆ ಪ್ರತಿಕ್ರಿಯಿಸಿದ ರಾವ್‌, ವಿರೋಧ ಪಕ್ಷವು ತನ್ನ ಹೇಳಿಕೆಯನ್ನು ‘ತಿರುಚಿದೆ’ ಎಂದು ಹೇಳಿದ್ದಾರೆ.

ಭೋಪಾಲ್‌ನಲ್ಲಿರುವ ಬಿಜೆಪಿಯ ರಾಜ್ಯ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದ ಅವರು ಪಕ್ಷ ಮತ್ತು ಸರ್ಕಾರವು ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೇಲೆ ವಿಶೇಷ ಗಮನಹರಿಸಲಿವೆ. ನಮ್ಮ ಕಾಳಜಿ ಈ ಸಮುದಾಯದ ಜನರಿಗೆ ಉದ್ಯೋಗ ಮತ್ತು ಶಿಕ್ಷಣವನ್ನು ಒದಗಿಸುವುದು. ಈ ಮೂಲಕ ಹಿಂದುಳಿದಿರುವ ಸಮುದಾಯಗಳ ಸಮಸ್ಯೆಗಳನ್ನು ಪರಿಹರಿಸುವ ಕುರಿತು ಕೆಲಸ ಮಾಡುತ್ತೇವೆ ಹೊರತು ವೋಟ್‌ ಬ್ಯಾಂಕ್‌ಗಾಗಿ ಅಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ಮಾತನಾಡಿ, ಬಿಜೆಪಿ ಪಕ್ಷದ ಘೋಷಣೆಯು ‘ಎಲ್ಲರೊಂದಿಗೆ, ಪ್ರತಿಯೊಬ್ಬರ ಅಭಿವೃದ್ಧಿಗಾಗಿ’ (ಸಾಥ್‌, ಸಬ್‌ ಕಾ ವಿಕಾಸ್‌) ಆಗಿರುವ ಸಮಯದಲ್ಲಿ, ರಾವ್‌ ಅವರು ಎಸ್‌ಸಿ/ಎಸ್‌ಟಿಗಳಿಗೆ ವಿಶೇಷ ಗಮನ ನೀಡುವ ಬಗ್ಗೆ ಮಾತನಾಡುತ್ತಿದ್ದೀರ. ಆದರೆ ಬಿಜೆಪಿಯು ‘ಬ್ರಾಹ್ಮಣ-ಬನಿಯಾ’ಗಳ ಪಕ್ಷವಾಗಿದೆ ಎಂಬ ಗ್ರಹಿಕೆ ಇದೆ. ಅದರ ಬಗ್ಗೆ ನೀವು ಏನು ಹೇಳುತ್ತೀರಿ?’ ಎಂದು ಪ್ರಶ್ನಿಸಿದರು.

ಪತ್ರಕರ್ತರ ಪ್ರಶ್ನೆಗೆ ಮುರಳೀಧರ ರಾವ್‌, ತಮ್ಮ ಕುರ್ತಾದ ಜೇಬಿನತ್ತ ತೋರಿಸುತ್ತಾ, ‘ಬ್ರಾಹ್ಮಣರು ಮತ್ತು ಬನಿಯಾಗಳು ನನ್ನ ಜೇಬಿನಲ್ಲಿದ್ದಾರೆ. ಪಕ್ಷದ ಕಾರ್ಯಕರ್ತರು ಮತ್ತು ವೋಟ್‌ ಬ್ಯಾಂಕ್‌ ಇದೇ ವರ್ಗದವರು ಹೆಚ್ಚಾಗಿರುವುದರಿಂದ ನೀವು (ಮಾಧ್ಯಮ) ನಮ್ಮನ್ನು ಬ್ರಾಹ್ಮಣ ಮತ್ತು ಬನಿಯಾ ಪಕ್ಷ ಎಂದು ಕರೆದಿದ್ದೀರಿ’ ಎಂದು ಪ್ರತಿಕ್ರಿಯಿಸಿದರು.

‘ಕೆಲವು ವಿಭಾಗಗಳಿಗೆ ಸೇರಿದವರ ಸಂಖ್ಯೆ ಹೆಚ್ಚಿದ್ದಾಗ ಜನರು ಪಕ್ಷ ಅವರದ್ದೇ ಎಂದು ಹೇಳುತ್ತಿದ್ದರು. ನಮ್ಮ ಪಕ್ಷದಲ್ಲಿ ಎಸ್‌ಸಿ/ಎಸ್‌ಟಿ ಸಮುದಾಯದವರ ಪ್ರಾತಿನಿಧ್ಯ ಕಡಿಮೆಯಿದ್ದು, ಅವರನ್ನು ನಮ್ಮೊಟ್ಟಿಗೆ ಸೇರಿಸಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ನಾವು ಎಲ್ಲರನ್ನು ತಲುಪುತ್ತಿದದ್ದು ಬಿಜೆಪಿಯನ್ನು ಎಲ್ಲಾ ವರ್ಗದ ಪಕ್ಷವನ್ನಾಗಿ ಮಾಡುತ್ತಿದ್ದೇವೆ’ ಎಂದು ಮುರಳೀಧರ ರಾವ್‌ ಅವರು ಹೇಳಿದರು.

