Homeಮುಖಪುಟನಾಲ್ಕು ಮಕ್ಕಳನ್ನು ಹೊಂದುವ ಬ್ರಾಹ್ಮಣರಿಗೆ 1 ಲಕ್ಷ ಬಹುಮಾನ! - ಮಧ್ಯಪ್ರದೇಶ ಸರ್ಕಾರದ ಬ್ರಾಹ್ಮಣ ಕಲ್ಯಾಣ...

ನಾಲ್ಕು ಮಕ್ಕಳನ್ನು ಹೊಂದುವ ಬ್ರಾಹ್ಮಣರಿಗೆ 1 ಲಕ್ಷ ಬಹುಮಾನ! – ಮಧ್ಯಪ್ರದೇಶ ಸರ್ಕಾರದ ಬ್ರಾಹ್ಮಣ ಕಲ್ಯಾಣ ಮಂಡಳಿಯ ಮುಖ್ಯಸ್ಥ

- Advertisement -
- Advertisement -

ನಾಲ್ಕು ಮಕ್ಕಳನ್ನು ಹೊಂದುವ ಬ್ರಾಹ್ಮಣ ದಂಪತಿಗಳಿಗೆ 1 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಮಧ್ಯಪ್ರದೇಶ ಸರ್ಕಾರದ ಬ್ರಾಹ್ಮಣ ಕಲ್ಯಾಣ ಮಂಡಳಿಯಾದ ‘ಪರಶುರಾಮ ಕಲ್ಯಾಣ ಮಂಡಳಿ’ಯ ಅಧ್ಯಕ್ಷರಾಗಿರುವ ಪಂಡಿತ್ ವಿಷ್ಣು ರಾಜೋರಿಯಾ ಘೋಷಿಸಿದ್ದಾರೆ. ಮಧ್ಯಪ್ರದೇಶದ ರಾಜ್ಯ ಕ್ಯಾಬಿನೆಟ್ ಸಚಿವ ಸ್ಥಾನ ಹೊಂದಿರುವ ರಾಜೋರಿಯಾ ಅವರು ಇಂದೋರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಈ ಘೋಷಣೆ ಮಾಡಿದ್ದಾರೆ. ನಾಲ್ಕು ಮಕ್ಕಳನ್ನು ಹೊಂದುವ

ಸಮಾಜದಲ್ಲಿರುವ ಯುವಕರು ಕನಿಷ್ಠ ನಾಲ್ಕು ಮಕ್ಕಳಿಗೆ ಜನ್ಮ ನೀಡಬೇಕು, ಇಲ್ಲದಿದ್ದರೆ ಹಿಂದೂಯೇತರರು ದೇಶವನ್ನು ಆಳುತ್ತಾರೆ ಎಂದು ಅವರು ಹೇಳಿದ್ದು, ಬ್ರಾಹ್ಮಣ ಸಮಾಜದಲ್ಲಿ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಲು ಈ ವಿಶಿಷ್ಟ ಘೋಷಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ನಾಲ್ಕು ಮಕ್ಕಳನ್ನು ಹೊಂದುವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾವು ನಮ್ಮ ಕುಟುಂಬಗಳ ಮೇಲೆ ಗಮನಹರಿಸುವುದನ್ನು ಪೂರ್ಣವಾಗಿ ನಿಲ್ಲಿಸಿರುವುದರಿಂದ” “ಧರ್ಮದ್ರೋಹಿ”ಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

“ನನಗೆ ಯುವಕರ ಬಗ್ಗೆ ಭರವಸೆಯಿದೆ, ಆದರೆ ಹಿರಿಯರಿಂದ ನಾವು ಹೆಚ್ಚಿನದನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಎಚ್ಚರಿಕೆಯಿಂದ ಕೇಳಿ, ಭವಿಷ್ಯದ ಪೀಳಿಗೆಯ ರಕ್ಷಣೆಗೆ ನೀವು ಜವಾಬ್ದಾರರು. ಯುವಕರು ಸೆಟಲ್ ಆಗಿ ಒಂದು ಮಗುವಿಗೆ ಜನ್ಮ ನೀಡಿ ನಂತರ ನಿಲ್ಲುತ್ತಾರೆ. ಇದು ತುಂಬಾ ಸಮಸ್ಯಾತ್ಮಕ ವಿಚಾರವಾಗಿದೆ. ಕನಿಷ್ಠ ನಾಲ್ಕು ಮಕ್ಕಳನ್ನು ಹೊಂದಬೇಕೆಂದು ನಾನು ನಿಮ್ಮನ್ನು ಒತ್ತಾಯಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ನಂತರ ಅವರು ಪರಶುರಾಮ ಮಂಡಳಿಯು ನಾಲ್ಕು ಮಕ್ಕಳನ್ನು ಹೊಂದಿರುವ ದಂಪತಿಗಳಿಗೆ 1 ಲಕ್ಷ ರೂ. ಪ್ರಶಸ್ತಿಯನ್ನು ನೀಡುವುದಾಗಿ ಘೋಷಿಸಿದ್ದಾರೆ. “ನಾನು ಮಂಡಳಿಯ ಅಧ್ಯಕ್ಷನಾಗಿರಲಿ ಅಥವಾ ಇಲ್ಲದಿರಲಿ, ಪ್ರಶಸ್ತಿಯನ್ನು ನೀಡಲಾಗುವುದು.” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ನಂತರ ಪ್ರತಿಕ್ರಿಯಿಸಿರುವ ರಾಜೋರಿಯಾ ಅವರು, ತಾನು ಮಾಡಿರುವ ಘೋಷಣೆ “ವೈಯಕ್ತಿಕ ಉಪಕ್ರಮ”ವಾಗಿದ್ದು, ಸರ್ಕಾರಿ ಉಪಕ್ರಮವಲ್ಲ ಎಂದು ಹೇಳಿದ್ದಾರೆ. “ಇದು ಸಮುದಾಯ ಕಾರ್ಯಕ್ರಮದಲ್ಲಿ ಮಾಡಿದ ನನ್ನ ಸಾಮಾಜಿಕ ಕಳಕಳಿಯ ಹೇಳಿಕೆಯಾಗಿದೆ ಎಂದು ಹೇಳಿದ್ದಾರೆ.

ಇದನ್ನೂಓದಿ: ಅವಧಿ ಮೀರಿದ ಔಷಧ ಬಳಕೆ – 1 ಸಾವು; ಮೂವರು ಬಾಣಂತಿಯರು ಗಂಭೀರ

ಅವಧಿ ಮೀರಿದ ಔಷಧ ಬಳಕೆ – 1 ಸಾವು; ಮೂವರು ಬಾಣಂತಿಯರು ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...