Homeಮುಖಪುಟನಾಲ್ಕು ಮಕ್ಕಳನ್ನು ಹೊಂದುವ ಬ್ರಾಹ್ಮಣರಿಗೆ 1 ಲಕ್ಷ ಬಹುಮಾನ! - ಮಧ್ಯಪ್ರದೇಶ ಸರ್ಕಾರದ ಬ್ರಾಹ್ಮಣ ಕಲ್ಯಾಣ...

ನಾಲ್ಕು ಮಕ್ಕಳನ್ನು ಹೊಂದುವ ಬ್ರಾಹ್ಮಣರಿಗೆ 1 ಲಕ್ಷ ಬಹುಮಾನ! – ಮಧ್ಯಪ್ರದೇಶ ಸರ್ಕಾರದ ಬ್ರಾಹ್ಮಣ ಕಲ್ಯಾಣ ಮಂಡಳಿಯ ಮುಖ್ಯಸ್ಥ

- Advertisement -
- Advertisement -

ನಾಲ್ಕು ಮಕ್ಕಳನ್ನು ಹೊಂದುವ ಬ್ರಾಹ್ಮಣ ದಂಪತಿಗಳಿಗೆ 1 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಮಧ್ಯಪ್ರದೇಶ ಸರ್ಕಾರದ ಬ್ರಾಹ್ಮಣ ಕಲ್ಯಾಣ ಮಂಡಳಿಯಾದ ‘ಪರಶುರಾಮ ಕಲ್ಯಾಣ ಮಂಡಳಿ’ಯ ಅಧ್ಯಕ್ಷರಾಗಿರುವ ಪಂಡಿತ್ ವಿಷ್ಣು ರಾಜೋರಿಯಾ ಘೋಷಿಸಿದ್ದಾರೆ. ಮಧ್ಯಪ್ರದೇಶದ ರಾಜ್ಯ ಕ್ಯಾಬಿನೆಟ್ ಸಚಿವ ಸ್ಥಾನ ಹೊಂದಿರುವ ರಾಜೋರಿಯಾ ಅವರು ಇಂದೋರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಈ ಘೋಷಣೆ ಮಾಡಿದ್ದಾರೆ. ನಾಲ್ಕು ಮಕ್ಕಳನ್ನು ಹೊಂದುವ

ಸಮಾಜದಲ್ಲಿರುವ ಯುವಕರು ಕನಿಷ್ಠ ನಾಲ್ಕು ಮಕ್ಕಳಿಗೆ ಜನ್ಮ ನೀಡಬೇಕು, ಇಲ್ಲದಿದ್ದರೆ ಹಿಂದೂಯೇತರರು ದೇಶವನ್ನು ಆಳುತ್ತಾರೆ ಎಂದು ಅವರು ಹೇಳಿದ್ದು, ಬ್ರಾಹ್ಮಣ ಸಮಾಜದಲ್ಲಿ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಲು ಈ ವಿಶಿಷ್ಟ ಘೋಷಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ನಾಲ್ಕು ಮಕ್ಕಳನ್ನು ಹೊಂದುವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾವು ನಮ್ಮ ಕುಟುಂಬಗಳ ಮೇಲೆ ಗಮನಹರಿಸುವುದನ್ನು ಪೂರ್ಣವಾಗಿ ನಿಲ್ಲಿಸಿರುವುದರಿಂದ” “ಧರ್ಮದ್ರೋಹಿ”ಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

“ನನಗೆ ಯುವಕರ ಬಗ್ಗೆ ಭರವಸೆಯಿದೆ, ಆದರೆ ಹಿರಿಯರಿಂದ ನಾವು ಹೆಚ್ಚಿನದನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಎಚ್ಚರಿಕೆಯಿಂದ ಕೇಳಿ, ಭವಿಷ್ಯದ ಪೀಳಿಗೆಯ ರಕ್ಷಣೆಗೆ ನೀವು ಜವಾಬ್ದಾರರು. ಯುವಕರು ಸೆಟಲ್ ಆಗಿ ಒಂದು ಮಗುವಿಗೆ ಜನ್ಮ ನೀಡಿ ನಂತರ ನಿಲ್ಲುತ್ತಾರೆ. ಇದು ತುಂಬಾ ಸಮಸ್ಯಾತ್ಮಕ ವಿಚಾರವಾಗಿದೆ. ಕನಿಷ್ಠ ನಾಲ್ಕು ಮಕ್ಕಳನ್ನು ಹೊಂದಬೇಕೆಂದು ನಾನು ನಿಮ್ಮನ್ನು ಒತ್ತಾಯಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ನಂತರ ಅವರು ಪರಶುರಾಮ ಮಂಡಳಿಯು ನಾಲ್ಕು ಮಕ್ಕಳನ್ನು ಹೊಂದಿರುವ ದಂಪತಿಗಳಿಗೆ 1 ಲಕ್ಷ ರೂ. ಪ್ರಶಸ್ತಿಯನ್ನು ನೀಡುವುದಾಗಿ ಘೋಷಿಸಿದ್ದಾರೆ. “ನಾನು ಮಂಡಳಿಯ ಅಧ್ಯಕ್ಷನಾಗಿರಲಿ ಅಥವಾ ಇಲ್ಲದಿರಲಿ, ಪ್ರಶಸ್ತಿಯನ್ನು ನೀಡಲಾಗುವುದು.” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ನಂತರ ಪ್ರತಿಕ್ರಿಯಿಸಿರುವ ರಾಜೋರಿಯಾ ಅವರು, ತಾನು ಮಾಡಿರುವ ಘೋಷಣೆ “ವೈಯಕ್ತಿಕ ಉಪಕ್ರಮ”ವಾಗಿದ್ದು, ಸರ್ಕಾರಿ ಉಪಕ್ರಮವಲ್ಲ ಎಂದು ಹೇಳಿದ್ದಾರೆ. “ಇದು ಸಮುದಾಯ ಕಾರ್ಯಕ್ರಮದಲ್ಲಿ ಮಾಡಿದ ನನ್ನ ಸಾಮಾಜಿಕ ಕಳಕಳಿಯ ಹೇಳಿಕೆಯಾಗಿದೆ ಎಂದು ಹೇಳಿದ್ದಾರೆ.

ಇದನ್ನೂಓದಿ: ಅವಧಿ ಮೀರಿದ ಔಷಧ ಬಳಕೆ – 1 ಸಾವು; ಮೂವರು ಬಾಣಂತಿಯರು ಗಂಭೀರ

ಅವಧಿ ಮೀರಿದ ಔಷಧ ಬಳಕೆ – 1 ಸಾವು; ಮೂವರು ಬಾಣಂತಿಯರು ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...