ರಾವ್ ಅವರ ವಿವಾದಾತ್ಮಕ ಹೇಳಿಕೆಯ 6 ಸೆಕೆಂಡುಗಳ ವೀಡಿಯೋವನ್ನು ವಿರೋಧ ಪಕ್ಷದ ಹಲವಾರು ನಾಯಕರು ಸೇರಿದಂತೆ ಜನರು ಸಾಮಾಜಿಕ ಜಾಲತಾಣಗಳಲ್ಲಿ  ಹಂಚಿಕೊಂಡಿದ್ದು, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಕುರಿತು ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿಯು ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಎಂಬ ಘೋಷಣೆಯನ್ನು ನೀಡಿದೆ ಮತ್ತು ಅವರ ಪಕ್ಷದ ಪ್ರಧಾನ ಕಾರ್ಯದರ್ಶಿ ಬ್ರಾಹ್ಮಣರು ಮತ್ತು ಬನಿಯಾಗಳು ತಮ್ಮ ಜೇಬಿನಲ್ಲಿದ್ದಾರೆ ಎಂದು ಹೇಳುತ್ತಿದ್ದಾರೆ’ ಎಂದು ಹೇಳಿದರು.

‘ಬಿಜೆಪಿಯು ಬ್ರಾಹ್ಮಣ ಮತ್ತು ಬನಿಯಾ ಸಮುದಾಯಗಳನ್ನು ತನಗೆ ಬೇಕಾದಂತೆ ಆಡಿಸುತ್ತಿದೆ. ಅದು ಈ ವರ್ಗಗಳಿಗೆ ಮಾಡಿದ ಅವಮಾನವಾಗಿದೆ. ಬಿಜೆಪಿ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಈ ವರ್ಗಗಳಿಗೆ ಯಾವ ರೀತಿಯ ಗೌರವ ನೀಡುತ್ತಿದೆ? ಬಿಜೆಪಿ ನಾಯಕರು ಅಧಿಕಾರದ ದುರಹಂಕಾರಕ್ಕೆ ಒಳಗಾಗಿದ್ದಾರೆ’ ಎಂದರು.

‘ಬಿಜೆಪಿ ಈ ಸಮುದಾಯಗಳಿಗೆಗ ಕ್ಷಮೆಯಾಚಿಸಬೇಕು’ ಎಂದು ಕಮಲ್‌ ನಾಥ್ ಹೇಳಿದರು. ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಬಗ್ಗೆ ಮಾತನಾಡುವ ಪಕ್ಷ ಈಗ ಅಧಿಕಾರಕ್ಕಾಗಿ ಕೆಲವು ವರ್ಗಗಳ ಮೇಲೆ ಕೇಂದ್ರೀಕರಿಸುತ್ತಿದೆ,” ಎಂದು ಅವರು ಆರೋಪಿಸಿದರು.

ನಂತರ, ವೀಡಿಯೊ ಹೇಳಿಕೆಯಲ್ಲಿ ಮಾತನಾಡಿದ, ರಾವ್ ಅವರು ಕಾಂಗ್ರೆಸ್‌ಗೆ ಸತ್ಯ ಮತ್ತು ಹೇಳಿಕೆಗಳನ್ನು ’ತಿರುಚುವ’ ಅಭ್ಯಾಸವಿದೆ ಎಂದು ಹೇಳಿದರು.

‘ನಾವು ಸಮಾಜದ ವರ್ಗಗಳ ನಡುವೆ ತಾರತಮ್ಯ ಮಾಡುವುದಿಲ್ಲ. ಎಲ್ಲಾ ಭಾರತೀಯರು ಅಭಿವೃದ್ಧಿಯ ಭಾಗವಾಗಬೇಕು. ಕಾಂಗ್ರೆಸ್ ದ್ರೋಹ ಬಗೆದಿದೆ ಮತ್ತು ಸಮಾಜದ ಎಲ್ಲಾ ವರ್ಗಗಳನ್ನು ಒಡೆದಿದೆ, ಎಸ್‌ಟಿಗಳು ಹಿಂದುಳಿದಿದ್ದರೆ, ಅವರಿಗೆ ಕಾಂಗ್ರೆಸ್ ಅನ್ಯಾಯ ಮಾಡಿದೆ ಎಂಬುದಷ್ಟೇ ಕಾರಣ.” ಎಂದು ಬಿಜೆಪಿ ಮುಖಂಡರು ತಿಳಿಸಿದರು.


ಇದನ್ನು ಓದಿ: ಕೇರಳ ದಲಿತ ವಿದ್ಯಾರ್ಥಿನಿ ಹೋರಾಟಕ್ಕೆ ಜಯ: ಜಾತಿ ತಾರತಮ್ಯವೆಸಗಿದ್ದ ಪ್ರಾಧ್ಯಾಪಕನ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...